ಕರೊನಾ ಲಾಕ್‌ಡೌನ್ ನಡುವೆ ಪಡಿತರ ವಿತರಣೆ ಆರಂಭ: ಕಾಡಿದ ಸರ್ವರ್ ಹಾಗು ವಿದ್ಯುತ್ ಸಮಸ್ಯೆ

ದೊಡ್ಡಬಳ್ಳಾಪುರ: ತಾಲೂಕು ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜುಲೈ 22ರವರೆಗೆ ಲಾಕ್‌ಡೌನ್ ಘೋಷಿಸಲಾಗಿದೆ.ಈ ನಡುವೆ ತಿಂಗಳ ಪಡಿತರ ವಿತರಣೆ ಆರಂಭವಾಗಿದ್ದು,ಪಡಿತರದಾರರು ಬೆಳಗಿನಿಂದಲೇ ಸಾಲುಗಟ್ಟಿ ನಿಲ್ಲುವಂತಾಗಿದೆ.

ಲಾಕ್‌ಡೌನ್ ಹಿನ್ನಲೆಯಲ್ಲಿ ಮಧ್ಯಾಹ್ನ 12ರವರೆಗೆ ಮಾತ್ರ ಅಗತ್ಯ ವಸ್ತುಗಳನ್ನು ಕೊಳ್ಳಲು ಅವಕಾಶ ಕಲ್ಪಿಸಿರುವುದರಿಂದ ಪಡಿತರ ಧಾನ್ಯವನ್ನು ಸಹ 12ರವರೆಗೆ ಮಾತ್ರ ನೀಡಲು ಸೂಚಿಸಲಾಗಿದೆ. ಹೀಗಾಗಿ ಪಡಿತರ ಪಡೆಯಲು ಬೆಳಿಗ್ಗೆ 9 ಗಂಟೆಯಿಂದಲೇ ಪಡಿತರದಾರರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ.

ಪಡಿತರ ವಿತರಣೆ ವಿವರ:

ಹರಿತಲೇಖನಿಗೆ ಸಿಕ್ಕಿರುವ ಮಾಹಿತಿಯಂತೆ ಈ ತಿಂಗಳಿನಿಂದ ಬಿಪಿಎಲ್ ಪಡಿತರದಾರರಿಗೆ ಯೂನಿಟ್ ಲೆಕ್ಕದಲ್ಲಿ 8 ಕೆ.ಜಿ ಅಕ್ಕಿ, 2 ಕೆ.ಜಿ ರಾಗಿ ಹಾಗೂ ಒಂದು ಪಡಿತರ ಚೀಟಿಗೆ 2 ಕೆ.ಜಿ. ಗೋಧಿ ಉಚಿತವಾಗಿ ನೀಡಲಾಗುತ್ತಿದೆ. ಎಪಿಎಲ್ ಕಾರ್ಡ್‌ದಾರರಿಗೆ ಒಬ್ಬ ಸದಸ್ಯ 5 ಕೆ.ಜಿ. ಅಕ್ಕಿ ಹಾಗೂ ಹೆಚ್ಚಿನವರಿಗೆ 10 ಕೆ.ಜಿ ಅಕ್ಕಿ,ಕೆ.ಜಿಗೆ 15 ರೂ ನಂತೆ ನೀಡಲಾಗುವುದು.ಅಂತ್ಯೋದಯಕ್ಕೆ 20ಕೆ.ಜಿ ಅಕ್ಕಿ ಹಾಗೂ 15 ಕೆ.ಜಿ ರಾಗಿ ವಿತರಿಸಲಾಗುವುದು.ಆಧಾರ್ ಕಾರ್ಡ್ ಅಥವಾ ಪಡಿತರ ಕಾರ್ಡ್ ಇಲ್ಲದವರಿಗೆ ಪಡಿತರ ವಿತರಣೆ ಮಾಡುತ್ತಿಲ್ಲ.ನ್ಯಾಯ ಬೆಲೆ ಅಂಗಡಿಗೆ ಬರುವ ಪ್ರತಿ ಪಡಿತರದಾರರನ್ನು ಅಂತರ ಕಾಪಾಡಿಕೊಳ್ಳುವಂತೆ ವ್ಯವಸ್ಥೆ ಮಾಡಿ, ಪ್ರತಿಯೊಬ್ಬರಿಗೂ ಸ್ಯಾನಿಟೈಸರ್ ಹಾಕಲಾಗುತ್ತಿದೆ.ದಿನಕ್ಕೆ 200 ಪಡಿತರದಾರರಿಗೆ ಟೋಕನ್ ನೀಡಿ,ಮಧ್ಯಾಹ್ನ 12ಗಂಟೆಯವರೆಗೆ ಪಡಿತರ ಧಾನ್ಯ ವಿತರಿಸಲಾಗುತ್ತಿದೆ. ಆದರೆ ಸರ್ವರ್ ಹಾಗೂ ವಿದ್ಯುತ್ ಸಮಸ್ಯೆಗಳಿಂದಾಗಿ ಪಡಿತರ ವಿತರಣೆ ಮಾಡುವುದು ವಿಳಂಬವಾಗುತ್ತಿದೆ ಎಂದು ಕುಚ್ಚಪ್ಪನ ಪೇಟೆಯ ನ್ಯಾಯಬೆಲೆ ಅಂಗಡಿ ಮಾಲೀಕ ಗಂಗಾಪ್ರಸಾದ್ ತಿಳಿಸಿದ್ದಾರೆ.

ತಿಂಗಳಿಡೀ ಎಲ್ಲಾ ನ್ಯಾಯಬೆಲೆ ಅಂಗಡಿಗಳು ತೆರೆದಿರಲಿ:

ಈಗ ಪಡಿತರ ಧಾನ್ಯ ಪಡೆಯಲು  ಪೋರ್ಟಬಿಲಿಟಿ ಇರುವುದರಿಂದ ಪಡಿತರದಾರರು ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರವನ್ನು ಪಡೆಯಬಹುದಾಗಿದೆ. ಆದರೆ ಬಹಳಷ್ಟು ಅಂಗಡಿಗಳು ಕೇವಲ 5 ರಿಂದ 6 ದಿನ ದಿನಸಿ ನೀಡಿ ಬಾಗಿಲು ಮುಚ್ಚುತ್ತವೆ. ಇದರಿಂದ ಬೇರೆ ಅಂಗಡಿಗಳಲ್ಲಿ ಪಡಿತರದಾರರು ಮುಗಿ ಬೀಳುವ ಪರಿಸ್ಥಿತಿ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಎಲ್ಲಾ ಪಡಿತರ ಅಂಗಡಿಗಳು ತಿಂಗಳು ಪೂರ್ತಿ ಕಾರ್‍ಯ ನಿರ್ವಹಿಸಿ,ನೂಕು ನುಗ್ಗಲು ಮಾಡಿಕೊಳ್ಳದೇ ಎಲ್ಲಾ ಪಡಿತರದಾರರು ಪಡಿತರ ಧಾನ್ಯ ಪಡೆಯುವಂತೆ ಆಹಾರ ಇಲಾಖೆ ವ್ಯವಸ್ಥೆ ಮಾಡಬೇಕಿದೆ ಎಂದು ಪಡಿತರದಾರರಾದ ಶ್ರೀನಿವಾಸ್, ನಾರಾಯಣಪ್ಪ ಒತ್ತಾಯಿಸಿದ್ದಾರೆ.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!