ಬಾಶೆಟ್ಟಿಹಳ್ಳಿ ಗ್ರಾಪಂ ಪಿಡಿಒ ಕುಮಾರ್ ವರ್ಗಾವಣೆ / ಮಾದರಿ ಗ್ರಾಮಪಂಚಾಯಿತಿ ಕೀರ್ತಿ ತಂದ ಪಿಡಿಒ ಕುಮಾರ್

ದೊಡ್ಡಬಳ್ಳಾಪುರ: ನಗರದ ಹೊರವಲಯದ ಬಾಶೆಟ್ಟಿಹಳ್ಳಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಕುಮಾರ್ ಕೊಡಿಗೇಹಳ್ಳಿ ಗ್ರಾಮಪಂಚಾಯಿತಿಗೆ ವರ್ಗಾವಣೆಯಾಗಿದ್ದು,ಸೋಮವಾರ ಅಧಿಕಾರ ಸ್ವೀಕರಿಸಲಿದ್ದಾರೆ.

ಬಾಶೆಟ್ಟಿಹಳ್ಳಿ ಗ್ರಾಮಪಂಚಾಯಿತಿಗೆ ರಾಷ್ಟ್ರ ಮಟ್ಟದ ಕೀರ್ತಿ ತಂದ ಪಿಡಿಒ ಕುಮಾರ್ ಕುರಿತು ಹರಿತಲೇಖನಿ ಸಂಗ್ರಹಿಸಿದ ವಿಶೇಷ ವರದಿ.

ಕಳೆದ ಮೂರು ವರ್ಷಗಳ ಕಾಲ ಬಾಶೆಟ್ಟಿಹಳ್ಳಿ ಪಿಡಿಒ ಆಗಿ ಸೇವೆ ಸಲ್ಲಿಸಿದ ಉತ್ಸಾಹಿ ಯುವ ಪಿಡಿಒ ಕುಮಾರ್,ಅಧ್ಯಕ್ಷರು,ಸದಸ್ಯರ ವಿಶ್ವಾಸಗಳಿಸಿ ರಾಷ್ಟ ಮಟ್ಟದಲ್ಲಿ ಬಾಶೆಟ್ಟಹಳ್ಳಿಯ ಕೀರ್ತಿ ಸಾರಿದ್ದಾರೆ. ಇವರ ಅಧಿಕಾರ ಅವಧಿಯಲ್ಲಿ ಬೆಂಗಳೂರು /ಹಿಂದೂಪುರ ನಡುವಿನ ಬ್ಯಾಂಕ್ ಸರ್ಕಲ್ ಬಳಿ ಉಂಟಾಗುತ್ತಿದ್ದ ಟ್ರಾಫಿಕ್ ಸಮಸ್ಯೆ ನೀಗಿಸಲು,ಹಲವು ವಿರೋಧದ ನಡುವೆಯೂ ರಸ್ತೆ ಬದಿಯಲ್ಲಿನ ಅಂಗಡಿ ಮುಂಗಟ್ಟುಗಳನ್ನು ತೆರವುಗೊಳಿಸಿ ಮೇಲ್ ಸೇತುವೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿ ಟ್ರಾಫಿಕ್ ಸಮಸ್ಯೆಗೆ ನೀಗಿಸಲು ಶ್ರಮಿಸಿದ್ದಾರೆ.ಸರ್ಕಾರಿ ಶಾಲೆಗೆ ಉತ್ತಮವಾದ ಜಾಗ ಸೌಲಭ್ಯ ಕಲ್ಪಿಸಿದ್ದು,ಗ್ರಾಪಂ ವ್ಯಾಪ್ತಿಯ ಪ್ರತಿ ಗ್ರಾಮಕ್ಕು ಡಿಜಿಟಲ್ ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪನೆ (ಡಿಜಿಟಲ್ ರಿಚಾರ್ಜ್ ಜೊತೆ), ಹಸಿ ಕಸ / ಒಣ ಕಸ ಬೇರ್ಪಡಿಸಲು ಪ್ರತಿ ಮನೆಗೆ ಉಚಿತವಾಗಿ ಎರಡು ಬಣ್ಣದ ಬಕೇಟ್ ವಿತರಣೆ, ಅಲ್ಲದೆ ರಾಜ್ಯಮಟ್ಟದ ಡಿಜಿಟಲ್ ಲೈಬ್ರರಿ ಸ್ಥಾಪನೆ,ರಾಜ್ಯ ಹಾಗೂ ಜಿಲ್ಲಾ ಮಟ್ಟದ  ಕಾರ್ಯಕ್ರಮಗಳ ಯಶಸ್ವಿ ಆಯೋಜನೆ ಇವರ ಶ್ರಮವನ್ನು ಸಾರುತ್ತದೆ.

ಮಾದರಿ ಘನ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪನೆ

ಬಾಶೆಟ್ಟಿಹಳ್ಳಿ ವ್ಯಾಪ್ತಿಯಲ್ಲಿ ರಾಜ್ಯಕ್ಕೆ ಮಾದರಿಯಾದ ಘನ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪಿಸಿದ್ದ ಇವರು,ಪ್ರತಿ ಗ್ರಾಮ,ಶಾಲೆಗಳಲ್ಲಿ ತ್ಯಾಜ್ಯ ವಿಂಗಡಣೆಗೆ ಅರಿವು ಮೂಡಿಸುವ ಕ್ರಮಕೈಗೊಂಡು ಪರಿಸರ ಕಾಳಜಿ ಮೆರೆದಿದ್ದಾರೆ. ಈ ಘಟಕದ ವೀಕ್ಷಣೆಗೆ ರಾಜ್ಯ ಹಾಗೂ ರಾಷ್ಟ್ರದ ಒಂದು ಸಾವಿರಕ್ಕು ಹೆಚ್ಚು ಹಿರಿಯ ಅಧಿಕಾರಿಗಳು,ವಿವಿಧ ಗ್ರಾಮಪಂಚಾಯಿತಿ ಸದಸ್ಯರು ಭೇಟಿ ನೀಡಿ,ತಮ್ಮ ವ್ಯಾಪ್ತಿಯಲ್ಲಿ ಇದೇ ಮಾದರಿಯ ಘಟಕ ಅಳವಡಿಕೆ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. 

ರಾಷ್ಟ್ರ ಹಾಗೂ ಎರಡು ರಾಜ್ಯ ಪ್ರಶಸ್ತಿ ಹಿರಿಮೆ

ಇವರ ಅಧಿಕಾರವಧಿಯಲ್ಲಿ ಬಾಶೆಟ್ಟಿಹಳ್ಳಿ ಗ್ರಾಮಪಂಚಾಯಿತಿಗೆ ದೀನ ದಯಾಳ್ ಉಪಾಧ್ಯಾಯ ಗ್ರಾಮ ಸಶಕ್ತಿಕರಣ ರಾಷ್ಟ್ರ ಪ್ರಶಸ್ತಿ, ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಕರ್ನಾಟಕ ವಿಧಾನ ಪರಿಷತ್ ಪುರಸ್ಕಾರ ಸೇರಿದಂತೆ ಒಂದು ರಾಷ್ಟ್ರ ಹಾಗೂ ಎರಡು ರಾಜ್ಯ ಪ್ರಶಸ್ತಿ ದೊರೆತಿದೆ.

ಗ್ರಾಮಪಂಚಾಯಿತಿಗೆ ಪಿಡಿಒಗಳಾಗಿ ಅಧಿಕಾರಿಗಳು ಬರುತ್ತಾರೆ / ಓಗುತ್ತಾರೆ.ಆದರೆ,ಅವರ ಆಡಳಿತ ಅವಧಿಯಲ್ಲಿ ಕೈಗೊಂಡ ಕ್ರಮಗಳು ಶಾಶ್ವತವಾಗಿ ಉಳಿತ್ತವೆ.

ಉತ್ಸಾಹಿ ಯುವ ಅಧಿಕಾರಿ ಪಿಡಿಒ ಕುಮಾರ್ ಈಗ ಕೊಡಿಗೇಹಳ್ಳಿ ಗ್ರಾಮಪಂಚಾಯಿತಿಗೆ ವರ್ಗಾವಣೆಯಾಗಿದ್ದು ಇಲ್ಲಿಯೂ ಬಾಶೆಟ್ಟಿಹಳ್ಳಿಯಲ್ಲಿ ಆದಂತ ಅಭಿವೃದ್ಧಿ ಕಾರ್ಯಗಳು ಆಗಲೆಂಬುದು ಹರಿತಲೇಖನಿ ತಂಡದ ಕಳಕಳಿ.

ರಾಜಕೀಯ

ದೊಡ್ಡಬಳ್ಳಾಪುರ: ರೈತರ ಪ್ರತಿಭಟನೆ ತೀವ್ರ.. ಸ್ಥಳಕ್ಕೆ ಅಧಿಕಾರಿಗಳು ದೌಡು

ದೊಡ್ಡಬಳ್ಳಾಪುರ: ರೈತರ ಪ್ರತಿಭಟನೆ ತೀವ್ರ.. ಸ್ಥಳಕ್ಕೆ ಅಧಿಕಾರಿಗಳು ದೌಡು

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಲಿ (KIADB) ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯಲ್ಲಿ ಉದ್ದೇಶಿಸಿರುವ 2100 ಎಕರೆ ಭೂ ಸ್ವಾಧೀನದ ವಿರುದ್ಧ ರೈತರು ಕೆರಳಿದ್ದು, ಬಿರು ಬಿಸಿಲಿನಲ್ಲಿಯೂ ಪ್ರತಿಭಟನೆ ನಡೆಸಿದರು.

[ccc_my_favorite_select_button post_id="120437"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!