ಬಾಶೆಟ್ಟಿಹಳ್ಳಿ ಗ್ರಾಪಂ ಪಿಡಿಒ ಕುಮಾರ್ ವರ್ಗಾವಣೆ / ಮಾದರಿ ಗ್ರಾಮಪಂಚಾಯಿತಿ ಕೀರ್ತಿ ತಂದ ಪಿಡಿಒ ಕುಮಾರ್

ದೊಡ್ಡಬಳ್ಳಾಪುರ: ನಗರದ ಹೊರವಲಯದ ಬಾಶೆಟ್ಟಿಹಳ್ಳಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಕುಮಾರ್ ಕೊಡಿಗೇಹಳ್ಳಿ ಗ್ರಾಮಪಂಚಾಯಿತಿಗೆ ವರ್ಗಾವಣೆಯಾಗಿದ್ದು,ಸೋಮವಾರ ಅಧಿಕಾರ ಸ್ವೀಕರಿಸಲಿದ್ದಾರೆ.

ಬಾಶೆಟ್ಟಿಹಳ್ಳಿ ಗ್ರಾಮಪಂಚಾಯಿತಿಗೆ ರಾಷ್ಟ್ರ ಮಟ್ಟದ ಕೀರ್ತಿ ತಂದ ಪಿಡಿಒ ಕುಮಾರ್ ಕುರಿತು ಹರಿತಲೇಖನಿ ಸಂಗ್ರಹಿಸಿದ ವಿಶೇಷ ವರದಿ.

ಕಳೆದ ಮೂರು ವರ್ಷಗಳ ಕಾಲ ಬಾಶೆಟ್ಟಿಹಳ್ಳಿ ಪಿಡಿಒ ಆಗಿ ಸೇವೆ ಸಲ್ಲಿಸಿದ ಉತ್ಸಾಹಿ ಯುವ ಪಿಡಿಒ ಕುಮಾರ್,ಅಧ್ಯಕ್ಷರು,ಸದಸ್ಯರ ವಿಶ್ವಾಸಗಳಿಸಿ ರಾಷ್ಟ ಮಟ್ಟದಲ್ಲಿ ಬಾಶೆಟ್ಟಹಳ್ಳಿಯ ಕೀರ್ತಿ ಸಾರಿದ್ದಾರೆ. ಇವರ ಅಧಿಕಾರ ಅವಧಿಯಲ್ಲಿ ಬೆಂಗಳೂರು /ಹಿಂದೂಪುರ ನಡುವಿನ ಬ್ಯಾಂಕ್ ಸರ್ಕಲ್ ಬಳಿ ಉಂಟಾಗುತ್ತಿದ್ದ ಟ್ರಾಫಿಕ್ ಸಮಸ್ಯೆ ನೀಗಿಸಲು,ಹಲವು ವಿರೋಧದ ನಡುವೆಯೂ ರಸ್ತೆ ಬದಿಯಲ್ಲಿನ ಅಂಗಡಿ ಮುಂಗಟ್ಟುಗಳನ್ನು ತೆರವುಗೊಳಿಸಿ ಮೇಲ್ ಸೇತುವೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿ ಟ್ರಾಫಿಕ್ ಸಮಸ್ಯೆಗೆ ನೀಗಿಸಲು ಶ್ರಮಿಸಿದ್ದಾರೆ.ಸರ್ಕಾರಿ ಶಾಲೆಗೆ ಉತ್ತಮವಾದ ಜಾಗ ಸೌಲಭ್ಯ ಕಲ್ಪಿಸಿದ್ದು,ಗ್ರಾಪಂ ವ್ಯಾಪ್ತಿಯ ಪ್ರತಿ ಗ್ರಾಮಕ್ಕು ಡಿಜಿಟಲ್ ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪನೆ (ಡಿಜಿಟಲ್ ರಿಚಾರ್ಜ್ ಜೊತೆ), ಹಸಿ ಕಸ / ಒಣ ಕಸ ಬೇರ್ಪಡಿಸಲು ಪ್ರತಿ ಮನೆಗೆ ಉಚಿತವಾಗಿ ಎರಡು ಬಣ್ಣದ ಬಕೇಟ್ ವಿತರಣೆ, ಅಲ್ಲದೆ ರಾಜ್ಯಮಟ್ಟದ ಡಿಜಿಟಲ್ ಲೈಬ್ರರಿ ಸ್ಥಾಪನೆ,ರಾಜ್ಯ ಹಾಗೂ ಜಿಲ್ಲಾ ಮಟ್ಟದ  ಕಾರ್ಯಕ್ರಮಗಳ ಯಶಸ್ವಿ ಆಯೋಜನೆ ಇವರ ಶ್ರಮವನ್ನು ಸಾರುತ್ತದೆ.

ಮಾದರಿ ಘನ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪನೆ

ಬಾಶೆಟ್ಟಿಹಳ್ಳಿ ವ್ಯಾಪ್ತಿಯಲ್ಲಿ ರಾಜ್ಯಕ್ಕೆ ಮಾದರಿಯಾದ ಘನ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪಿಸಿದ್ದ ಇವರು,ಪ್ರತಿ ಗ್ರಾಮ,ಶಾಲೆಗಳಲ್ಲಿ ತ್ಯಾಜ್ಯ ವಿಂಗಡಣೆಗೆ ಅರಿವು ಮೂಡಿಸುವ ಕ್ರಮಕೈಗೊಂಡು ಪರಿಸರ ಕಾಳಜಿ ಮೆರೆದಿದ್ದಾರೆ. ಈ ಘಟಕದ ವೀಕ್ಷಣೆಗೆ ರಾಜ್ಯ ಹಾಗೂ ರಾಷ್ಟ್ರದ ಒಂದು ಸಾವಿರಕ್ಕು ಹೆಚ್ಚು ಹಿರಿಯ ಅಧಿಕಾರಿಗಳು,ವಿವಿಧ ಗ್ರಾಮಪಂಚಾಯಿತಿ ಸದಸ್ಯರು ಭೇಟಿ ನೀಡಿ,ತಮ್ಮ ವ್ಯಾಪ್ತಿಯಲ್ಲಿ ಇದೇ ಮಾದರಿಯ ಘಟಕ ಅಳವಡಿಕೆ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. 

ರಾಷ್ಟ್ರ ಹಾಗೂ ಎರಡು ರಾಜ್ಯ ಪ್ರಶಸ್ತಿ ಹಿರಿಮೆ

ಇವರ ಅಧಿಕಾರವಧಿಯಲ್ಲಿ ಬಾಶೆಟ್ಟಿಹಳ್ಳಿ ಗ್ರಾಮಪಂಚಾಯಿತಿಗೆ ದೀನ ದಯಾಳ್ ಉಪಾಧ್ಯಾಯ ಗ್ರಾಮ ಸಶಕ್ತಿಕರಣ ರಾಷ್ಟ್ರ ಪ್ರಶಸ್ತಿ, ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಕರ್ನಾಟಕ ವಿಧಾನ ಪರಿಷತ್ ಪುರಸ್ಕಾರ ಸೇರಿದಂತೆ ಒಂದು ರಾಷ್ಟ್ರ ಹಾಗೂ ಎರಡು ರಾಜ್ಯ ಪ್ರಶಸ್ತಿ ದೊರೆತಿದೆ.

ಗ್ರಾಮಪಂಚಾಯಿತಿಗೆ ಪಿಡಿಒಗಳಾಗಿ ಅಧಿಕಾರಿಗಳು ಬರುತ್ತಾರೆ / ಓಗುತ್ತಾರೆ.ಆದರೆ,ಅವರ ಆಡಳಿತ ಅವಧಿಯಲ್ಲಿ ಕೈಗೊಂಡ ಕ್ರಮಗಳು ಶಾಶ್ವತವಾಗಿ ಉಳಿತ್ತವೆ.

ಉತ್ಸಾಹಿ ಯುವ ಅಧಿಕಾರಿ ಪಿಡಿಒ ಕುಮಾರ್ ಈಗ ಕೊಡಿಗೇಹಳ್ಳಿ ಗ್ರಾಮಪಂಚಾಯಿತಿಗೆ ವರ್ಗಾವಣೆಯಾಗಿದ್ದು ಇಲ್ಲಿಯೂ ಬಾಶೆಟ್ಟಿಹಳ್ಳಿಯಲ್ಲಿ ಆದಂತ ಅಭಿವೃದ್ಧಿ ಕಾರ್ಯಗಳು ಆಗಲೆಂಬುದು ಹರಿತಲೇಖನಿ ತಂಡದ ಕಳಕಳಿ.

ರಾಜಕೀಯ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರದ ಪ್ರತಿಷ್ಠಿತ ಬೃಹತ್ ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಪುಣೆ, ನಾಗಪೂರ ಸೇರಿದಂತೆ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಬಿಜೆಪಿ (BJP) ಮತ್ತು ಶಿವಸೇನೆ (ಏಕನಾಥ ಸಿಂಧೆ ಬಣ) ದೊಡ್ಡ ಪ್ರಮಾಣದಲ್ಲಿ ಜಯಗಳಿಸಿದ್ದಾರೆ.

[ccc_my_favorite_select_button post_id="118518"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!