ಬಾಶೆಟ್ಟಿಹಳ್ಳಿ ಗ್ರಾಪಂ ಪಿಡಿಒ ಕುಮಾರ್ ವರ್ಗಾವಣೆ / ಮಾದರಿ ಗ್ರಾಮಪಂಚಾಯಿತಿ ಕೀರ್ತಿ ತಂದ ಪಿಡಿಒ ಕುಮಾರ್

ದೊಡ್ಡಬಳ್ಳಾಪುರ: ನಗರದ ಹೊರವಲಯದ ಬಾಶೆಟ್ಟಿಹಳ್ಳಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಕುಮಾರ್ ಕೊಡಿಗೇಹಳ್ಳಿ ಗ್ರಾಮಪಂಚಾಯಿತಿಗೆ ವರ್ಗಾವಣೆಯಾಗಿದ್ದು,ಸೋಮವಾರ ಅಧಿಕಾರ ಸ್ವೀಕರಿಸಲಿದ್ದಾರೆ.

ಬಾಶೆಟ್ಟಿಹಳ್ಳಿ ಗ್ರಾಮಪಂಚಾಯಿತಿಗೆ ರಾಷ್ಟ್ರ ಮಟ್ಟದ ಕೀರ್ತಿ ತಂದ ಪಿಡಿಒ ಕುಮಾರ್ ಕುರಿತು ಹರಿತಲೇಖನಿ ಸಂಗ್ರಹಿಸಿದ ವಿಶೇಷ ವರದಿ.

ಕಳೆದ ಮೂರು ವರ್ಷಗಳ ಕಾಲ ಬಾಶೆಟ್ಟಿಹಳ್ಳಿ ಪಿಡಿಒ ಆಗಿ ಸೇವೆ ಸಲ್ಲಿಸಿದ ಉತ್ಸಾಹಿ ಯುವ ಪಿಡಿಒ ಕುಮಾರ್,ಅಧ್ಯಕ್ಷರು,ಸದಸ್ಯರ ವಿಶ್ವಾಸಗಳಿಸಿ ರಾಷ್ಟ ಮಟ್ಟದಲ್ಲಿ ಬಾಶೆಟ್ಟಹಳ್ಳಿಯ ಕೀರ್ತಿ ಸಾರಿದ್ದಾರೆ. ಇವರ ಅಧಿಕಾರ ಅವಧಿಯಲ್ಲಿ ಬೆಂಗಳೂರು /ಹಿಂದೂಪುರ ನಡುವಿನ ಬ್ಯಾಂಕ್ ಸರ್ಕಲ್ ಬಳಿ ಉಂಟಾಗುತ್ತಿದ್ದ ಟ್ರಾಫಿಕ್ ಸಮಸ್ಯೆ ನೀಗಿಸಲು,ಹಲವು ವಿರೋಧದ ನಡುವೆಯೂ ರಸ್ತೆ ಬದಿಯಲ್ಲಿನ ಅಂಗಡಿ ಮುಂಗಟ್ಟುಗಳನ್ನು ತೆರವುಗೊಳಿಸಿ ಮೇಲ್ ಸೇತುವೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿ ಟ್ರಾಫಿಕ್ ಸಮಸ್ಯೆಗೆ ನೀಗಿಸಲು ಶ್ರಮಿಸಿದ್ದಾರೆ.ಸರ್ಕಾರಿ ಶಾಲೆಗೆ ಉತ್ತಮವಾದ ಜಾಗ ಸೌಲಭ್ಯ ಕಲ್ಪಿಸಿದ್ದು,ಗ್ರಾಪಂ ವ್ಯಾಪ್ತಿಯ ಪ್ರತಿ ಗ್ರಾಮಕ್ಕು ಡಿಜಿಟಲ್ ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪನೆ (ಡಿಜಿಟಲ್ ರಿಚಾರ್ಜ್ ಜೊತೆ), ಹಸಿ ಕಸ / ಒಣ ಕಸ ಬೇರ್ಪಡಿಸಲು ಪ್ರತಿ ಮನೆಗೆ ಉಚಿತವಾಗಿ ಎರಡು ಬಣ್ಣದ ಬಕೇಟ್ ವಿತರಣೆ, ಅಲ್ಲದೆ ರಾಜ್ಯಮಟ್ಟದ ಡಿಜಿಟಲ್ ಲೈಬ್ರರಿ ಸ್ಥಾಪನೆ,ರಾಜ್ಯ ಹಾಗೂ ಜಿಲ್ಲಾ ಮಟ್ಟದ  ಕಾರ್ಯಕ್ರಮಗಳ ಯಶಸ್ವಿ ಆಯೋಜನೆ ಇವರ ಶ್ರಮವನ್ನು ಸಾರುತ್ತದೆ.

ಮಾದರಿ ಘನ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪನೆ

ಬಾಶೆಟ್ಟಿಹಳ್ಳಿ ವ್ಯಾಪ್ತಿಯಲ್ಲಿ ರಾಜ್ಯಕ್ಕೆ ಮಾದರಿಯಾದ ಘನ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪಿಸಿದ್ದ ಇವರು,ಪ್ರತಿ ಗ್ರಾಮ,ಶಾಲೆಗಳಲ್ಲಿ ತ್ಯಾಜ್ಯ ವಿಂಗಡಣೆಗೆ ಅರಿವು ಮೂಡಿಸುವ ಕ್ರಮಕೈಗೊಂಡು ಪರಿಸರ ಕಾಳಜಿ ಮೆರೆದಿದ್ದಾರೆ. ಈ ಘಟಕದ ವೀಕ್ಷಣೆಗೆ ರಾಜ್ಯ ಹಾಗೂ ರಾಷ್ಟ್ರದ ಒಂದು ಸಾವಿರಕ್ಕು ಹೆಚ್ಚು ಹಿರಿಯ ಅಧಿಕಾರಿಗಳು,ವಿವಿಧ ಗ್ರಾಮಪಂಚಾಯಿತಿ ಸದಸ್ಯರು ಭೇಟಿ ನೀಡಿ,ತಮ್ಮ ವ್ಯಾಪ್ತಿಯಲ್ಲಿ ಇದೇ ಮಾದರಿಯ ಘಟಕ ಅಳವಡಿಕೆ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. 

ರಾಷ್ಟ್ರ ಹಾಗೂ ಎರಡು ರಾಜ್ಯ ಪ್ರಶಸ್ತಿ ಹಿರಿಮೆ

ಇವರ ಅಧಿಕಾರವಧಿಯಲ್ಲಿ ಬಾಶೆಟ್ಟಿಹಳ್ಳಿ ಗ್ರಾಮಪಂಚಾಯಿತಿಗೆ ದೀನ ದಯಾಳ್ ಉಪಾಧ್ಯಾಯ ಗ್ರಾಮ ಸಶಕ್ತಿಕರಣ ರಾಷ್ಟ್ರ ಪ್ರಶಸ್ತಿ, ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಕರ್ನಾಟಕ ವಿಧಾನ ಪರಿಷತ್ ಪುರಸ್ಕಾರ ಸೇರಿದಂತೆ ಒಂದು ರಾಷ್ಟ್ರ ಹಾಗೂ ಎರಡು ರಾಜ್ಯ ಪ್ರಶಸ್ತಿ ದೊರೆತಿದೆ.

ಗ್ರಾಮಪಂಚಾಯಿತಿಗೆ ಪಿಡಿಒಗಳಾಗಿ ಅಧಿಕಾರಿಗಳು ಬರುತ್ತಾರೆ / ಓಗುತ್ತಾರೆ.ಆದರೆ,ಅವರ ಆಡಳಿತ ಅವಧಿಯಲ್ಲಿ ಕೈಗೊಂಡ ಕ್ರಮಗಳು ಶಾಶ್ವತವಾಗಿ ಉಳಿತ್ತವೆ.

ಉತ್ಸಾಹಿ ಯುವ ಅಧಿಕಾರಿ ಪಿಡಿಒ ಕುಮಾರ್ ಈಗ ಕೊಡಿಗೇಹಳ್ಳಿ ಗ್ರಾಮಪಂಚಾಯಿತಿಗೆ ವರ್ಗಾವಣೆಯಾಗಿದ್ದು ಇಲ್ಲಿಯೂ ಬಾಶೆಟ್ಟಿಹಳ್ಳಿಯಲ್ಲಿ ಆದಂತ ಅಭಿವೃದ್ಧಿ ಕಾರ್ಯಗಳು ಆಗಲೆಂಬುದು ಹರಿತಲೇಖನಿ ತಂಡದ ಕಳಕಳಿ.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!