ಬಾಶೆಟ್ಟಿಹಳ್ಳಿ ಗ್ರಾಪಂ ಪಿಡಿಒ ಕುಮಾರ್ ವರ್ಗಾವಣೆ / ಮಾದರಿ ಗ್ರಾಮಪಂಚಾಯಿತಿ ಕೀರ್ತಿ ತಂದ ಪಿಡಿಒ ಕುಮಾರ್

ದೊಡ್ಡಬಳ್ಳಾಪುರ: ನಗರದ ಹೊರವಲಯದ ಬಾಶೆಟ್ಟಿಹಳ್ಳಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಕುಮಾರ್ ಕೊಡಿಗೇಹಳ್ಳಿ ಗ್ರಾಮಪಂಚಾಯಿತಿಗೆ ವರ್ಗಾವಣೆಯಾಗಿದ್ದು,ಸೋಮವಾರ ಅಧಿಕಾರ ಸ್ವೀಕರಿಸಲಿದ್ದಾರೆ.

ಬಾಶೆಟ್ಟಿಹಳ್ಳಿ ಗ್ರಾಮಪಂಚಾಯಿತಿಗೆ ರಾಷ್ಟ್ರ ಮಟ್ಟದ ಕೀರ್ತಿ ತಂದ ಪಿಡಿಒ ಕುಮಾರ್ ಕುರಿತು ಹರಿತಲೇಖನಿ ಸಂಗ್ರಹಿಸಿದ ವಿಶೇಷ ವರದಿ.

ಕಳೆದ ಮೂರು ವರ್ಷಗಳ ಕಾಲ ಬಾಶೆಟ್ಟಿಹಳ್ಳಿ ಪಿಡಿಒ ಆಗಿ ಸೇವೆ ಸಲ್ಲಿಸಿದ ಉತ್ಸಾಹಿ ಯುವ ಪಿಡಿಒ ಕುಮಾರ್,ಅಧ್ಯಕ್ಷರು,ಸದಸ್ಯರ ವಿಶ್ವಾಸಗಳಿಸಿ ರಾಷ್ಟ ಮಟ್ಟದಲ್ಲಿ ಬಾಶೆಟ್ಟಹಳ್ಳಿಯ ಕೀರ್ತಿ ಸಾರಿದ್ದಾರೆ. ಇವರ ಅಧಿಕಾರ ಅವಧಿಯಲ್ಲಿ ಬೆಂಗಳೂರು /ಹಿಂದೂಪುರ ನಡುವಿನ ಬ್ಯಾಂಕ್ ಸರ್ಕಲ್ ಬಳಿ ಉಂಟಾಗುತ್ತಿದ್ದ ಟ್ರಾಫಿಕ್ ಸಮಸ್ಯೆ ನೀಗಿಸಲು,ಹಲವು ವಿರೋಧದ ನಡುವೆಯೂ ರಸ್ತೆ ಬದಿಯಲ್ಲಿನ ಅಂಗಡಿ ಮುಂಗಟ್ಟುಗಳನ್ನು ತೆರವುಗೊಳಿಸಿ ಮೇಲ್ ಸೇತುವೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿ ಟ್ರಾಫಿಕ್ ಸಮಸ್ಯೆಗೆ ನೀಗಿಸಲು ಶ್ರಮಿಸಿದ್ದಾರೆ.ಸರ್ಕಾರಿ ಶಾಲೆಗೆ ಉತ್ತಮವಾದ ಜಾಗ ಸೌಲಭ್ಯ ಕಲ್ಪಿಸಿದ್ದು,ಗ್ರಾಪಂ ವ್ಯಾಪ್ತಿಯ ಪ್ರತಿ ಗ್ರಾಮಕ್ಕು ಡಿಜಿಟಲ್ ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪನೆ (ಡಿಜಿಟಲ್ ರಿಚಾರ್ಜ್ ಜೊತೆ), ಹಸಿ ಕಸ / ಒಣ ಕಸ ಬೇರ್ಪಡಿಸಲು ಪ್ರತಿ ಮನೆಗೆ ಉಚಿತವಾಗಿ ಎರಡು ಬಣ್ಣದ ಬಕೇಟ್ ವಿತರಣೆ, ಅಲ್ಲದೆ ರಾಜ್ಯಮಟ್ಟದ ಡಿಜಿಟಲ್ ಲೈಬ್ರರಿ ಸ್ಥಾಪನೆ,ರಾಜ್ಯ ಹಾಗೂ ಜಿಲ್ಲಾ ಮಟ್ಟದ  ಕಾರ್ಯಕ್ರಮಗಳ ಯಶಸ್ವಿ ಆಯೋಜನೆ ಇವರ ಶ್ರಮವನ್ನು ಸಾರುತ್ತದೆ.

ಮಾದರಿ ಘನ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪನೆ

ಬಾಶೆಟ್ಟಿಹಳ್ಳಿ ವ್ಯಾಪ್ತಿಯಲ್ಲಿ ರಾಜ್ಯಕ್ಕೆ ಮಾದರಿಯಾದ ಘನ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪಿಸಿದ್ದ ಇವರು,ಪ್ರತಿ ಗ್ರಾಮ,ಶಾಲೆಗಳಲ್ಲಿ ತ್ಯಾಜ್ಯ ವಿಂಗಡಣೆಗೆ ಅರಿವು ಮೂಡಿಸುವ ಕ್ರಮಕೈಗೊಂಡು ಪರಿಸರ ಕಾಳಜಿ ಮೆರೆದಿದ್ದಾರೆ. ಈ ಘಟಕದ ವೀಕ್ಷಣೆಗೆ ರಾಜ್ಯ ಹಾಗೂ ರಾಷ್ಟ್ರದ ಒಂದು ಸಾವಿರಕ್ಕು ಹೆಚ್ಚು ಹಿರಿಯ ಅಧಿಕಾರಿಗಳು,ವಿವಿಧ ಗ್ರಾಮಪಂಚಾಯಿತಿ ಸದಸ್ಯರು ಭೇಟಿ ನೀಡಿ,ತಮ್ಮ ವ್ಯಾಪ್ತಿಯಲ್ಲಿ ಇದೇ ಮಾದರಿಯ ಘಟಕ ಅಳವಡಿಕೆ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. 

ರಾಷ್ಟ್ರ ಹಾಗೂ ಎರಡು ರಾಜ್ಯ ಪ್ರಶಸ್ತಿ ಹಿರಿಮೆ

ಇವರ ಅಧಿಕಾರವಧಿಯಲ್ಲಿ ಬಾಶೆಟ್ಟಿಹಳ್ಳಿ ಗ್ರಾಮಪಂಚಾಯಿತಿಗೆ ದೀನ ದಯಾಳ್ ಉಪಾಧ್ಯಾಯ ಗ್ರಾಮ ಸಶಕ್ತಿಕರಣ ರಾಷ್ಟ್ರ ಪ್ರಶಸ್ತಿ, ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಕರ್ನಾಟಕ ವಿಧಾನ ಪರಿಷತ್ ಪುರಸ್ಕಾರ ಸೇರಿದಂತೆ ಒಂದು ರಾಷ್ಟ್ರ ಹಾಗೂ ಎರಡು ರಾಜ್ಯ ಪ್ರಶಸ್ತಿ ದೊರೆತಿದೆ.

ಗ್ರಾಮಪಂಚಾಯಿತಿಗೆ ಪಿಡಿಒಗಳಾಗಿ ಅಧಿಕಾರಿಗಳು ಬರುತ್ತಾರೆ / ಓಗುತ್ತಾರೆ.ಆದರೆ,ಅವರ ಆಡಳಿತ ಅವಧಿಯಲ್ಲಿ ಕೈಗೊಂಡ ಕ್ರಮಗಳು ಶಾಶ್ವತವಾಗಿ ಉಳಿತ್ತವೆ.

ಉತ್ಸಾಹಿ ಯುವ ಅಧಿಕಾರಿ ಪಿಡಿಒ ಕುಮಾರ್ ಈಗ ಕೊಡಿಗೇಹಳ್ಳಿ ಗ್ರಾಮಪಂಚಾಯಿತಿಗೆ ವರ್ಗಾವಣೆಯಾಗಿದ್ದು ಇಲ್ಲಿಯೂ ಬಾಶೆಟ್ಟಿಹಳ್ಳಿಯಲ್ಲಿ ಆದಂತ ಅಭಿವೃದ್ಧಿ ಕಾರ್ಯಗಳು ಆಗಲೆಂಬುದು ಹರಿತಲೇಖನಿ ತಂಡದ ಕಳಕಳಿ.

ರಾಜಕೀಯ

ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಅವರು ರಾಜ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಅವರು ರಾಜ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು: ಡಿಸಿಎಂ

“ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಸತ್ಯಾಸತ್ಯತೆ ಅರಿಯದೇ ಕೇರಳ ಸಿಎಂ ಪಿಣರಾಯಿ ವಿಜಯನ್ (Pinarayi Vijayan) ಅವರು ಹಸ್ತಕ್ಷೇಪ ಮಾಡಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು

[ccc_my_favorite_select_button post_id="117887"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ಇದೇ ತಿಂಗಳ 15 ರಂದು ಕಾಣೆಯಾಗಿದ್ದ ಬಾಲಕನ ಶವ ತಾಲೂಕಿನ ತೂಬಗೆರೆ ಹೋಬಳಿಯ ಸಾಧುಮಠ ರಸ್ತೆಯ ಬಳಿ ಪತ್ತೆಯಾಗಿದೆ (Missing boy found dead)

[ccc_my_favorite_select_button post_id="117857"]
ಅಪಘಾತ: 4 ಯುವಕರ ಸಾವು ಪ್ರಕರಣ.. ಸಿಎಂ ಪರಿಹಾರ ಘೋಷಣೆ

ಅಪಘಾತ: 4 ಯುವಕರ ಸಾವು ಪ್ರಕರಣ.. ಸಿಎಂ ಪರಿಹಾರ ಘೋಷಣೆ

ಅಜ್ಜವಾರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ನಾಲ್ವರು ಯುವಕರು ಸಾವಿಗೀಡಾದ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="117854"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!