ನಿಂದನೆಗೆ ಮನನೊಂದು ನೇಣಿಗೆ ಶರಣಾದ ಕೋವಿಡ್-19 ದೃಢಪಟ್ಟಿದ್ದ ಕುಟುಂಬದ ಸದಸ್ಯ..!

ದೊಡ್ಡಬಳ್ಳಾಪುರ: ಮಗನಿಗೆ ಕೋವಿಡ್-19 ದೃಢ ಪಟ್ಟು ಆಸ್ಪತ್ರೆಯಲ್ಲಿದ್ದರು ಸಹ ಅಕ್ಕಪಕ್ಕದವರು ನಿಂಧಿಸಿದ್ದರಿಂದ ಮನನೊಂದ ನಗರದ ಖಾಸ್ ಬಾಗ್ ನಿವಾಸಿ ನಾಗರಾಜ್(52) ಮಂಗಳವಾರ ಮರಕ್ಕೆ ನೇಣುಹಾಕಿಕೊಂಡು ಮೃತಪಟ್ಟಿದ್ದಾರೆ.        

ಮೃತರ ಮಗಳು ಎಚ್.ಎನ್.ಆಶಾ ನಗರ ಪೊಲೀಸ್ ಠಾಣೆಗೆ ನೀಡುವ ದೂರಿನಲ್ಲಿ,ಖಾಸ್ ಬಾಗ್ ವಾರ್ಡ್ನ ಮುಖಂಡರಾದ ಮುದ್ದಪ್ಪ, ಹನುಮಂತರಾಯಪ್ಪ ಅವರು ನಮ್ಮ ತಂದೆಯ ಮೊಬೈಲ್ಗೆ ಕರೆ ಮಾಡಿ ಇಲ್ಲಿಂದ ಮನೆ ಖಾಲಿಮಾಡಿಕೊಂಡು ಹೋಗಬೇಕು.ನೀವುಗಳು ಇಲ್ಲಿಯೇ ಇದ್ದರೆ ಇತರರಿಗು ಕರೊನಾ ಸೋಂಕು ಹರಡುತ್ತದೆ ಎಂದು ಅವಾಚ್ಚವಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. 

ನಮ್ಮ ತಂದೆಗೆ ಯಾವುದೇ ರೀತಿಯ ಕರೊನಾ ಸೋಂಕು ಇರಲಿಲ್ಲ. ಆದರೆ ನಮ್ಮ ಅಣ್ಣ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರಿಂದ ಆತನಿಗೆ ಕೋವಿಡ್-19 ದೃಢಪಟ್ಟಿತ್ತು.ಇದನ್ನೇ ನೆಪ ಮಾಡಿಕೊಂಡು ನಿಂದಿಸಿ ಮನೆ ಖಾಲಿಮಾಡಿಕೊಂಡು ಇಲ್ಲಿಂದ ಬೇರೆ ಕಡೆಗೆ ಹೋಗುವಂತೆ ಒತ್ತಡ ಹೇರಿದ್ದರಿಂದ ಮಾನಸಿಕವಾಗಿ ನೊಂದಿದ್ದರು.

ಸೋಮವಾರ ಮನೆಯಿಂದ ಹೊರ ಹೋದವರು ಹೆಸರಘಟ್ಟ ಸಮೀಪದ ಕೆರೆ ಸಮೀಪ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸ್ವತಹ ನಮ್ಮ ತಂದೆಯವರು ನನಗೆ ಕರೆ ಮಾಡಿದ ಸಂದರ್ಭದಲ್ಲಿ ಹೇಳಿದ್ದಾರೆ. ನಮ್ಮ ತಂದೆಯವರೊಂದಿಗೆ ನಡೆದಿರುವ ಸಂಭಾಷಣೆಯ ಧ್ವನಿ ಮುದ್ರಣವು ಸಹ ಇದೆ. ಹೀಗಾಗಿ ಹನುಮಂತರಾಯಪ್ಪ, ಮುದ್ದಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮುದ್ದಪ್ಪ ಸ್ಪಷ್ಟನೆ 

ನಾಗರಾಜ್ ಅವರ ಮಗನಿಗೆ ಕರೊನಾ ಸೋಂಕು ದೃಢ ಪಟ್ಟ ನಂತರ ಖಾಸ್ಬಾಗ್ ಪ್ರದೇಶದಲ್ಲಿ ನಗರಸಭೆ ಸಿಬ್ಬಂದಿಗೆ ಹೇಳಿ ಔಷಧಿ ಸಿಂಪರಣೆ ಮಾಡಿಸಿದ್ದೇವೆ.

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಿಸಿದ್ದೇನೆ.ನಾಗರಾಜ್ ಅವರ ಮನೆಯವರಿಗೆ ಯಾರು ಸಹ ಹೊರಗೆ ಬರಬೇಡಿ. ನಿಮಗೆ ಅಗತ್ಯ ಇರುವ ವಸ್ತುಗಳನ್ನು ಕೊಡಿಸುವುದಾಗಿಯು ಹೇಳಿದ್ದೇವೆ. ಕೋವಿಡ್-19 ಲಾಕ್‌ಡೌನ್‌ ಆರಂಭವಾದಾಗಿನಿಂದಲು ನಗರಸಭೆ ವ್ಯಾಪ್ತಿಯಲ್ಲಿ ಸಾಕಷ್ಟು ಜನರಿಗೆ ದಿನಸಿ ಕಿಟ್ಗಳನ್ನು ವಯಕ್ತಿಕವಾಗಿ ಹಾಗೂ ಬಿಜೆಪಿ ಪಕ್ಷದ ವತಿಯಿಂದಲು ಹಂಚಿದ್ದೇವೆ.ಇಷ್ಟೆಲ್ಲಾ ಸೇವೆ ಮಾಡಿಯು ಸಹ ಪೊಲೀಸ್ ಠಾಣೆಗೆ ನಮ್ಮ ವಿರುದ್ಧ ಇಲ್ಲ ಸಲ್ಲದ ದೂರು ನೀಡಲಾಗಿದೆ. ಪೊಲೀಸರು ಸತ್ಯ ಯಾವುದು ಎನ್ನುವುದನ್ನು ತನಿಖೆ ನಡೆಸಲಿ.ನಾಗರಾಜ್ ಅವರ ಕುಟುಂಬದವರು ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶವು ಇಲ್ಲ ಎಂದು ಮುದ್ದಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!