ನಿಂದನೆಗೆ ಮನನೊಂದು ನೇಣಿಗೆ ಶರಣಾದ ಕೋವಿಡ್-19 ದೃಢಪಟ್ಟಿದ್ದ ಕುಟುಂಬದ ಸದಸ್ಯ..!

ದೊಡ್ಡಬಳ್ಳಾಪುರ: ಮಗನಿಗೆ ಕೋವಿಡ್-19 ದೃಢ ಪಟ್ಟು ಆಸ್ಪತ್ರೆಯಲ್ಲಿದ್ದರು ಸಹ ಅಕ್ಕಪಕ್ಕದವರು ನಿಂಧಿಸಿದ್ದರಿಂದ ಮನನೊಂದ ನಗರದ ಖಾಸ್ ಬಾಗ್ ನಿವಾಸಿ ನಾಗರಾಜ್(52) ಮಂಗಳವಾರ ಮರಕ್ಕೆ ನೇಣುಹಾಕಿಕೊಂಡು ಮೃತಪಟ್ಟಿದ್ದಾರೆ.        

ಮೃತರ ಮಗಳು ಎಚ್.ಎನ್.ಆಶಾ ನಗರ ಪೊಲೀಸ್ ಠಾಣೆಗೆ ನೀಡುವ ದೂರಿನಲ್ಲಿ,ಖಾಸ್ ಬಾಗ್ ವಾರ್ಡ್ನ ಮುಖಂಡರಾದ ಮುದ್ದಪ್ಪ, ಹನುಮಂತರಾಯಪ್ಪ ಅವರು ನಮ್ಮ ತಂದೆಯ ಮೊಬೈಲ್ಗೆ ಕರೆ ಮಾಡಿ ಇಲ್ಲಿಂದ ಮನೆ ಖಾಲಿಮಾಡಿಕೊಂಡು ಹೋಗಬೇಕು.ನೀವುಗಳು ಇಲ್ಲಿಯೇ ಇದ್ದರೆ ಇತರರಿಗು ಕರೊನಾ ಸೋಂಕು ಹರಡುತ್ತದೆ ಎಂದು ಅವಾಚ್ಚವಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. 

ನಮ್ಮ ತಂದೆಗೆ ಯಾವುದೇ ರೀತಿಯ ಕರೊನಾ ಸೋಂಕು ಇರಲಿಲ್ಲ. ಆದರೆ ನಮ್ಮ ಅಣ್ಣ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರಿಂದ ಆತನಿಗೆ ಕೋವಿಡ್-19 ದೃಢಪಟ್ಟಿತ್ತು.ಇದನ್ನೇ ನೆಪ ಮಾಡಿಕೊಂಡು ನಿಂದಿಸಿ ಮನೆ ಖಾಲಿಮಾಡಿಕೊಂಡು ಇಲ್ಲಿಂದ ಬೇರೆ ಕಡೆಗೆ ಹೋಗುವಂತೆ ಒತ್ತಡ ಹೇರಿದ್ದರಿಂದ ಮಾನಸಿಕವಾಗಿ ನೊಂದಿದ್ದರು.

ಸೋಮವಾರ ಮನೆಯಿಂದ ಹೊರ ಹೋದವರು ಹೆಸರಘಟ್ಟ ಸಮೀಪದ ಕೆರೆ ಸಮೀಪ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸ್ವತಹ ನಮ್ಮ ತಂದೆಯವರು ನನಗೆ ಕರೆ ಮಾಡಿದ ಸಂದರ್ಭದಲ್ಲಿ ಹೇಳಿದ್ದಾರೆ. ನಮ್ಮ ತಂದೆಯವರೊಂದಿಗೆ ನಡೆದಿರುವ ಸಂಭಾಷಣೆಯ ಧ್ವನಿ ಮುದ್ರಣವು ಸಹ ಇದೆ. ಹೀಗಾಗಿ ಹನುಮಂತರಾಯಪ್ಪ, ಮುದ್ದಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮುದ್ದಪ್ಪ ಸ್ಪಷ್ಟನೆ 

ನಾಗರಾಜ್ ಅವರ ಮಗನಿಗೆ ಕರೊನಾ ಸೋಂಕು ದೃಢ ಪಟ್ಟ ನಂತರ ಖಾಸ್ಬಾಗ್ ಪ್ರದೇಶದಲ್ಲಿ ನಗರಸಭೆ ಸಿಬ್ಬಂದಿಗೆ ಹೇಳಿ ಔಷಧಿ ಸಿಂಪರಣೆ ಮಾಡಿಸಿದ್ದೇವೆ.

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಿಸಿದ್ದೇನೆ.ನಾಗರಾಜ್ ಅವರ ಮನೆಯವರಿಗೆ ಯಾರು ಸಹ ಹೊರಗೆ ಬರಬೇಡಿ. ನಿಮಗೆ ಅಗತ್ಯ ಇರುವ ವಸ್ತುಗಳನ್ನು ಕೊಡಿಸುವುದಾಗಿಯು ಹೇಳಿದ್ದೇವೆ. ಕೋವಿಡ್-19 ಲಾಕ್‌ಡೌನ್‌ ಆರಂಭವಾದಾಗಿನಿಂದಲು ನಗರಸಭೆ ವ್ಯಾಪ್ತಿಯಲ್ಲಿ ಸಾಕಷ್ಟು ಜನರಿಗೆ ದಿನಸಿ ಕಿಟ್ಗಳನ್ನು ವಯಕ್ತಿಕವಾಗಿ ಹಾಗೂ ಬಿಜೆಪಿ ಪಕ್ಷದ ವತಿಯಿಂದಲು ಹಂಚಿದ್ದೇವೆ.ಇಷ್ಟೆಲ್ಲಾ ಸೇವೆ ಮಾಡಿಯು ಸಹ ಪೊಲೀಸ್ ಠಾಣೆಗೆ ನಮ್ಮ ವಿರುದ್ಧ ಇಲ್ಲ ಸಲ್ಲದ ದೂರು ನೀಡಲಾಗಿದೆ. ಪೊಲೀಸರು ಸತ್ಯ ಯಾವುದು ಎನ್ನುವುದನ್ನು ತನಿಖೆ ನಡೆಸಲಿ.ನಾಗರಾಜ್ ಅವರ ಕುಟುಂಬದವರು ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶವು ಇಲ್ಲ ಎಂದು ಮುದ್ದಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.

ರಾಜಕೀಯ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

[ccc_my_favorite_select_button post_id="119574"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!