ಸರ್ಕಾರದ ಅನುಮತಿಗಾಗಿ ಕಾದಿರುವ ಗಣೇಶ ಮೂರ್ತಿ ತಯಾರಕರು: ಡಿ.ಶ್ರೀಕಾಂತ

ದೊಡ್ಡಬಳ್ಳಾಪುರ: ಪ್ರತಿವರ್ಷ ಗಣೇಶ ಚತುರ್ಥಿ ಒಂದು ತಿಂಗಳಿರುವಂತೆಯೇ ಗಣೇಶ ಮೂರ್ತಿಗಳ  ತಯಾರಿಕೆ ಕಾರ್ ಬಿರುಸಾಗಿ ಸಾಗುವುದು ಸಾಮಾನ್ಯ. ಆದರೆ ಬಾರಿ ಕೊವಿಡ್19 ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ವಿಸಲಾಗುತ್ತಿರುವ ಲಾಕ್ಡೌನ್ ಹಾಗೂ ಹಬ್ಬ ಉತ್ಸವಗಳಿಗೆ ಬ್ರೇಕ್ ಬಿದ್ದಿರುವುದರಿಂದ, ಸರ್ಕಾರ ಮುಂದೆ ಯಾವ ನಿರ್ಧಾರ ಕೈಗೊಳ್ಳಲಿದೆ ಎನ್ನುವುದನ್ನು ವಿಗ್ರಹ ತಯಾರಕರು ಎದುರು ನೋಡುತ್ತಿದ್ದಾರೆ.

ಪಾರಂಪರಿಕ ಮಣ್ಣಿನ ಗಣಪ:

ತಾಲೂಕಿನ ಕಂಟನಕುಂಟೆ, ಗುಂಡುಮಗೆರೆ, ಲಘುಮೇನಹಳ್ಳಿಗಳಲ್ಲಿ ಪಾರಂಪರಿಕ ಕುಂಬಾರ ವೃತ್ತಿ ಮಾಡುವ ಮಂದಿ ಗಣೇಶ ವಿಗ್ರಹಗಳ ತಯಾರಿಕೆ ಮಾಡುತ್ತಾರೆ. ಹಿಡಿಯಷ್ಟು ಚಿಕ್ಕ ಗಣಪನಿಂದ ಹಿಡಿದು 5 ಅಡಿ ಎತ್ತರದ ಗಣೇಶ ವಿಗ್ರಹಗಳು ಇಲ್ಲಿ ತಯಾರಾಗುತ್ತವೆ. ನೈಸರ್ಗಿಕ ಬಣ್ಣಗಳಿಂದ ಮೂರ್ತಿಗಳು ಹಾಗೂ ಬಣ್ಣರಹಿತ ಗಣಪನ ಮೂರ್ತಿಗಳೂ ತಯಾರಾಗುತ್ತವೆಗಣೇಶ ಹಬ್ಬ ಒಂದು ತಿಂಗಳಿದ್ದಂತೆ ಸಗಟು ವ್ಯಾಪಾರಿಗಳು ಗಣೇಶ ಮೂರ್ತಿಗಳನ್ನು ಮಾರಾಟ ಮಾಡಲು ಆರಂಭಿಸುತ್ತಾರೆ. ಗಣೇಶನ ವಿಗ್ರಹಗಳಿಗೆ ಮುಂಗಡ ನೀಡಿ, ಇವರಿಂದ ಮಾರಾಟಗಾರರು ಖರೀದಿಸುತ್ತಾರೆ. ಆದರೆ ಇನ್ನೂ ಯಾವುದೇ ವ್ಯಾಪಾರ ಆರಂಭವಾಗಿಲ್ಲ. ಸರ್ಕಾರ ಸಾರ್ವಜನಿಕ ಗಣೇಶ ಉತ್ಸವಕ್ಕೆ ಅನುಮತಿ ನೀಡದಿರುವುದು ಬಹುತೇಕ ಖಚಿತ. ಇನ್ನು ಮನೆಗಳಲ್ಲಿ ಯಾವ ರೀತಿ ಹಬ್ಬ ಆಚರಿಸಬೇಕು ಎನ್ನುವ ಮಾರ್ಗಸೂಚಿ ಪ್ರಕಟವಾಗಿಲ್ಲ. ಹೀಗಾಗಿ ಗಣೇಶ ಮೂರ್ತಿಗಳನ್ನು ಎಷ್ಟು ತಯಾರು ಮಾಡುವುದು ಎನ್ನುವ ಗೊಂದಲದಲ್ಲಿದ್ದಾರೆ.

ಪ್ರತಿವರ್ಷ ಎಂದಿನಂತೆ ತಯಾರಿಸುವಷ್ಟು ಗಣೇಶ ಮೂರ್ತಿಗಳನ್ನು ತಯಾರಿಸಿದ್ದೇವೆ. ಆದರೆ 2.5 ಅಡಿಗಿಂತ ಎತ್ತರದ ಮೂರ್ತಿಗಳನ್ನು ಹೊಸದಾಗಿ ತಯಾರು ಮಾಡಿಲ್ಲ. ಹಿಂದಿನ ವರ್ಷದ ದೊಡ್ಡ ಮೂರ್ತಿಗಳು ಸಹ ಇವೆ. ಪ್ರತಿವರ್ಷ ಇಷ್ಟೊತ್ತಿಗಾಗಲೇ ಮಾರಾಟಗಾರರು ಮುಂಗಡ ನೀಡಿ ಖರೀದಿಸುತ್ತಿದ್ದರು. ಈಗ ಕರೊನಾ ಕಾರಣವೊಡ್ಡಿ ಯಾರೂ ಮುಂದೆ ಬಂದಿಲ್ಲ. ವರಲಕ್ಷ್ಮೀ ಹಬ್ಬದ ನಂತರ ಮುಂದೇನು ಎನ್ನುವ ನಿರ್ಧಾರ ಮಾಡುತ್ತೇವೆ. ಈಗಾಗಲೇ ಕುಂಬಾರ ಕಸುಬು ಸಂಕಷ್ಟದಲ್ಲಿದೆ. ಕರೊನಾ ಲಾಕ್ಡೌನ್ನಿಂದಾಗಿ, ಮಡಿಕೆ, ಕುಂಡಗಳು, ಸೇರಿದಂತೆ ಮಣ್ಣಿನ ಉತ್ಪನ್ನಗಳು ಸಹ ಮಾರಾಟವಾಗಿಲ್ಲ. ಸರ್ಕಾರ ಸಾರ್ವಜನಿಕ ಉತ್ಸವಕ್ಕೆ ಅನುಮತಿ ನೀಡದಿದ್ದರೂ ಕನಿಷ್ಟ ಮನೆಗಳಲ್ಲಿ ಗಣೇಶ ಮೂರ್ತಿ ಕೂಡಿಸಲು ಅನುಮತಿ ನೀಡಿ, ಮೂರ್ತಿಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಬೇಕು. ರಾಜ್ಯ ಕುಂಬಾರ ಸಂಘದಿಂದ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗಿದ್ದು, ಈವೆರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎನ್ನುತ್ತಾರೆ ಗಣೇಶ ಮೂರ್ತಿ ತಯಾರಕರಾದ ಕಂಟನಕುಂಟೆಯ ಶಿವಾನಂದ್.

 ಮನೆಗಳಲ್ಲಾದರೂ ಗಣಪತಿ ಮೂರ್ತಿ
ಇಡಲು ಅವಕಾಶ
ನೀಡಿ

ಕರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಈಗಾಗಲೇ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ. ಇತರೆ ಸಮುದಾಯಗಳಿಗೆ ಬಿಡುಗಡೆ ಆದಂತೆ ಕುಂಬಾರ ಸಮುದಾಯಕ್ಕೆ ನೆರವು ಬಂದಿಲ್ಲ.ಗಣಪತಿ ಮೂರ್ತಿಗಳನ್ನು ಇಡಲು ಅವಕಾಶ ನೀಡದಿದ್ದರೆ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಲಿದೆ.ಹೀಗಾಗಿ ಕನಿಷ್ಠ ಮನೆಗಳಲ್ಲಾದರೂ ಇಡಲು ಅವಕಾಶ ನೀಡಬೇಕು ವೆಂಕಟಾಚಲಯ್ಯ, ಕುಂಬಾರರ
ಸಂಘದ ಬೆಂಗಳೂರು
ಗ್ರಾಮಾಂತರ ಜಿಧ್ಯಕ್ಷ.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!