ಬ್ರೇಕಿಂಗ್‌: ದೊಡ್ಡಬಳ್ಳಾಪುರ ಬೆಸ್ಕಾಂ ಎಇಇ ಸುಂದರೇಶ್ ನಾಯ್ಕ್ ವರ್ಗಾವಣೆ..!

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮಾಂತರ ಬೆಂಗಳೂರು ವಿದ್ಯುತ್ ಸರಬರಾಜು ಮಂಡಳಿಯ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಆರ್.ಸುಂದರೇಶ್ ನಾಯ್ಕ್ ಅಚ್ಚರಿಯ ಬೆಳವಣಿಗೆಯಲ್ಲಿ ಕೆ.ಆರ್.ಪುರಂಗೆ ವರ್ಗಾವಣೆಯಾಗಿದ್ದಾರೆ.

ದೊಡ್ಡಬಳ್ಳಾಪುರ ನಗರ ಉಪ ವಿಭಾಗದಲ್ಲಿ ಸುಮಾರು ನಾಲ್ಕು ವರ್ಷ.ಹಾಗೂ,ಗ್ರಾಮಾಂತರ ವಿಭಾಗದಲ್ಲಿ ಆರು ತಿಂಗಳು ಕರ್ತವ್ಯ ನಿರ್ವಹಿಸುತ್ತಿದ್ದ ಯುವ ಉತ್ಸಾಹಿ ಅಧಿಕಾರಿಯಾಗಿದ್ದ ಆರ್.ಸುಂದರೇಶ್ ನಾಯಕ್ ಬೆಸ್ಕಾಂ ಇಲಾಖೆಯಲ್ಲಿನ ಸಮಸ್ಯೆಗಳನ್ನು ಸಾಧ್ಯವಾದಷ್ಟು ನೀಗಿಸಲು ಶ್ರಮಪಟ್ಟಿದ್ದರು.

ಇವರ ಅವಧಿಯಲ್ಲಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ವಿದ್ಯುತ್ ಸರಬರಾಜು ಹಾಗೂ ಗ್ರಾಹಕರ ಸ್ನೇಹಿಯಾಗಿರಲು ದೊಡ್ಡಬಳ್ಳಾಪುರ ಉಪವಿಭಾಗವನ್ನು ಎರಡು ಉಪವಿಭಾಗವಾಗಿ ಬೇರ್ಪಡಿಸಿ,ಗ್ರಾಮೀಣ ಮತ್ತು ನಗರ ಉಪ ವಿಭಾಗವಾಗಿ ಮಾಡಿದ್ದರು.

ತಾಲೂಕಿನಲ್ಲಿ 5 ಶಾಖೆಗಳನ್ನು 8 ಶಾಖೆಗಳಾಗಿ ಹೆಚ್ಚಿಸಿ ನಮ್ಮ ತಾಲ್ಲೂಕಿನ ರೈತರಿಗೆ ಅನುಕೂಲವಾಗುವಂತೆ ಹೆಚ್ಚುವರಿ ವಿದ್ಯುತ್ ಮಾರ್ಗದಾಳುಗಳನ್ನು ನೇಮಿಸಿದ್ದರು ಸಹ ಸಾಧ್ಯವಾದಷ್ಟು ವೋಲ್ಟೇಜ್ ತೊಂದರೆ ಆಗದಂತೆ ನೋಡಿಕೊಂಡಿದ್ದರು.

ತಾಲೂಕಿನಲ್ಲಿ ಕುಡಿಯುವ ನೀರಿನ ಬವಣೆಯನ್ನು ಹೋಗಲಾಡಿಸಲು ಎಲ್ಲಾ ಕುಡಿಯುವ ನೀರಿನ ಸ್ಥಾವರಗಳಿಗೆ ನಿರಂತರ ವಿದ್ಯುತ್ ಪೂರೈಕೆ, ಮಾತ್ರವಲ್ಲದೆ ಎಲ್ಲಾ ಹಳ್ಳಿಗಳಿಗೂ ಸಹ ನಿರಂತರ ವಿದ್ಯುತ್ ಸಂಪರ್ಕ ನೀಡಲಾಗಿದೆ.

ಗಂಗಾಕಲ್ಯಾಣ ಮತ್ತು ಕುಡಿಯುವ ನೀರಿನ ಸ್ಥಾವರಗಳಿಗೆ ಮೊದಲ ಆದ್ಯತೆ ನೀಡಿ ಬಹುತೇಕ ಎಲ್ಲಾ ಕಾಮಗಾರಿಗಳನ್ನು ಪೂರ್ಣ ಗೊಳಿಸಲಾಗಿದೆ.ರೈತರಿಗೆ ಅನುಕೂಲವಾಗಲೆಂದು ಹೆಚ್ಚುವರಿ ಮತ್ತು ಅಕ್ರಮ ಸಕ್ರಮ ಯೋಜನೆಯಡಿಗಳಲ್ಲಿ ಸುಮಾರು 500ಕ್ಕೂ ಹೆಚ್ಚಿನ  ಪರಿವರ್ತಕಗಳನ್ನು  ಅಳವಡಿಸಲಾಗಿದೆ.ಮಾತ್ರವಲ್ಲದೆ  HVDS ಯೋಜನೆಯಡಿಯಲ್ಲಿ ಸುಮಾರು 4000ಕ್ಕೂ ಹೆಚ್ಚು ಪರಿವರ್ತಕ ಅಳವಡಿಸಲು ಪ್ರಸ್ಥಾವನೆಯನ್ನು ಸಲ್ಲಿಸಲಾಗಿದೆ.

ಮೊದಲ ಹಂತದಲ್ಲಿ ಮಾಡೆಲ್ ವಿಲೇಜ್ ಯೋಜನೆಯಡಿಯಲ್ಲಿ ಒಟ್ಟು 6 ಗ್ರಾಮ ಗಳನ್ನು ಆಯ್ಕೆ ಮಾಡಿ.ಹಳೆಯ ವಿದ್ಯುತ್ ಮಾರ್ಗದಾಳುಗಳನ್ನು ದುರಸ್ಥಿಗೊಳಿಸಿ ವಿದ್ಯುತ್ ಸಂಬಂಧಿತ ಎಲ್ಲಾ ದೂರುಗಳನ್ನು ಸರಿಪಡಿಸಲಾಗಿದೆ.ಬೆಸ್ಕಾಂ ಉಪವಿಭಾಗಕ್ಕಾಗಿ ಎಪಿಎಸಿ ಮುಂಭಾಗ  ಸ್ವಂತ ಕಟ್ಟಡ ನಿರ್ಮಿಸಲಾಗಿದೆ.ಎಲ್ಲಾ ರೈತರು,ಪವರ್ ಲೂಮ್ ಗ್ರಾಹಕರು, ಹಾಗೂ ತಾಲೂಕಿನ ಎಲ್ಲಾ ಗ್ರಾಹಕರಿಗೆ ಸ್ಪಂದಿಸಿ ಸೌಹಾರ್ದಿತವಾಗಿ ಇಲಾಖೆಗೆ ಸಂಬಂಧಿಸಿದ ಎಲ್ಲಾ ದೂರುಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಇವರದ್ದು.ಪವರ್ ಮ್ಯಾನ್ ಗಳಿಗೆ ಸುರಕ್ಷಿತ ಸಾಮಗ್ರಿಗಳನ್ನು ಒದಗಿಸಿ ಯಾವುದೇ ಮೇಜರ್ ಅಪಘಾತವಾಗದಂತೆ ಮುಂಜಾಗ್ರತೆ ಕ್ರಮ ಕೈಗೊಂಡಿದ್ದರು.

ಉತ್ತಮ ಕಾರ್ಯಕ್ಕೆ ಪ್ರಶಸ್ತಿ 

2018-19ನೇ ಸಾಲಿನಲ್ಲಿ ಉಪವಿಭಾಗದ ಇವರ ಉತ್ತಮ ಕೆಲಸಗಳನ್ನು ಗುರುತಿಸಿ ಅಂದಿನ ಬೆಸ್ಕಾಂ ಇಲಾಖೆಯ ನಿರ್ದೇಶಕಿ ಶಿಖಾ ಅವರು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದರು. 

ದೊಡ್ಡಬಳ್ಳಾಪುರದಲ್ಲಿ ಕರ್ತವ್ಯ ಜೀವನದ ಅಮೂಲ್ಯ ಘಟ್ಟ: ಸುಂದ್ರೇಶ್ ನಾಯಕ್

ದೊಡ್ಡಬಳ್ಳಾಪುರ ಉಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದು ನನ್ನ ಜೀವನದ ಅತೀ ಅಮೂಲ್ಯ ಘಟ್ಟವೆಂದೇ ಪರಿಗಣಿಸುತ್ತೇನೆ. ಇವೆಲ್ಲವನ್ನೂ ಸಾಧಿಸಲು ನನ್ನ ಇಲಾಖೆ, ನನ್ನ ಮೇಲಧಿಕಾರಿಗಳು, ಕಚೇರಿಯ ಎಲ್ಲಾ ಸಿಬ್ಬಂದಿಗಳು, ಶಾಖಾಧಿಕಾರಿಗಳು, ಪವರ್ ಮ್ಯಾನ್ಗಳು ಮತ್ತು ಜಿವಿಪಿಗಳು ಹಾಗೂ ಮುಖ್ಯವಾಗಿ ತಾಲೂಕಿನ ಜನತೆಯ ಸಹಕಾರ ಮತ್ತು ನಿಮ್ಮ ಪ್ರೋತ್ಸಾಹದಿಂದ ಈ ನನ್ನ ನಾಲ್ಕು ವರ್ಷದ ಪಯಣವನ್ನು ಅವಿಸ್ಮರಣೀಯ  ಆಗಿಸಿದೆ ಎಂದು ಹರಿತಲೇಖನಿ ಮೂಲಕ ಸುಂದರೇಶ್ ನಾಯಕ್ ತಾಲೂಕಿನ ಜನತೆಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಅಧಿಕಾರಿಗಳ ಅವಧಿಯಲ್ಲಿ ಕೈಗೊಳ್ಳಲಾದ ಕ್ರಮಗಳು ಶಾಶ್ವತವಾಗಿ ಉಳಿಯುತ್ತವೆ. ಎಂಬುದಕ್ಕೆ ಸುಂದರೇಶ್ ನಾಯಕ್ ಅವರ ಕಾರ್ಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸಾಕ್ಷಿಯಾಗಿರಲಿದೆ.

ರಾಜಕೀಯ

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ.

“ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ” ಎಂದು ಡಿಸಿಎಂ ಡಿ.ಕೆ.

[ccc_my_favorite_select_button post_id="119395"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!