ಬ್ರೇಕಿಂಗ್‌: ದೊಡ್ಡಬಳ್ಳಾಪುರ ಬೆಸ್ಕಾಂ ಎಇಇ ಸುಂದರೇಶ್ ನಾಯ್ಕ್ ವರ್ಗಾವಣೆ..!

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮಾಂತರ ಬೆಂಗಳೂರು ವಿದ್ಯುತ್ ಸರಬರಾಜು ಮಂಡಳಿಯ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಆರ್.ಸುಂದರೇಶ್ ನಾಯ್ಕ್ ಅಚ್ಚರಿಯ ಬೆಳವಣಿಗೆಯಲ್ಲಿ ಕೆ.ಆರ್.ಪುರಂಗೆ ವರ್ಗಾವಣೆಯಾಗಿದ್ದಾರೆ.

ದೊಡ್ಡಬಳ್ಳಾಪುರ ನಗರ ಉಪ ವಿಭಾಗದಲ್ಲಿ ಸುಮಾರು ನಾಲ್ಕು ವರ್ಷ.ಹಾಗೂ,ಗ್ರಾಮಾಂತರ ವಿಭಾಗದಲ್ಲಿ ಆರು ತಿಂಗಳು ಕರ್ತವ್ಯ ನಿರ್ವಹಿಸುತ್ತಿದ್ದ ಯುವ ಉತ್ಸಾಹಿ ಅಧಿಕಾರಿಯಾಗಿದ್ದ ಆರ್.ಸುಂದರೇಶ್ ನಾಯಕ್ ಬೆಸ್ಕಾಂ ಇಲಾಖೆಯಲ್ಲಿನ ಸಮಸ್ಯೆಗಳನ್ನು ಸಾಧ್ಯವಾದಷ್ಟು ನೀಗಿಸಲು ಶ್ರಮಪಟ್ಟಿದ್ದರು.

ಇವರ ಅವಧಿಯಲ್ಲಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ವಿದ್ಯುತ್ ಸರಬರಾಜು ಹಾಗೂ ಗ್ರಾಹಕರ ಸ್ನೇಹಿಯಾಗಿರಲು ದೊಡ್ಡಬಳ್ಳಾಪುರ ಉಪವಿಭಾಗವನ್ನು ಎರಡು ಉಪವಿಭಾಗವಾಗಿ ಬೇರ್ಪಡಿಸಿ,ಗ್ರಾಮೀಣ ಮತ್ತು ನಗರ ಉಪ ವಿಭಾಗವಾಗಿ ಮಾಡಿದ್ದರು.

ತಾಲೂಕಿನಲ್ಲಿ 5 ಶಾಖೆಗಳನ್ನು 8 ಶಾಖೆಗಳಾಗಿ ಹೆಚ್ಚಿಸಿ ನಮ್ಮ ತಾಲ್ಲೂಕಿನ ರೈತರಿಗೆ ಅನುಕೂಲವಾಗುವಂತೆ ಹೆಚ್ಚುವರಿ ವಿದ್ಯುತ್ ಮಾರ್ಗದಾಳುಗಳನ್ನು ನೇಮಿಸಿದ್ದರು ಸಹ ಸಾಧ್ಯವಾದಷ್ಟು ವೋಲ್ಟೇಜ್ ತೊಂದರೆ ಆಗದಂತೆ ನೋಡಿಕೊಂಡಿದ್ದರು.

ತಾಲೂಕಿನಲ್ಲಿ ಕುಡಿಯುವ ನೀರಿನ ಬವಣೆಯನ್ನು ಹೋಗಲಾಡಿಸಲು ಎಲ್ಲಾ ಕುಡಿಯುವ ನೀರಿನ ಸ್ಥಾವರಗಳಿಗೆ ನಿರಂತರ ವಿದ್ಯುತ್ ಪೂರೈಕೆ, ಮಾತ್ರವಲ್ಲದೆ ಎಲ್ಲಾ ಹಳ್ಳಿಗಳಿಗೂ ಸಹ ನಿರಂತರ ವಿದ್ಯುತ್ ಸಂಪರ್ಕ ನೀಡಲಾಗಿದೆ.

ಗಂಗಾಕಲ್ಯಾಣ ಮತ್ತು ಕುಡಿಯುವ ನೀರಿನ ಸ್ಥಾವರಗಳಿಗೆ ಮೊದಲ ಆದ್ಯತೆ ನೀಡಿ ಬಹುತೇಕ ಎಲ್ಲಾ ಕಾಮಗಾರಿಗಳನ್ನು ಪೂರ್ಣ ಗೊಳಿಸಲಾಗಿದೆ.ರೈತರಿಗೆ ಅನುಕೂಲವಾಗಲೆಂದು ಹೆಚ್ಚುವರಿ ಮತ್ತು ಅಕ್ರಮ ಸಕ್ರಮ ಯೋಜನೆಯಡಿಗಳಲ್ಲಿ ಸುಮಾರು 500ಕ್ಕೂ ಹೆಚ್ಚಿನ  ಪರಿವರ್ತಕಗಳನ್ನು  ಅಳವಡಿಸಲಾಗಿದೆ.ಮಾತ್ರವಲ್ಲದೆ  HVDS ಯೋಜನೆಯಡಿಯಲ್ಲಿ ಸುಮಾರು 4000ಕ್ಕೂ ಹೆಚ್ಚು ಪರಿವರ್ತಕ ಅಳವಡಿಸಲು ಪ್ರಸ್ಥಾವನೆಯನ್ನು ಸಲ್ಲಿಸಲಾಗಿದೆ.

ಮೊದಲ ಹಂತದಲ್ಲಿ ಮಾಡೆಲ್ ವಿಲೇಜ್ ಯೋಜನೆಯಡಿಯಲ್ಲಿ ಒಟ್ಟು 6 ಗ್ರಾಮ ಗಳನ್ನು ಆಯ್ಕೆ ಮಾಡಿ.ಹಳೆಯ ವಿದ್ಯುತ್ ಮಾರ್ಗದಾಳುಗಳನ್ನು ದುರಸ್ಥಿಗೊಳಿಸಿ ವಿದ್ಯುತ್ ಸಂಬಂಧಿತ ಎಲ್ಲಾ ದೂರುಗಳನ್ನು ಸರಿಪಡಿಸಲಾಗಿದೆ.ಬೆಸ್ಕಾಂ ಉಪವಿಭಾಗಕ್ಕಾಗಿ ಎಪಿಎಸಿ ಮುಂಭಾಗ  ಸ್ವಂತ ಕಟ್ಟಡ ನಿರ್ಮಿಸಲಾಗಿದೆ.ಎಲ್ಲಾ ರೈತರು,ಪವರ್ ಲೂಮ್ ಗ್ರಾಹಕರು, ಹಾಗೂ ತಾಲೂಕಿನ ಎಲ್ಲಾ ಗ್ರಾಹಕರಿಗೆ ಸ್ಪಂದಿಸಿ ಸೌಹಾರ್ದಿತವಾಗಿ ಇಲಾಖೆಗೆ ಸಂಬಂಧಿಸಿದ ಎಲ್ಲಾ ದೂರುಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಇವರದ್ದು.ಪವರ್ ಮ್ಯಾನ್ ಗಳಿಗೆ ಸುರಕ್ಷಿತ ಸಾಮಗ್ರಿಗಳನ್ನು ಒದಗಿಸಿ ಯಾವುದೇ ಮೇಜರ್ ಅಪಘಾತವಾಗದಂತೆ ಮುಂಜಾಗ್ರತೆ ಕ್ರಮ ಕೈಗೊಂಡಿದ್ದರು.

ಉತ್ತಮ ಕಾರ್ಯಕ್ಕೆ ಪ್ರಶಸ್ತಿ 

2018-19ನೇ ಸಾಲಿನಲ್ಲಿ ಉಪವಿಭಾಗದ ಇವರ ಉತ್ತಮ ಕೆಲಸಗಳನ್ನು ಗುರುತಿಸಿ ಅಂದಿನ ಬೆಸ್ಕಾಂ ಇಲಾಖೆಯ ನಿರ್ದೇಶಕಿ ಶಿಖಾ ಅವರು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದರು. 

ದೊಡ್ಡಬಳ್ಳಾಪುರದಲ್ಲಿ ಕರ್ತವ್ಯ ಜೀವನದ ಅಮೂಲ್ಯ ಘಟ್ಟ: ಸುಂದ್ರೇಶ್ ನಾಯಕ್

ದೊಡ್ಡಬಳ್ಳಾಪುರ ಉಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದು ನನ್ನ ಜೀವನದ ಅತೀ ಅಮೂಲ್ಯ ಘಟ್ಟವೆಂದೇ ಪರಿಗಣಿಸುತ್ತೇನೆ. ಇವೆಲ್ಲವನ್ನೂ ಸಾಧಿಸಲು ನನ್ನ ಇಲಾಖೆ, ನನ್ನ ಮೇಲಧಿಕಾರಿಗಳು, ಕಚೇರಿಯ ಎಲ್ಲಾ ಸಿಬ್ಬಂದಿಗಳು, ಶಾಖಾಧಿಕಾರಿಗಳು, ಪವರ್ ಮ್ಯಾನ್ಗಳು ಮತ್ತು ಜಿವಿಪಿಗಳು ಹಾಗೂ ಮುಖ್ಯವಾಗಿ ತಾಲೂಕಿನ ಜನತೆಯ ಸಹಕಾರ ಮತ್ತು ನಿಮ್ಮ ಪ್ರೋತ್ಸಾಹದಿಂದ ಈ ನನ್ನ ನಾಲ್ಕು ವರ್ಷದ ಪಯಣವನ್ನು ಅವಿಸ್ಮರಣೀಯ  ಆಗಿಸಿದೆ ಎಂದು ಹರಿತಲೇಖನಿ ಮೂಲಕ ಸುಂದರೇಶ್ ನಾಯಕ್ ತಾಲೂಕಿನ ಜನತೆಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಅಧಿಕಾರಿಗಳ ಅವಧಿಯಲ್ಲಿ ಕೈಗೊಳ್ಳಲಾದ ಕ್ರಮಗಳು ಶಾಶ್ವತವಾಗಿ ಉಳಿಯುತ್ತವೆ. ಎಂಬುದಕ್ಕೆ ಸುಂದರೇಶ್ ನಾಯಕ್ ಅವರ ಕಾರ್ಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸಾಕ್ಷಿಯಾಗಿರಲಿದೆ.

ರಾಜಕೀಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ (Prahlad Joshi) ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ

[ccc_my_favorite_select_button post_id="118281"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!