ಬ್ರೇಕಿಂಗ್‌: ದೊಡ್ಡಬಳ್ಳಾಪುರ ಬೆಸ್ಕಾಂ ಎಇಇ ಸುಂದರೇಶ್ ನಾಯ್ಕ್ ವರ್ಗಾವಣೆ..!

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮಾಂತರ ಬೆಂಗಳೂರು ವಿದ್ಯುತ್ ಸರಬರಾಜು ಮಂಡಳಿಯ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಆರ್.ಸುಂದರೇಶ್ ನಾಯ್ಕ್ ಅಚ್ಚರಿಯ ಬೆಳವಣಿಗೆಯಲ್ಲಿ ಕೆ.ಆರ್.ಪುರಂಗೆ ವರ್ಗಾವಣೆಯಾಗಿದ್ದಾರೆ.

ದೊಡ್ಡಬಳ್ಳಾಪುರ ನಗರ ಉಪ ವಿಭಾಗದಲ್ಲಿ ಸುಮಾರು ನಾಲ್ಕು ವರ್ಷ.ಹಾಗೂ,ಗ್ರಾಮಾಂತರ ವಿಭಾಗದಲ್ಲಿ ಆರು ತಿಂಗಳು ಕರ್ತವ್ಯ ನಿರ್ವಹಿಸುತ್ತಿದ್ದ ಯುವ ಉತ್ಸಾಹಿ ಅಧಿಕಾರಿಯಾಗಿದ್ದ ಆರ್.ಸುಂದರೇಶ್ ನಾಯಕ್ ಬೆಸ್ಕಾಂ ಇಲಾಖೆಯಲ್ಲಿನ ಸಮಸ್ಯೆಗಳನ್ನು ಸಾಧ್ಯವಾದಷ್ಟು ನೀಗಿಸಲು ಶ್ರಮಪಟ್ಟಿದ್ದರು.

ಇವರ ಅವಧಿಯಲ್ಲಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ವಿದ್ಯುತ್ ಸರಬರಾಜು ಹಾಗೂ ಗ್ರಾಹಕರ ಸ್ನೇಹಿಯಾಗಿರಲು ದೊಡ್ಡಬಳ್ಳಾಪುರ ಉಪವಿಭಾಗವನ್ನು ಎರಡು ಉಪವಿಭಾಗವಾಗಿ ಬೇರ್ಪಡಿಸಿ,ಗ್ರಾಮೀಣ ಮತ್ತು ನಗರ ಉಪ ವಿಭಾಗವಾಗಿ ಮಾಡಿದ್ದರು.

ತಾಲೂಕಿನಲ್ಲಿ 5 ಶಾಖೆಗಳನ್ನು 8 ಶಾಖೆಗಳಾಗಿ ಹೆಚ್ಚಿಸಿ ನಮ್ಮ ತಾಲ್ಲೂಕಿನ ರೈತರಿಗೆ ಅನುಕೂಲವಾಗುವಂತೆ ಹೆಚ್ಚುವರಿ ವಿದ್ಯುತ್ ಮಾರ್ಗದಾಳುಗಳನ್ನು ನೇಮಿಸಿದ್ದರು ಸಹ ಸಾಧ್ಯವಾದಷ್ಟು ವೋಲ್ಟೇಜ್ ತೊಂದರೆ ಆಗದಂತೆ ನೋಡಿಕೊಂಡಿದ್ದರು.

ತಾಲೂಕಿನಲ್ಲಿ ಕುಡಿಯುವ ನೀರಿನ ಬವಣೆಯನ್ನು ಹೋಗಲಾಡಿಸಲು ಎಲ್ಲಾ ಕುಡಿಯುವ ನೀರಿನ ಸ್ಥಾವರಗಳಿಗೆ ನಿರಂತರ ವಿದ್ಯುತ್ ಪೂರೈಕೆ, ಮಾತ್ರವಲ್ಲದೆ ಎಲ್ಲಾ ಹಳ್ಳಿಗಳಿಗೂ ಸಹ ನಿರಂತರ ವಿದ್ಯುತ್ ಸಂಪರ್ಕ ನೀಡಲಾಗಿದೆ.

ಗಂಗಾಕಲ್ಯಾಣ ಮತ್ತು ಕುಡಿಯುವ ನೀರಿನ ಸ್ಥಾವರಗಳಿಗೆ ಮೊದಲ ಆದ್ಯತೆ ನೀಡಿ ಬಹುತೇಕ ಎಲ್ಲಾ ಕಾಮಗಾರಿಗಳನ್ನು ಪೂರ್ಣ ಗೊಳಿಸಲಾಗಿದೆ.ರೈತರಿಗೆ ಅನುಕೂಲವಾಗಲೆಂದು ಹೆಚ್ಚುವರಿ ಮತ್ತು ಅಕ್ರಮ ಸಕ್ರಮ ಯೋಜನೆಯಡಿಗಳಲ್ಲಿ ಸುಮಾರು 500ಕ್ಕೂ ಹೆಚ್ಚಿನ  ಪರಿವರ್ತಕಗಳನ್ನು  ಅಳವಡಿಸಲಾಗಿದೆ.ಮಾತ್ರವಲ್ಲದೆ  HVDS ಯೋಜನೆಯಡಿಯಲ್ಲಿ ಸುಮಾರು 4000ಕ್ಕೂ ಹೆಚ್ಚು ಪರಿವರ್ತಕ ಅಳವಡಿಸಲು ಪ್ರಸ್ಥಾವನೆಯನ್ನು ಸಲ್ಲಿಸಲಾಗಿದೆ.

ಮೊದಲ ಹಂತದಲ್ಲಿ ಮಾಡೆಲ್ ವಿಲೇಜ್ ಯೋಜನೆಯಡಿಯಲ್ಲಿ ಒಟ್ಟು 6 ಗ್ರಾಮ ಗಳನ್ನು ಆಯ್ಕೆ ಮಾಡಿ.ಹಳೆಯ ವಿದ್ಯುತ್ ಮಾರ್ಗದಾಳುಗಳನ್ನು ದುರಸ್ಥಿಗೊಳಿಸಿ ವಿದ್ಯುತ್ ಸಂಬಂಧಿತ ಎಲ್ಲಾ ದೂರುಗಳನ್ನು ಸರಿಪಡಿಸಲಾಗಿದೆ.ಬೆಸ್ಕಾಂ ಉಪವಿಭಾಗಕ್ಕಾಗಿ ಎಪಿಎಸಿ ಮುಂಭಾಗ  ಸ್ವಂತ ಕಟ್ಟಡ ನಿರ್ಮಿಸಲಾಗಿದೆ.ಎಲ್ಲಾ ರೈತರು,ಪವರ್ ಲೂಮ್ ಗ್ರಾಹಕರು, ಹಾಗೂ ತಾಲೂಕಿನ ಎಲ್ಲಾ ಗ್ರಾಹಕರಿಗೆ ಸ್ಪಂದಿಸಿ ಸೌಹಾರ್ದಿತವಾಗಿ ಇಲಾಖೆಗೆ ಸಂಬಂಧಿಸಿದ ಎಲ್ಲಾ ದೂರುಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಇವರದ್ದು.ಪವರ್ ಮ್ಯಾನ್ ಗಳಿಗೆ ಸುರಕ್ಷಿತ ಸಾಮಗ್ರಿಗಳನ್ನು ಒದಗಿಸಿ ಯಾವುದೇ ಮೇಜರ್ ಅಪಘಾತವಾಗದಂತೆ ಮುಂಜಾಗ್ರತೆ ಕ್ರಮ ಕೈಗೊಂಡಿದ್ದರು.

ಉತ್ತಮ ಕಾರ್ಯಕ್ಕೆ ಪ್ರಶಸ್ತಿ 

2018-19ನೇ ಸಾಲಿನಲ್ಲಿ ಉಪವಿಭಾಗದ ಇವರ ಉತ್ತಮ ಕೆಲಸಗಳನ್ನು ಗುರುತಿಸಿ ಅಂದಿನ ಬೆಸ್ಕಾಂ ಇಲಾಖೆಯ ನಿರ್ದೇಶಕಿ ಶಿಖಾ ಅವರು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದರು. 

ದೊಡ್ಡಬಳ್ಳಾಪುರದಲ್ಲಿ ಕರ್ತವ್ಯ ಜೀವನದ ಅಮೂಲ್ಯ ಘಟ್ಟ: ಸುಂದ್ರೇಶ್ ನಾಯಕ್

ದೊಡ್ಡಬಳ್ಳಾಪುರ ಉಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದು ನನ್ನ ಜೀವನದ ಅತೀ ಅಮೂಲ್ಯ ಘಟ್ಟವೆಂದೇ ಪರಿಗಣಿಸುತ್ತೇನೆ. ಇವೆಲ್ಲವನ್ನೂ ಸಾಧಿಸಲು ನನ್ನ ಇಲಾಖೆ, ನನ್ನ ಮೇಲಧಿಕಾರಿಗಳು, ಕಚೇರಿಯ ಎಲ್ಲಾ ಸಿಬ್ಬಂದಿಗಳು, ಶಾಖಾಧಿಕಾರಿಗಳು, ಪವರ್ ಮ್ಯಾನ್ಗಳು ಮತ್ತು ಜಿವಿಪಿಗಳು ಹಾಗೂ ಮುಖ್ಯವಾಗಿ ತಾಲೂಕಿನ ಜನತೆಯ ಸಹಕಾರ ಮತ್ತು ನಿಮ್ಮ ಪ್ರೋತ್ಸಾಹದಿಂದ ಈ ನನ್ನ ನಾಲ್ಕು ವರ್ಷದ ಪಯಣವನ್ನು ಅವಿಸ್ಮರಣೀಯ  ಆಗಿಸಿದೆ ಎಂದು ಹರಿತಲೇಖನಿ ಮೂಲಕ ಸುಂದರೇಶ್ ನಾಯಕ್ ತಾಲೂಕಿನ ಜನತೆಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಅಧಿಕಾರಿಗಳ ಅವಧಿಯಲ್ಲಿ ಕೈಗೊಳ್ಳಲಾದ ಕ್ರಮಗಳು ಶಾಶ್ವತವಾಗಿ ಉಳಿಯುತ್ತವೆ. ಎಂಬುದಕ್ಕೆ ಸುಂದರೇಶ್ ನಾಯಕ್ ಅವರ ಕಾರ್ಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸಾಕ್ಷಿಯಾಗಿರಲಿದೆ.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!