ಬ್ರೇಕಿಂಗ್‌: ದೊಡ್ಡಬಳ್ಳಾಪುರ ಬೆಸ್ಕಾಂ ಎಇಇ ಸುಂದರೇಶ್ ನಾಯ್ಕ್ ವರ್ಗಾವಣೆ..!

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮಾಂತರ ಬೆಂಗಳೂರು ವಿದ್ಯುತ್ ಸರಬರಾಜು ಮಂಡಳಿಯ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಆರ್.ಸುಂದರೇಶ್ ನಾಯ್ಕ್ ಅಚ್ಚರಿಯ ಬೆಳವಣಿಗೆಯಲ್ಲಿ ಕೆ.ಆರ್.ಪುರಂಗೆ ವರ್ಗಾವಣೆಯಾಗಿದ್ದಾರೆ.

ದೊಡ್ಡಬಳ್ಳಾಪುರ ನಗರ ಉಪ ವಿಭಾಗದಲ್ಲಿ ಸುಮಾರು ನಾಲ್ಕು ವರ್ಷ.ಹಾಗೂ,ಗ್ರಾಮಾಂತರ ವಿಭಾಗದಲ್ಲಿ ಆರು ತಿಂಗಳು ಕರ್ತವ್ಯ ನಿರ್ವಹಿಸುತ್ತಿದ್ದ ಯುವ ಉತ್ಸಾಹಿ ಅಧಿಕಾರಿಯಾಗಿದ್ದ ಆರ್.ಸುಂದರೇಶ್ ನಾಯಕ್ ಬೆಸ್ಕಾಂ ಇಲಾಖೆಯಲ್ಲಿನ ಸಮಸ್ಯೆಗಳನ್ನು ಸಾಧ್ಯವಾದಷ್ಟು ನೀಗಿಸಲು ಶ್ರಮಪಟ್ಟಿದ್ದರು.

ಇವರ ಅವಧಿಯಲ್ಲಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ವಿದ್ಯುತ್ ಸರಬರಾಜು ಹಾಗೂ ಗ್ರಾಹಕರ ಸ್ನೇಹಿಯಾಗಿರಲು ದೊಡ್ಡಬಳ್ಳಾಪುರ ಉಪವಿಭಾಗವನ್ನು ಎರಡು ಉಪವಿಭಾಗವಾಗಿ ಬೇರ್ಪಡಿಸಿ,ಗ್ರಾಮೀಣ ಮತ್ತು ನಗರ ಉಪ ವಿಭಾಗವಾಗಿ ಮಾಡಿದ್ದರು.

ತಾಲೂಕಿನಲ್ಲಿ 5 ಶಾಖೆಗಳನ್ನು 8 ಶಾಖೆಗಳಾಗಿ ಹೆಚ್ಚಿಸಿ ನಮ್ಮ ತಾಲ್ಲೂಕಿನ ರೈತರಿಗೆ ಅನುಕೂಲವಾಗುವಂತೆ ಹೆಚ್ಚುವರಿ ವಿದ್ಯುತ್ ಮಾರ್ಗದಾಳುಗಳನ್ನು ನೇಮಿಸಿದ್ದರು ಸಹ ಸಾಧ್ಯವಾದಷ್ಟು ವೋಲ್ಟೇಜ್ ತೊಂದರೆ ಆಗದಂತೆ ನೋಡಿಕೊಂಡಿದ್ದರು.

ತಾಲೂಕಿನಲ್ಲಿ ಕುಡಿಯುವ ನೀರಿನ ಬವಣೆಯನ್ನು ಹೋಗಲಾಡಿಸಲು ಎಲ್ಲಾ ಕುಡಿಯುವ ನೀರಿನ ಸ್ಥಾವರಗಳಿಗೆ ನಿರಂತರ ವಿದ್ಯುತ್ ಪೂರೈಕೆ, ಮಾತ್ರವಲ್ಲದೆ ಎಲ್ಲಾ ಹಳ್ಳಿಗಳಿಗೂ ಸಹ ನಿರಂತರ ವಿದ್ಯುತ್ ಸಂಪರ್ಕ ನೀಡಲಾಗಿದೆ.

ಗಂಗಾಕಲ್ಯಾಣ ಮತ್ತು ಕುಡಿಯುವ ನೀರಿನ ಸ್ಥಾವರಗಳಿಗೆ ಮೊದಲ ಆದ್ಯತೆ ನೀಡಿ ಬಹುತೇಕ ಎಲ್ಲಾ ಕಾಮಗಾರಿಗಳನ್ನು ಪೂರ್ಣ ಗೊಳಿಸಲಾಗಿದೆ.ರೈತರಿಗೆ ಅನುಕೂಲವಾಗಲೆಂದು ಹೆಚ್ಚುವರಿ ಮತ್ತು ಅಕ್ರಮ ಸಕ್ರಮ ಯೋಜನೆಯಡಿಗಳಲ್ಲಿ ಸುಮಾರು 500ಕ್ಕೂ ಹೆಚ್ಚಿನ  ಪರಿವರ್ತಕಗಳನ್ನು  ಅಳವಡಿಸಲಾಗಿದೆ.ಮಾತ್ರವಲ್ಲದೆ  HVDS ಯೋಜನೆಯಡಿಯಲ್ಲಿ ಸುಮಾರು 4000ಕ್ಕೂ ಹೆಚ್ಚು ಪರಿವರ್ತಕ ಅಳವಡಿಸಲು ಪ್ರಸ್ಥಾವನೆಯನ್ನು ಸಲ್ಲಿಸಲಾಗಿದೆ.

ಮೊದಲ ಹಂತದಲ್ಲಿ ಮಾಡೆಲ್ ವಿಲೇಜ್ ಯೋಜನೆಯಡಿಯಲ್ಲಿ ಒಟ್ಟು 6 ಗ್ರಾಮ ಗಳನ್ನು ಆಯ್ಕೆ ಮಾಡಿ.ಹಳೆಯ ವಿದ್ಯುತ್ ಮಾರ್ಗದಾಳುಗಳನ್ನು ದುರಸ್ಥಿಗೊಳಿಸಿ ವಿದ್ಯುತ್ ಸಂಬಂಧಿತ ಎಲ್ಲಾ ದೂರುಗಳನ್ನು ಸರಿಪಡಿಸಲಾಗಿದೆ.ಬೆಸ್ಕಾಂ ಉಪವಿಭಾಗಕ್ಕಾಗಿ ಎಪಿಎಸಿ ಮುಂಭಾಗ  ಸ್ವಂತ ಕಟ್ಟಡ ನಿರ್ಮಿಸಲಾಗಿದೆ.ಎಲ್ಲಾ ರೈತರು,ಪವರ್ ಲೂಮ್ ಗ್ರಾಹಕರು, ಹಾಗೂ ತಾಲೂಕಿನ ಎಲ್ಲಾ ಗ್ರಾಹಕರಿಗೆ ಸ್ಪಂದಿಸಿ ಸೌಹಾರ್ದಿತವಾಗಿ ಇಲಾಖೆಗೆ ಸಂಬಂಧಿಸಿದ ಎಲ್ಲಾ ದೂರುಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಇವರದ್ದು.ಪವರ್ ಮ್ಯಾನ್ ಗಳಿಗೆ ಸುರಕ್ಷಿತ ಸಾಮಗ್ರಿಗಳನ್ನು ಒದಗಿಸಿ ಯಾವುದೇ ಮೇಜರ್ ಅಪಘಾತವಾಗದಂತೆ ಮುಂಜಾಗ್ರತೆ ಕ್ರಮ ಕೈಗೊಂಡಿದ್ದರು.

ಉತ್ತಮ ಕಾರ್ಯಕ್ಕೆ ಪ್ರಶಸ್ತಿ 

2018-19ನೇ ಸಾಲಿನಲ್ಲಿ ಉಪವಿಭಾಗದ ಇವರ ಉತ್ತಮ ಕೆಲಸಗಳನ್ನು ಗುರುತಿಸಿ ಅಂದಿನ ಬೆಸ್ಕಾಂ ಇಲಾಖೆಯ ನಿರ್ದೇಶಕಿ ಶಿಖಾ ಅವರು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದರು. 

ದೊಡ್ಡಬಳ್ಳಾಪುರದಲ್ಲಿ ಕರ್ತವ್ಯ ಜೀವನದ ಅಮೂಲ್ಯ ಘಟ್ಟ: ಸುಂದ್ರೇಶ್ ನಾಯಕ್

ದೊಡ್ಡಬಳ್ಳಾಪುರ ಉಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದು ನನ್ನ ಜೀವನದ ಅತೀ ಅಮೂಲ್ಯ ಘಟ್ಟವೆಂದೇ ಪರಿಗಣಿಸುತ್ತೇನೆ. ಇವೆಲ್ಲವನ್ನೂ ಸಾಧಿಸಲು ನನ್ನ ಇಲಾಖೆ, ನನ್ನ ಮೇಲಧಿಕಾರಿಗಳು, ಕಚೇರಿಯ ಎಲ್ಲಾ ಸಿಬ್ಬಂದಿಗಳು, ಶಾಖಾಧಿಕಾರಿಗಳು, ಪವರ್ ಮ್ಯಾನ್ಗಳು ಮತ್ತು ಜಿವಿಪಿಗಳು ಹಾಗೂ ಮುಖ್ಯವಾಗಿ ತಾಲೂಕಿನ ಜನತೆಯ ಸಹಕಾರ ಮತ್ತು ನಿಮ್ಮ ಪ್ರೋತ್ಸಾಹದಿಂದ ಈ ನನ್ನ ನಾಲ್ಕು ವರ್ಷದ ಪಯಣವನ್ನು ಅವಿಸ್ಮರಣೀಯ  ಆಗಿಸಿದೆ ಎಂದು ಹರಿತಲೇಖನಿ ಮೂಲಕ ಸುಂದರೇಶ್ ನಾಯಕ್ ತಾಲೂಕಿನ ಜನತೆಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಅಧಿಕಾರಿಗಳ ಅವಧಿಯಲ್ಲಿ ಕೈಗೊಳ್ಳಲಾದ ಕ್ರಮಗಳು ಶಾಶ್ವತವಾಗಿ ಉಳಿಯುತ್ತವೆ. ಎಂಬುದಕ್ಕೆ ಸುಂದರೇಶ್ ನಾಯಕ್ ಅವರ ಕಾರ್ಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸಾಕ್ಷಿಯಾಗಿರಲಿದೆ.

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ;

ಸಿದ್ದರಾಮಯ್ಯ (Siddaramaiah) ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು, ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ. D.K.Shivakumar

[ccc_my_favorite_select_button post_id="110764"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!