ಹೆಚ್ಚುತ್ತಿರುವ ಕರೊನಾ ಸೋಂಕಿತರ ಸಂಖ್ಯೆ ಅವಲೋಕಿಸಿ ಸೂಕ್ತ ಕ್ರಮ‌ ಕೈಗೊಳ್ಳಲು ಪಿ.ಹೇಮಲತ ಸೂಚನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರತಿದಿನ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ,ಸೋಂಕಿತರ ಸಂಖ್ಯೆಯನ್ನು ಅವಲೋಕಿಸಿ, ಆಸ್ಪತ್ರೆಗಳಲ್ಲಿ ಹಾಸಿಗೆ ವ್ಯವಸ್ಥೆ, ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಸೇರಿದಂತೆ ಸಕಲ ಸಿದ್ಧತೆ ಕೈಗೊಳ್ಳುವಂತೆ ಸಿಬ್ಬಂದಿ ‌ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “ಕರೊನಾ ವೈರಾಣು(ಕೋವಿಡ್-19 )ಸೋಂಕು ತಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ತೆಗೆದುಕೊಂಡ ಕ್ರಮಗಳ ಕುರಿತ ಪರಿಶೀಲನಾ ಸಭೆಯ” ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕಾರ್ಯ  ನಿರ್ವಹಿಸುತ್ತಿರುವ ಮೊಬೈಲ್  ಸ್ವ್ಯಾಬ್ ಸಂಗ್ರಹ ಸೇರಿದಂತೆ ಫೀವರ್ ಕ್ಲಿನಿಕ್ ಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಅವರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮೊಬೈಲ್  ಸ್ವ್ಯಾಬ್ ಸಂಗ್ರಹಗಳನ್ನು ಹೆಚ್ಚಿಸುವಂತೆ ಹಾಗೂ ಜಿಲ್ಲೆಯಲ್ಲಿ ಯಾವುದೇ ಲೋಪದೋಷವಿಲ್ಲದೆ ಖಾಸಗಿ ಹಾಗೂ ಸಾರ್ವಜನಿಕ ಆಸ್ಪತ್ರೆಗಳು ಕಾರ್ಯ ನಿರ್ವಹಿಸಬೇಕೆಂದು ತಿಳಿಸಿದರು.

ತಾಲ್ಲೂಕುಗಳಲ್ಲಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ  ಡಯಾಲಿಸಿಸ್ ರೋಗಿಗಳು ಸೇರಿದಂತೆ ಇತರೆ ಕಾಯಿಲೆಯುಳ್ಳ ರೋಗಿಗಳಿಗೆ ಚಿಕಿತ್ಸೆಯಲ್ಲಿ ಯಾವುದೇ ತೊಂದರೆ ಉಂಟಾಗದಂತೆ ಕಾರ್ಯನಿರ್ವಹಿಸಬೇಕು. ಔಷಧಿ ವಿತರಣೆಯಲ್ಲಿ ಕೊರತೆ ಉಂಟಾಗದಂತೆ ಎಚ್ಚರವಹಿಸಲು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು. 

ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸರಾಸರಿಯಾಗಿ 120 ಪ್ರಕರಣಗಳು ಕಂಡು ಬರುತ್ತಿದ್ದು ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುವ ಸೂಚನೆಯಿರುವುದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಪಡೆಯಲು ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದರು. 

ಅಗತ್ಯ ಸಮಯದಲ್ಲಿ  ಸೋಂಕಿತರಿಗೆ ಚಿಕಿತ್ಸೆ ನೀಡಿ ಕರೊನಾ ಸೋಂಕಿತರ ಮರಣ ಪ್ರಮಾಣ ಕಡಿಮೆ ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರಲ್ಲದೆ ಗೃಹ ದಿಗ್ಭಂದನದಲ್ಲಿರುವ (ಹೋಂಕ್ವಾರಟೈನ್‌) ಸೋಂಕಿತರನ್ನು ಕ್ವಾರಂಟೈನ್ ವಾರ್ಡ್ ವಾಚ್ ಅ್ಯಪ್‌ನಲ್ಲಿ ನಿಗವಹಿಸುವಂತೆ ಹೇಳಿದರು.

ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಗಳು  ಬಿರುಸಿನಿಂದ ಸಾಗಿದ್ದು ಶೇ. 64%  ಕೃಷಿ ಭೂಮಿಯಲ್ಲಿ ಬಿತ್ತನೆಯಾಗಿದೆ ಎಂದು ಕೃಷಿ ಇಲಾಖೆ ಉಪ ನಿರ್ದೇಶಕರು ಸಭೆಯಲ್ಲಿ ತಿಳಿಸಿದಾಗ, ಜಿಲ್ಲೆಯಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆ ಉಂಟಾಗದಂತೆ ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಣೆ ಮಾಡಿ, ರೈತರಿಗೆ ಸರಿಯಾದ ಸಮಯದಲ್ಲಿ ವಿತರಿಸಬೇಕೆಂದು ನಿರ್ದೇಶಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ‌ ನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಜಗದೀಶ್.ಕೆ.ನಾಯಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ ಸೇರಿದಂತೆ ತಹಶೀಲ್ದಾರ್‌ಗಳು, ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ರೂಪಾಯಿ ಕುಸಿಯುತ್ತಿಲ್ಲ.. ಡಾಲರ್ ಬಲಗೊಳ್ಳುತ್ತಿದೆ: ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥನೆ

ರೂಪಾಯಿ ಕುಸಿಯುತ್ತಿಲ್ಲ.. ಡಾಲರ್ ಬಲಗೊಳ್ಳುತ್ತಿದೆ: ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥನೆ

ರೂಪಾಯಿ (Rupee) ಮೌಲ್ಯ ಕುಸಿಯುತ್ತಿಲ್ಲ, ಡಾಲರ್ (Dollar) ಮೌಲ್ಯ ಬಲಗೊಳ್ಳುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳುವ ಮೂಲಕ ವಿರೋಧ ಪಕ್ಷಗಳ ಟೀಕೆಗೆ ಕಾರಣವಾಗಿದ್ದಾರೆ.

[ccc_my_favorite_select_button post_id="120583"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]