ಫಸಲ್ ವಿಮಾ ಯೋಜನೆ ಅರ್ಜಿ ಸಲ್ಲಿಕೆಗೆ ಗ್ರಹಣ / ಯೋಜನೆ ಅನುಷ್ಟಾನ ಕೈ ಚೆಲ್ಲಿತೆ ಇಲಾಖೆ..?

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಫಸಲ್ ವಿಮಾ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ತಾಂತ್ರಿಕ ಸಮಸ್ಯೆ ಎದುರಾಗಿದ್ದು,ಸಮಸ್ಯೆ ಬಗೆ ಹರಿಯದ ಕಾರಣ ರೈತರು ಕಳೆದ ಮೂರು ದಿನಗಳಿಂದ ವಿಮೆ ಮಾಡಿಸಲು ಬ್ಯಾಂಕ್ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಿಗೆ ಅಲೆಯುವಂತಾಗಿದೆ.

ಅಕಾಲಿಕ ಮಳೆ,ಬರ ಅಥವಾ ರೋಗಗಳಿಂದ ಬೆಳೆ ನಷ್ಟ ಉಂಟಾಗಿ ರೈತರಿಗಾಗುವ ಆರ್ಥಿಕ ಅನಾನುಕೂಲವನ್ನು ತಪ್ಪಿಸಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಈ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆ ರೈತವಲಯದಲ್ಲಿ ಬಹಳಷ್ಟು ಪ್ರಯೋಜನಕಾರಿ ಎಂಬ ಆಶಾಭಾವನೆಯನ್ನು ತಂದಿದೆಯಾದರೂ.ಅರ್ಜಿ ಸಲ್ಲಿಸುವ ಅನೈನ್ ಪ್ರಕ್ರಿಯೆಗೆ ಗ್ರಹಣ ಬಡಿದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಗಿ,ಮುಸುಕಿನಜೋಳ,ಭತ್ತದ ಬೆಳೆ ವಿಮೆ ಮಾಡಿಸಲು ಆ.15 ಅಂತಿಮ ದಿನವಾಗಿದೆ.ಕರೊನಾ ಕರಿ ನೆರಳಿನಲ್ಲಿ ಸಾಮಾಜಿಕ ಅಂತರ ಕಾಪಾಡಬೇಕಾದ್ದು ಬ್ಯಾಂಕ್ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳ ಜವಬ್ದಾರಿ ಸಹ ಹೌದಾದರೂ,ಅರ್ಜಿ ಸಲ್ಲಿಕೆಯಾಗದೆ ಕಚೇರಿಗಳ ಮುಂದೆ ರೈತರು ಕಾಯಬೇಕಾ ಅನಿರ್ವಾರ್ಯತೆ ಉಂಟಾಗಿದೆ.

ಯೋಜನೆ ಅನುಷ್ಟಾನಕ್ಕೆ ಕೈ ಚೆಲ್ಲಿತೆ ಇಲಾಖೆ..?

ಅರ್ಜಿ ಸಲ್ಲಿಕೆ ನಂತರ ಪೇಮೆಂಟ್ ವೇಳೆ ಸಮಸ್ಯೆ ಎದುರಾಗುತ್ತಿದ್ದು,ಹಣ ಕಡಿತ ಗೊಂಡರು ವಿಮೆಗೆ ಹಣ ಸಂದಾಯವಾಗದಂತ ಸಮಸ್ಯೆ ಎದುರಾಗಿ ಸಾಮಾನ್ಯ ಸೇವಾ ಕೇಂದ್ರದ ವಿಎಲ್ ಇಗಳು ಪರದಾಡುತ್ತಿದ್ದಾರೆ.ರಾತ್ರಿವೇಳೆ ಕಾದು ಹಣ ಸಂದಾಯ ಮಾಡಲು ಯತ್ನಿಸುತ್ತಿದ್ದರು ಹಣ ಕಡಿತವಾಗುತ್ತದೆಯೇ ಹೊರತು,ಯೋಜನೆಗೆ ಹಣ ಸಂದಾಯವಾಗಿತ್ತಿಲ್ಲ.ಅಲ್ಲದೆ ಕಡಿತವಾದ ಹಣ ಮತ್ತೆ ಮರಳಿ ಖಾತೆ ಸೇರಲು ಒಂದು ವಾರ ಕಾಯಬೇಕೆಂಂಬ ಆರೋಪ ವಿಎಲ್ ಇ ಗಳದ್ದಾಗಿದೆ.

ರೈತರಿಗೆ ಅನುಕೂಲಕರವಾದ ಯೋಜನೆಯ ಸಮಾರ್ಪಕ ಅನುಷ್ಠಾನದ ಹೊಣೆಹೊತ್ತಿರುವ ಕೃಷಿ ಇಲಾಖೆಯಾಗಲಿ,ವಿಮಾ ಸಂಸ್ಥೆಯಾಗಲಿ,ಸಂರಕ್ಷಣೆ ಪೋರ್ಟಲ್,ಸಾಮಾನ್ಯ ಸೇವಾ ಕೇಂದ್ರ ದವರಾಗಲಿ ದೂರು ಬಂದರೂ ಕಾರ್ಯ ಪ್ರವೃತ್ತರಾಗದೆ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಸಮಸ್ಯೆ ಬಗೆ ಹರಿಯದೆ ಹಾಗೆ ಉಳಿದಿರುವುದರಿಂದ ಬೇಸತ್ತರಿವ ರೈತರು.ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅಧಿಕಾರಿಗಳ ಬೇಜವಬ್ದಾರಿ ವಿರುದ್ಧ ಕ್ರಮಕೈಗೊಳ್ಳಲು ರೈತರು ಒತ್ತಾಯಿಸಿದ್ದಾರೆ.

ತಾಂತ್ರಿಕ ಸಮಸ್ಯೆ ನೀಗಿಸಲು ಸಹ ಮೇಲಧಿಕಾರಿಗಳಿಗಿಲ್ಲ ಕಾಳಜಿ..!

ಉತ್ತಮ ಯೋಜನೆಗಳನ್ನು ರೈತರಿಗೆ ತಲುಪಿಸ ಬೇಕಾದ್ದು ಅಧಿಕಾರಿಗಳ ಹೊಣೆ,ಆದರೆ ಮೇಲಧಿಕಾರಿಗಳು ಹಾಗೂ ತಾಂತ್ರಿಕ ಇಲಾಖೆಯ ಬೇಜವಬ್ದಾರಿಯಿಂದ ಅನೇಕ ಯೋಜನೆಗಳು ಯಶಸ್ವಿಯಾಗುತ್ತಿಲ್ಲ ಎಂದು ಹೆಸರೇಳಲು ಇಚ್ಚಿಸದ ಅಧಿಕಾರಿಯೋರ್ವರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ರೈತರ ಕೃಷಿ ಕಾರ್ಯಕ್ಕೆ ಅನುಕೂಲವಾಗುವಂತೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ; ಸಚಿವ ಸಂತೋಷ ಲಾಡ್ ಕಟ್ಟುನಿಟ್ಟಿನ ಸೂಚನೆ

ರೈತರ ಕೃಷಿ ಕಾರ್ಯಕ್ಕೆ ಅನುಕೂಲವಾಗುವಂತೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ; ಸಚಿವ

ಕೃಷಿ ಪಂಪ್‍ಸೆಟ್‍ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ, ರೈತರಿಗೆ ಅನುಕೂಲವಾಗುವಂತೆ ಆದಷ್ಟು ಹಗಲು ಹೊತ್ತಿನಲ್ಲಿ ಅಥವಾ ಸಂಜೆ ಹೊತ್ತಿನಲ್ಲಿ ವಿದ್ಯುತ್ ಪೂರೈಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ (Santosh lad)

[ccc_my_favorite_select_button post_id="119603"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!