ಸಾವಯವ ಟಾಸ್ಕ್ ಪೋರ್ಸ್ ರಚಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಸಾವಯವ ಕೃಷಿ ಉತ್ತೇಜನ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಾವಯವ ಟಾಸ್ಕ್ ಪೋರ್ಸ್’(ಕಾರ್ಯಪಡೆ)ರಚಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.

ನಗರದ ಕೃಷಿ ಆಯುಕ್ತರ ಕಚೇರಿಯಲ್ಲಿ ರಾಜ್ಯ ಮಟ್ಟದ ಸಾವಯವ ಕೃಷಿ ಉನ್ನತ ಮಟ್ಟದ ಅಧಿಕಾರಯುಕ್ತ ಸಮಿತಿ ಅಧ್ಯಕ್ಷರಾದ ಆನಂದ್ ಉಪ್ಪಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು. 

2004ರಲ್ಲಿ ದೇಶದಲ್ಲಿ ಪ್ರಥಮ ಬಾರಿಗೆ ಸಾವಯವ ಕೃಷಿ ನೀತಿಯನ್ನು ಕರ್ನಾಟಕ ಸರ್ಕಾರವ ಹೊರತಂದಿದ್ದು ಇದರ ಪರಿಣಾಮವಾಗಿ ರಾಜ್ಯದಲ್ಲಿ ಹಲವಾರು ಸಾವಯವ ಕೃಷಿ ಉತ್ತೇಜನ ಕಾರ್ಯಕ್ರಮಗಳ ಅನುಷ್ಠಾನದಿಂದ ರೈತರಲ್ಲಿ ಹೆಚ್ಚಿನ ಅರಿವು ಮೂಡಿಸಿ ಸಾವಯವ ವಿಸ್ತಿರ್ಣವನ್ನುಸುಮಾರು1.00ಲಕ್ಷ ಹೆಕ್ಟೇರ್ ಗಳಿಗೆ ವಿಸ್ತರಿಸಲಾಗಿದೆ. 2017ರಲ್ಲಿ ಸಾವಯವ ಕೃಷಿ ನೀತಿಯನ್ನು ಪರಿಷ್ಕರಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಸದರಿ ನೀತಿಯನ್ನು ಮತ್ತಷ್ಟು ಉತ್ತೇಜಿತ ಕಾರ್ಯಕ್ರಮಗಳನ್ನೊಳಗೊಂಡಂತೆ ದೇಶಕ್ಕೆ ಮಾದರಿಯಾಗುವಂತಹ ಸಮಗ್ರ ಸಾವಯವ ಕೃಷಿ ನೀತಿಯನ್ನು ಹೊರತರಬೇಕು ಎಂದರು.

ಸಾವಯವ ಕೃಷಿ ಉತ್ತೇಜನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಕರ್ನಾಟಕ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಈಗಾಗಲೇ “ಬೆಂಗಳೂರು ಸಾವಯಕ ಕೃಷಿ ರಾಜಧಾನಿ” ಎಂದು ಗುರುತಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ “ಕರ್ನಾಟಕವೇ ದೇಶದ ಸಾವಯವ ರಾಜಧಾನಿ” ಎನ್ನುವಂತಾಗಬೇಕು. ಈ ನಿಟ್ಟಿನಲ್ಲಿ ಒಂದು ಕಾರ್ಯಪಡೆ ಸಮಿತಿ ರಚಿಸುವಂತೆ ಬಿ.ಸಿ.ಪಾಟೀಲರು ಸೂಚಿಸಿದರು.

ಸಿರಿಧಾನ್ಯ ರೈತ ಸಿರಿಧಾನ್ಯ ಯೋಜನೆ ಯಶಸ್ವಿಯಾಗಿದ್ದು, ಸಿರಿಧಾನ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ದೇಶೀಯ ಸ್ಥಳೀಯ ಔಷಧಿಭರಿತ ಸಿರಿಧಾನ್ಯಗಳಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು.ರಾಜ್ಯದಲ್ಲಿ ಸಿರಿಧಾನ್ಯ ಪ್ರದೇಶವನ್ನು ವಿಸ್ತರಿಸುವ ಜೊತೆಗೆ ಸಿರಿಧಾನ್ಯಗಳ ಸಂಸ್ಕರಣೆಗೆ ಹೆಚ್ಚಿನ ಒತ್ತುಕೊಡವ ಕಾರ್ಯಕ್ರಮಗಳನ್ನು ರೂಪಿಸಬೇಕು. ಅಲ್ಲದೇ ಉತ್ಪಾದಿಸಿದ ಸಿರಿಧಾನ್ಯಗಳ ಉತ್ಪನ್ನಗಳನ್ನು ಸರ್ಕಾರದ ಯೋಜನೆಗಳಾದ ಮಧ್ಯಾೂಹ್ನದ ಬಿಸಿಊಟ, ಸಾರ್ವಜನಿಕ ವಿತರಣಾವ್ಯವಸ್ಥೆ, ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುವ ಆಹಾರಗಳು ಮುಂತಾದ ಕಾರ್ಯಕ್ರಮಗಳಡಿ ಬಳಸಿಕೊಳ್ಳಲು ಕ್ರಮ ಕೈಗೊಳ್ಳಲು ಯೋಜನೆ ರೂಪಿಸಲು ಸಭೆಯಲ್ಲಿ ಸಚಿವರು ಅಧಿಕಾರಿಗಳ ಜೊತೆ ಚರ್ಚಿಸಿದರು.

ಆನಂದ್ ಉಪ್ಪಳ್ಳಿ ಮಾತನಾಡಿ, 2004-05 ನಲ್ಲಿ ಸಾವಯವ ಹೊಸ ಸಾವಯವ ನೀತಿ ಜಾರಿಯಾಗಿದ್ದು, 2017 ರಲ್ಲಿ ನೀತಿಯನ್ನು ಪರಿಷ್ಕರಿಸಲಾಗಿದ್ದು,ಈ ನಿಟ್ಟಿನಲ್ಲಿ ಸಾವಯವ ಕೃಷಿಯನ್ನು ಬೃಹತ್ ಮಟ್ಟದಲ್ಲಿ ರಾಜ್ಯಾದ್ಯಂತ ವಿಸ್ತರಿಸಲು ರೂಪುರೇಷೆ ತಯಾರಿಸಬೇಕು. ಇದಕ್ಕಾಗಿ“ಸಾವಯವ ಟಾಸ್ಕ್ ಪೋರ್ಸ್’’ ರಚಿಸಬೇಕು ಎಂದರು.

ರಾಜ್ಯದ ಎಲ್ಲಾ ಕೃಷಿ ವಿಶ್ವವಿದ್ಯಾಲಯ ಹಾಗೂ ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಆಧುನಿಕ ಸಾವಯವ ತಾಂತ್ರಿಕತೆಗಳನ್ನು ಒಳಗೊಂಡ ಪ್ರಾತ್ಯಕ್ಷಿತೆಗಳನ್ನು ಮಾದರಿ ಕ್ಷೇತ್ರಗಳನ್ನಾಗಿ ಅಭಿವೃದ್ದಿಪಡಿಸಬೇಕು.ಸಾವಯವ ಉತ್ಫನ್ನಗಳ ಪ್ಯಾಕಿಂಗ್ನಲ್ಲಿ ಉತ್ಪಾದಕರ ಹೆಸರು, ಸರ್ವೇ ನಂ., ಉತ್ಪಾದನಾಪ್ರಮಾಣ, ಖರೀದಿ ಪ್ರಮಾಣಗಳ ಮಾಹಿತಿಗಳನ್ನು ಮುದ್ರಿಸಲು ನಿರ್ಣಯಿಸಲಾಯಿತು. ರಾಜ್ಯದಲ್ಲಿ ಸಿರಿಧಾನ್ಯ ಪ್ರದೇಶವನ್ನು ವಿಸ್ತರಿಸುವ ಜೊತೆಗೆ ಸಿರಿಧಾನ್ಯಗಳ ಸಂಸ್ಕರಣೆಗೆ ಹೆಚ್ಚಿನಒತ್ತುಕೊಡವ ಕಾರ್ಯಕ್ರಮಗಳನ್ನು ರೂಪಿಸಲು ತೀರ್ಮಾನಿಸಲಾಯಿತು.. ಹಾಗೂ  ಸಾವಯವ ಕೃಷಿಯ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಹೆಚ್ಚಿನ ಪ್ರಚಾರ ಒದಗಿಸುವ ಸಲುವಾಗಿ “ಸಾವಯವಮಾತುಕತೆ” ಎಂಬ ಪ್ರಾಯೋಜಿತ ಕಾರ್ಯಕ್ರಮವನ್ನು ಆಕಾಶವಾಣಿ ಮುಖಾಂತರ ರಾಜ್ಯ ವ್ಯಾಪ್ತಿ ಬಿತ್ತರಿಸುವ ನಿರ್ಣಯ ಕೈಗೊಳ್ಳಲಾಯಿತು.

ರೈತ ಸಿರಿ ಯೋಜನೆಯಡಿ ಸಿರಿಧಾನ್ಯಗಳ ಜೊತೆಗೆ ಸ್ಥಳೀಯವಾಗಿ ಹಾಗೂ ವಿರಳವಾಗಿ ಬೆಳೆಯುವ

ಔಷಧೀಯ ಗುಣಗಳುಳ್ಳ ಹಾಗೂ ಹೆಚ್ಚಿನ ಪೌಷ್ಠಿಕಭರಿತ ದೇಶಿ ಭತ್ತ ಹಾಗೂ ಇನ್ನಿತರ ಬೆಳೆಗಳನ್ನು ಸೇರ್ಪಡಿಸುವ ಅವಶ್ಯಕತೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಒಕ್ಕೂಟಗಳಿಂದ ಉತ್ಪಾದಿಸಿದ ಉತ್ಪನ್ನಗಳನ್ನು ಇಲಾಖೆಯಿಂದ ಹೊರತರಲಾಗಿರುವ ಬ್ರ್ಯಾಂಡ್ಗಳ ಹೆಸರಿನಲ್ಲಿ ಮಾರಾಟ ಮಾಡಲು ತಿಳಿಸಲಾಯಿತು ಹಾಗೂ ಉತ್ಪನ್ನಗಳ ಪ್ಯಾಕೆಟ್ ಗಳ ಮೇಲೆ ಉತ್ಪಾದಕರ ಹೆಸರು, ಸರ್ವೇ ನಂ., ಉತ್ಪಾದನಾ ಪ್ರಮಾಣ, ಖರೀದಿ ಪ್ರಮಾಣಗಳ ಮಾಹಿತಿಗಳನ್ನು ಮುದ್ರಿಸಿ ಮಾರಾಟಮಾಡಲು ಕ್ರಮಕೈಗೊಳ್ಳಲು ಎಲ್ಲಾ ಒಕ್ಕೂಟಗಳಿಗೆ ನಿರ್ದೇಶಿಸಲಾಯಿತು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ 800 ಕೋಟಿ ರೂ ಹೂಡಿಕೆ..!

ದೊಡ್ಡಬಳ್ಳಾಪುರದಲ್ಲಿ 800 ಕೋಟಿ ರೂ ಹೂಡಿಕೆ..!

ಕಳೆದ ವರ್ಷದ ಫೆಬ್ರುವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಿದ ನಂತರದ 11 ತಿಂಗಳ ಅವಧಿಯಲ್ಲಿ ರಾಜ್ಯವು 1.53 ಲಕ್ಷ ಕೋಟಿ ರೂ.ಗಳಷ್ಟು ಹೊಸ ಹೂಡಿಕೆಯ ಹಲವು ಕೈಗಾರಿಕಾ ಯೋಜನೆಗಳನ್ನು ಆಕರ್ಷಿಸಿದೆ ಎಂದು ಬೃಹತ್ ಮತ್ತು

[ccc_my_favorite_select_button post_id="118571"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ಪತಿಯ ಮೇಲಿನ ಕೋಪ: ಮಗುವಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ಪತಿಯ ಮೇಲಿನ ಕೋಪ: ಮಗುವಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ಜಗಳ ಮಾಡುತ್ತಿದ್ದ ಪತಿಯ ಮೇಲಿನ ಕೋಪಕ್ಕೆ ಬೆಂಕಿ ಹಚ್ಚಿಕೊಂಡು ತಾಯಿ ಮಗಳು ಮೃತಪಟ್ಟಿರುವ ದಾರುಣ ಘಟನೆ (Suicide) ಸಂಜಯನಗರದ ಕೃಷ್ಣಪ್ಪ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="118543"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!