ಸಾವಯವ ಟಾಸ್ಕ್ ಪೋರ್ಸ್ ರಚಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಸಾವಯವ ಕೃಷಿ ಉತ್ತೇಜನ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಾವಯವ ಟಾಸ್ಕ್ ಪೋರ್ಸ್’(ಕಾರ್ಯಪಡೆ)ರಚಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.

ನಗರದ ಕೃಷಿ ಆಯುಕ್ತರ ಕಚೇರಿಯಲ್ಲಿ ರಾಜ್ಯ ಮಟ್ಟದ ಸಾವಯವ ಕೃಷಿ ಉನ್ನತ ಮಟ್ಟದ ಅಧಿಕಾರಯುಕ್ತ ಸಮಿತಿ ಅಧ್ಯಕ್ಷರಾದ ಆನಂದ್ ಉಪ್ಪಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು. 

2004ರಲ್ಲಿ ದೇಶದಲ್ಲಿ ಪ್ರಥಮ ಬಾರಿಗೆ ಸಾವಯವ ಕೃಷಿ ನೀತಿಯನ್ನು ಕರ್ನಾಟಕ ಸರ್ಕಾರವ ಹೊರತಂದಿದ್ದು ಇದರ ಪರಿಣಾಮವಾಗಿ ರಾಜ್ಯದಲ್ಲಿ ಹಲವಾರು ಸಾವಯವ ಕೃಷಿ ಉತ್ತೇಜನ ಕಾರ್ಯಕ್ರಮಗಳ ಅನುಷ್ಠಾನದಿಂದ ರೈತರಲ್ಲಿ ಹೆಚ್ಚಿನ ಅರಿವು ಮೂಡಿಸಿ ಸಾವಯವ ವಿಸ್ತಿರ್ಣವನ್ನುಸುಮಾರು1.00ಲಕ್ಷ ಹೆಕ್ಟೇರ್ ಗಳಿಗೆ ವಿಸ್ತರಿಸಲಾಗಿದೆ. 2017ರಲ್ಲಿ ಸಾವಯವ ಕೃಷಿ ನೀತಿಯನ್ನು ಪರಿಷ್ಕರಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಸದರಿ ನೀತಿಯನ್ನು ಮತ್ತಷ್ಟು ಉತ್ತೇಜಿತ ಕಾರ್ಯಕ್ರಮಗಳನ್ನೊಳಗೊಂಡಂತೆ ದೇಶಕ್ಕೆ ಮಾದರಿಯಾಗುವಂತಹ ಸಮಗ್ರ ಸಾವಯವ ಕೃಷಿ ನೀತಿಯನ್ನು ಹೊರತರಬೇಕು ಎಂದರು.

ಸಾವಯವ ಕೃಷಿ ಉತ್ತೇಜನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಕರ್ನಾಟಕ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಈಗಾಗಲೇ “ಬೆಂಗಳೂರು ಸಾವಯಕ ಕೃಷಿ ರಾಜಧಾನಿ” ಎಂದು ಗುರುತಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ “ಕರ್ನಾಟಕವೇ ದೇಶದ ಸಾವಯವ ರಾಜಧಾನಿ” ಎನ್ನುವಂತಾಗಬೇಕು. ಈ ನಿಟ್ಟಿನಲ್ಲಿ ಒಂದು ಕಾರ್ಯಪಡೆ ಸಮಿತಿ ರಚಿಸುವಂತೆ ಬಿ.ಸಿ.ಪಾಟೀಲರು ಸೂಚಿಸಿದರು.

ಸಿರಿಧಾನ್ಯ ರೈತ ಸಿರಿಧಾನ್ಯ ಯೋಜನೆ ಯಶಸ್ವಿಯಾಗಿದ್ದು, ಸಿರಿಧಾನ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ದೇಶೀಯ ಸ್ಥಳೀಯ ಔಷಧಿಭರಿತ ಸಿರಿಧಾನ್ಯಗಳಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು.ರಾಜ್ಯದಲ್ಲಿ ಸಿರಿಧಾನ್ಯ ಪ್ರದೇಶವನ್ನು ವಿಸ್ತರಿಸುವ ಜೊತೆಗೆ ಸಿರಿಧಾನ್ಯಗಳ ಸಂಸ್ಕರಣೆಗೆ ಹೆಚ್ಚಿನ ಒತ್ತುಕೊಡವ ಕಾರ್ಯಕ್ರಮಗಳನ್ನು ರೂಪಿಸಬೇಕು. ಅಲ್ಲದೇ ಉತ್ಪಾದಿಸಿದ ಸಿರಿಧಾನ್ಯಗಳ ಉತ್ಪನ್ನಗಳನ್ನು ಸರ್ಕಾರದ ಯೋಜನೆಗಳಾದ ಮಧ್ಯಾೂಹ್ನದ ಬಿಸಿಊಟ, ಸಾರ್ವಜನಿಕ ವಿತರಣಾವ್ಯವಸ್ಥೆ, ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುವ ಆಹಾರಗಳು ಮುಂತಾದ ಕಾರ್ಯಕ್ರಮಗಳಡಿ ಬಳಸಿಕೊಳ್ಳಲು ಕ್ರಮ ಕೈಗೊಳ್ಳಲು ಯೋಜನೆ ರೂಪಿಸಲು ಸಭೆಯಲ್ಲಿ ಸಚಿವರು ಅಧಿಕಾರಿಗಳ ಜೊತೆ ಚರ್ಚಿಸಿದರು.

ಆನಂದ್ ಉಪ್ಪಳ್ಳಿ ಮಾತನಾಡಿ, 2004-05 ನಲ್ಲಿ ಸಾವಯವ ಹೊಸ ಸಾವಯವ ನೀತಿ ಜಾರಿಯಾಗಿದ್ದು, 2017 ರಲ್ಲಿ ನೀತಿಯನ್ನು ಪರಿಷ್ಕರಿಸಲಾಗಿದ್ದು,ಈ ನಿಟ್ಟಿನಲ್ಲಿ ಸಾವಯವ ಕೃಷಿಯನ್ನು ಬೃಹತ್ ಮಟ್ಟದಲ್ಲಿ ರಾಜ್ಯಾದ್ಯಂತ ವಿಸ್ತರಿಸಲು ರೂಪುರೇಷೆ ತಯಾರಿಸಬೇಕು. ಇದಕ್ಕಾಗಿ“ಸಾವಯವ ಟಾಸ್ಕ್ ಪೋರ್ಸ್’’ ರಚಿಸಬೇಕು ಎಂದರು.

ರಾಜ್ಯದ ಎಲ್ಲಾ ಕೃಷಿ ವಿಶ್ವವಿದ್ಯಾಲಯ ಹಾಗೂ ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಆಧುನಿಕ ಸಾವಯವ ತಾಂತ್ರಿಕತೆಗಳನ್ನು ಒಳಗೊಂಡ ಪ್ರಾತ್ಯಕ್ಷಿತೆಗಳನ್ನು ಮಾದರಿ ಕ್ಷೇತ್ರಗಳನ್ನಾಗಿ ಅಭಿವೃದ್ದಿಪಡಿಸಬೇಕು.ಸಾವಯವ ಉತ್ಫನ್ನಗಳ ಪ್ಯಾಕಿಂಗ್ನಲ್ಲಿ ಉತ್ಪಾದಕರ ಹೆಸರು, ಸರ್ವೇ ನಂ., ಉತ್ಪಾದನಾಪ್ರಮಾಣ, ಖರೀದಿ ಪ್ರಮಾಣಗಳ ಮಾಹಿತಿಗಳನ್ನು ಮುದ್ರಿಸಲು ನಿರ್ಣಯಿಸಲಾಯಿತು. ರಾಜ್ಯದಲ್ಲಿ ಸಿರಿಧಾನ್ಯ ಪ್ರದೇಶವನ್ನು ವಿಸ್ತರಿಸುವ ಜೊತೆಗೆ ಸಿರಿಧಾನ್ಯಗಳ ಸಂಸ್ಕರಣೆಗೆ ಹೆಚ್ಚಿನಒತ್ತುಕೊಡವ ಕಾರ್ಯಕ್ರಮಗಳನ್ನು ರೂಪಿಸಲು ತೀರ್ಮಾನಿಸಲಾಯಿತು.. ಹಾಗೂ  ಸಾವಯವ ಕೃಷಿಯ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಹೆಚ್ಚಿನ ಪ್ರಚಾರ ಒದಗಿಸುವ ಸಲುವಾಗಿ “ಸಾವಯವಮಾತುಕತೆ” ಎಂಬ ಪ್ರಾಯೋಜಿತ ಕಾರ್ಯಕ್ರಮವನ್ನು ಆಕಾಶವಾಣಿ ಮುಖಾಂತರ ರಾಜ್ಯ ವ್ಯಾಪ್ತಿ ಬಿತ್ತರಿಸುವ ನಿರ್ಣಯ ಕೈಗೊಳ್ಳಲಾಯಿತು.

ರೈತ ಸಿರಿ ಯೋಜನೆಯಡಿ ಸಿರಿಧಾನ್ಯಗಳ ಜೊತೆಗೆ ಸ್ಥಳೀಯವಾಗಿ ಹಾಗೂ ವಿರಳವಾಗಿ ಬೆಳೆಯುವ

ಔಷಧೀಯ ಗುಣಗಳುಳ್ಳ ಹಾಗೂ ಹೆಚ್ಚಿನ ಪೌಷ್ಠಿಕಭರಿತ ದೇಶಿ ಭತ್ತ ಹಾಗೂ ಇನ್ನಿತರ ಬೆಳೆಗಳನ್ನು ಸೇರ್ಪಡಿಸುವ ಅವಶ್ಯಕತೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಒಕ್ಕೂಟಗಳಿಂದ ಉತ್ಪಾದಿಸಿದ ಉತ್ಪನ್ನಗಳನ್ನು ಇಲಾಖೆಯಿಂದ ಹೊರತರಲಾಗಿರುವ ಬ್ರ್ಯಾಂಡ್ಗಳ ಹೆಸರಿನಲ್ಲಿ ಮಾರಾಟ ಮಾಡಲು ತಿಳಿಸಲಾಯಿತು ಹಾಗೂ ಉತ್ಪನ್ನಗಳ ಪ್ಯಾಕೆಟ್ ಗಳ ಮೇಲೆ ಉತ್ಪಾದಕರ ಹೆಸರು, ಸರ್ವೇ ನಂ., ಉತ್ಪಾದನಾ ಪ್ರಮಾಣ, ಖರೀದಿ ಪ್ರಮಾಣಗಳ ಮಾಹಿತಿಗಳನ್ನು ಮುದ್ರಿಸಿ ಮಾರಾಟಮಾಡಲು ಕ್ರಮಕೈಗೊಳ್ಳಲು ಎಲ್ಲಾ ಒಕ್ಕೂಟಗಳಿಗೆ ನಿರ್ದೇಶಿಸಲಾಯಿತು.

ರಾಜಕೀಯ

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್ ಸಿಗ್ನಲ್

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್

ಅಮೆರಿಕದ ಬಾಸ್ಟನ್ ನಗರದಲ್ಲಿ ನಡೆಯುತ್ತಿರುವ 'ಬಯೋ-2025' ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)

[ccc_my_favorite_select_button post_id="109689"]
ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: “ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯಲು 14 ಟಿಎಂಸಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇತರ ತಾಲೂಕಿಗೆ ನೀಡಬೇಕು. ಇದಾದ ನಂತರ ನಾವು ಕೆರೆ ತುಂಬಿಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)

[ccc_my_favorite_select_button post_id="109700"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]