ವಿದ್ಯಾರ್ಥಿಯ ಬಳಿ ತೆರಳಿ ಸಂಕಷ್ಟ ಆಲಿಸಿದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ವಿದ್ಯುಚ್ಛಕ್ತಿ, ಇಂಟರ್ ನೆಟ್  ನೆಟ್ವರ್ಕ್ ಸಂಪರ್ಕ ಇಲ್ಲದ ಕಾರಣ ಚಂದನವಾಹಿನಿಯಲ್ಲಿ ಎಸೆಸೆಲ್ಸಿ ಮಕ್ಕಳಿಗೆ ಶಿಕ್ಷಣ ಇಲಾಖೆಯ ಕಡೆಯಿಂದ ಪ್ರಸಾರವಾಗುತ್ತಿರುವ ತರಗತಿಗಳನ್ನು ನೋಡುವ, ಪ್ರಯೋಜನ ಪಡೆಯುವ  ಭಾಗ್ಯ ಇಲ್ಲ ಎಂದು ತನ್ನ  ಅಳಲು ತೋಡಿಕೊಂಡಿದ್ದ ವಿದ್ಯಾರ್ಥಿಯ ಬಳಿಗೆ ಶಿಕ್ಷಣ ಸಚಿವರೆ ತೆರಳಿ ಸಮಸ್ಯೆ ಆಲಿಸಿರುವ ಘಟನೆ ಹೊಳಲೆ ಗ್ರಾಮದಲ್ಲಿ ನಡೆದಿದೆ.

ಈ ಕುರಿತು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಆದರ್ಶ ಎಂಬ ವಿದ್ಯಾರ್ಥಿಗೆ ಉಂಟಾಗುತ್ತಿದ್ದ ಸಮಸ್ಯೆಯನ್ನು ವಿವರಿಸಿದ್ದು,ತಾವು ಕೈ ಗೊಂಡ ಕ್ರಮದ ಕುರಿತು ಈ ಕೆಳಕಂಡಂತೆ ವಿವರಿಸಿದ್ದಾರೆ.

ಮೂರು ದಿವಸಗಳ ಹಿಂದೆ ಓರ್ವ ಪತ್ರಕರ್ತ ಗೆಳೆಯರ ಮೂಲಕ ನನಗೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹೊರಳೆ ಎಂಬ ಗ್ರಾಮದ ಆದರ್ಶ ಎಂಬ  ಒಬ್ಬ ಬಾಲಕನ ಆಡಿಯೋ ಸಂದೇಶ ದೊರಕಿತು. 

10ನೇ ತರಗತಿಯಲ್ಲಿ ಓದುತ್ತಿರುವ ಆದರ್ಶ ತನ್ನ ಹಳ್ಳಿಯಲ್ಲಿ ವಿದ್ಯುಚ್ಛಕ್ತಿ, ಇಂಟರ್ ನೆಟ್  ನೆಟ್ವರ್ಕ್ ಯಾವುದೂ ಇಲ್ಲದ ಕಾರಣ ಚಂದನವಾಹಿನಿಯಲ್ಲಿ ಎಸೆಸೆಲ್ಸಿ ಮಕ್ಕಳಿಗೆ ಶಿಕ್ಷಣ ಇಲಾಖೆಯ ಕಡೆಯಿಂದ ಪ್ರಸಾರವಾಗುತ್ತಿರುವ ತರಗತಿಗಳನ್ನು ನೋಡುವ, ಪ್ರಯೋಜನ ಪಡೆಯುವ  ಭಾಗ್ಯ ಇಲ್ಲ ಎಂದು ತನ್ನ  ಅಳಲು ತೋಡಿಕೊಂಡಿದ್ದ.‌

ಆ ಬಾಲಕನನ್ನು ಸಂಪರ್ಕಿಸಲು ಮಾಡಿದ ನನ್ನ ಪ್ರಯತ್ನ ಸಫಲವಾಗಲಿಲ್ಲ. ಆಗ  ತಕ್ಷಣ ನಿರ್ಧರಿಸಿದೆ, ಹೊಳಲೆ ಗ್ರಾಮಕ್ಕೇ ಹೋಗಿ ಆದರ್ಶನನ್ನು ಅವನ ಮನೆಯಲ್ಲಿಯೇ ಭೇಟಿ ಮಾಡಬೇಕೆಂದು. 

ಅದೇ ರೀತಿ ನಿನ್ನೆ ಗ್ರಾಮಕ್ಕೆ ಬೆಳಿಗ್ಗೆ 7.30 ಸುಮಾರಿಗೆ ಭೇಟಿಕೊಟ್ಟು ಅವನ ಮನೆಯಲ್ಲಿಯೇ ಆದರ್ಶ ಮತ್ತು  ಅವನ ರೀತಿ ಸಮಸ್ಯೆಗಳನ್ನು ಎದುರಿಸುತ್ತಿರುವ  ವಿದ್ಯಾರ್ಥಿಗಳನ್ನು ಭೇಟಿ ಮಾಡಿದೆ.  ಅವರ ಕಷ್ಟಸುಖಗಳನ್ನು ವಿಚಾರಿಸಿದೆ.  ಅವರಿಗೆ ಏನಾದರೂ ಪರಿಹಾರ ಕೊಡುತ್ತೇನೆಂದು ಭರವಸೆ ನೀಡಿದೆ.

ನಂತರ ಅದೇ ತಾಲೂಕಿನ ಕಿತ್ತಲೆ ಗೂಳಿ ಹಂಚಿನಕೂಡಿಗೆ, ಹುಲುತಾಳು ಮತ್ತು ಬೈರದೇವರ ಗ್ರಾಮಗಳಿಗೂ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳನ್ನು ಮತ್ತು ಪೋಷಕರನ್ನು ಮಾತನಾಡಿಸಿದೆ ಅವರೆಲ್ಲರ ಸಮಸ್ಯೆ ಆಲಿಸಿದೆ.

ಮೆಣಸಿನಹಾಡ್ಯ ಕ್ಕೆ ಹೋಗಿ ಅಲ್ಲಿ ಕಲ್ಪನಾ ಎಂಬ ವಿದ್ಯಾರ್ಥಿಯನ್ನು ಭೇಟಿ ಮಾಡಿದೆ.  ಆಕೆ  ಪರೀಕ್ಷೆಯ ಕೊನೆಯ ದಿನ ಮನೆಯಲ್ಲಿ ಅಡುಗೆ ಮಾಡುವಾಗ ಕಾಲು ಪೂರ್ತಿ ಸುಟ್ಟು ಹೋಗಿದ್ದರೂ ಸಹ ಧೈರ್ಯ ಮಾಡಿ ಪರೀಕ್ಷಾ ಕೇಂದ್ರಕ್ಕೆ ಬಂದು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆದಿದ್ದಳು. 

ಅದೇ ರೀತಿ ಸಿಂಚನ ಎಂಬ ವಿದ್ಯಾರ್ಥಿಯನ್ನು  ಭೇಟಿ ಮಾಡಿದೆ.ಆಕೆ ಪರೀಕ್ಷೆಯ ಮೊದಲನೆಯ ದಿನವೇ ಅಂದರೆಅಂದರೆ ಜೂನ್ 25ರಂದು ಪರೀಕ್ಷೆ ಮುಗಿಸಿ ಹೋದ ನಂತರ ಮನೆಯಲ್ಲಿ ಕಾಲುಜಾರಿ ಬಿದ್ದು ಸೊಂಟಕ್ಕೆ ಭಾರಿ ಪೆಟ್ಟು ಮಾಡಿಕೊಂಡಿದ್ದಳು.  ಆದರೆ ಆ ಪೆಟ್ಟು, ಆ ನೋವು.. ಅವಳ ಆತ್ಮವಿಶ್ವಾಸವನ್ನು ಸೋಲಿಸಲಾಗಲಿಲ್ಲ.

ಶಿಕ್ಷಣ ಇಲಾಖೆಯ ಅಧಿಕಾರಿಗಳು ಆವಳಿಗೆ ಅನುಕೂಲವಾಗುವಂತೆ ಮನೆಯ ಬಾಗಿಲಿಗೇ ವಾಹನವೊಂದನ್ನು ಕಳಿಸಿ ಅವಳು ಸಾಧ್ಯವಾದಷ್ಟು ಆರಾಮಾಗಿ  ಪರೀಕ್ಷಾ ಕೇಂದ್ರಕ್ಕೆ ಹಿತವಾಗುವ  ರೀತಿಯಲ್ಲಿ ಕರೆದುಕೊಂಡು ಹೋಗಿ ಪರೀಕ್ಷಾ ಕೇಂದ್ರದಲ್ಲಿ ಸಹ ಸಿಂಚನಾಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿ ಆಕೆ  ತೊಂದರೆ ಇಲ್ಲದಂತೆ   ಪರೀಕ್ಷೆ ಬರೆಯಲು ಅನುವುಮಾಡಿಕೊಟ್ಟಿದ್ದರು.

ನಂತರ ಕೊಪ್ಪದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ನಂತರ 8, 9, ಮತ್ತು 10 ತರಗತಿಗಳ ಮಕ್ಕಳಿಗೆ ಚಂದನ ತರಗತಿಗಳನ್ನು ಸೂಕ್ತ ವ್ಯವಸ್ಥೆ ಕಲ್ಪಿಸಲು ತೀರ್ಮಾನ ಕೈಗೊಂಡಿದ್ದೇವೆ.  ಹೊಳಲೆ ಗ್ರಾಮಕ್ಕೆ  ವಿದ್ಯುಚ್ಛಕ್ತಿ ವ್ಯವಸ್ಥೆ ಕಲ್ಪಿಸಲೂ ಸಹ ಅಗತ್ಯ ಕ್ರಮ ಕೈಗೊಳ್ಳಲು ಸಹ ನಿರ್ಧರಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಡಿಡಿಪಿಐ, ಬಿಇಓ, ಸಮಾಜ ಕಲ್ಯಾಣ ಇಲಾಖೆ, ವಿದ್ಯುತ್ ವಿತರಣಾ ಇಲಾಖೆ ಗಳ  ಹಾಗೂ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.‌

ನಿನ್ನೆ ಇಡೀ ದಿನ ಮಳೆಯಲ್ಲಿ  ಆ ಗುಡ್ಡಗಾಡಿನ  ರಸ್ತೆಗಳಲ್ಲಿ ಓಡಾಡಿ ಮಕ್ಕಳನ್ನು ಅವರ ಮನೆಗಳ ಪರಿಸರದಲ್ಲಿಯೇ ಕುಳಿತು‌ ಮಾತನಾಡಿಸಿದ್ದು ನನಗೆ ಅತ್ಯಂತ ಸಂತಸ ತಂದಿದೆ.

ಅವರ ಸಮಸ್ಯೆಗಳಿಗೂ ಪರಿಹಾರ ಸಧ್ಯದಲ್ಲಿಯೇ ದೊರಕಿಸಿಕೊಡುವ ವಿಶ್ವಾಸ ನನ್ನದ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಸೋಮವಾರ ಅಂತಿಮ ಕಣದಲ್ಲಿ ‘ಎ’ ತರಗತಿಯಿಂದ 9, ‘ಬಿ’ ತರಗತಿಯಿಂದ 19 ಜನ ಉಳಿದಿದ್ದಾರೆ.

[ccc_my_favorite_select_button post_id="115412"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!