ವಿದ್ಯಾರ್ಥಿಯ ಬಳಿ ತೆರಳಿ ಸಂಕಷ್ಟ ಆಲಿಸಿದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ವಿದ್ಯುಚ್ಛಕ್ತಿ, ಇಂಟರ್ ನೆಟ್  ನೆಟ್ವರ್ಕ್ ಸಂಪರ್ಕ ಇಲ್ಲದ ಕಾರಣ ಚಂದನವಾಹಿನಿಯಲ್ಲಿ ಎಸೆಸೆಲ್ಸಿ ಮಕ್ಕಳಿಗೆ ಶಿಕ್ಷಣ ಇಲಾಖೆಯ ಕಡೆಯಿಂದ ಪ್ರಸಾರವಾಗುತ್ತಿರುವ ತರಗತಿಗಳನ್ನು ನೋಡುವ, ಪ್ರಯೋಜನ ಪಡೆಯುವ  ಭಾಗ್ಯ ಇಲ್ಲ ಎಂದು ತನ್ನ  ಅಳಲು ತೋಡಿಕೊಂಡಿದ್ದ ವಿದ್ಯಾರ್ಥಿಯ ಬಳಿಗೆ ಶಿಕ್ಷಣ ಸಚಿವರೆ ತೆರಳಿ ಸಮಸ್ಯೆ ಆಲಿಸಿರುವ ಘಟನೆ ಹೊಳಲೆ ಗ್ರಾಮದಲ್ಲಿ ನಡೆದಿದೆ.

ಈ ಕುರಿತು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಆದರ್ಶ ಎಂಬ ವಿದ್ಯಾರ್ಥಿಗೆ ಉಂಟಾಗುತ್ತಿದ್ದ ಸಮಸ್ಯೆಯನ್ನು ವಿವರಿಸಿದ್ದು,ತಾವು ಕೈ ಗೊಂಡ ಕ್ರಮದ ಕುರಿತು ಈ ಕೆಳಕಂಡಂತೆ ವಿವರಿಸಿದ್ದಾರೆ.

ಮೂರು ದಿವಸಗಳ ಹಿಂದೆ ಓರ್ವ ಪತ್ರಕರ್ತ ಗೆಳೆಯರ ಮೂಲಕ ನನಗೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹೊರಳೆ ಎಂಬ ಗ್ರಾಮದ ಆದರ್ಶ ಎಂಬ  ಒಬ್ಬ ಬಾಲಕನ ಆಡಿಯೋ ಸಂದೇಶ ದೊರಕಿತು. 

10ನೇ ತರಗತಿಯಲ್ಲಿ ಓದುತ್ತಿರುವ ಆದರ್ಶ ತನ್ನ ಹಳ್ಳಿಯಲ್ಲಿ ವಿದ್ಯುಚ್ಛಕ್ತಿ, ಇಂಟರ್ ನೆಟ್  ನೆಟ್ವರ್ಕ್ ಯಾವುದೂ ಇಲ್ಲದ ಕಾರಣ ಚಂದನವಾಹಿನಿಯಲ್ಲಿ ಎಸೆಸೆಲ್ಸಿ ಮಕ್ಕಳಿಗೆ ಶಿಕ್ಷಣ ಇಲಾಖೆಯ ಕಡೆಯಿಂದ ಪ್ರಸಾರವಾಗುತ್ತಿರುವ ತರಗತಿಗಳನ್ನು ನೋಡುವ, ಪ್ರಯೋಜನ ಪಡೆಯುವ  ಭಾಗ್ಯ ಇಲ್ಲ ಎಂದು ತನ್ನ  ಅಳಲು ತೋಡಿಕೊಂಡಿದ್ದ.‌

ಆ ಬಾಲಕನನ್ನು ಸಂಪರ್ಕಿಸಲು ಮಾಡಿದ ನನ್ನ ಪ್ರಯತ್ನ ಸಫಲವಾಗಲಿಲ್ಲ. ಆಗ  ತಕ್ಷಣ ನಿರ್ಧರಿಸಿದೆ, ಹೊಳಲೆ ಗ್ರಾಮಕ್ಕೇ ಹೋಗಿ ಆದರ್ಶನನ್ನು ಅವನ ಮನೆಯಲ್ಲಿಯೇ ಭೇಟಿ ಮಾಡಬೇಕೆಂದು. 

ಅದೇ ರೀತಿ ನಿನ್ನೆ ಗ್ರಾಮಕ್ಕೆ ಬೆಳಿಗ್ಗೆ 7.30 ಸುಮಾರಿಗೆ ಭೇಟಿಕೊಟ್ಟು ಅವನ ಮನೆಯಲ್ಲಿಯೇ ಆದರ್ಶ ಮತ್ತು  ಅವನ ರೀತಿ ಸಮಸ್ಯೆಗಳನ್ನು ಎದುರಿಸುತ್ತಿರುವ  ವಿದ್ಯಾರ್ಥಿಗಳನ್ನು ಭೇಟಿ ಮಾಡಿದೆ.  ಅವರ ಕಷ್ಟಸುಖಗಳನ್ನು ವಿಚಾರಿಸಿದೆ.  ಅವರಿಗೆ ಏನಾದರೂ ಪರಿಹಾರ ಕೊಡುತ್ತೇನೆಂದು ಭರವಸೆ ನೀಡಿದೆ.

ನಂತರ ಅದೇ ತಾಲೂಕಿನ ಕಿತ್ತಲೆ ಗೂಳಿ ಹಂಚಿನಕೂಡಿಗೆ, ಹುಲುತಾಳು ಮತ್ತು ಬೈರದೇವರ ಗ್ರಾಮಗಳಿಗೂ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳನ್ನು ಮತ್ತು ಪೋಷಕರನ್ನು ಮಾತನಾಡಿಸಿದೆ ಅವರೆಲ್ಲರ ಸಮಸ್ಯೆ ಆಲಿಸಿದೆ.

ಮೆಣಸಿನಹಾಡ್ಯ ಕ್ಕೆ ಹೋಗಿ ಅಲ್ಲಿ ಕಲ್ಪನಾ ಎಂಬ ವಿದ್ಯಾರ್ಥಿಯನ್ನು ಭೇಟಿ ಮಾಡಿದೆ.  ಆಕೆ  ಪರೀಕ್ಷೆಯ ಕೊನೆಯ ದಿನ ಮನೆಯಲ್ಲಿ ಅಡುಗೆ ಮಾಡುವಾಗ ಕಾಲು ಪೂರ್ತಿ ಸುಟ್ಟು ಹೋಗಿದ್ದರೂ ಸಹ ಧೈರ್ಯ ಮಾಡಿ ಪರೀಕ್ಷಾ ಕೇಂದ್ರಕ್ಕೆ ಬಂದು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆದಿದ್ದಳು. 

ಅದೇ ರೀತಿ ಸಿಂಚನ ಎಂಬ ವಿದ್ಯಾರ್ಥಿಯನ್ನು  ಭೇಟಿ ಮಾಡಿದೆ.ಆಕೆ ಪರೀಕ್ಷೆಯ ಮೊದಲನೆಯ ದಿನವೇ ಅಂದರೆಅಂದರೆ ಜೂನ್ 25ರಂದು ಪರೀಕ್ಷೆ ಮುಗಿಸಿ ಹೋದ ನಂತರ ಮನೆಯಲ್ಲಿ ಕಾಲುಜಾರಿ ಬಿದ್ದು ಸೊಂಟಕ್ಕೆ ಭಾರಿ ಪೆಟ್ಟು ಮಾಡಿಕೊಂಡಿದ್ದಳು.  ಆದರೆ ಆ ಪೆಟ್ಟು, ಆ ನೋವು.. ಅವಳ ಆತ್ಮವಿಶ್ವಾಸವನ್ನು ಸೋಲಿಸಲಾಗಲಿಲ್ಲ.

ಶಿಕ್ಷಣ ಇಲಾಖೆಯ ಅಧಿಕಾರಿಗಳು ಆವಳಿಗೆ ಅನುಕೂಲವಾಗುವಂತೆ ಮನೆಯ ಬಾಗಿಲಿಗೇ ವಾಹನವೊಂದನ್ನು ಕಳಿಸಿ ಅವಳು ಸಾಧ್ಯವಾದಷ್ಟು ಆರಾಮಾಗಿ  ಪರೀಕ್ಷಾ ಕೇಂದ್ರಕ್ಕೆ ಹಿತವಾಗುವ  ರೀತಿಯಲ್ಲಿ ಕರೆದುಕೊಂಡು ಹೋಗಿ ಪರೀಕ್ಷಾ ಕೇಂದ್ರದಲ್ಲಿ ಸಹ ಸಿಂಚನಾಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿ ಆಕೆ  ತೊಂದರೆ ಇಲ್ಲದಂತೆ   ಪರೀಕ್ಷೆ ಬರೆಯಲು ಅನುವುಮಾಡಿಕೊಟ್ಟಿದ್ದರು.

ನಂತರ ಕೊಪ್ಪದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ನಂತರ 8, 9, ಮತ್ತು 10 ತರಗತಿಗಳ ಮಕ್ಕಳಿಗೆ ಚಂದನ ತರಗತಿಗಳನ್ನು ಸೂಕ್ತ ವ್ಯವಸ್ಥೆ ಕಲ್ಪಿಸಲು ತೀರ್ಮಾನ ಕೈಗೊಂಡಿದ್ದೇವೆ.  ಹೊಳಲೆ ಗ್ರಾಮಕ್ಕೆ  ವಿದ್ಯುಚ್ಛಕ್ತಿ ವ್ಯವಸ್ಥೆ ಕಲ್ಪಿಸಲೂ ಸಹ ಅಗತ್ಯ ಕ್ರಮ ಕೈಗೊಳ್ಳಲು ಸಹ ನಿರ್ಧರಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಡಿಡಿಪಿಐ, ಬಿಇಓ, ಸಮಾಜ ಕಲ್ಯಾಣ ಇಲಾಖೆ, ವಿದ್ಯುತ್ ವಿತರಣಾ ಇಲಾಖೆ ಗಳ  ಹಾಗೂ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.‌

ನಿನ್ನೆ ಇಡೀ ದಿನ ಮಳೆಯಲ್ಲಿ  ಆ ಗುಡ್ಡಗಾಡಿನ  ರಸ್ತೆಗಳಲ್ಲಿ ಓಡಾಡಿ ಮಕ್ಕಳನ್ನು ಅವರ ಮನೆಗಳ ಪರಿಸರದಲ್ಲಿಯೇ ಕುಳಿತು‌ ಮಾತನಾಡಿಸಿದ್ದು ನನಗೆ ಅತ್ಯಂತ ಸಂತಸ ತಂದಿದೆ.

ಅವರ ಸಮಸ್ಯೆಗಳಿಗೂ ಪರಿಹಾರ ಸಧ್ಯದಲ್ಲಿಯೇ ದೊರಕಿಸಿಕೊಡುವ ವಿಶ್ವಾಸ ನನ್ನದ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು (JDS) ಏನೇ ಹೇಳಿದರೂ ಮಾತಾಡಬೇಡಿ ಎಂದು ನಮ್ಮವರಿಗೆ ಹೇಳಿದ್ದೇನೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H.D. Kumaraswamy) ಮಾತನಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ತಿಳಿಸಿದರು.

[ccc_my_favorite_select_button post_id="119469"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಗೀತಂ ವಿಶ್ವವಿದ್ಯಾಲಯದಲ್ಲಿ (Geetham University) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ (Suicide) ಪ್ರಕರಣಗಳಿಗೆ ಕೊನೆ ಇಲ್ಲವೇ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದ್ದು, ವಿದ್ಯಾರ್ಥಿಗಳ ಆಕಸ್ಮಿಕ ಸಾವು, ಆತ್ಮಹತ್ಯೆ ಕುರಿತಂತೆ ಪದೇ ಪದೇ ದೂರು ದಾಖಲಾಗುತ್ತಿದೆ.

[ccc_my_favorite_select_button post_id="119472"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!