ಪ್ರವಾಹ: ಜನ, ಜಾನುವಾರುಗಳ ರಕ್ಷಣಗೆ ತಕ್ಷಣವೇ ಕ್ರಮಕ್ಕೆ ಉಸ್ತುವಾರಿ ಕಾರ್ಯದರ್ಶಿಗಳಿಂದ ಸೂಚನೆ

ಮೈಸೂರು: ಜಿಲ್ಲೆಯಲ್ಲಿ ಪ್ರವಾಹ ಆರಂಭವಾಗಿರುವ ಹಿನ್ನೆಲೆಯಲ್ಲಿ ಜನ ಮತ್ತು ಜಾನುವಾರುಗಳ ರಕ್ಷಣೆಗೆ ತಕ್ಷಣವೇ ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್ ಅವರು ಶುಕ್ರವಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರವಾಹ ಮತ್ತು ಕೊವೀಡ್ ಹಿನ್ನೆಲೆಯಲ್ಲಿ ವಿಕೋಪ ನಿರ್ವಹಣೆ ಕುರಿತು ಮೈಸೂರು ಜಿಲ್ಲಾ ಪಂಚಾಯತ್ ಕಚೇರಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ತಾಲ್ಲೂಕು ಟಾಸ್ಕ್ ಫೆÇರ್ಸ್ ಅಧಿಕಾರಿಗಳ ಪ್ರಗತಿ ಪರಿಶೀಲನೆ ಮಾಡಿದರು.

ಮುಂದಿನ ಒಂದೆರೆಡು ವಾರಗಳ ಕಾಲ ಹೆಚ್ಚಿನ ಮಳೆಯಾಗುವ ಮಾಹಿತಿ ಇರುವುದರಿಂದ ಯಾವುದೇ ಕ್ಷಣದಲ್ಲಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಬಹುದು. ಅಲ್ಲಿ ವರೆಗೂ ಕಾಯುವ ಬದಲು ಈಗಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಕ್ರಮವಹಿಸಬೇಕು ಎಂದರು.

ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಎಲ್ಲಾ ತಾಲ್ಲೂಕುಗಳಿಗೂ ನೋಡಲ್ ಅಧಿಕಾರಿಗಳಾಗಿ ನಿಯೋಜಿಸಲಾಗಿದೆ. ಅವರು ಆಗಾಗ್ಗೆ ತಾಲ್ಲೂಕುಗಳಿಗೆ ಭೇಟಿ ನೀಡಿ, ನಿರ್ವಹಣೆ ಮಾಡಬೇಕು ಎಂದರು.

ಜನರಿಗೆ ಪರಿಹಾರ ಕೇಂದ್ರಗಳನ್ನು ತೆರೆಯಬೇಕು. ಜಾನುವಾರುಗಳಿಗೆ ಗೋಶಾಲೆಗಳನ್ನು ಮಾಡಬೇಕು. ಹಾಲುಣಿಸುವ ಹಸುಗಳಿದ್ದರೆ ದೂರದಲ್ಲಿ ಗೋಶಾಲೆ ಮಾಡುವುದರಿಂದ ಸಮಸ್ಯೆಯಾಗುತ್ತದೆ. ಹಾಗಾಗಿ ಗ್ರಾಮದ ಹತ್ತಿರವೇ ಗೋಶಾಲೆ ಮಾಡಿ ಎಂದರು.

ಹಿಂದಿನ ವರ್ಷಗಳಲ್ಲಿ ನೀರು ನುಗ್ಗಿದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರಿಕೆ ಬೇಕಾಗುತ್ತದೆ. ಸ್ಥಳೀಯ ಶಾಸಕರು, ಸಂಸದರಿಗೆ ಮಾಹಿತಿ ನೀಡಿ ಸಹಕಾರ ಪಡೆಯಬೇಕು ಎಂದರು.

ಬೆಳೆಹಾನಿ, ಆಸ್ತಿಹಾನಿಯಾದರೆ ಸಮೀಕ್ಷೆ ನಡೆಸಿ ನಿಖರವಾದ ವರದಿಪಡೆಯಬೇಕು. ಗಾಳಿ ಮಳೆಗೆ ವಿದ್ಯುತ್ ಪರಿವರ್ತಕಗಳು ಹಾನಿಯಾಗುತ್ತವೆ. ಇವನ್ನು ತಕ್ಷಣ ಸರಿಪಡಿಸುವಂತೆ ಚೆಸ್ಕಾಂ ಸಿಬ್ಬಂದಿಗಳು ಸ್ಪಂದಿಸಬೇಕು ಎಂದು ಹೇಳಿದರು.

ಪ್ರವಾಹ ಮತ್ತು ಕೋವಿಡ್ ಕೆಲಸದ ಜೊತೆಗೆ ತಾಲ್ಲೂಕು ಕಚೇರಿಯ ನಿಗದಿತ ಕೆಲಸಗಳು ನಡೆಯಬೇಕು. ಸಾರ್ವಜನಿಕರಿಗೆ ತೊಂದರೆಯಾಗಬಾರದು. ಈ ಸಂದರ್ಭದಲ್ಲಿ ಯಾರೂ ಕೂಡ ಅನಿವಾರ್ಯ ಪರಿಸ್ಥಿತಿ ಹೊರತುಪಡಿಸಿ ರಜೆ ತೆಗೆದುಕೊಳ್ಳಬಾರದು ಎಂದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮುನ್ನೆಚ್ಚರಿಕೆಯಾಗಿ ಎಲ್ಲಾ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ. ಅದರಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.

ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ, ಆದಷ್ಟು ಸಾವಿನ ಪ್ರಮಾಣ ತಪ್ಪಿಸಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ವಿಕೋಪ ನಷ್ಟಕ್ಕೆ ಕಳೆದ ವರ್ಷ ನೀಡಿದಂತೆ ಪರಿಹಾರ ಮೊತ್ತ ನೀಡಲು ಸೂಚನೆ ಬಂದಿದೆ. ಈವರೆಗೆ ಪ್ರಾಣಿ ಹಾನಿಯಾಗಿಲ್ಲ. ಒಂದು ಮಾನವ ಹಾನಿಯಾಗಿದೆ. ಶುಂಠಿ ಮುಂತಾದ ಬೆಳೆಗೆ ಹೆಚ್ಚು ನೀರು ನಿಂತರೆ ಬೆಳೆ ನಷ್ಟ ಸಂಭವಿಸುತ್ತದೆ. ಕಬಿನಿ, ಕಾವೇರಿ ಮತ್ತು ಲಕ್ಷ್ಮಣ ತೀರ್ಥ ನದಿಗಳು ಹರಿಯುತ್ತಿದ್ದು ಪ್ರವಾಹ ಎಚ್ಚರಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಹೇಳಿದರು.

ಆಗಸ್ಟ್ 1 ರಿಂದ ಈ ವರೆಗೆ ಜಿಲ್ಲೆಯಲ್ಲಿ 66 ಮನೆಗಳಿಗೆ ಹಾನಿಯಾಗಿದೆ. ಪ್ರಾಣಿ ಹಾನಿ ಆಗಿಲ್ಲ. ಒಬ್ಬರು ಮೃತಪಟ್ಟಿದ್ದಾರೆ ಎಂದರು.

ಗಾಳಿ ಮಳೆಗೆ ವಿದ್ಯುತ್ ಕಂಬಗಳು, ವಿದ್ಯುತ್ ಪರಿವರ್ತಕಗಳು ಹಾನಿಯಾಗುತ್ತವೆ ಇದಕ್ಕೆ ತಕ್ಷಣ ಸರಿಪಡಿಸುವಂತೆ ಚೆಸ್ಕಂ ಸಿಬ್ಬಂದಿಗಳು ಸ್ಪಂದಿಸಬೇಕು ಎಂದು ಸೂಚನೆ ನೀಡಿದರು .

ಬೆಳೆ ಹಾನಿ, ಆಸ್ತಿ ಹಾನಿಯಾದರೆ ಸಮೀಕ್ಷೆ ನಡೆಸಿ ನಿಖರವಾದ ವರದಿ ಪಡೆಯಬೇಕು ಎಂದು ತಿಳಿಸಿದರು.

ಕೋವಿಡ್ ಗೆ ಸಂಬಂಧಿಸಿದಂತೆ ಮತ್ತು ಸಕಾಲ ಸೇವೆಗಳ ಕುರಿತು ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಒ. ಪ್ರಶಾಂತ್ ಕುಮಾರ್ ಮಿಶ್ರಾ, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಿಶ್ಯಂತ್, ಅಪರ ಜಿಲ್ಲಾಧಿಕಾರಿ ಬಿ.ಎಸ್.ಮಂಜುನಾಥಸ್ವಾಮಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!