ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ: ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ

ಬೆಂಗಳೂರು:  ರಸಗೊಬ್ಬರ ಚಿಲ್ಲರೆ ಮತ್ತು ಸಗಟು ಮಾರಾಟಗಾರರು ಯಾವುದೇ ಕಾರಣಕ್ಕೂ ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸಿದ್ದಲ್ಲಿ ಅಥವಾ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗವುದು ಎಂದು ಕೃಷಿ ಸಚಿ ಬಿ.ಸಿ.ಪಾಟೀಲ್ ಎಚ್ಚರಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಲಾಖೆಯ ನಿಯಮಾನುಸಾರವೇ ರಸಗೊಬ್ಬರವನ್ನು ರೈತರಿಗೆ ವಿತರಿಸಬೇಕು. ರೈತಬಾಂಧವರಿಗೆ ಯಾವುದೇ ಕಾರಣಕ್ಕೂ ರಸಗೊಬ್ಬರದ ಕೊರತೆಯಾಗದಂತೆ ಇಲಾಖೆ ಸೂಕ್ತ ಕ್ರಮಕೈಗೊಂಡಿದೆ. ರಸಗೊಬ್ಬರಕ್ಕೆ ಯಾವುದೇ ಕೊರತೆಯಿರುವುದಿಲ್ಲ. ಅಗತ್ಯಕ್ಕನುಗುಣವಾಗಿ ರಸಗೊಬ್ಬರ ಸರಬರಾಜಿಗೆ ಕ್ರಮಕೈಗೊಳ್ಳಲಾಗಿದ್ದು , ರೈತ ಬಾಂಧವರು ಯಾವುದೇ ಇಲ್ಲಸಲ್ಲದ ವದಂತಿಗಾಗಲೀ ಸುಳ್ಳು ಸುದ್ದಿಗಾಗಲೀ ಗಮನ ನೀಡದೇ ತಾಳ್ಮೆ ವಹಿಸಿ ರೈತಬಾಂಧವರು ಸಾಮಾಜಿಕ ಅಂತರ ಕಾಯ್ದುಕೊಂಡು ರಸಗೊಬ್ಬರ ಖರೀದಿಸುವಂತೆ ಸಚಿವರು ಮನವಿ ಮಾಡಿದ್ದಾರೆ.

ಕೆಲವೆಡೆ ಕೆಲ ಚಿಲ್ಲರೆ ಮತ್ತು ಸಗಟು ಮಾರಾಟಗಾರರು ಕೃತಕ ಅಭಾವ ಸೃಷ್ಟಿಸುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಅಂತಹವರನ್ನು ಗುರುತಿಸಿ ಆರೋಪ ಸಾಬೀತಾದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದೆಂದು ಬಿ.ಸಿ.ಪಾಟೀಲರು ಮತ್ತೊಮ್ಮೆ ಎಚ್ಚರಿಸಿದ್ದಾರೆ.

ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಇದೂವರೆಗೂ 57.12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 8.51 ಲಕ್ಷ ಹೆಕ್ಟೇರ್ ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಈ ಬಾರಿ ಕಳೆದ 5 ವರ್ಷಗಳ ಸರಾಸರಿ ಬಿತ್ತನೆಯ ಶೇ.14 ರಷ್ಟು ಹೆಚ್ಚಿನ ಬಿತ್ತನೆಯಾಗಿದೆ.  ಈ ಬಾರಿ ಹೆಚ್ಚಿನ ಬಿತ್ತನೆಯಾಗಿರುವುದರಿಂದ ಹೆಚ್ಚಿನ ಕೃಷಿ ಪರಿಕರಗಳ ಅವಶ್ಯಕತೆಯಿರುತ್ತದೆ. ಕೇಂದ್ರ ಸರ್ಕಾರದ ಹಂಚಿಕೆಯಂತೆ ರಸಗೊಬ್ಬರಗಳನ್ನು ಜಿಲ್ಲೆಗಳಿಗೆ ಸರಬರಾಜು ಮಾಡಲಾಗುತ್ತಿದ್ದು, ಕಳೆದೆರಡು ವರ್ಷಗಳಿಗೆ ಹೋಲಿಸಿದಲ್ಲಿ ಈ ಬಾರಿ ಹೆಚ್ಚಿನದಾಗಿ ರಸಗೊಬ್ಬರ ಸರಬರಾಜಾಗಿರುತ್ತದೆ ಎಂದು ಕೃಷಿ ಇಲಾಖೆ ಸ್ಪಷ್ಟಪಡಿಸಿದೆ.

ಜುಲೈ ತಿಂಗಳಿನಲ್ಲಿ ಮಂಗಳೂರು ಬಂದರಿಗೆ ಆಗಮಿಸಬೇಕಿದ್ದ ಹಡಗು ಸಕಾಲಕ್ಕೆ ಬಾರದಿರುವುದರಿಂದ ಯೂರಿಯಾ ರಸಗೊಬ್ಬರ ಸರಬರಾಜು ಜುಲೈ ತಿಂಗಳಿನಲ್ಲಿ  ವ್ಯತ್ಯಾಸವಾಗಿರುತ್ತದೆ. ಆದರೆ ಆಗಸ್ಟ್ ತಿಂಗಳಿನಲ್ಲಿ ಯೂರಿಯಾ ರಸಗೊಬ್ಬರಕ್ಕೆ ಅಂದಾಜು 1,77,000 ಟನ್ ಬೇಡಿಕೆಯಿದ್ದು, ಈಗಾಗಲೇ 49,749 ಟನ್ ಸರಬರಾಜಾಗಿರುತ್ತದೆ. 19,305 ಟನ್ ಸರಬರಾಜು ಹಂತದಲ್ಲಿದ್ದು, 1,22446 ಮೆಟ್ರಿಕ್ ಟನ್ ಸರಬರಾಜಿಗೆ ಸಿದ್ದತೆ ಮಾಡಲಾಗಿದೆ. ಸರಬರಾಜು ಯೋಜನೆಯಂತೆ ಕೇಂದ್ರ ಸರ್ಕಾರದ ಸಹಕಾರದಿಂದ ಯೂರಿಯಾ ರಸಗೊಬ್ಬರ ಸರಬರಾಜಾಗುವ ನಿರೀಕ್ಷೆಯಿದ್ದು, ಯೂರಿಯಾ ಸರಬರಾಜಿನಲ್ಲಿ ಯಾವುದೇ ತೊಂದರೆಯಾಗುವುದಿಲ್ಲಎಂದು ಕೃಷಿ ಸಚಿವರು ತಿಳಿಸಿದ್ದಾರೆ.

ಕೃಷಿ ಇಲಾಖೆಯ ಅಧಿಕಾರಿಗಳು ರಸಗೊಬ್ಬರಗಳ ಸರಬರಾಜು ಮತ್ತು ರೇಕ್ ಟ್ರ್ಯಾಕಿಂಗ್ ಮೇಲ್ವಿಚಾರಣೆಯನ್ನು ಸಮರ್ಪವಾಗಿ ನಿಭಾಯಿಸುತ್ತಿದ್ದು, 2020 ಜುಲೈ ತಿಂಗಳ ಅಂತ್ಯದವರೆಗೆ 5,63861 ಮೆಟ್ರಿಕ್ ಟನ್ ರಸಗೊಬ್ಬರ ಕೇಂದ್ರ ಸರ್ಕಾರದಿಂದ ಸರಬರಾಜಾಗಿದೆ. ಅಂತೆಯೇ ಡಿಎಪಿ 2,77499 ಮೆ.ಟನ್,ಕಾಂಪ್ಲೆಕ್ಸ್ ರಸಗೊಬ್ಬರ 5,17,144 ಮೆಟ್ರಿಕ್ ಟನ್ ಸರಬರಾಜಾಗಿದೆ ಹಾಗೂ ಎಂಒಪಿ ರಸಗೊಬ್ಬರ ಜುಲೈ ಅಂತ್ಯದವರೆಗೆ 1,31,533 ಮೆಟ್ರಿಕ್ ಟನ್ ಸರಬರಾಜಾಗಿದ್ದು, ಒಟ್ಟಾರೆ 14, 90,970 ಮೆಟ್ರಿಕ್ ಟನ್ ರಸಗೊಬ್ಬರ ಸರಬರಜಾರಾಗಿರುತ್ತದೆ ಎಂದು ಬಿ.ಸಿ.ಪಾಟೀಲರು ಹೇಳಿದ್ದಾರೆ.

ಪ್ರಮುಖವಾಗಿ ರೈತ ಬಾಂಧವರು ಯೂರಿಯಾ ರಸಗೊಬ್ಬರ ಬಳಕೆಯನ್ನು ಅಗತ್ಯಕ್ಕಿಂತ ಹೆಚ್ಚು ಬಳಸಬಾರದು. ಬೇಡಿಕೆಗನುಗುಣವಾಗಿ ಬಳಸಬೇಕು. ಯೂರಿಯಾ ರಸಗೊಬ್ಬರದ ಅತಿ ಬಳಕೆಯಿಂದ ಬೆಳೆಗಳಿಗೆ ಕೀಟ ರೋಗಬಾಧೆಗಳು ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಇಳುವರಿ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದಾಗಿ ಕೃಷಿ ಸಚಿವ ರೈತರಲ್ಲಿಮನವಿ ಮಾಡಿದ್ದಾರೆ.

ರಾಜಕೀಯ

ಲೋಕಸಭೆ: ಕಾಂಗ್ರೆಸ್, ಡಿಎಂಕೆ ಮೇಲೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಲೋಕಸಭೆ: ಕಾಂಗ್ರೆಸ್, ಡಿಎಂಕೆ ಮೇಲೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಲೋಕಸಭೆ ಮತ್ತು ವಿಧಾಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇರಿಸಿರುವ ಹೆಜ್ಜೆ ಐತಿಹಾಸಿಕ ಎಂದು ಬಣ್ಣಿಸಿದ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy); ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ

[ccc_my_favorite_select_button post_id="121061"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!