ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ: ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ

ಬೆಂಗಳೂರು:  ರಸಗೊಬ್ಬರ ಚಿಲ್ಲರೆ ಮತ್ತು ಸಗಟು ಮಾರಾಟಗಾರರು ಯಾವುದೇ ಕಾರಣಕ್ಕೂ ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸಿದ್ದಲ್ಲಿ ಅಥವಾ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗವುದು ಎಂದು ಕೃಷಿ ಸಚಿ ಬಿ.ಸಿ.ಪಾಟೀಲ್ ಎಚ್ಚರಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಲಾಖೆಯ ನಿಯಮಾನುಸಾರವೇ ರಸಗೊಬ್ಬರವನ್ನು ರೈತರಿಗೆ ವಿತರಿಸಬೇಕು. ರೈತಬಾಂಧವರಿಗೆ ಯಾವುದೇ ಕಾರಣಕ್ಕೂ ರಸಗೊಬ್ಬರದ ಕೊರತೆಯಾಗದಂತೆ ಇಲಾಖೆ ಸೂಕ್ತ ಕ್ರಮಕೈಗೊಂಡಿದೆ. ರಸಗೊಬ್ಬರಕ್ಕೆ ಯಾವುದೇ ಕೊರತೆಯಿರುವುದಿಲ್ಲ. ಅಗತ್ಯಕ್ಕನುಗುಣವಾಗಿ ರಸಗೊಬ್ಬರ ಸರಬರಾಜಿಗೆ ಕ್ರಮಕೈಗೊಳ್ಳಲಾಗಿದ್ದು , ರೈತ ಬಾಂಧವರು ಯಾವುದೇ ಇಲ್ಲಸಲ್ಲದ ವದಂತಿಗಾಗಲೀ ಸುಳ್ಳು ಸುದ್ದಿಗಾಗಲೀ ಗಮನ ನೀಡದೇ ತಾಳ್ಮೆ ವಹಿಸಿ ರೈತಬಾಂಧವರು ಸಾಮಾಜಿಕ ಅಂತರ ಕಾಯ್ದುಕೊಂಡು ರಸಗೊಬ್ಬರ ಖರೀದಿಸುವಂತೆ ಸಚಿವರು ಮನವಿ ಮಾಡಿದ್ದಾರೆ.

ಕೆಲವೆಡೆ ಕೆಲ ಚಿಲ್ಲರೆ ಮತ್ತು ಸಗಟು ಮಾರಾಟಗಾರರು ಕೃತಕ ಅಭಾವ ಸೃಷ್ಟಿಸುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಅಂತಹವರನ್ನು ಗುರುತಿಸಿ ಆರೋಪ ಸಾಬೀತಾದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದೆಂದು ಬಿ.ಸಿ.ಪಾಟೀಲರು ಮತ್ತೊಮ್ಮೆ ಎಚ್ಚರಿಸಿದ್ದಾರೆ.

ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಇದೂವರೆಗೂ 57.12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 8.51 ಲಕ್ಷ ಹೆಕ್ಟೇರ್ ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಈ ಬಾರಿ ಕಳೆದ 5 ವರ್ಷಗಳ ಸರಾಸರಿ ಬಿತ್ತನೆಯ ಶೇ.14 ರಷ್ಟು ಹೆಚ್ಚಿನ ಬಿತ್ತನೆಯಾಗಿದೆ.  ಈ ಬಾರಿ ಹೆಚ್ಚಿನ ಬಿತ್ತನೆಯಾಗಿರುವುದರಿಂದ ಹೆಚ್ಚಿನ ಕೃಷಿ ಪರಿಕರಗಳ ಅವಶ್ಯಕತೆಯಿರುತ್ತದೆ. ಕೇಂದ್ರ ಸರ್ಕಾರದ ಹಂಚಿಕೆಯಂತೆ ರಸಗೊಬ್ಬರಗಳನ್ನು ಜಿಲ್ಲೆಗಳಿಗೆ ಸರಬರಾಜು ಮಾಡಲಾಗುತ್ತಿದ್ದು, ಕಳೆದೆರಡು ವರ್ಷಗಳಿಗೆ ಹೋಲಿಸಿದಲ್ಲಿ ಈ ಬಾರಿ ಹೆಚ್ಚಿನದಾಗಿ ರಸಗೊಬ್ಬರ ಸರಬರಾಜಾಗಿರುತ್ತದೆ ಎಂದು ಕೃಷಿ ಇಲಾಖೆ ಸ್ಪಷ್ಟಪಡಿಸಿದೆ.

ಜುಲೈ ತಿಂಗಳಿನಲ್ಲಿ ಮಂಗಳೂರು ಬಂದರಿಗೆ ಆಗಮಿಸಬೇಕಿದ್ದ ಹಡಗು ಸಕಾಲಕ್ಕೆ ಬಾರದಿರುವುದರಿಂದ ಯೂರಿಯಾ ರಸಗೊಬ್ಬರ ಸರಬರಾಜು ಜುಲೈ ತಿಂಗಳಿನಲ್ಲಿ  ವ್ಯತ್ಯಾಸವಾಗಿರುತ್ತದೆ. ಆದರೆ ಆಗಸ್ಟ್ ತಿಂಗಳಿನಲ್ಲಿ ಯೂರಿಯಾ ರಸಗೊಬ್ಬರಕ್ಕೆ ಅಂದಾಜು 1,77,000 ಟನ್ ಬೇಡಿಕೆಯಿದ್ದು, ಈಗಾಗಲೇ 49,749 ಟನ್ ಸರಬರಾಜಾಗಿರುತ್ತದೆ. 19,305 ಟನ್ ಸರಬರಾಜು ಹಂತದಲ್ಲಿದ್ದು, 1,22446 ಮೆಟ್ರಿಕ್ ಟನ್ ಸರಬರಾಜಿಗೆ ಸಿದ್ದತೆ ಮಾಡಲಾಗಿದೆ. ಸರಬರಾಜು ಯೋಜನೆಯಂತೆ ಕೇಂದ್ರ ಸರ್ಕಾರದ ಸಹಕಾರದಿಂದ ಯೂರಿಯಾ ರಸಗೊಬ್ಬರ ಸರಬರಾಜಾಗುವ ನಿರೀಕ್ಷೆಯಿದ್ದು, ಯೂರಿಯಾ ಸರಬರಾಜಿನಲ್ಲಿ ಯಾವುದೇ ತೊಂದರೆಯಾಗುವುದಿಲ್ಲಎಂದು ಕೃಷಿ ಸಚಿವರು ತಿಳಿಸಿದ್ದಾರೆ.

ಕೃಷಿ ಇಲಾಖೆಯ ಅಧಿಕಾರಿಗಳು ರಸಗೊಬ್ಬರಗಳ ಸರಬರಾಜು ಮತ್ತು ರೇಕ್ ಟ್ರ್ಯಾಕಿಂಗ್ ಮೇಲ್ವಿಚಾರಣೆಯನ್ನು ಸಮರ್ಪವಾಗಿ ನಿಭಾಯಿಸುತ್ತಿದ್ದು, 2020 ಜುಲೈ ತಿಂಗಳ ಅಂತ್ಯದವರೆಗೆ 5,63861 ಮೆಟ್ರಿಕ್ ಟನ್ ರಸಗೊಬ್ಬರ ಕೇಂದ್ರ ಸರ್ಕಾರದಿಂದ ಸರಬರಾಜಾಗಿದೆ. ಅಂತೆಯೇ ಡಿಎಪಿ 2,77499 ಮೆ.ಟನ್,ಕಾಂಪ್ಲೆಕ್ಸ್ ರಸಗೊಬ್ಬರ 5,17,144 ಮೆಟ್ರಿಕ್ ಟನ್ ಸರಬರಾಜಾಗಿದೆ ಹಾಗೂ ಎಂಒಪಿ ರಸಗೊಬ್ಬರ ಜುಲೈ ಅಂತ್ಯದವರೆಗೆ 1,31,533 ಮೆಟ್ರಿಕ್ ಟನ್ ಸರಬರಾಜಾಗಿದ್ದು, ಒಟ್ಟಾರೆ 14, 90,970 ಮೆಟ್ರಿಕ್ ಟನ್ ರಸಗೊಬ್ಬರ ಸರಬರಜಾರಾಗಿರುತ್ತದೆ ಎಂದು ಬಿ.ಸಿ.ಪಾಟೀಲರು ಹೇಳಿದ್ದಾರೆ.

ಪ್ರಮುಖವಾಗಿ ರೈತ ಬಾಂಧವರು ಯೂರಿಯಾ ರಸಗೊಬ್ಬರ ಬಳಕೆಯನ್ನು ಅಗತ್ಯಕ್ಕಿಂತ ಹೆಚ್ಚು ಬಳಸಬಾರದು. ಬೇಡಿಕೆಗನುಗುಣವಾಗಿ ಬಳಸಬೇಕು. ಯೂರಿಯಾ ರಸಗೊಬ್ಬರದ ಅತಿ ಬಳಕೆಯಿಂದ ಬೆಳೆಗಳಿಗೆ ಕೀಟ ರೋಗಬಾಧೆಗಳು ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಇಳುವರಿ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದಾಗಿ ಕೃಷಿ ಸಚಿವ ರೈತರಲ್ಲಿಮನವಿ ಮಾಡಿದ್ದಾರೆ.

ರಾಜಕೀಯ

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. HD Deve Gowda

[ccc_my_favorite_select_button post_id="102362"]
ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ. ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, nikhil kumaraswamy

[ccc_my_favorite_select_button post_id="102348"]
Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ ಆಕ್ರೋಶ

Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ

ವೈರಲ್ ವಿಡಿಯೋದಲ್ಲಿ ಅಕ್ರಮ ವಲಸಿಗರ ಕಾಲನ್ನು ಸಂಕೋಲೆಗಳಲ್ಲಿ ಕಟ್ಟಿರುವುದು ಹಾಗೂ ಕೈಗಳನ್ನು ಕೋಳಗಳಿಂದ ಬಂಧಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ. Video

[ccc_my_favorite_select_button post_id="102365"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಪ್ರಿಯಕರೊಂದಿಗೆ ಓಡಿ ಹೋಗಿರುವ ವಿವಾಹಿತ ಮಹಿಳೆ ವಿದೇಶದಲ್ಲಿದ್ದ ತನ್ನ ಗಂಡನನ್ನು ಬಿಟ್ಟಿರುವುದಲ್ಲದೆ, ಗಂಡ ತನಗಾಗಿ ಕಟ್ಟಿದ್ದ ಮನೆಯನ್ನು ಮಾರಿದ್ದಾಳೆ. Suicide

[ccc_my_favorite_select_button post_id="102360"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!