ಶ್ರೀ ಕೃಷ್ಣನ ಉದಾತ್ತ ಮೌಲ್ಯಾದರ್ಶಗಳು ನಮ್ಮೆಲ್ಲರಿಗೂ ಮಾದರಿ: ಸಚಿವ ಸಿ.ಟಿ ರವಿ

ಚಿಕ್ಕಮಗಳೂರು: ಭಾರತೀಯ ಇತಿಹಾಸ ಪುರಾಣದಲ್ಲಿ ವಿಶೇಷ ಉದಾತ್ತ ಮೌಲ್ಯಗಳ ವ್ಯಕ್ತಿತ್ವ ಹೊಂದುವ ಮೂಲಕ ರಾಜನೀತಿ ನಿಪುಣನಾಗಿ ಧರ್ಮದ ಪರಿಪಾಲಕ ಶ್ರೀಕೃಷ್ಣ ನಮ್ಮೆಲ್ಲರಿಗೂ ಮಾದರಿ ಎಂದು ಪ್ರವಾಸೋದ್ಯಮ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ  ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಸರಳವಾಗಿ ಆಯೋಜಿಸಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತೀಯ ಪುರಾಣದಲ್ಲಿ ವಿಶೇಷ ವ್ಯಕ್ತಿತ್ವ ಹೊಂದಿದ ವ್ಯಕ್ತಿಗಳಲ್ಲಿ ಶ್ರೀ ಕೃಷ್ಣ ಪರಮಾತ್ಮ ಕೂಡ ಒಬ್ಬರು ಜಾಗತಿಕವಾಗಿ ಸ್ನೇಹ -ಸೌಹಾರ್ದಯುತವಾದ ಉದಾತ್ತ ಮೌಲ್ಯ ಗುಣಗಳನ್ನು  ಹೊಂದಿ ಶ್ರೇಷ್ಟ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ, ಯಾವುದೇ ಪದವಿಗೆ ವ್ಯಾಮೋಹ ಹೊಂದದೆ ಧರ್ಮದ ಪರಿಪಾಲಕನಾಗಿ ಮಹಾಭಾರತದಲ್ಲಿ ತನ್ನದೇ ಪಾತ್ರ ವಹಿಸಿ ಜನರ ಮನದಲ್ಲಿ ಉಳಿದ  ಮಹಾನ್ ವ್ಯಕ್ತಿ ಎಂದರು.

ಮಹಾಭಾರತದಲ್ಲಿ ಶ್ರೀ ಕೃಷ್ಣನ ಜೀವನ ಚರಿತ್ರೆ ಅಧ್ಯಯನ ಮಾಡಿದಲ್ಲಿ ಆತನ ರಾಜನೀತಿ ಆಡಳಿತ, ಧರ್ಮದ ಪರವಾಗಿ ನಿಲ್ಲುವುದು ಸೇರಿದಂತೆ ಉತ್ತಮ ಮೌಲ್ಯಯುತ ಅಂಶಗಳು ನಮ್ಮೆಲ್ಲರಿಗೂ ಮಾದರಿಯಾಗಲಿದೆ, ರಾಜಸೂಯ ಯಾಗದಲ್ಲಿ ಶ್ರೀ ಕೃಷ್ಣನಿಗೆ ಅಗ್ರ ಪೂಜೆ ಆದರೂ ಯಾವುದೇ ಅಹಂ ಇಲ್ಲದೇ ನಿಷ್ಠೆ ತೋರಿದ ವ್ಯಕ್ತಿತ್ವ ಜೊತೆಗೆ ಯುದ್ಧದಲ್ಲಿ ಯಾವುದೇ ಶಸ್ತ್ರ ಹೊಂದದೇ ಪಾಂಡವರ ಪರ ಧೂತನಾಗಿ ಕೌರವರ ಮನವೊಲಿಸುವ ಕಾರ್ಯ ಮಾಡಿದವನು ದ್ರೌಪದಿಯ ವಸ್ತ್ರಾಪಹರಣವಾಗಿ ಸಂಕಷ್ಟದಲ್ಲಿದ್ದಾಗ ಆಕೆಯ ಸಹಾಯಕ್ಕೆ ಬಂದವನು ಪೌರಾಣಿಕ ಅತ್ಯುತ್ತಮ ಮೌಲ್ಯ ಹೊಂದಿದ ವ್ಯಕ್ತಿಯಾಗಿ ಶ್ರೀ ಕೃಷ್ಣ ಪರಮಾತ್ಮ ಗುರ್ತಿಸಿಕೊಂಡಿದ್ದಾನೆ ಎಂದರು.

ರಾಮಾಯಣ ಮತ್ತು ಮಹಾಭಾರತ ಪೂರ್ವಿಕರು ನಾಡಿಗಾಗಿ ನೀಡಿರುವ ಉದಾತ್ತ ಮೌಲ್ಯಗಳ ಸಂಗ್ರಹವಾಗಿದೆ ಎಂದ ಅವರು ಶ್ರೀ ಕೃಷ್ಣ ಹಾಗೂ ಪುರಾಣದಲ್ಲಿರುವ ವಿಚಾರಧಾರೆಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡಲ್ಲಿ ಎಂದಿಗೂ ಸೋಲಿಲ್ಲ ಧರ್ಮದ ಪರಿಪಾಲಕನಾಗಿ ಹೋರಾಡುವ ಆತನ ವ್ಯಕ್ತಿತ್ವ, ರಾಜನೀತಿ ಆಡಳಿತ ಇಂದಿನ ಸಮಾಜಕ್ಕೆ ಮಾದರಿಯಾಗಲಿದೆ ಧರ್ಮ ಎಂಬುದು ಕೇವಲ ಒಂದು ಮತವಲ್ಲ ಅದು  ಎಲ್ಲರ ಒಳಿತನ್ನು ಬಯಸುವ ಉದಾರ ಮೌಲ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಪೂವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹೆಚ್. ಅಪರ ಜಿಲ್ಲಾಧಿಕಾರಿ ಡಾ.ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದೇಶಕ ಡಾ. ರಮೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ರಾಜಕೀಯ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರದ ಪ್ರತಿಷ್ಠಿತ ಬೃಹತ್ ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಪುಣೆ, ನಾಗಪೂರ ಸೇರಿದಂತೆ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಬಿಜೆಪಿ (BJP) ಮತ್ತು ಶಿವಸೇನೆ (ಏಕನಾಥ ಸಿಂಧೆ ಬಣ) ದೊಡ್ಡ ಪ್ರಮಾಣದಲ್ಲಿ ಜಯಗಳಿಸಿದ್ದಾರೆ.

[ccc_my_favorite_select_button post_id="118518"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!