ಬೆಂ.ಗ್ರಾ.ಜಿಲ್ಲೆಯ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಿದ ಬಿಬಿಎಂಪಿ

ದೊಡ್ಡಬಳ್ಳಾಪುರ: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್-19 ಕೆಲಸ ಕಾರ್ಯಗಳಿಗೆ ನೇಮಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಿಕ್ಷಕರನ್ನು ಬಿಡುಗಡೆಗೊಳಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಆದೇಶಿಸಿದ್ದಾರೆ.

ಆದೇಶ ಪತ್ರವನ್ನು ಬಿಬಿಎಂಪಿ ವಿಶೇಷ ಆಯುಕ್ತ ಅನ್ಬುಕುಮಾರ್ ಅವರಿಂದ ರಾಜ್ಯ ಸರ್ಕಾರಿ‌ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಎಂ.ಎಸ್.ರಾಜಶೇಖರ್,ದೊಡ್ಡಬಳ್ಳಾಪುರ ತಾಲೂಕು ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ವಿ.ಧನಂಜಯ, ರಾಜ್ಯಪರಿಷತ ಸದಸ್ಯ ಟಿ.ಕೆ.ಪ್ರಕಾಶ್,ದೇವನಹಳ್ಳಿ ಸರ್ಕಾರಿ ನೌಕರರ ಸಂಘದ  ಕಾರ್ಯದರ್ಶಿ ಬಿ.ಆದರ್ಶ ಸ್ವೀಕರಿಸಿದರು.

ಆದೇಶದಲ್ಲಿರುವುದು

ಬಿಬಿಎಂಪಿ ಕಚೇರಿ ಆದೇಶದಂತೆ ಈಗಾಗಲೇ ಎರಡು ಹಂತದಲ್ಲಿ ಮತಗಟ್ಟೆ ಮಟ್ಟದ ತಂಡಗಳನ್ನು ಈಗಾಗಲೇ ರಚಿಸಿ ಆದೇಶ ಹೊರಡಿಸಲಾಗಿತ್ತು.ಅಲ್ಲದೆ ಉಪನಿರ್ದೇಶಕರು  (ಆಡಳಿತ), ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರು ಉಲ್ಲೇಖ-(2)ರ ಪತ್ರದಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ವಾಸವಿಲ್ಲದ ಶಿಕ್ಷಕರ ಮಾಹಿತಿಯನ್ನು 4 ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಿದ್ಧಪಡಿಸಿ ನೀಡಿರುತ್ತಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿಲ್ಲದ ಶಿಕ್ಷಕರಿಗೆ ವಿನಾಯಿತಿ ನೀಡಬೇಕೆಂದು ಕೋರಿರುವುದು ಸರಿಯಷ್ಟೆ.

ಈ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿಲ್ಲದ 1696 ಮಂದಿ ಶಿಕ್ಷಕರುಗಳು ವಾಸಸ್ಥಳದಿಂದ ಆಗಮಿಸಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಅನಾನುಕೂಲವಾಗುವ ದೃಷ್ಟಿಯಿಂದ ಸದರಿಯವರು ವಾಸವಿರುವ ಪ್ರದೇಶದಲ್ಲಿ ಕೋವಿಡ್-19 ಕರ್ತವ್ಯ ನಿರ್ವಹಿಸಲು ಅನುವಾಗುವಂತೆ, ಬಿಬಿಎಂಪಿ ಕೋವಿಡ್-19 ಕೆಲಸಕಾರ್ಯಗಳಿಂದ ವಿನಾಯಿತಿ ನೀಡಲಾಗಿದೆ. (ಉಪ ನಿರ್ದೇಶಕರು (ಆಡಳಿತ),ಸಾರ್ವಜನಿಕ ಶಿಕ್ಷಣ ಇಲಾಖೆ,ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರು ದಿನಾಂಕ ಜುಲೈ.17 ರ ಪತ್ರದೊಂದಿಗೆ ಸಲ್ಲಿಸಿರುವ ಪಟ್ಟಿಯಲ್ಲಿರುವ ಶಿಕ್ಷಕರುಗಳಿಗೆ ಮಾತ್ರ)

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೋವಿಡ್-19 ಕೆಲಸಕಾರ್ಯಗಳಿಂದ ವಿನಾಯತಿ ಪಡೆದಿರುವ ಶಿಕ್ಷಕರುಗಳ ಪಟ್ಟಿಯನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಕಚೇರಿಗೆ ರವಾನಿಸಿ, ಸದರಿ ಶಿಕ್ಷಕರುಗಳ ವಾಸವಾಗಿರುವ ಸಂಬಂಧಪಟ್ಟ ಜಿಲ್ಲೆಗಳಲ್ಲಿ ಶಿಕ್ಷಕರುಗಳ ಸೇವೆಯನ್ನು ಕೋವಿಡ್-19 ಕೆಲಸಕಾರ್ಯಗಳಿಗೆ ನಿಯೋಜಿಸುವ ಬಗ್ಗೆ ಅಗತ್ಯಕ್ರಮ ಕೈಗೊಳ್ಳಬೇಕೆಂದು ಉಪ ನಿರ್ದೇಶಕರು (ಆಡಳಿತ),ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರಿಗೆ ಸೂಚಿಸಿದೆ.

ರಾಜಕೀಯ

ಗ್ಯಾರಂಟಿ ಯೋಜನೆಗಳು ಮಹಿಳಾಸಮೂಹಕ್ಕೆ ವರದಾನ; ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳು ಮಹಿಳಾಸಮೂಹಕ್ಕೆ ವರದಾನ; ಮುಖ್ಯಮಂತ್ರಿ ಸಿದ್ದರಾಮಯ್ಯ

ಆರ್ಥಿಕವಾಗಿ ಶಕ್ತಿಯಿಲ್ಲದವರಿಗೆ ಗ್ಯಾರಂಟಿ ಯೋಜನೆಗಳನ್ನು ಸಮಾನವಾಗಿ ನೀಡಲಾಗಿದೆ. ಮಹಿಳೆಯರಿಗೆ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ತಾರತಮ್ಯವಿಲ್ಲದೇ ನೀಡಲಾಗುತ್ತಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121806"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]