ದೊಡ್ಡಬಳ್ಳಾಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2020ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ವಿಕಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ/ಸಂಸ್ಥೆಗಳಿಗೆ ನೀಡುವ ರಾಷ್ಟ್ರ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ನಮೂನೆಗಾಗಿ ವೆಬ್ಸೈಟ್ www.disabilityaffairs.gov.in ನಲ್ಲಿ ಪಡೆಯಬಹುದಾಗಿದೆ.
2 ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು(ವೈಯಕ್ತಿಕ ವಿಭಾಗ), ಅರ್ಜಿದಾರರ/ ವ್ಯಕ್ತಿಗಳ/ ಸಂಸ್ಥೆಗಳ ಸ್ವವಿವರ ಹಾಗೂ ಸಾಧನೆಗಳ ಸಾರಾಂಶ, ಪೂರಕ ದಾಖಲೆಗಳು ಹಾಗೂ ಡ್ರಾಫ್ಟ್ ಸೈಟೇಷನ್(1 ಪುಟಕ್ಕೆ ಮೀರದಂತೆ) ಅರ್ಜಿ ಸಲ್ಲಿಸಲು 2020ರ ಆಗಸ್ಟ್ 18 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಚೇರಿ, ಕೊಠಡಿ ಸಂಖ್ಯೆ: 03, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಹಾಗೂ ದೂ.ಸಂ.: 080-29787442 ಹಾಗೂ 080-29787441 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.