ಬೆಳೆ ಸಮೀಕ್ಷೆ ರಾಜ್ಯದ ಉತ್ಸವವಾಗಬೇಕು: ಕೃಷಿ ಸಚಿವ ಬಿ‌.ಸಿ.ಪಾಟೀಲ್

ಬೆಂಗಳೂರು: ರೈತ ಬೆಳೆ ಸಮೀಕ್ಷೆ ರಾಜ್ಯದ ಉತ್ಸವವಾಗಬೇಕು.ಬೆಳೆ ಸಮೀಕ್ಷೆಯನ್ನು ಯಶಸ್ವಿಯನ್ನಾಗಿಸಿ ಸರ್ಕಾರದ ಉತ್ಸವವನ್ನಾಗಿಸುವ ದೊಡ್ಡಮಟ್ಟದ ಸವಾಲು ಎಲ್ಲರ ಮುಂದಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲರು ಹೇಳಿದ್ದಾರೆ.

ಕೃಷಿ ಇಲಾಖೆಯ ಸಮೃದ್ಧಿ ಸಭಾಂಗಣದಲ್ಲಿ ಗುರುವಾರ ರಾಜ್ಯದ ಎಲ್ಲಾ ಜಂಟಿ ಕೃಷಿ ನಿರ್ದೇಶಕರು, ಜಿಲ್ಲಾಧಿಕಾರಿಗಳು, ಕೆವಿಕೆ ಸೇರಿದಂತೆ ಕೃಷಿ ಅಧಿಕಾರಿಗಳ ಜೊತೆ ಕೃಷಿ ಸಚಿವರು, ಸರ್ಕಾರದ ಮುಖ್ಯಕಾರ್ಯದರ್ಶಿಗಳ ಜೊತೆ ವಿಡಿಯೋ ಸಂವಾದ ನಡೆಸಲಾಯಿತು.

ಬೆಳೆ ಸಮೀಕ್ಷೆ ಕಂದಾಯ, ತೋಟಗಾರಿಕೆ, ಕೃಷಿ ಇಲಾಖೆಯ ಕೆಲಸವೆಂದು ವರ್ಗೀಕರಿಸುವುದು‌ ಬೇಡ‌.ಇದು ಸರ್ಕಾರದ ಕೆಲಸವೆಂದು ಒಗ್ಗಟ್ಟಾಗಿ ಎಲ್ಲರೂ ಪಾಲ್ಗೊಂಡು ಬೆಳೆ ಸಮೀಕ್ಷೆಯನ್ನು ಆಯಾ ರೈತರಿಂದಲೇ ಮಾಡಿಸಿಅಪ್ಲೋಡ್ ಮಾಡಿಸಬೇಕು‌.

ಸ್ವಾಭಿಮಾನಿ ರೈತ ತನ್ನ ಹೊಲದ ಸಮೀಕ್ಷೆಯನ್ನು ತಾನೇ ನಡೆಸಿ ರೈತನೇ ಸರ್ಟಿಫಿಕೇಟ್ ಕೊಡುವಂತಹ ವಿಶೇಷ ಯೋಜನೆಯಿದು. ತಾಲೂಕಿನ ಎಡಿಎಗಳು ಸ್ಥಳೀಯ ಶಾಸಕರನ್ನು ರೈತರ ಹೊಲಕ್ಕೆ ಕರೆದುಕೊಂಡು ಹೋಗಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಫೋಟೋ ಅಪ್ಲೋಡ್ ಮಾಡಿಸಬೇಕು.ತೋಟಗಾರಿಕೆ ಮತ್ತು ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಗಳು ಪ್ರೊಪೆಸರ್‌ಗಳನ್ನು ಸಹಾಯಕ ಪ್ರೊಪೆಸರ್‌ಗಳನ್ನು ಸಹ ರೈತ ಬೆಳೆ ಸಮೀಕ್ಷೆ ಆ್ಯಪ್ ಪ್ರಚಾರಕ್ಕೆ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳ ವಾಟ್ಸಪ್ ಗ್ರೂಪ್ ರಚಿಸಿ ಕೃಷಿ ತೋಟಗಾರಿಕಾ ವಿದ್ಯಾರ್ಥಿಗಳು ರೈತರು ಬೆಳೆಸಮೀಕ್ಷೆ ಆಪ್ ಡೌನ್ಲೋಡ್ ಬೆಳೆ ವಿವರ ಅಪ್ಲೋಡ್ ಮಾಡಲು ನೆರವಾಗುವಂತೆ ಹೇಳಬೇಕು. ಸಾಮಾಜಿಕ ಜಾಲತಾಣಗಳನ್ನು ಪ್ರಚಾರಕ್ಕೆ ಬಳಸಿಕೊಳ್ಳಬೇಕು, ಸಹಕಾರಿ ಸಂಘಗಳು ಹಾಲು ಉತ್ಪಾದಕ ಸಂಘಗಳ ಪ್ರತಿನಿಧಿಗಳನ್ನು ಹಾಗೂ ಕೃಷಿ ಇಲಾಖೆಯಲ್ಲಿರುವ ಹತ್ತು ಸಾವಿರ ಅಧಿಕಾರಿಗಳನ್ನು ಬಳಸಿಕೊಂಡು ಹೆಚ್ಚೆಚ್ಚು ಬೆಳೆ ಸಮೀಕ್ಷೆಯಾಗುವಂತೆ ನೋಡಿಕೊಳ್ಳಬೇಕು.ಬೆಳೆ ಸಮೀಕ್ಷೆ ಆ್ಯಪ್ ಹಾಗೂ ರೈತರೇ ತಮ್ಮ ಬೆಳೆ ಸಮೀಕ್ಷೆ ವಿವರ ದಾಖಲಿಸುವಂತೆ ಮಾಡಬೇಕು.ರೈತರೇ ನೇರವಾಗಿ ಆ್ಯಪ್‌ನಲ್ಲಿ ವಿವರ ದಾಖಲಿಸುವಂತೆ ಮಾಡಬೇಕು.ಇದು ಬೆಳೆ ಸಮೀಕ್ಷೆ ಸರ್ಕಾರದ ಹಬ್ಬವಾಗಬೇಕು.ಇದಕ್ಕಾಗಿಯೇ ಬೆಳೆ ಸಮೀಕ್ಷೆಯನ್ನು ಉತ್ಸವ-2020 ಎಂದು ಕರೆಯಲಾಗಿದೆ ಎಂದು ಸಚಿವರು ವಿವರಿಸಿದರು‌.

ವಿಡಿಯೋ ಸಂವಾದವನ್ನುದ್ದೇಶಿಸಿ ಮಾತನಾಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್,ಕಳೆದ ಮೂರು ವರ್ಷಗಳಿಂದ ತಂತ್ರಜ್ಞಾನದ ಮೂಲಕ ಬೆಳೆ ಸಮೀಕ್ಷೆ ರಾಜ್ಯದಲ್ಲಿ ಯಶಸ್ವಿಯಾಗುತ್ತಾ ಬಂದಿದೆ.ರಾಷ್ಟ್ರೀಯಮಟ್ಟದಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕದ ಬೆಳೆ ಸಮೀಕ್ಷೆಗೆ ಉತ್ತಮ ಪ್ರಶಂಸೆ ದೊರೆತಿದೆ.ಕೇಂದ್ರದ ಕಾರ್ಯದರ್ಶಿಗಳಿಗೆ ರಾಜ್ಯದ ಬೆಳೆ ಸಮೀಕ್ಷೆ ಆ್ಯಪ್ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗಿತ್ತು. ಬೆಳೆ ಆ್ಯಪ್ ಬಳಕೆ, ಪ್ರಯೋಜನ, ರೈತರಿಗಾಗುವ ಲಾಭ,ಇಲಾಖೆಗಾಗುವ ಆರ್ಥಿಕ ಲಾಭವನ್ನು ಕಂಡು ಕೇಂದ್ರ ಸರ್ಕಾರ ಕರ್ನಾಟಕದಲ್ಲಿನ ಬೆಳೆ ಸಮೀಕ್ಷೆ ಆ್ಯಪ್ ಅನ್ನು ದೇಶದ ಇತರೆ ರಾಜ್ಯಗಳಿಗೂ ವಿಸ್ತರಿಸಲು ಮುಂದಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ತಂತ್ರಜ್ಞಾನವನ್ನು ಬಳಸಿ ಬೆಳೆ ಸಮೀಕ್ಷೆ ಮಾಡಿರುವುದು ಬಹಳ ಲಾಭದಾಯಕಾರಿಯಾಗಿದ್ದು, ತಂತ್ರಜ್ಞಾನದ ಬೆಳೆ ಸಮೀಕ್ಷೆಯಿಂದ ಸುಮಾರು 7ಲಕ್ಷ ಮೆಕ್ಕೆಜೋಳ ಬೆಳೆದ ರೈತರ ಖಾತೆಗೆ ನೇರವಾಗಿ ಸರ್ಕಾರದ ಸಹಾಯಧನ ವರ್ಗಾಯಿಸಲು ಅನುಕೂಲವಾಗಿದೆ.ಅದರಂತೆ ಹಣ್ಣು,ಹೂವು,ತರಕಾರಿ ಬೆಳೆದ ರೈತರಿಗೆ ಸೂಕ್ತ ಪ್ಯಾಕೇಜ್ ಘೋಷಿಸಲು ಸಹಾಯಕವಾಯಿತು‌.ರೈತರು ಮನೆಯಿಂದ ಹೊರಗೆ ಹೋಗದೇ ಅವರ ಖಾತೆಗೆ ಹಣ ಜಮೆಯಾಗಲು ಈ ತಂತ್ರಜ್ಞಾನದಿಂದ ಬೆಳೆ ಸಮೀಕ್ಷೆ ನಡೆಸಲಾಗಿದೆ. ಕಳೆದ ವರ್ಷ 2 ಕೋಟಿ 10 ಲಕ್ಷ ಸರ್ವೆ ನಂಬರ್ ಗಳನ್ನು ಸಮೀಕ್ಷೆ ನಡೆಸಲಾಗಿದೆ.ಈ ವರ್ಷ ರೈತ ಬೆಳೆ ಸಮೀಕ್ಷೆ ಆ್ಯಪ್ ಬಳಸಿ ಕಳೆದ ವರ್ಷಕ್ಕಿಂತಲೂ ಇನ್ನೂ 

ಹೆಚ್ಚಿನ ಬೆಳೆ ಸಮೀಕ್ಷೆ ನಡೆಸಬೇಕೆಂದು ವಿಜಯ್ ಭಾಸ್ಕರ್ ಅವರು ಸೂಚಿಸಿದರು.

ಕೃಷಿ ಇಲಾಖೆ ನಿರ್ದೇಶ ಶ್ರೀನಿವಾಸ್ ಪ್ರಾಸ್ತಾವಿಕ ಮಾತನಾಡಿ, ಬೆಳೆ ಸಮೀಕ್ಷೆ ಯಶಸ್ವಿಯಾಗುವಂತೆ ಎಲ್ಲರೂ ನೋಡಿಕೊಳ್ಳಬೇಕು.ಆಗಸ್ಟ್ 24ರೊಳಗೆ ಸಮೀಕ್ಷೆ ಪೂರ್ಣ ಹಾಗೂ ಯಶಸ್ವಿಯಾಗುವಂತೆ ನೋಡಿಕೊಳ್ಳಬೇಕು.ಗ್ರಾಮಮಟ್ಟದಿಂದ ರಾಜ್ಯಮಟ್ಟದವರೆಗಿನ ಎಲ್ಲಾ ಸಮಿತಿಗಳು ಸಮೀಕ್ಷೆಯ ಸಫಲತೆ ಹಾಗೂ ಪೂರ್ಣತೆಗೆ ದುಡಿಯಬೇಕೆಂದು ಕರೆ ನೀಡಿದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!