ಕರೊನಾ ಸೋಂಕಿನಿಂದ ದೊಡ್ಡಬಳ್ಳಾಪುರವನ್ನು ರಕ್ಷಸಿಕೊಳ್ಳಬೇಕಾದ ಹೊಣೆ ನಮ್ಮದು: ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ಕರೊನಾದಿಂದ ನಮ್ಮ ದೇಶ ಹಾಗೂ ತಾಲೂಕನ್ನು ರಕ್ಷಸಿಕೊಳ್ಳಬೇಕಾದ ಹೊಣೆ ಪ್ರತಿಯೊಬ್ವರು ಹೊರಬೇಕಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.

74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು,ಕರೊನಾ ಸೋಂಕಿನ ನಿರ್ವಹಣೆ ತಾಲೂಕು ಆಡಳಿತಕ್ಕೆ ಕಷ್ಟವಾಗಲಿಲ್ಲ,ಹಿಂದಿನ ಸರ್ಕಾರದ ಅವದಿಯಲ್ಲಿ ಸುಸಜ್ಜಿತ ತಾಯಿ ಮಗು ಆಸ್ಪತ್ರೆ ನಿರ್ಮಾಣ, ವಸತಿ ಶಾಲೆಗಳ ನಿರ್ಮಾಣದಿಂದ ಕರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುಕೂಲವಾಯಿತಾದರು ಅಧಿಕಾರಿ ಶ್ರಮ ಅಪಾರ ಎಂದರು.

ಕಳೆದ 74 ವರ್ಷಗಳಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳಷ್ಟು ಸಡಗರ, ಸಂಭ್ರಮದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಕುರಿತು ನಮ್ಮ ಮಕ್ಕಳಿಗೆ ತಿಳಿಸುತ್ತಾ ಬಂದಿದ್ದೇವೆ.ಆದರೆ,ಕರೊನಾ ಸೋಂಕಿನ ಕಾರಣ ಈ ವರ್ಷ ಆ ಎಲ್ಲಾ ಕಾರ್ಯಗಳು ವಿರಳವಾಗಿದೆ.ಸ್ವಾತಂತ್ರ್ಯ ನಂತರ ದೇಶ ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಮಹಾಮಾರಿ ಕರೊನಾ ಸೋಂಕು ಸಹ ಒಂದಾಗಿದ್ದು.ನಮ್ಮ ದೇಶವನ್ನು ಕರೊನಾದಿಂದ ರಕ್ಷಿಸಿಕೊಳ್ಳುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದ ಅವರು.ಎಸ್ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ನೆನೆದರು.

ದ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದ  ಉಪವಿಭಾಗಾಧಿಕಾರಿ ಅರುಳ್ ಕುಮಾರ್,ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ವಾತಂತ್ರ್ಯ ದಿನಾಚರಣೆ ಸಂಧರ್ಭದಲ್ಲಿ ನೆನೆಯಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು. ಬಾಬ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರಚಿತ ಸಂವಿಧಾನದ ಅಡಿಯಲ್ಲಿ ಸರ್ವರಿಗೂ ಸಮಪಾಲು,ಸರ್ವರಿಗೂ ಸಮಬಾಳು ಎಂಬಂತೆ ದೇಶದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ತಲುಪಬೇಕಿದೆ ಎಂದರು.ನೇರೆ ರಾಷ್ಟ್ರಗಳ ಕಿತಾಪತಿಯನ್ನು ನಮ್ಮ ವೀರ ಯೋಧರು ದಿಟ್ಟವಾಗಿ ಎದುರುಸುತ್ತಿದ್ದು ಅವರ ತ್ಯಾಗ ಬಲಿದಾನ ಅಪಾರವಾಗಿದ್ದು ಅವರನ್ನು ನೆನೆಯಬೇಕಿದೆ.

ಈಡೀ ಪ್ರಪಂಚ ಕರೊನಾ ಸೋಂಕಿನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು ಅದನ್ನು ಭಾರತೀಯರು ಬಹಳಷ್ಟು ಮುಂಜಾಗ್ರತೆವಹಿಸಿ ದಿಟ್ಟ ಉತ್ತರ ನೀಡುತ್ತಿದ್ದು,ಮುಂದಿನ ದಿನಗಳಲ್ಲಿ ಕರೊನಾದಿಂದ ಜೀವ ರಕ್ಷಣೆ ಮಾಡಿಕೊಂಡು ದೇಶದ ಆರ್ಥಿಕ ಅಭಿವೃದ್ಧಿಗೆ ನಮ್ಮ ಪಾತ್ರ ಅಪಾರವಾಗಿದೆ.

ಕೃಷಿ ತಂತ್ರಜ್ಞಾನ,ಕೈಗಾರಿಕೆಯಲ್ಲಿ ಹೆಚ್ಚಿನ ಅಭಿವೃದ್ಧಿಗೆ ಶ್ರಮಿಸಬೇಕಿದೆ. ಕರೊನಾದಿಂದ ಉಂಟಾಗಿರುವ ಉದ್ಯೋಗ ಕಡಿತಕ್ಕೆ ಪರ್ಯಾಯವಾಗಿ ಕೌಶಲ್ಯ ಅಭಿವೃದ್ಧಿ ಯೋಜನೆಯನ್ನು ಬಳಸಿಕೊಳ್ಳಬೇಕಿದೆ ಆಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡಿರುವ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕ ಅಭಿವೃದ್ಧಿ ಪಡೆಯಬೇಕಿದೆ ಎಂದರು.

ಕ್ಷೇತ್ರಶಿಕ್ಷಣಾಧಿಕಾರಿ ಬೈಯಪ್ಪರೆಡ್ಡಿ ಮಾತನಾಡಿ, ಕರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸರಳವಾಗಿ ಆಚರಿಸಲಾಗಿದೆ ಎಂದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷೆ ರತ್ನಮ್ಮ ಹೆಚ್.ಪಿ.ಜಯರಾಂ, ಉಪಾಧ್ಯಕ್ಷೆ ಪದ್ಮಾವತಿ ಅಣ್ಣಯ್ಯಪ್ಪ, ಸರ್ಕಲ್ ಇನ್ಸ್ಪೆಕ್ಟರ್ ರಾಘವ ಎಸ್.ಗೌಡ,ತಾಪ ಇಒ ಮುರುಡಯ್ಯ, 

ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್,ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಎಪಿಎಂಸಿ ಅಧ್ಯಕ್ಷ ವಿಶ್ವನಾಥ್ ರೆಡ್ಡಿ,ಉಪಾಧ್ಯಕ್ಷ ಮಂಜುನಾಥ್ ಮತ್ತಿತರಿದ್ದರು.

ಇದೇ ವೇಳೆ ಕರೊನಾ ನಿಯಂತ್ರಣಕ್ಕಾಗಿ ಶ್ರಮಿಸಿದ ಕರೊನಾ ವಾರಿಯರ್ಸ್‌ಗಳನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಸನ್ಮಾನಿಸಲಾಯಿತು.

ರಾಜಕೀಯ

ದೊಡ್ಡಬಳ್ಳಾಪುರ: 134 ಎಕರೆ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ..?

ದೊಡ್ಡಬಳ್ಳಾಪುರ: 134 ಎಕರೆ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ..?

ಬೆಳಗಾವಿ: ಬಿಬಿಎಂಪಿ (BBMP) ತ್ಯಾಜವಿಲೇವಾರಿ ಘಟಕದಿಂದ ದೊಡ್ಡಬಳ್ಳಾಪುರ ತಾಲೂಕಿನ ಜನತೆ ನೆಮ್ಮದಿ ಕಳೆದುಕೊಂಡಿರುವ ಬೆನ್ನಲ್ಲೇ, ಗುಂಡ್ಲಹಳ್ಳಿ ಸಮೀಪ 134.10 ಎಕರೆ ಜಮೀನಿನಲ್ಲಿ ಮತ್ತೆ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ (Terraforma Waste Disposal Unit)

[ccc_my_favorite_select_button post_id="117199"]
23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಎಚ್.ಕೆ.ಪಾಟೀಲ್

23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಎಚ್.ಕೆ.ಪಾಟೀಲ್

23 ಕಂಬಳೋತ್ಸವಗಳಿಗೆ ಸರ್ಕಾರದಿಂದ ತಲಾ ರೂ.5 ಲಕ್ಷ ಅನುದಾನ ಬಿಡುಗಡೆ ಮಾಡುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ (H.K. Patil) ಹೇಳಿದರು.

[ccc_my_favorite_select_button post_id="117203"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

"ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="117115"]
ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು ಸೇರಿ 3 ಕಡೆ ಮಾಂಗಲ್ಯ ಸರ ಕಳವು

ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು

ಕೆಲ ದಿನಗಳಿಂದ ಸದ್ದಡಗಿದ್ದ ಸರ ಕಳ್ಳರ ಹಾವಳಿ ತಾಲೂಕಿನಲ್ಲಿನ ಮತ್ತೆ ಕೇಳಿ ಬಂದಿದ್ದು, 24 ಗಂಟೆ ಅವಧಿಯಲ್ಲಿ ದೊಡ್ಡಬಳ್ಳಾಪುರದ ಎರಡು ಕಡೆ ಮಾಂಗಲ್ಯ ಸರ (Mangalya chain) ಕಳ್ಳತನ (Theft) ನಡೆದಿರುವುದು ವರದಿಯಾಗಿದೆ.

[ccc_my_favorite_select_button post_id="117099"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ಸಿನಿಮಾ ಬಿಡುಗಡೆ ವೇಳೆ ದರ್ಶನ್ ವಿರುದ್ಧ ಮಾಧ್ಯಮಗಳ ಸುಳ್ಳು ಸುದ್ದಿ: ಇದೇನಾ..? ಪತ್ರಿಕೋದ್ಯಮ ಎಂದು ವಿಜಯಲಕ್ಷ್ಮಿ ದರ್ಶನ್ ಕಿಡಿ

ಸಿನಿಮಾ ಬಿಡುಗಡೆ ವೇಳೆ ದರ್ಶನ್ ವಿರುದ್ಧ ಮಾಧ್ಯಮಗಳ ಸುಳ್ಳು ಸುದ್ದಿ: ಇದೇನಾ..? ಪತ್ರಿಕೋದ್ಯಮ

ಅಭಿಮಾನಿಗಳ ದಾಸ, ಚಾಲೆಂಜಿಗ್ ಸ್ಟಾರ್ ದರ್ಶನ್ (Darshan) ಅಭಿನಯದ, ಪ್ರಕಾಶ್ ವೀರ್ ನಿರ್ದೇಶನದ ''ದಿ ಡೆವಿಲ್' (The Devil) ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ.

[ccc_my_favorite_select_button post_id="117208"]
error: Content is protected !!