ಬಿಜೆಪಿ ಸರ್ಕಾರದಿಂದ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸ: ಸಿದ್ದರಾಮಯ್ಯ ಆರೋಪ

ಬೆಂಗಳೂರು: ಕಾವಲಭೈರಸಂದ್ರ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಯೋಜಿತ ರೀತಿಯಲ್ಲಿ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಗಲಭೆ ಕುರಿತು ಕಾಂಗ್ರೆಸ್ ಪಕ್ಷದ ಹಾಲಿ‌ ಮತ್ತು ಮಾಜಿ ಕಾರ್ಪೊರೇಟರ್ಗಳನ್ನು ತನಿಖೆಗೆ ಒಳಪಡಿಸಿರುವ ಬೆನ್ನಲ್ಲೆ, ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು. ದಿನಕ್ಕೊಬ್ಬ ಸಚಿವರು, ಶಾಸಕರು ಭೇಟಿ ನೀಡಿ, ಗಲಭೆಗೆ ಎಸ್‌ಡಿಪಿಐ, ಕಾಂಗ್ರೆಸ್, ಭಯೋತ್ಪಾದಕರು ಕಾರಣ

ಎಂದು ನೀಡುತ್ತಿರುವ ತರಹೇವಾರಿ ಹೇಳಿಕೆಗಳೇ ಇದಕ್ಕೆ ಸಾಕ್ಷಿ ಎಂದಿದ್ದಾರೆ.

ಗಲಭೆಯ ಹಿಂದಿನ ಅಪರಾಧಿಗಳನ್ನು ಪತ್ತೆ ಹಚ್ಚುವುದಕ್ಕಿಂತ ಹೆಚ್ಚು ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಿಲುಕಿಸುವುದು ಹೇಗೆ? ಇದನ್ನು ಕೋಮುಗಲಭೆ ಎಂದು ಬಣ್ಣಿಸಿ ರಾಜಕೀಯ ಲಾಭ ಗಳಿಸುವುದು ಹೇಗೆ? ಎನ್ನುವ ಬಗ್ಗೆ ಬಿಜೆಪಿ ನಾಯಕರು ತಲೆಕೆಡಿಸಿಕೊಂಡಿದ್ದಾರೆ. .ಬಿಜೆಪಿ ಸ್ಪಷ್ಟವಾಗಿ ಎರಡು ಗುಂಪುಗಳಾಗಿ ಒಡೆದುಹೋಗಿದೆ. ಯಡಿಯೂರಪ್ಪ ಅವರ ಪದಚ್ಯುತಿಗೆ ಕೆಲವು ಆರ್ ಎಸ್ ಎಸ್ ಸಮೀಪವರ್ತಿ ನಾಯಕರು ನಡೆಸುತ್ತಿರುವ ಪ್ರಯತ್ನಕ್ಕೆ ಕೆಜೆಹಳ್ಳಿ-ಡಿಜೆಹಳ್ಳಿ ಪ್ರಕರಣವನ್ನು ಯಥೇಚ್ಚವಾಗಿ ಬಳಸಲಾಗುತ್ತಿದೆ.

ರಾಜ್ಯದಲ್ಲಿ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿರುವ ನಮ್ಮದೇ ಪಕ್ಷದ ಶಾಸಕರು ಮತ್ತು ನಮ್ಮ ಪಕ್ಷದ ಕಾರ್ಪೋರೇಟರ್‌ಗಳು ಇರುವಾಗ  ಕಾವಲಭೈರಸಂದ್ರ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇರುವ ಆಸಕ್ತಿಯಾದರು ಏನು? ಅಲ್ಲಿ ಚುನಾವಣೆಯಲ್ಲಿ ಎದುರಿಸಲಾಗದ

ರಾಜಕೀಯ ಪಕ್ಷಗಳೇ ಪ್ರಕರಣದ

ರಾಜಕೀಯ ಲಾಭ ಪಡೆಯಲು ಹೊರಟಿರುವುದು ಸ್ಪಷ್ಟ. ಕಾವಲಭೈರಸಂದ್ರ ಗಲಭೆಯ ನಿಜವಾದ ತನಿಖೆ  ಬಿಜೆಪಿ ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯದಿಂದ ಶುರುವಾಗಬೇಕು. ಸರ್ಕಾರದ ಪ್ರಕಾರ

ಇದು ಪೂರ್ವಯೋಜಿತ ಕೃತ್ಯವಾಗಿದ್ದರೆ ಅದು ಯಾಕೆ ಪೊಲೀಸರ ಗಮನಕ್ಕೆ ಬಂದಿಲ್ಲ? ಪ್ರಚೋದನಕಾರಿ ಪೋಸ್ಟ್ ಹಾಕಿರುವ ನವೀನ್ ವಿರುದ್ಧ ಪ್ರಕರಣ ದಾಖಲಿಸಲು ವಿಳಂಬಕ್ಕೆ ಯಾರು ಕಾರಣ?

ಎಸ್‌ಡಿಪಿಐ ನಾಯಕರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಿ, ಆ ಸಂಘಟನೆ ತಪ್ಪು ಮಾಡಿದ್ದರೆ ಅದರ ವಿರುದ್ಧ ಕ್ರಮಕೈಗೊಳ್ಳಿ. ಮುಸ್ಲಿಂ ಮತಗಳನ್ನು ಒಡೆಯಲು ಎಸ್‌ಡಿಪಿಐ ಅನ್ನು ಯೋಜಿತ ರೀತಿಯಲ್ಲಿ ಬಳಸಿಕೊಳ್ಳುತ್ತಾ ಬಂದಿರುವ ಬಿಜೆಪಿಗೆ ಅದನ್ನು ನಿಷೇಧಿಸುವ ಧೈರ್ಯ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ

ರೂಪಾಯಿ ಕುಸಿಯುತ್ತಿಲ್ಲ.. ಡಾಲರ್ ಬಲಗೊಳ್ಳುತ್ತಿದೆ: ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥನೆ

ರೂಪಾಯಿ ಕುಸಿಯುತ್ತಿಲ್ಲ.. ಡಾಲರ್ ಬಲಗೊಳ್ಳುತ್ತಿದೆ: ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥನೆ

ರೂಪಾಯಿ (Rupee) ಮೌಲ್ಯ ಕುಸಿಯುತ್ತಿಲ್ಲ, ಡಾಲರ್ (Dollar) ಮೌಲ್ಯ ಬಲಗೊಳ್ಳುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳುವ ಮೂಲಕ ವಿರೋಧ ಪಕ್ಷಗಳ ಟೀಕೆಗೆ ಕಾರಣವಾಗಿದ್ದಾರೆ.

[ccc_my_favorite_select_button post_id="120583"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]