ಬಿಜೆಪಿ ಸರ್ಕಾರದಿಂದ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸ: ಸಿದ್ದರಾಮಯ್ಯ ಆರೋಪ

ಬೆಂಗಳೂರು: ಕಾವಲಭೈರಸಂದ್ರ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಯೋಜಿತ ರೀತಿಯಲ್ಲಿ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಗಲಭೆ ಕುರಿತು ಕಾಂಗ್ರೆಸ್ ಪಕ್ಷದ ಹಾಲಿ‌ ಮತ್ತು ಮಾಜಿ ಕಾರ್ಪೊರೇಟರ್ಗಳನ್ನು ತನಿಖೆಗೆ ಒಳಪಡಿಸಿರುವ ಬೆನ್ನಲ್ಲೆ, ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು. ದಿನಕ್ಕೊಬ್ಬ ಸಚಿವರು, ಶಾಸಕರು ಭೇಟಿ ನೀಡಿ, ಗಲಭೆಗೆ ಎಸ್‌ಡಿಪಿಐ, ಕಾಂಗ್ರೆಸ್, ಭಯೋತ್ಪಾದಕರು ಕಾರಣ

ಎಂದು ನೀಡುತ್ತಿರುವ ತರಹೇವಾರಿ ಹೇಳಿಕೆಗಳೇ ಇದಕ್ಕೆ ಸಾಕ್ಷಿ ಎಂದಿದ್ದಾರೆ.

ಗಲಭೆಯ ಹಿಂದಿನ ಅಪರಾಧಿಗಳನ್ನು ಪತ್ತೆ ಹಚ್ಚುವುದಕ್ಕಿಂತ ಹೆಚ್ಚು ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಿಲುಕಿಸುವುದು ಹೇಗೆ? ಇದನ್ನು ಕೋಮುಗಲಭೆ ಎಂದು ಬಣ್ಣಿಸಿ ರಾಜಕೀಯ ಲಾಭ ಗಳಿಸುವುದು ಹೇಗೆ? ಎನ್ನುವ ಬಗ್ಗೆ ಬಿಜೆಪಿ ನಾಯಕರು ತಲೆಕೆಡಿಸಿಕೊಂಡಿದ್ದಾರೆ. .ಬಿಜೆಪಿ ಸ್ಪಷ್ಟವಾಗಿ ಎರಡು ಗುಂಪುಗಳಾಗಿ ಒಡೆದುಹೋಗಿದೆ. ಯಡಿಯೂರಪ್ಪ ಅವರ ಪದಚ್ಯುತಿಗೆ ಕೆಲವು ಆರ್ ಎಸ್ ಎಸ್ ಸಮೀಪವರ್ತಿ ನಾಯಕರು ನಡೆಸುತ್ತಿರುವ ಪ್ರಯತ್ನಕ್ಕೆ ಕೆಜೆಹಳ್ಳಿ-ಡಿಜೆಹಳ್ಳಿ ಪ್ರಕರಣವನ್ನು ಯಥೇಚ್ಚವಾಗಿ ಬಳಸಲಾಗುತ್ತಿದೆ.

ರಾಜ್ಯದಲ್ಲಿ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿರುವ ನಮ್ಮದೇ ಪಕ್ಷದ ಶಾಸಕರು ಮತ್ತು ನಮ್ಮ ಪಕ್ಷದ ಕಾರ್ಪೋರೇಟರ್‌ಗಳು ಇರುವಾಗ  ಕಾವಲಭೈರಸಂದ್ರ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇರುವ ಆಸಕ್ತಿಯಾದರು ಏನು? ಅಲ್ಲಿ ಚುನಾವಣೆಯಲ್ಲಿ ಎದುರಿಸಲಾಗದ

ರಾಜಕೀಯ ಪಕ್ಷಗಳೇ ಪ್ರಕರಣದ

ರಾಜಕೀಯ ಲಾಭ ಪಡೆಯಲು ಹೊರಟಿರುವುದು ಸ್ಪಷ್ಟ. ಕಾವಲಭೈರಸಂದ್ರ ಗಲಭೆಯ ನಿಜವಾದ ತನಿಖೆ  ಬಿಜೆಪಿ ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯದಿಂದ ಶುರುವಾಗಬೇಕು. ಸರ್ಕಾರದ ಪ್ರಕಾರ

ಇದು ಪೂರ್ವಯೋಜಿತ ಕೃತ್ಯವಾಗಿದ್ದರೆ ಅದು ಯಾಕೆ ಪೊಲೀಸರ ಗಮನಕ್ಕೆ ಬಂದಿಲ್ಲ? ಪ್ರಚೋದನಕಾರಿ ಪೋಸ್ಟ್ ಹಾಕಿರುವ ನವೀನ್ ವಿರುದ್ಧ ಪ್ರಕರಣ ದಾಖಲಿಸಲು ವಿಳಂಬಕ್ಕೆ ಯಾರು ಕಾರಣ?

ಎಸ್‌ಡಿಪಿಐ ನಾಯಕರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಿ, ಆ ಸಂಘಟನೆ ತಪ್ಪು ಮಾಡಿದ್ದರೆ ಅದರ ವಿರುದ್ಧ ಕ್ರಮಕೈಗೊಳ್ಳಿ. ಮುಸ್ಲಿಂ ಮತಗಳನ್ನು ಒಡೆಯಲು ಎಸ್‌ಡಿಪಿಐ ಅನ್ನು ಯೋಜಿತ ರೀತಿಯಲ್ಲಿ ಬಳಸಿಕೊಳ್ಳುತ್ತಾ ಬಂದಿರುವ ಬಿಜೆಪಿಗೆ ಅದನ್ನು ನಿಷೇಧಿಸುವ ಧೈರ್ಯ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣಾ ಕಣದಲ್ಲಿ ಸೋಮವಾರದಿಂದ ಜೆಡಿಎಸ್ (JDS) ಅಭ್ಯರ್ಥಿಗಳ ಪರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B. Mune Gowda) ಅವರು ಮತಯಾಚನೆಗೆ ಚಾಲನೆ ನೀಡಿದ್ದಾರೆ.

[ccc_my_favorite_select_button post_id="117387"]
ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="117359"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಅಮೆಚೂರ್ ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ಜಾಲ್ಗೊಂನ್ ನಲ್ಲಿ ನಡೆದ 5ನೇ ಫೆಡರೇಶನ್ ಕಪ್ ನ್ಯಾಷನಲ್ ಕಬ್ಬಡಿ ಚಾಂಪಿಯನ್ ಶಿಪ್ ನಲ್ಲಿ (Kabbadi Championship) ಭಾಗವಹಿಸಿದ ಕರ್ನಾಟಕದ ಕಬ್ಬಡಿ ತಂಡ ಕಂಚಿನ

[ccc_my_favorite_select_button post_id="117398"]
ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ಘಾಟಿ ಸುಬ್ರಹ್ಮಣ್ಯ ರಸ್ತೆಯಲ್ಲಿನ ಹಾಡೋನಹಳ್ಳಿಯ ಚೌಡೇಶ್ವರಿ ದೇವಸ್ಥಾನದಲ್ಲಿ (Chowdeshwari Temple) ಮತ್ತೆ ಕಳ್ಳತನ ಪ್ರಕರಣ ನಡೆದಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

[ccc_my_favorite_select_button post_id="117382"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]