ಬೆಂ.ಗ್ರಾ.ಜಿಲ್ಲೆ: ಪರಿಹಾರಧನಕ್ಕಾಗಿ ಹೂ ಬೆಳೆಗಾರರು ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ದೊಡ್ಡಬಳ್ಳಾಪುರ: ಕೋವಿಡ್-19 ಹಿನ್ನೆಲೆಯಲ್ಲಿ ಹೂವು ಬೆಳೆದ ರೈತರಿಗೆ ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೇ ನಷ್ಟವಾಗಿದ್ದು, ರೈತರಿಗೆ ಆಗಿರುವ ನಷ್ಟಕ್ಕೆ ಪರಿಹಾರವಾಗಿ ಹೂ ಬೆಳೆಗಾರರಿಗೆ ಪರಿಹಾರಧನ ಕಾರ್ಯಕ್ರಮದಡಿ ಕರ್ನಾಟಕ ಸರ್ಕಾರದ ಇ-ಆಡಳಿತ ವತಿಯಿಂದ ಕೈಗೊಳ್ಳಲಾದ 2019-20ನೇ ಸಾಲಿನ ಬೆಳೆ ಸಮೀಕ್ಷೆಯ ಮಾಹಿತಿಯನ್ನು ಆಧರಿಸಿ ಪರಿಹಾರಧನ ನೀಡಲಾಗುತ್ತಿದೆ.

  ಸದರಿ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆರ್ಥಿಕ ರೂ.473.15 ಲಕ್ಷಗಳ ಗುರಿ ನಿಗದಿಪಡಿಸಿ ಅನುದಾನ ಬಿಡುಗಡೆ ಮಾಡಲಾಗಿದೆ. ಈಗಾಗಲೇ ಬೆಳೆ ಸಮೀಕ್ಷೆಯಲ್ಲಿರುವ ಎಫ್.ಐ.ಡಿ.(FID) ಸಂಖ್ಯೆ ಹೊಂದಿರುವ ಮತ್ತು ಎಫ್.ಐ.ಡಿ.(FID) ಸಂಖ್ಯೆ ಹೊಂದಿಲ್ಲದಿರುವ ರೈತರಿಗೆ ಸಹಾಯಧನ ನೀಡಲಾಗುತ್ತಿದ್ದು, ಎಫ್.ಐ.ಡಿ.(FID) ಸಂಖ್ಯೆ ಹೊಂದಿಲ್ಲದ ರೈತರು 2020ರ ಜೂನ್ 26 ರೊಳಗಾಗಿ ಸೂಕ್ತ ದಾಖಲಾತಿಗಳನ್ನು ಸಲ್ಲಿಸಿ ಎಫ್.ಐ.ಡಿ.(FID) ಯನ್ನು ಸೃಷ್ಟಿಸಿ ಯೋಜನೆಯ ಉಪಯೋಗ ಪಡೆಯಲು ಈಗಾಗಲೇ ಈ ಹಿಂದೆ ತಿಳಿಸಲಾಗಿತ್ತಾದರೂ, ಹೆಚ್ಚಿನ ಸಂಖ್ಯೆಯಲ್ಲಿ ಯಾರೂ ದಾಖಲಾತಿಗಳನ್ನು ಸಲ್ಲಿಸದ ಕಾರಣ ಬಿಡುಗಡೆಯಾದ ಅನುದಾನವು ವ್ಯರ್ಥಗತವಾಗುತ್ತಿದೆ.

  ಆದಕಾರಣ ಬೆಳೆ ಸಮೀಕ್ಷೆಯಲ್ಲಿರುವ ಎಫ್.ಐ.ಡಿ.(FID) ಸಂಖ್ಯೆ ಹೊಂದಿಲ್ಲದ ರೈತ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಆರ್.ಟಿ.ಸಿ.(RTC), ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕದ ಜೆರಾಕ್ಸ್ ಮತ್ತು ರೇಷನ್ ಕಾರ್ಡ್/ ಪಾಸ್ ಪೋರ್ಟ್ ಅಳತೆಯ ಒಂದು ಛಾಯಾಚಿತ್ರದೊಂದಿಗೆ ಆಯಾ ತಾಲ್ಲೂಕು ತೋಟಗಾರಿಕೆ ಇಲಾಖೆಗೆ 2020 ರ ಆಗಸ್ಟ್ 21 ರೊಳಗಾಗಿ ಸಲ್ಲಿಸಿ ಪರಿಹಾರಧನವನ್ನು ಪಡೆಯುವುದು. ಇಲ್ಲವಾದಲ್ಲಿ ಬಿಡುಗಡೆಯಾದ ಅನುದಾನವನ್ನು ಸರ್ಕಾರಕ್ಕೆ ಹಿಂದಿರುಗಿಸಲಾಗುವುದು. ತದನಂತರ ಸಲ್ಲಿಸಿದ ಅರ್ಜಿಗಳಿಗೆ ಸಹಾಯಧನ ನೀಡಲು ಅನುದಾನ ಲಭ್ಯವಿರುವುದಿಲ್ಲ.

  ಹೆಚ್ಚಿನ ಮಾಹಿತಿಗಾಗಿ ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಗಂಗಪ್ಪ.ಎಸ್.ಹೊಂಬಾಳ ಮೊ.ಸಂ.: 9845643312, ತಾಂತ್ರಿಕ ಸಹಾಯಕ ರಾಘವೇಂದ್ರ.ಸಿ.ಆರ್ ಮೊ.ಸಂ.: 9886736664, ಕಚೇರಿ ದೂ.ಸಂ.: 080-27681204, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಎಂ. ಶ್ರೀನಿವಾಸ್ ಮೊ.ಸಂ.: 9632410677, ತಾಂತ್ರಿಕ ಸಹಾಯಕ ಮಾರುತಿ ಮೊ.ಸಂ.: 9741895988, ಕಚೇರಿ ದೂ.ಸಂ.: 080-27623770, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಆರ್.ಪ್ರಶಾಂತ್ ಮೊ.ಸಂ.: 9538953949, ತಾಂತ್ರಿಕ ಸಹಾಯಕ ಸೋಮಶೇಖರ್ ಮೊ.ಸಂ.: 8453966868, ಕಚೇರಿ ದೂ.ಸಂ.: 080-29716626, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ, ಸುಬ್ರಮಣ್ಯ.ಜೆ.ವಿ. ಮೊ.ಸಂ.: 9901754339, ತಾಂತ್ರಿಕ ಸಹಾಯಕಿ ಗೀತಾ ಮೊ.ಸಂ.: 9980276248 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು(ಜಿಪಂ) ಮಾಹಾಂತೇಶ ಮುರಗೋಡ (ಮೊ.ಸಂ.: 9448999214) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಮುಂದಿನ ಚುನಾವಣೆಗೆ ಮಹಿಳಾ ಮೀಸಲಾತಿ: ಡಿಸಿಎಂ ಡಿ.ಕೆ‌.ಶಿವಕುಮಾರ್

ಮುಂದಿನ ಚುನಾವಣೆಗೆ ಮಹಿಳಾ ಮೀಸಲಾತಿ: ಡಿಸಿಎಂ ಡಿ.ಕೆ‌.ಶಿವಕುಮಾರ್

"ಭವಿಷ್ಯದಲ್ಲಿ ಮಹಿಳಾ ಮೀಸಲಾತಿಯನ್ನು ಯಾರೂ ಸಹ ತಪ್ಪಿಸಲು ಆಗುವುದಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಶೇ. 33 ರಷ್ಟು ಮಹಿಳಾ ಮೀಸಲಾತಿಗೆ ಎರಡು ಮೂರು ಪಕ್ಷಗಳು ಅಂಕಿತ ಹಾಕಿವೆ: ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="116116"]
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಚಾಲನೆ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಚಾಲನೆ

ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ

[ccc_my_favorite_select_button post_id="116006"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!