ಬೆಂ.ಗ್ರಾ.ಜಿಲ್ಲೆ: ವಿವಿಧ ಸಾಧನ ಸಲಕರಣೆಗಾಗಿ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ,‌ ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ ತಾಲ್ಲೂಕುಗಳಲ್ಲಿ ವಾಸವಾಗಿರುವ ವಿಕಲಚೇತನರು, ಅಂಗವಿಕಲತೆಗೆ ತಕ್ಕ ಅಗತ್ಯ ಗಾಲಿ ಕುರ್ಚಿ, ತ್ರಿಚಕ್ರ ವಾಹನ, ಕ್ರಚರ್ಸ್, ಕೋಲೇಟರ್, ಕೃತಕ ಅಂಗಾಂಗಗಳು, ಬ್ರೈಲ್ ವಾಚ್, ಅಂಧರ ಊರುಗೋಲು, ಶ್ರವಣ ಸಾಧನ, ನೀರಿನ ಹಾಸಿಗೆ, ಪೋರ್ಟೆಬಲ್ ಕಮೋಡ್ ಇತ್ಯಾದಿ ಸಾಧನ ಸಲಕರಣೆಗಳನ್ನು ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು, ತಮ್ಮ ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ., ತಾಲ್ಲೂಕು ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ. ಹಾಗೂ ಜಿಲ್ಲಾ ಕಚೇರಿಯಲ್ಲಿ ನಿಗದಿತ ಅರ್ಜಿ ನಮೂನೆ ಪಡೆದು ಸಲ್ಲಿಸಬಹುದಾಗಿದೆ. 

ಅಂಗವಿಕಲ ಅಭ್ಯರ್ಥಿಯು ಕರ್ನಾಟಕ ರಾಜ್ಯದಲ್ಲಿ 10 ವರ್ಷಗಳಿಂದ ವಾಸವಾಗಿರುವ ಬಗ್ಗೆ ತಹಸೀಲ್ದಾರ್ ರವರಿಂದ ಪಡೆದ ದೃಢೀಕರಣ ಅಥವಾ ಕರ್ನಾಟಕದಲ್ಲಿ 10 ವರ್ಷಗಳಿಂದ ವ್ಯಾಸಂಗ ಮಾಡಿದ ವಿದ್ಯಾಭ್ಯಾಸದ ದೃಢೀಕರಣ ಪತ್ರ ಒದಗಿಸಬೇಕು, ಅಂಗವಿಕಲತೆ ಹೊಂದಿರುವ ಬಗ್ಗೆ ಸಂಬಂಧ ಪಟ್ಟ ವೈದ್ಯಕೀಯ ಪ್ರಾಧಿಕಾರದಿಂದ ಪಡೆದ ಅಂಗವಿಕಲರ ಗುರುತಿನ ಚೀಟಿ/ಯು.ಡಿ.ಐ.ಡಿ. ಕಾರ್ಡ್ ಜೆರಾಕ್ಸ್ ಪ್ರತಿ, ವಿಕಲಚೇತನ ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ನಗರ ವಾಸಿಯಾಗಿದ್ದಲ್ಲಿ ರೂ. 24000/- ಮತ್ತು ಗ್ರಾಮೀಣ ವಾಸಿಯಾಗಿದ್ದಲ್ಲಿ ರೂ. 11,500/- ಮೀರಿರಬಾರದು. ಈ ಹಿಂದೆ ಸರ್ಕಾರದ ವತಿಯಿಂದಾಗಲಿ ಅಥವಾ ಸಂಘ ಸಂಸ್ಥೆಗಳಿಂದಾಗಲಿ ಸಹಾಯಧನ ಪಡೆದಿರಬಾರದು. ಮತ್ತು ಸಂಘ ಸಂಸ್ಥೆಗಳಿಂದ ಸಾಧನ ಸಲಕರಣೆ ಪಡೆದಿರಬಾರದು, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ನಕಲು ಪ್ರತಿ ಒದಗಿಸಬೇಕು. 

ಹೆಚ್ಚಿನ ಮಾಹಿತಿಗಾಗಿ, ತಮ್ಮ ಗ್ರಾಮ ಪಂಚಾಯತಿಯ ವಿ.ಆರ್.ಡಬ್ಲ್ಯೂ. ಅಥವಾ ತಾಲ್ಲೂಕು ಪಂಚಾಯತಿಯ ಎಂ.ಆರ್.ಡಬ್ಲ್ಯೂ ಅಥವಾ ವಿಕಲಚೇತನರ ವಿಕಲಚೇತನರ ಸಹಾಯವಾಣಿ ದೂ.ಸಂ.: 080-29787441 ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ: 03, ನೆಲಮಹಡಿ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]