ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಗುರುವಾರ 40 ಮಂದಿ ಕರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದು,ಹೊಸದಾಗಿ 16 ಜನರಿಗೆ ಸೋಂಕು ದೃಢಪಟ್ಟಿದೆ.
ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ,ಗುರುವಾರದ ಸಂಜೆಯ ವರಗೆ.ದೊಡ್ಡಬಳ್ಳಾಪುರ ತಾಲ್ಲೂಕಿನ 12 ಪುರುಷರು ಹಾಗೂ 4 ಮಂದಿ ಮಹಿಳೆಯರು ಸೇರಿ ಹದಿನಾರು ಜನರಿಗೆ ಸೋಂಕು ದೃಡಪಟ್ಟಿದೆ.
ಹರಿತಲೇಖನಿಗೆ ದೊರಕಿರುವ ವರದಿಯಂತೆ. ದರ್ಗಾಪುರ, ದೇವರಾಜನಗರ, ಗಂಗಾಧರಪುರ, ಶಾಂತಿನಗರ, ಕೋಡಿಪಾಳ್ಯ, ಸೋಮೇಶ್ವರ ಬಡಾವಣೆ, ಟ್ಯಾಂಕ್ ರಸ್ತೆ, ಸಂಜಯನಗರ, ಡಿಕ್ರಾಸ್ ರಸ್ತೆ ಎಲ್ ಐಸಿ ಕಚೇರಿ ಸಮೀಪ, ದೊಡ್ಡಬಳ್ಳಾಪುರ, ಎಲೆಪುರ, ಮುತ್ತೂರು, ಡಿ ಕ್ರಾಸ್, ಸಹಜಾನಂದ ನಗರದ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.
ಪ್ರಸ್ತುತ ತಾಲೂಕಿನಲ್ಲಿ 864 ಮಂದಿಗೆ ಸೋಂಕು ತಗುಲಿದ್ದು, 557 ಮಂದಿ ಗುಣಮುಖರಾಗಿದ್ದರೆ 20 ಮಂದಿ ಸಾವನಪ್ಪಿದ್ದಾರೆ.
ಸೋಂಕಿಗೆ ಒಳಗಾದ 36 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 251 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.