ಆಧುನಿಕ ಕೃಷಿ ತಂತ್ರಜ್ಞಾನ ರೈತರ ಸಮಸ್ಯೆಗಳಿಗೆ ಪರಿಹಾರವಾಗಬಲ್ಲದು: ಬಿ.ಸಿ.ಪಾಟೀಲ್

ಬೆಂಗಳೂರು: ಆಧುನಿಕ ಕೃಷಿ ತಂತ್ರಜ್ಞಾನ ರೈತರ ಸಮಸ್ಯೆಗಳನ್ನು ಪರಿಹರಿಸಬಲ್ಲದು  ಹಾಗೂ ತಂತ್ರಜ್ಞಾನ ಕೃಷಿ ಕ್ಷೇತ್ರದಲ್ಲಿ ಯುವ ಸಮುದಾಯಕ್ಕೆ ಅವಕಾಶವನ್ನು ಸೃಷ್ಟಿಸಬಲ್ಲದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ವಿಕಾಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ “ಕೃಷಿ ನವೋದ್ಯಮ” (ಅಗ್ರಿ ಸ್ಟಾರ್ಟಪ್) ಸಮ್ಮೇಳನ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು 2014 ರಿಂದ ಕೇಂದ್ರ ಸರ್ಕಾರವನ್ನು ಮುನ್ನಡೆಸುತ್ತಿದ್ದು, ಮೋದಿಯವರಿಂದಾಗಿ ದೇಶದಲ್ಲಿ ಸ್ಟಾರ್ಟಪ್ ಗಳ ಯುಗ ಆರಂಭವಾಯಿತು. 2018 ರ ಹೊತ್ತಿಗೆ ದೇಶದಲ್ಲಿ 50 ಸಾವಿರ ನವೋದ್ಯಮಗಳು, ಹಾಗೂ ಬಳಿಕ 9,300 ಸ್ಟಾರ್ಟಪ್ ಗಳು ಪ್ರಾರಂಭವಾದವು. ಇವುಗಳ ಪೈಕಿ 474 ಕೃಷಿ ಉದ್ಯಮಗಳು ಆರಂಭವಾಗಿವೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೃಷಿ ಕ್ಷೇತ್ರಕ್ಕೆ ನವಚೈತನ್ಯವನ್ನು ಒದಗಿಸಲು ಕೃಷಿ ಸ್ಟಾರ್ಟಪ್ ಗಳನ್ನು ಆರಂಭಿಸಿ ರೈತರು ಹಾಗೂ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ವೇದಿಕೆ ಸೃಷ್ಟಿಸಲಾಗಿದೆ ಎಂದರು.

ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ 4 ಸಾವಿರ ಸ್ಟಾರ್ಟಪ್ ಗಳನ್ನು ಆರಂಭಿಸಲಾಗುತ್ತಿದೆ. ದೇಶದ ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಆರಂಭಿಕ ನೀತಿಗಳನ್ನು ಹೊರತಂದಿದೆ. ಇದರಿಂದಾಗಿ ವಾರ್ಷಿಕವಾಗಿ 4,000 ನವೋದ್ಯಮ ಸೃಷ್ಟಿಸಲು ಅನುಕೂಲವಾಗಿದೆ.  ಸ್ಟಾರ್ಟಪ್ ಗಳು  ಯುವಕರಿಗೆ 1.7 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಿದೆ. ಭಾರತದಲ್ಲಿ ಕೃಷಿ ನವೋದ್ಯಮ ಪ್ರಾರಂಭದ ಹಂತದಲ್ಲಿಯೇ  ಆಕರ್ಷಿತವಾಗಿರುವುದು ಹೆಮ್ಮೆಯ ವಿಚಾರ. ಅಂಕಿಅಂಶಗಳ ಪ್ರಕಾರ ಪ್ರತಿದಿನ 2 ರಿಂದ 3 ಸ್ಟಾರ್ಟ್ಅಪ್ಗಳು ಭಾರತದಲ್ಲಿ ಸ್ಥಾಪನೆಯಾಗುತ್ತಿವೆ.ಅಕ್ಸೆಂಚರ್ ಕಂಪನಿಯು ಮಾಡಿದ ಸಮೀಕ್ಷೆಯ ಅಂದಾಜಿನ ಪ್ರಕಾರ, ನಮ್ಮ ದೇಶದಲ್ಲಿ ಅಗ್ರಿ ಸ್ಟಾರ್ಟ್ಅಪ್‌ಗಳಿಂದ 4.5 ಬಿಲಿಯನ್ ಡಾಲರ್ ಮಾರುಕಟ್ಟೆಯ ಸೃಷ್ಟಿ ಆಗಲಿದೆ ಎಂದು ಅಂದಾಜಿಸಲಾಗಿದೆ ಎಂದರು.

ಸ್ಟಾರ್ಟಪ್  ವ್ಯವಸ್ಥೆಗಳನ್ನು ಹೊಂದಿರುವ ವಿಶ್ವದ 20 ಅಗ್ರ ದೇಶಗಳಲ್ಲಿ ಬೆಂಗಳೂರು 15 ನೇ ಸ್ಥಾನವನ್ನು ಪಡೆದುಕೊಂಡಿದೆ. ಅಲ್ಲದೇ ಏಷ್ಯಾ ಖಂಡದಲ್ಲಿ ಸಿಂಗಾಪೂರ್ ಬಳಿಕ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವೆಂದು ಸಹ  ಬೆಂಗಳೂರು ಗುರುತಿಸಲ್ಪಟ್ಟಿದೆ. ಕರ್ನಾಟಕ ರಾಜ್ಯ ಜೈವಿಕ ಹಾಗೂ ಸಿರಿಧಾನ್ಯಗಳ ಹಬ್ ಎಂದು ಕರೆಯಲ್ಪಟ್ಟಿದೆ.  ಮಧ್ಯಾಹ್ನದ ಬಿಸಿಯೂಟದಲ್ಲಿ ಸಿರಿಧಾನ್ಯವನ್ನು ಪರಿಚಯಿಸಲು ಸರ್ಕಾರ ಚಿಂತನೆ ನಡೆಸಿದೆ. ಇದರಿಂದಾಗಿ ಕೃಷಿಕರಿಗೆ ಇನ್ನಷ್ಟು ಅನುಕೂಲವಾಗಲಿದೆ. ರಾಜ್ಯದಲ್ಲಿ ಜೀವರ್ಗಿ, ಹಿರಿಯೂರು, ಮಾಲೂರು ಹಾಗೂ ಬಾಗಲಕೋಟೆಯಲ್ಲಿ ಈಗಾಗಲೇ ಮೆಗಾಫುಡ್ ಪಾರ್ಕ್ ಗಳಿದ್ದು, ಕೇಂದ್ರ ಸರ್ಕಾರದಡಿ ಕೆ.ಆರ್.ಪೇಟೆ ಹಾಗೂ ತುಮಕೂರಿನಲ್ಲಿಯೂ ಮೆಗಾಫುಡ್ ಪಾರ್ಕ್ ಆರಂಭಿಸಲಾಗಿದೆ. ಆ ಮೂಲಕ ಕೃಷಿ ಉತ್ಪಾದನಾ, ಆಹಾರ ಉತ್ಪಾದನಾ ಕ್ಷೇತ್ರಗಳಿಗೆ ರಾಜ್ಯದಲ್ಲಿ ಆದ್ಯತೆ ಕಲ್ಪಿಸಲಾಗಿದೆ. ಆತ್ಮ ನಿರ್ಭರ್ ಯೋಜನೆಯಡಿ ಆಹಾರ ಉತ್ಪಾದನಾ ಕೈಗಾರಿಕೆಗಳಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ವೆಬಿನಾರ್ ನಲ್ಲಿ ಸಚಿವರು ಮಾಹಿತಿ ಹಂಚಿಕೊಂಡರು.

ಕೃಷಿ ನವೋದ್ಯಮದಲ್ಲಿ ಕೃಷಿ ಉತ್ಪಾದನ ಉದ್ಯಮಿಗಳು  ದೇಶಾದ್ಯಂತ ಸಕ್ರಿಯವಾಗಿ ಭಾಗವಹಿಸಿರುವುದು ಖುಷಿ ತಂದಿದೆ. ಕೊರೊನಾ  ವೈರಸ್‌ನಿಂದಾಗಿ ಬಿಕ್ಕಟ್ಟಿನ ಅವಧಿಯಲ್ಲಿ ರೈತರು ಬೆಳೆದ  ತರಕಾರಿ ಹಣ್ಣು ಸೇರಿದಂತೆ ಕೃಷಿ ಫಸಲುಗಳು ನಾಶವಾಗದಂತೆ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ  ಕೋಲ್ಡ್ ಸ್ಟೋರೇಜ್ ಗಳನ್ನು ಆರಂಭಿಸಲಾಯಿತು.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಂಬಲ ಸಹಕಾರ ಸೂಚನೆಯಡಿ ಕೃಷಿಕ್ಷೇತ್ರದಲ್ಲಿ ರೈತರಿಗೆ ಇನ್ನಷ್ಟು ಅನುಕೂಲ ಕಲ್ಪಿಸುವ ಹೊಸಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುವುದು.ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜ್‌ಕುಮಾರ್ ಕತ್ರಿ ಅವರ ಮೇಲ್ವಿಚಾರಣೆಯಲ್ಲಿ  ಕೃಷಿ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿ ವರ್ಗಗಳು ಉದ್ಯಮಿಗಳಿಗಾಗಿ ಕೃಷಿ ನವೋದ್ಯಮ ವೇದಿಕೆ ಆಯೋಜಿಸಿರುವುದು ಸಂತಸ ಹಾಗೂ ಹೆಮ್ಮೆಯ ವಿಚಾರ ಎಂದರು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕತ್ರಿ ಸ್ವಾಗತಿಸಿ, ಕೃಷಿ ಇಲಾಖೆ ಆಯುಕ್ತ ಬ್ರಿಜೆಷ್ ಕುಮಾರ್ ದೀಕ್ಷಿತ್ ವಂದಿಸಿದರು.

ರಾಜಕೀಯ

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. HD Deve Gowda

[ccc_my_favorite_select_button post_id="102362"]
ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ. ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, nikhil kumaraswamy

[ccc_my_favorite_select_button post_id="102348"]
Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ ಆಕ್ರೋಶ

Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ

ವೈರಲ್ ವಿಡಿಯೋದಲ್ಲಿ ಅಕ್ರಮ ವಲಸಿಗರ ಕಾಲನ್ನು ಸಂಕೋಲೆಗಳಲ್ಲಿ ಕಟ್ಟಿರುವುದು ಹಾಗೂ ಕೈಗಳನ್ನು ಕೋಳಗಳಿಂದ ಬಂಧಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ. Video

[ccc_my_favorite_select_button post_id="102365"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಪ್ರಿಯಕರೊಂದಿಗೆ ಓಡಿ ಹೋಗಿರುವ ವಿವಾಹಿತ ಮಹಿಳೆ ವಿದೇಶದಲ್ಲಿದ್ದ ತನ್ನ ಗಂಡನನ್ನು ಬಿಟ್ಟಿರುವುದಲ್ಲದೆ, ಗಂಡ ತನಗಾಗಿ ಕಟ್ಟಿದ್ದ ಮನೆಯನ್ನು ಮಾರಿದ್ದಾಳೆ. Suicide

[ccc_my_favorite_select_button post_id="102360"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!