ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯವು ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಬಾಗಿನ ಅರ್ಪಿಸಿದರು.

ಕಪಿಲಾ ನದಿಯು ಮೈದುಂಬಿ ಹರಿಯುತ್ತಿರುವ ಕಬಿನಿ ಜಲಾಶಯಕ್ಕೆ ಸಂಪ್ರದಾಯದಂತೆ ಬಾಗಿನ ಸಮರ್ಪಿಸಿ ಮಾತನಾಡಿದ ಅವರು, ಕಬಿನಿ ಜಲಾಶಯವು ನಿರ್ಮಾಣವಾದಾಗಿನಿಂದ 29 ಬಾರಿ ತುಂಬಿದ್ದು, ಕಳೆದ 3 ವರ್ಷಗಳಿಂದ ಸತತವಾಗಿ ಜಲಾಶಯವು ಪೂರ್ಣಮಟ್ಟಕ್ಕೆ ತುಂಬುತ್ತಿರುವುದು ಸಂತೋಷದ ವಿಚಾರ ಎಂದು ಹೇಳಿದರು.

ಈ ಬಾರಿ ವರುಣನ ಕೃಪೆಯಿಂದಾಗಿ ರೈತರು ಸಂಭ್ರಮದಿಂದ ಬೇಸಾಯದಲ್ಲಿ ಪಾಲ್ಗೊಂಡಿದ್ದಾರೆ. ಪ್ರಕೃತಿ ಮಾತೆ ಕನ್ನಡ ನಾಡನ್ನು ಸಂಪದ್ಭರಿತವಾಗಿಸಿದ್ದು, ಅದರ ಸದ್ಬಳಕೆ ನಮ್ಮೆಲ್ಲರ ಹೊಣೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಬಿನಿ ಜಲಾಶಯದ ಕೆಳಭಾಗದಲ್ಲಿ ಮೇಲ್ಮಟ್ಟದ ಸೇತುವ ಹಾಗೂ ಸಂಪರ್ಕ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಳಿಗೂ ಅವರು ಶಂಕುಸ್ಥಾಪನೆ ನೆರವೇರಿಸಿದರು.  

ತಾಲ್ಲೂಕಿನ ಚೀಚನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಕೆಲವು ಗ್ರಾಮಗಳ ರಸ್ತೆಗಳು ಸಂಪರ್ಕ ಕಳೆದುಕೊಂಡು, ಜನರು ತೊಂದರೆಗಿಡಾಗಿದ್ದರಿಂದ ಈ ಸೇತುವೆ ನಿರ್ಮಾಣ ಬಹದಿನಗಳ ಬೇಡಿಕೆಯಾಗಿತ್ತು. ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಗಮನಹರಿಸಿ ಈ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ಕೊಡಿಸಿದ್ದರಿಂದ ಶುಕ್ರವಾರ ಕಾಮಗಾರಿಗೆ ಚಾಲನೆ ನೀಡಲಾಯಿತು.

ಕಬಿನಿ ಅಣೆಕಟ್ಟೆಯ ಕೆಳಭಾಗದಲ್ಲಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮತ್ತು ಮಾನಂದವಾಡಿ ಮುಖ್ಯರಸ್ತೆಯಿಂದ ಕಬಿನಿ ಜಲಾಶಯಕ್ಕೆ ಸಂಪರ್ಕ ರಸ್ತೆಯ ಅಭಿವೃದ್ಧಿಗೆ 50.30 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

ರಾಜ್ಯದ ನೀರಾವರಿ ಕ್ಷೇತ್ರದ ಹೆಚ್ಚಳಕ್ಕೆ ಸರ್ಕಾರ ಬದ್ಧವಾಗಿದ್ದು, ನೀರಾವರಿಗೆ ಪ್ರಥಮ ಆದ್ಯತೆ ನೀಡಲಾಗಿದೆ. ಇದರಂತೆ ಈವರೆಗೆ ನಮ್ಮ ಸರ್ಕಾರ ಸುಮಾರು 7,400 ಕೋಟಿ ರೂ.ಗಳ 28 ವಿವಿಧ ಯೋಜನೆಗಳಿಗೆ ಮಂಜೂರಾತಿಗೆ ಅನುಮೋದನೆ ನೀಡಿದ್ದು, ಕಾಮಗಾರಿಗಳು ವಿವಿಧ ಹಂತದಲ್ಲಿವೆ ಎಂದು ಮಾಹಿತಿ ನೀಡಿದರು.

ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ 52 ಗ್ರಾಮಗಳಿಗೆ 212 ಕೋಟಿ ರೂ.ಗಳ ವೆಚ್ಚದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದ್ದು ಹಾಗೂ ಕಬಿನಿ ಬಲದಂಡೆ ನಾಲೆ ಆಧುನೀಕರಣಗೊಳಿಸಲಾಗಿದೆ. ಒಟ್ಟಾರೆಯಾಗಿ ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ನಮ್ಮ ಸರ್ಕಾರವು ನೀರು ವ್ಯರ್ಥವಾಗದಂತೆ ತಡೆಯಲು ಜಲಾಶಯಗಳ ಕಾಲುವೆಗಳ ಆಧುನೀಕರಣ  ಸೇರಿದಂತೆ, ಏತ ನೀರಾವರಿ ಹಾಗೂ ಕೆರೆಗಳನ್ನು ತುಂಬಿಸುವ ಯೋಜನೆಗಳನ್ನು ಕೈಗೊಂಡಿದೆ. ಈಗಿನ ಆರ್ಥಿಕ ಇತಿಮಿತಿಯಲ್ಲಿಯೂ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಜಲಸಂಪನ್ಮೂಲ ಸಚಿವರಾದ ರಮೇಶ್ ಲ.ಜಾರಕಿಹೊಳಿ, ಶಾಸಕರಾದ ಎಸ್.ಎ.ರಾಮದಾಸ್, ಅನಿಲ್ ಚಿಕ್ಕಮಾದು, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಸಿ.ಪರಿಮಳ ಶ್ಯಾಂ, ಉಪಾಧ್ಯಕ್ಷರಾದ ಗೌರಮ್ಮ ಸೋಮಶೇಖರ್, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಜಿಲ್ಲಾ ಪಂಚಾಯತ್ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ, ಮುಖ್ಯ ಇಂಜಿನಿಯರ್ ಶಂಕರೇಗೌಡ ಇತರರು ಹಾಜರಿದ್ದರು.

ರಾಜಕೀಯ

ರಾಜ್ಯದಲ್ಲಿ ವೋಟ್ ಚೋರಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ; ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯದಲ್ಲಿ ವೋಟ್ ಚೋರಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ; ಹೆಚ್.ಡಿ. ಕುಮಾರಸ್ವಾಮಿ ಗಂಭೀರ

ರಾಜ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವೋಟ್ ಚೋರಿ (Vote Chori) ಮೂಲಕವೇ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ನೇರ ಆರೋಪ ಮಾಡಿದರು.

[ccc_my_favorite_select_button post_id="115932"]
ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರುನಾಡು ಇಂದು "70ನೇ ಕರ್ನಾಟಕ ರಾಜ್ಯೋತ್ಸವ”ದ (Karnataka Rajyotsava Celebration) ಸಂಭ್ರಮದಲ್ಲಿದೆ.

[ccc_my_favorite_select_button post_id="115602"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಅಭೂತಪೂರ್ವ ಪ್ರತಿಕ್ರಿಯೆ: 300ಕ್ಕೂ ಹೆಚ್ಚು ಆಟಗಾರರ ಭಾಗಿ

ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಅಭೂತಪೂರ್ವ ಪ್ರತಿಕ್ರಿಯೆ: 300ಕ್ಕೂ ಹೆಚ್ಚು ಆಟಗಾರರ ಭಾಗಿ

ರಾಜ್ಯಮಟ್ಟದ ಟೆನ್ನಿಸ್ (tennis) ಪಂದ್ಯಾವಳಿಗೆ ಈ ಬಾರಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಷ್ಠಿತ ಪಂದ್ಯಾವಳಿನಲ್ಲಿ 300ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದು, ಇದು ರಾಜ್ಯದಲ್ಲಿ ಟೆನ್ನಿಸ್ ಕ್ರೀಡೆಯ ಜನಪ್ರಿಯತೆಯನ್ನು ಎತ್ತಿ ಹಿಡಿದಿದೆ ಎಂದು ಅವರು ತಿಳಿಸಿದರು.

[ccc_my_favorite_select_button post_id="115872"]
ಕೆರೆಯಲ್ಲಿ ಮೀನು ಹಿಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು..!

ಕೆರೆಯಲ್ಲಿ ಮೀನು ಹಿಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು..!

ಕೆರೆಯಲ್ಲಿ (Lake) ಮೀನು ಹಿಡಿಯುವ ವೇಳೆ (Fishing) ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವನಪ್ಪಿರುವ ಘಟನೆ ನಡೆದಿದೆ..

[ccc_my_favorite_select_button post_id="115898"]
ಭೀಕರ ಅಪಘಾತ.. 10 ತಿಂಗಳ ಮಗು ಸೇರಿ 20 ಮಂದಿ ದುರ್ಮರಣ.!| Video

ಭೀಕರ ಅಪಘಾತ.. 10 ತಿಂಗಳ ಮಗು ಸೇರಿ 20 ಮಂದಿ ದುರ್ಮರಣ.!| Video

ಇಂದು (ಸೋಮವಾರ) ಬೆಳ್ಳಗೆ ಟಿಪ್ಪರ್ ಲಾರಿ ಮತ್ತು ಸರ್ಕಾರಿ ಸಾರಿಗೆ ಬಸ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) 20 ಮಂದಿ ಮೃತಪಟ್ಟಿರುವ ಘಟನೆ ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿ ನಡೆದಿದೆ.

[ccc_my_favorite_select_button post_id="115661"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!