ಮಣ್ಣಿನ ಆರೋಗ್ಯವನ್ನು ಮಕ್ಕಳಂತೆ ಜೋಪಾನವಾಗಿ ನೋಡಿಕೊಳ್ಳಬೇಕು

ದೊಡ್ಡಬಳ್ಳಾಪುರ: ಮಣ್ಣನ್ನು ಮಕ್ಕಳಂತೆ ಜೋಪಾನವಾಗಿ ನೋಡಿಕೊಳ್ಳದೆ ಇದ್ದರೆ ಅದು ಬೆಳೆಗಳ ಮೇಲಷ್ಟೇ ಪರಿಣಾಮ ಬೀರುವುದಿಲ್ಲ. ನಮ್ಮ ಆರೋಗ್ಯದ ಮೇಲೂ ಕೆಟ್ಟಪರಿಣಾಮ ಬೀರಲಿದೆ ಎಂದು ಸಾಯಿಲ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ವಾಸು ಹೇಳಿದರು.

ಅವರು ತಾಲ್ಲೂಕಿನ ನಾಗಸಂದ್ರ ಗ್ರಾಮದ ಮುದ್ದಪ್ಪ ಅವರ ತೋಟದಲ್ಲಿ ಯುವ ಸಂಚಲನ ವತಿಯಿಂದ ನಡೆದ ಕಳೆ ಹಾಗೂ ಬೆಳೆ ಕುರಿತದಾದ ಕಾರ್ಯಗಾರದಲ್ಲಿ ಮಾತನಾಡಿದರು.

ಮಣ್ಣಿನ ಆರೋಗ್ಯ ಸರಿಯಾಗಿ ಇಲ್ಲದೇ ಇರುವುದೇ ಮನುಷ್ಯನ ಆರೋಗ್ಯವು ಹಾಳಾಗಲು ಕಾರಣವಾಗಿದೆ. ಮಣ್ಣಿನ ಆರೋಗ್ಯ ಸರಿಹೋಗದೆ ಮನುಷ್ಯನ ಆರೋಗ್ಯ ಸರಿಯಾಗುವುದಿಲ್ಲ. ಯಾವುದೇ ರೀತಿಯ ಔಷಧಿ ನೀಡಿದರು ಸಹ ಅದು ತಾತ್ಕಾಲಿನ ಶಮನಷ್ಟೇ ವಿನಹ ಶಾಶ್ವತ ಪರಿಹಾರ ಆಗುವುದಿಲ್ಲ. ಹಸಿರು  ಕ್ರಾಂತಿ ದೇಶದ ಜನರ ಹಸಿವು ನೀಗಿಸಿದೆ ಎನ್ನಲಾಗುತ್ತದೆ. ಆದರೆ ಅದೇ ಸಂದರ್ಭದಲ್ಲಿ ಶತಮಾನಗಳ ಕಾಲದಿಂದ ಆರೋಗ್ಯಕರವಾಗಿದ್ದ ಮಣ್ಣಿಗೆ ಅಳತೆಯೇ ಇಲ್ಲದಂತೆ ರಾಸಾಯನಿಕ ಗೊಬ್ಬರಗಳನ್ನು ಸುರಿದು  ಫಲವತ್ತತೆಯನ್ನು ಹಾಳುಮಾಡಲಾಗಿದೆ. ಮತ್ತೆ ಮಣ್ಣಿನ ಆರೋಗ್ಯ ಸರಿ ಮಾಡಬೇಕಾದರೆ ದಶಕಗಳೇ ಬೇಕಾಗಲಿದೆ ಎಂದು ಹೇಳಿದರು.

ಕಳೆ ಗಿಡಗಳ ಬಗ್ಗೆ ರೈತರಿಗೆ ತಪ್ಪು ಮಾಹಿತಿ ಹಾಗೂ ವಿನಾಕಾರಣ ಭಯಪಡುವಂತೆ ಮಾಡುವ ಮೂಲಕ ರಾಸಾಯನಿಕ ಕಂಪನಿಗಳು ಲಾಭ ಮಾಡುತ್ತಿವೆ. ಯಾವತ್ತು ಸಹ ಮುಖ್ಯ ಬೆಳೆಗೆ ಕಳೆಗಿಡಗಳು ತೊಂದರೆಯುಂಟು ಮಾಡುವುದಿಲ್ಲ.ಆದರೆ ಅವುಗಳನ್ನು ಸಾಂಪ್ರದಾಯಿಕ ವಿಧಾನಗಳ ಮೂಲಕ ನಿಯಂತ್ರಿಸುವ ಕ್ರಮಗಳನ್ನು ಕೃಷಿಯಲ್ಲಿ ಅಳವಡಿಸಿಕೊಳ್ಳಬೇಕಿದೆ. ಹಿರಿಯ ತಲೆಮಾರಿನ ರೈತರು ಎಂದೂ ಸಹ ರಾಗಿ ಬೆಳೆಗೆ ಕಳೆ ಅಡ್ಡಿಯುಂಟು ಮಾಡಿದ್ದರಿಂದ ಬೆಳೆ ಹಾಳಾಯಿತು, ಇಳುವರಿ ಕುಂಟಿತವಾಯಿತು ಎನ್ನುವ ಮಾತುಗಳನ್ನು ಹೇಳುವುದು ತೀರ ಕಡಿಮೆ ಎಂದರು.  

ಬೆಳೆಗೆ ಅಗತ್ಯ ಇರುವ 16 ಪೋಷಕಾಂಶಗಳು ಮಣ್ಣಿನಲ್ಲಿ ಶೇಖರಣೆಯಾಗಲು, ವೃದ್ಧಿಸಲು ಕಳೆ ಗಿಡಗಳು ನಮ್ಮ ಕಣ್ಣಿಗೆ ಕಾಣದಂತೆ ಸಾಕಷ್ಟು ಉಪಯುಕ್ತ ಕೆಲಸಗಳನ್ನು ಮಾಡುತ್ತವೆ. ಕಳೆಗಿಡಗಳ ಕಾರ್ಯಚಟುವಟಿಕೆಗಳನ್ನೂ ರೈತರು ತಿಳಿದುಕೊಳ್ಳಬೇಕು. ಬರೀ ಮುಖ್ಯ ಬೆಳೆಯಕಡೆಗಷ್ಟೇ ನಮ್ಮ ಗಮನ ಇರುತ್ತದೆ. ಮಣ್ಣಿಗೆ ಆರೋಗ್ಯ, ಫಲವತ್ತತೆ, ಮಣ್ಣಿನ ಆಳಕ್ಕೆ ನೀರು ಇಳಿಯಲು ಬಹುಮುಖ್ಯವಾಗಿ ಕೆಲಸ ಮಾಡುವುದೇ ಕಳೆಗಿಡಗಳು ಎಂದರು.

ಮುಖ್ಯಬೆಳೆಗೆ ಬರುವ ಕೀಟ,ರೋಗಗಳ ನಿಯಂತ್ರಣದಲ್ಲೂ ಕಳೆಗಿಡಗಳ ಪಾತ್ರವು ಮಹತ್ವದ್ದಾಗಿದೆ. ಮುಖ್ಯಬೆಳೆಯ ಬೇರುಗಳು ಮಣ್ಣಿನ ಆಳಕ್ಕೆ ಇಳಿದು ಪೋಷಕಾಂಶಗಳನ್ನು ಪಡೆಯಲು ಕಳೆಗಿಡಗಳು ಸಹಕಾರಿಯಾಗಿವೆ. ಕಳೆ ನಾಶಕ ಔಷಧಿಯನ್ನು ಸಿಂಪರಣೆ ಮಾಡುವುದರಿಂದ ಮಣ್ಣಿನ ಆರೋಗ್ಯದೊಂದಿಗೆ ಮನುಷ್ಯರ ಆರೋಗ್ಯದ ಮೇಲೂ ಕೆಟ್ಟಪರಿಣಾಮ ಬೀರುತ್ತದೆ. ಮಣ್ಣಿನಲ್ಲಿನ ಸೂಕ್ಷ್ಮಾಣು ಜೀವಿಗಳು ಸಾಯುವುದಲ್ಲದೆ ಕೆರೆ, ಕುಂಟೆಗಳಲ್ಲಿನ ಜಲಚರಗಳ ಆಹಾರ ಸರಪಳಿಯು ನಾಶವಾಗಲಿದೆ. ನಿಸರ್ಗದತ್ತವಾದ ಆಹಾರ ಸರಪಣಿ ನಾಶವಾದರೆ ಕೊರೊನಾ ವೈರಸ್ಗಿಂತಲು ದೊಡ್ಡ ವೈರಸ್ ಬೆಳೆವಣಿಗೆ ಮತ್ತು ಹಾವಳಿಗೆ ನಾವಾಗಿಯೇ ದಾರಿಮಾಡಿಕೊಟ್ಟಂತಾಗಲಿದೆ ಎಂದು ಎಚ್ಚರಿಸಿದರು.  

ಕಾರ್ಯಾಗಾರದ ಆಯೋಜಕ ಯುವ ಸಂಚಲದ ಅಧ್ಯಕ್ಷ ಚಿದಾನಂದ್ ಮಾತನಾಡಿ, ಮಣ್ಣಿನ ಆರೋಗ್ಯದಲ್ಲಿ ಬಹು ಬೆಳೆ ಪದ್ದತಿಯ ಪಾತ್ರವು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಗಿ ಸೇರಿದಂತೆ ಮತ್ತಿತರೆ ಬೆಳೆಗಳ ಮಧ್ಯದಲ್ಲಿ ಅಕ್ಕಡಿ ಸಾಲುಗಳ ಮಹತ್ವ ಮತ್ತು ಅಕ್ಕಡಿ ಪದ್ದತಿಯನ್ನು ಮತ್ತೆ ರೈತರು ಅನುಸರಿಸುವಂತೆ ಮಾಡಲು ಪ್ರಯತ್ನಿಸಲಾಗುವುದು. ಬಯಲು ಸೀಮೆ ಜಿಲ್ಲೆಗಳಲ್ಲಿ ಮಳೆ ಆಶ್ರಯದಲ್ಲಿ ಮುಂಗಾರು ಬೆಳೆ ಬೆಳೆಯುವುದನ್ನು ಮಾತ್ರ ಇತ್ತೀಚಿನ ದಿನಗಳಲ್ಲಿ ಕಾಣುತಿದ್ದೇವೆ. ಆದರೆ ಹಿಂಗಾರು ಬೆಳೆಯ ಕಡೆಗೆ ಮಳೆ ಆಶ್ರಯದ ರೈತರು ಅಷ್ಟಾಗಿ ಆಸಕ್ತಿಯನ್ನೇ ತೋರುತ್ತಿಲ್ಲ. ಹಿಂಗಾರು ಬೆಳೆ ಬೆಳೆಯುವ ಬಗ್ಗೆಯು ರೈತರಲ್ಲಿ ಆಸಕ್ತಿ ಮೂಡಿಸಿ ಬೆಳೆ, ತಳಿಗಳ ಆಯ್ಕೆ ಕುರಿತಂತೆ ಜಾಗೃತಿ ಮೂಡಿಸಲಾಗುವುದು. ಕೆಲ ರೈತರು ಈಗಾಗಲೇ ಆಸಕ್ತಿ ತೋರಿ ಈ ವರ್ಷದ ಹಿಂಗಾರಿನಲ್ಲೆ ಬೆಳೆ ಬೆಳೆಯಲು ಮುಂದೆ ಬಂದಿದ್ದಾರೆ. ಮುಂಗಾರಿನಷ್ಟೇ ಇಳುವರಿಯನ್ನು ಹಿಂಗಾರಿನ ಬೆಳೆಗಳಲ್ಲು ಪಡೆಯಲು ಸಾಕಷ್ಟು ಅವಕಾಶಗಳು ಇವೆ. ನಮ್ಮ ಹಿರಿಯರು ಮುಂಗಾರು, ಹಿಂಗಾರು ಎರಡೂ ಬೆಳೆಗಳಿಗು ಸಮಾನವಾದ ಪ್ರಾಮುಖ್ಯತೆ ನೀಡುತ್ತಿದ್ದ ಉದಾಹರಣೆಗಳು ಇವೆ ಎಂದರು.      

ಕಾರ್ಯಾಗಾರದಲ್ಲಿ ಪ್ರಗತಿಪರ ರೈತರಾದ ಬಚ್ಚಹಳ್ಳಿ ಸತೀಶ್, ಗಂಗಮುತ್ತಯ್ಯ, ಶ್ರವಣೂರು ರೋಹಿತ್, ಲಕ್ಷ್ಮೀದೇವಪುರ ನರಸಿಂಹರಾವ್, ಮಾಗಡಿ ತಾಲ್ಲೂಕಿನ ದೊಡ್ಡರಂಗಯ್ಯನಪಾಳ ಗ್ರಾಮದ ಕೃಷ್ಣಮೂರ್ತಿ, ಗಂಗಾಧರ್, ಯುವ ಸಂಚಲನದ ಸತೀಶ್ಕುಮಾರ್, ದಿವಾಕರ್ನಾಗ್, ಏಟ್ರಿಯ ಸಂಸ್ಥೆಯ ಮಂಜುನಾಥ್ ಇದ್ದರು.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!