ಮೂಡಿಗೆರೆ ಕ್ಷೇತ್ರದ ಅಭಿವೃದ್ಧಿಗೆ ವಿವಿಧ ಯೋಜನೆ ಅಡಿ 10.50 ಕೋಟಿ ಅನುದಾನ: ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗವಾದ ಮೂಡಿಗೆರೆ ಕ್ಷೇತ್ರದ ಅಭಿವೃದ್ಧಿಗೆ ಪ್ರಸ್ತುತ ಸಾಲಿನಲ್ಲಿ ವಿವಿಧ ಯೋಜನೆಗಳ ಅಡಿ ರೂ. 10.50 ಕೋಟಿಯಷ್ಟು ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಅವರು ಹೇಳಿದರು.

ಅವರು ಇಂದು ಮೂಡಿಗೆರೆ ತಾಲ್ಲೂಕಿನಲ್ಲಿ ತಾಲ್ಲೂಕು ಪಂಚಾಯಿತಿಯ ವಿವಿಧ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯ ಮಲೆನಾಡು ಭಾಗ ಮೂಡಿಗೆರೆ ಕ್ಷೇತ್ರವು ಅತಿವೃಷ್ಟಿ, ಧರೆಕುಸಿತ ಸೇರಿದಂತೆ ಹಲವು ಸಂಕಷ್ಟಗಳಿಗೆ ಸಿಲುಕಿದ್ದು ಸಾಕಷ್ಟು ಪ್ರಮಾಣದಲ್ಲಿ ಹಾನಿ ಸಂಭವಿಸಿದೆ ಈ ವೇಳೆ ಸ್ಥಳ ಪರಿಶೀಲನೆ ನಡೆಸಿ ಜಿಲ್ಲಾ ಉಸ್ತುವಾರಿ ಸಚಿವನಾಗಿ ಜವಾಬ್ದಾರಿ ತೋರಿದ್ದೇನೆ ಎಂದ ಅವರು ಜಿಲ್ಲೆಗೆ ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ರಸ್ತೆ, ಮನೆ ನಿರ್ಮಾಣ, ಸೇತುವೆ ಸೇರಿದಂತೆ ಹಲವು ಕಾಮಗಾರಿಗಳಿಗಾಗಿ ವಿವಿಧ ಯೋಜನೆಗಳ ಅಡಿಯಲ್ಲಿ ರೂ. 27@ ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ ಮತ್ತು ಬೆಳೆ ನಷ್ಟ ಪರಿಹಾರಕ್ಕಾಗಿ ರೂ.61 ಕೋಟಿ ಪರಿಹಾರ ಧನ ನೀಡಲಾಗಿದೆ ಎಂದರು.

ಮೂಡಿಗೆರೆ ಒಳಗೊಂಡಂತೆ ಹಲವು ಪ್ರದೇಶಗಳಲ್ಲಿ ಮನೆ ಕುಸಿತ ಉಂಟಾಗಿದ್ದು ಈ ವೇಳೆ ಸಮೀಕ್ಷೆ ನಡೆಸಿ ಶೇ 75 ಕ್ಕಿಂತ ಹೆಚ್ಚು ಹಾನಿಗೊಳಗಾದ ಎ. ಮಾದರಿಯ ಮನೆಗಳಿಗೆ ಪರಿಹಾರವಾಗಿ ರೂ.5 ಲಕ್ಷ, ಶೇ.50 ರಷ್ಟು ಹಾನಿಯಾದ ಬಿ. ಮಾದರಿಯ ಮನೆಗಳಿಗೆ ರೂ. 3 ಲಕ್ಷ, ಭಾಗಶಃ ಹಾನಿಯಾದ ಮನೆಗಳಿಗೆ ರೂ.50 ಸಾವಿರ ಪರಿಹಾರಧನ ವಿತರಿಸಲಾಗಿದೆ ಅಲ್ಲದೇ, ಬೆಳೆ ಹಾನಿಯಾಗಿ ನಷ್ಟವಾಗಿದ್ದಲ್ಲಿ ಎನ್.ಡಿ.ಆರ್.ಎಫ್ ನಿಯಮದನ್ವಯ ಬೆಳೆ ಪರಿಹಾರ ವಿತರಿಸಲಾಗಿದ್ದು ಹೆಚ್ಚುವರಿಯಾಗಿ ರಾಜ್ಯಸರ್ಕಾರ 10 ಸಾವಿರ ಬೆಳೆ ನಷ್ಟ ಪರಿಹಾರ ನೀಡಿದೆ ಎಂದರು. 

ಈ ಬಾರಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಹೊರತುಪಡಿಸಿದರೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚು ಅನುದಾನ ನೀಡಿದ 2ನೇ ತಾಲ್ಲೂಕು ಮೂಡಿಗೆರೆಯಾಗಿದೆ ಅತಿವೃಷ್ಟಿ ಹಾಗೂ ಧರೆಕುಸಿತದಿಂದ ಹಾನಿಗೊಳಗಾದವರಿಗೆ ಸೂಕ್ತ ಪರಿಹಾರ  ಸೇರಿದಂತೆ ಇಲ್ಲಿನ ದೇವರ ಮನೆ, ಹೇಮಾವತಿ ಉಗಮ ಸ್ಥಾನ, ಬಲ್ಲಾಳರಾಯನ ದುರ್ಗ, ಆಲ್ದೂರು ಸೇರಿದಂತೆ ವಿವಿದೆಡೆ ಹಲವು ಅಭಿವೃದ್ಧಿ ಕಾರ್ಯಗಳಿಗಾಗಿ ಹಾಗೂ ನೀರಾವರಿ ಯೋಜನೆಗಳ ಪುನಶ್ಚೇತನಕ್ಕಾಗಿ ರೂ. 10.50 ಕೋಟಿಯಷ್ಟು ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದರು.

ಕೃಷಿ ಸಮ್ಮಾನ್ ಯೋಜನೆಯಡಿ ರೈತರಿಗೆ ಕೇಂದ್ರದಿಂದ ರೂ.6 ಸಾವಿರ ಹಾಗೂ ರಾಜ್ಯ ಸರ್ಕಾರದಿಂದ ರೂ 4 ಸಾವಿರ ಒಟ್ಟು 10 ಸಾವಿರ ಸಹಾಯಧನವನ್ನು ರೈತರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಗೊಳಿಸಲಾಗಿದೆ ಅಲ್ಲದೇ ರೈತರೇ ನೇರವಾಗಿ ಬೆಳೆ ಮಾಹಿತಿ ನೀಡಲು ಅನುಕೂಲವಾಗುವಂತೆ ಇದೀಗ ಬೆಳೆ ಸಮೀಕ್ಷೆ ಆಪ್ ಬಿಡುಗಡೆಗೊಳಿಸಲಾಗಿದ್ದು ಇದರಿಂದಾಗಿ ರೈತ ಬೆಳೆದ ಬೆಳೆಯನ್ನು ಸ್ವತಃ ನೇರವಾಗಿ ಮಾಹಿತಿಯನ್ನು ದಾಖಲಿಸಬಹುದಾಗಿದೆ ಇದೊಂದು ರೈತಸ್ನೇಹಿ ವಿಧಾನವಾಗಿದೆ ಎಂದ ಅವರು ರೈತರ ಏಳಿಗೆಗಾಗಿ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಜನಸ್ನೇಹಿಯಾಗಿ ರೈತರೊಂದಿಗೆ ಉತ್ತಮ ಬಾಂಧವ್ಯ ಹೊಂದುವಂತೆ ಸಲಹೆ ನೀಡಿದರು.

ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತರಾಮನ್, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು  ಭೇಟಿ ಮಾಡಿ ಜಿಲ್ಲೆಯಲ್ಲಿನ ಕಾಫಿ, ಮೆಣಸು, ಅಡಿಕೆ, ಏಲಕ್ಕಿ ಸೇರಿದಂತೆ ಹಲವು ಬೆಳೆಗಳ ಬೆಳೆಗಾರರು, ರೈತರ ಸಮಸ್ಯೆಗಳ ಕುರಿತು ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಜೊತೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವಂತೆ ಮನವಿ ಸಲ್ಲಿಸಲಾಯಿತು ಎಂದು ತಿಳಿಸಿದರು.

ಜಿಲ್ಲೆಯ ಅಭಿವೃದ್ದಿ ದೃಷ್ಟಿಯಿಂದ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಕೇಂದ್ರ, ಮೂಡಿಗೆರೆಯಲ್ಲಿ ತೋಟಗಾರಿಕಾ ವಿಶ್ವವಿದ್ಯಾಲಯ ಸ್ಥಾಪನೆ, ಹೊಯ್ಸಳ ಸರ್ಕ್ಯೂಟ್ ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ ಎಂದರು.

ವಿಧಾನಸಭಾ ಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಅವರು ಮಾತನಾಡಿ ಮೂಡಿಗೆರೆ ತಾಲ್ಲೂಕಿಗೆ ಸ್ವಯಂ ಉದ್ಯೋಗ ಖಾತ್ರಿ ಯೋಜನೆ ಅಡಿ ರೂ.10 ಕೋಟಿ ಬಿಡುಗಡೆಯಾಗಿದ್ದು ಲೋಪದೋಷಗಳಿಲ್ಲದಂತೆ ಅದನ್ನು ಸಮರ್ಪಕವಾಗಿ ಬಳಕೆ ಮಾಡುವಂತೆ ತಿಳಿಸಿದ ಅವರು ಮೂಡಿಗೆರೆ ತಾಲ್ಲೂಕು ಪಂಚಾಯಿತಿಯು ಉತ್ತಮ ಜನಸ್ನೇಹಿ ಆಡಳಿತ ನೀಡುವ ಮೂಲಕ ರಾಜ್ಯಕ್ಕೆ ಮೊದಲನೇ ಮಾದರಿ ಪಂಚಾಯಿತಿಯಾಗಿದೆ ಎಂದರು. 

ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಮಾತನಾಡಿ ಕೊರೋನಾದಿಂದಾಗಿ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು ಅದರ ನಡುವೆಯು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಿ ಶ್ರಮಿಸಿದೆ ಎಂದರು.

ಮೂಡಿಗೆರೆ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ  ರಸ್ತೆ, ಸೇತುವೆ ನಿರ್ಮಾಣ, ಬೆಳೆ ನಷ್ಟ ಪರಿಹಾರ ಸೇರಿದಂತೆ ವಿವಿಧ ಅಭಿವೃದ್ಧಿ ಸರ್ಕಾರದಿಂದ ಸಾಕಷ್ಟು ಅನುದಾನ ಬಿಡುಗಡೆಯಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಈಗಾಗಲೇ ಮೂಡಿಗೆರೆ, ಕುದುರೆಮುಖ ಸೇರಿದಂತೆ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡು ಹಾನಿ ಕುರಿತು ಮಾಹಿತಿ ಪಡೆದಿದ್ದಾರೆ ಈ ಸಂಬಂಧ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಸಮನ್ವಯದೊಂದಿಗೆ ತಾಲ್ಲೂಕಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದರು.

ರಾಜಕೀಯ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ

[ccc_my_favorite_select_button post_id="104157"]
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="104099"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

ದೊಡ್ಡಬಳ್ಳಾಪುರ (Doddaballapura): ಹಳ್ಳಕ್ಕೆ ಬಿದ್ದ ಬೆಂಕಿ ಮನೆಗೆ ವ್ಯಾಪಿಸಿ ವಾಸದ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಹೊಸಹಳ್ಳಿಯಲ್ಲಿ ಸಂಭವಿಸಿದೆ. ರಾಮಕ್ಕ ಎನ್ನುವವರ ಮನೆ ಇದಾಗಿದ್ದು, ಇಂದು ಮನೆಯ ಮಾಲೀಕರು ಹೊಲಕ್ಕೆ ತೆರಳಿದ್ದು, ಶನಿವಾರವಾದ ಕಾರಣ ಐದು ಮಂದಿ ಮಕ್ಕಳು ಶಾಲೆ

[ccc_my_favorite_select_button post_id="104154"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!