ಮಣ್ಣಿನ ಆರೋಗ್ಯವನ್ನು ಮಕ್ಕಳಂತೆ ಜೋಪಾನವಾಗಿ ನೋಡಿಕೊಳ್ಳಬೇಕು

ದೊಡ್ಡಬಳ್ಳಾಪುರ: ಮಣ್ಣನ್ನು ಮಕ್ಕಳಂತೆ ಜೋಪಾನವಾಗಿ ನೋಡಿಕೊಳ್ಳದೆ ಇದ್ದರೆ ಅದು ಬೆಳೆಗಳ ಮೇಲಷ್ಟೇ ಪರಿಣಾಮ ಬೀರುವುದಿಲ್ಲ. ನಮ್ಮ ಆರೋಗ್ಯದ ಮೇಲೂ ಕೆಟ್ಟಪರಿಣಾಮ ಬೀರಲಿದೆ ಎಂದು ಸಾಯಿಲ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ವಾಸು ಹೇಳಿದರು.

ಅವರು ತಾಲ್ಲೂಕಿನ ನಾಗಸಂದ್ರ ಗ್ರಾಮದ ಮುದ್ದಪ್ಪ ಅವರ ತೋಟದಲ್ಲಿ ಯುವ ಸಂಚಲನ ವತಿಯಿಂದ ನಡೆದ ಕಳೆ ಹಾಗೂ ಬೆಳೆ ಕುರಿತದಾದ ಕಾರ್ಯಗಾರದಲ್ಲಿ ಮಾತನಾಡಿದರು.

ಮಣ್ಣಿನ ಆರೋಗ್ಯ ಸರಿಯಾಗಿ ಇಲ್ಲದೇ ಇರುವುದೇ ಮನುಷ್ಯನ ಆರೋಗ್ಯವು ಹಾಳಾಗಲು ಕಾರಣವಾಗಿದೆ. ಮಣ್ಣಿನ ಆರೋಗ್ಯ ಸರಿಹೋಗದೆ ಮನುಷ್ಯನ ಆರೋಗ್ಯ ಸರಿಯಾಗುವುದಿಲ್ಲ. ಯಾವುದೇ ರೀತಿಯ ಔಷಧಿ ನೀಡಿದರು ಸಹ ಅದು ತಾತ್ಕಾಲಿನ ಶಮನಷ್ಟೇ ವಿನಹ ಶಾಶ್ವತ ಪರಿಹಾರ ಆಗುವುದಿಲ್ಲ. ಹಸಿರು  ಕ್ರಾಂತಿ ದೇಶದ ಜನರ ಹಸಿವು ನೀಗಿಸಿದೆ ಎನ್ನಲಾಗುತ್ತದೆ. ಆದರೆ ಅದೇ ಸಂದರ್ಭದಲ್ಲಿ ಶತಮಾನಗಳ ಕಾಲದಿಂದ ಆರೋಗ್ಯಕರವಾಗಿದ್ದ ಮಣ್ಣಿಗೆ ಅಳತೆಯೇ ಇಲ್ಲದಂತೆ ರಾಸಾಯನಿಕ ಗೊಬ್ಬರಗಳನ್ನು ಸುರಿದು  ಫಲವತ್ತತೆಯನ್ನು ಹಾಳುಮಾಡಲಾಗಿದೆ. ಮತ್ತೆ ಮಣ್ಣಿನ ಆರೋಗ್ಯ ಸರಿ ಮಾಡಬೇಕಾದರೆ ದಶಕಗಳೇ ಬೇಕಾಗಲಿದೆ ಎಂದು ಹೇಳಿದರು.

ಕಳೆ ಗಿಡಗಳ ಬಗ್ಗೆ ರೈತರಿಗೆ ತಪ್ಪು ಮಾಹಿತಿ ಹಾಗೂ ವಿನಾಕಾರಣ ಭಯಪಡುವಂತೆ ಮಾಡುವ ಮೂಲಕ ರಾಸಾಯನಿಕ ಕಂಪನಿಗಳು ಲಾಭ ಮಾಡುತ್ತಿವೆ. ಯಾವತ್ತು ಸಹ ಮುಖ್ಯ ಬೆಳೆಗೆ ಕಳೆಗಿಡಗಳು ತೊಂದರೆಯುಂಟು ಮಾಡುವುದಿಲ್ಲ.ಆದರೆ ಅವುಗಳನ್ನು ಸಾಂಪ್ರದಾಯಿಕ ವಿಧಾನಗಳ ಮೂಲಕ ನಿಯಂತ್ರಿಸುವ ಕ್ರಮಗಳನ್ನು ಕೃಷಿಯಲ್ಲಿ ಅಳವಡಿಸಿಕೊಳ್ಳಬೇಕಿದೆ. ಹಿರಿಯ ತಲೆಮಾರಿನ ರೈತರು ಎಂದೂ ಸಹ ರಾಗಿ ಬೆಳೆಗೆ ಕಳೆ ಅಡ್ಡಿಯುಂಟು ಮಾಡಿದ್ದರಿಂದ ಬೆಳೆ ಹಾಳಾಯಿತು, ಇಳುವರಿ ಕುಂಟಿತವಾಯಿತು ಎನ್ನುವ ಮಾತುಗಳನ್ನು ಹೇಳುವುದು ತೀರ ಕಡಿಮೆ ಎಂದರು.  

ಬೆಳೆಗೆ ಅಗತ್ಯ ಇರುವ 16 ಪೋಷಕಾಂಶಗಳು ಮಣ್ಣಿನಲ್ಲಿ ಶೇಖರಣೆಯಾಗಲು, ವೃದ್ಧಿಸಲು ಕಳೆ ಗಿಡಗಳು ನಮ್ಮ ಕಣ್ಣಿಗೆ ಕಾಣದಂತೆ ಸಾಕಷ್ಟು ಉಪಯುಕ್ತ ಕೆಲಸಗಳನ್ನು ಮಾಡುತ್ತವೆ. ಕಳೆಗಿಡಗಳ ಕಾರ್ಯಚಟುವಟಿಕೆಗಳನ್ನೂ ರೈತರು ತಿಳಿದುಕೊಳ್ಳಬೇಕು. ಬರೀ ಮುಖ್ಯ ಬೆಳೆಯಕಡೆಗಷ್ಟೇ ನಮ್ಮ ಗಮನ ಇರುತ್ತದೆ. ಮಣ್ಣಿಗೆ ಆರೋಗ್ಯ, ಫಲವತ್ತತೆ, ಮಣ್ಣಿನ ಆಳಕ್ಕೆ ನೀರು ಇಳಿಯಲು ಬಹುಮುಖ್ಯವಾಗಿ ಕೆಲಸ ಮಾಡುವುದೇ ಕಳೆಗಿಡಗಳು ಎಂದರು.

ಮುಖ್ಯಬೆಳೆಗೆ ಬರುವ ಕೀಟ,ರೋಗಗಳ ನಿಯಂತ್ರಣದಲ್ಲೂ ಕಳೆಗಿಡಗಳ ಪಾತ್ರವು ಮಹತ್ವದ್ದಾಗಿದೆ. ಮುಖ್ಯಬೆಳೆಯ ಬೇರುಗಳು ಮಣ್ಣಿನ ಆಳಕ್ಕೆ ಇಳಿದು ಪೋಷಕಾಂಶಗಳನ್ನು ಪಡೆಯಲು ಕಳೆಗಿಡಗಳು ಸಹಕಾರಿಯಾಗಿವೆ. ಕಳೆ ನಾಶಕ ಔಷಧಿಯನ್ನು ಸಿಂಪರಣೆ ಮಾಡುವುದರಿಂದ ಮಣ್ಣಿನ ಆರೋಗ್ಯದೊಂದಿಗೆ ಮನುಷ್ಯರ ಆರೋಗ್ಯದ ಮೇಲೂ ಕೆಟ್ಟಪರಿಣಾಮ ಬೀರುತ್ತದೆ. ಮಣ್ಣಿನಲ್ಲಿನ ಸೂಕ್ಷ್ಮಾಣು ಜೀವಿಗಳು ಸಾಯುವುದಲ್ಲದೆ ಕೆರೆ, ಕುಂಟೆಗಳಲ್ಲಿನ ಜಲಚರಗಳ ಆಹಾರ ಸರಪಳಿಯು ನಾಶವಾಗಲಿದೆ. ನಿಸರ್ಗದತ್ತವಾದ ಆಹಾರ ಸರಪಣಿ ನಾಶವಾದರೆ ಕೊರೊನಾ ವೈರಸ್ಗಿಂತಲು ದೊಡ್ಡ ವೈರಸ್ ಬೆಳೆವಣಿಗೆ ಮತ್ತು ಹಾವಳಿಗೆ ನಾವಾಗಿಯೇ ದಾರಿಮಾಡಿಕೊಟ್ಟಂತಾಗಲಿದೆ ಎಂದು ಎಚ್ಚರಿಸಿದರು.  

ಕಾರ್ಯಾಗಾರದ ಆಯೋಜಕ ಯುವ ಸಂಚಲದ ಅಧ್ಯಕ್ಷ ಚಿದಾನಂದ್ ಮಾತನಾಡಿ, ಮಣ್ಣಿನ ಆರೋಗ್ಯದಲ್ಲಿ ಬಹು ಬೆಳೆ ಪದ್ದತಿಯ ಪಾತ್ರವು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಗಿ ಸೇರಿದಂತೆ ಮತ್ತಿತರೆ ಬೆಳೆಗಳ ಮಧ್ಯದಲ್ಲಿ ಅಕ್ಕಡಿ ಸಾಲುಗಳ ಮಹತ್ವ ಮತ್ತು ಅಕ್ಕಡಿ ಪದ್ದತಿಯನ್ನು ಮತ್ತೆ ರೈತರು ಅನುಸರಿಸುವಂತೆ ಮಾಡಲು ಪ್ರಯತ್ನಿಸಲಾಗುವುದು. ಬಯಲು ಸೀಮೆ ಜಿಲ್ಲೆಗಳಲ್ಲಿ ಮಳೆ ಆಶ್ರಯದಲ್ಲಿ ಮುಂಗಾರು ಬೆಳೆ ಬೆಳೆಯುವುದನ್ನು ಮಾತ್ರ ಇತ್ತೀಚಿನ ದಿನಗಳಲ್ಲಿ ಕಾಣುತಿದ್ದೇವೆ. ಆದರೆ ಹಿಂಗಾರು ಬೆಳೆಯ ಕಡೆಗೆ ಮಳೆ ಆಶ್ರಯದ ರೈತರು ಅಷ್ಟಾಗಿ ಆಸಕ್ತಿಯನ್ನೇ ತೋರುತ್ತಿಲ್ಲ. ಹಿಂಗಾರು ಬೆಳೆ ಬೆಳೆಯುವ ಬಗ್ಗೆಯು ರೈತರಲ್ಲಿ ಆಸಕ್ತಿ ಮೂಡಿಸಿ ಬೆಳೆ, ತಳಿಗಳ ಆಯ್ಕೆ ಕುರಿತಂತೆ ಜಾಗೃತಿ ಮೂಡಿಸಲಾಗುವುದು. ಕೆಲ ರೈತರು ಈಗಾಗಲೇ ಆಸಕ್ತಿ ತೋರಿ ಈ ವರ್ಷದ ಹಿಂಗಾರಿನಲ್ಲೆ ಬೆಳೆ ಬೆಳೆಯಲು ಮುಂದೆ ಬಂದಿದ್ದಾರೆ. ಮುಂಗಾರಿನಷ್ಟೇ ಇಳುವರಿಯನ್ನು ಹಿಂಗಾರಿನ ಬೆಳೆಗಳಲ್ಲು ಪಡೆಯಲು ಸಾಕಷ್ಟು ಅವಕಾಶಗಳು ಇವೆ. ನಮ್ಮ ಹಿರಿಯರು ಮುಂಗಾರು, ಹಿಂಗಾರು ಎರಡೂ ಬೆಳೆಗಳಿಗು ಸಮಾನವಾದ ಪ್ರಾಮುಖ್ಯತೆ ನೀಡುತ್ತಿದ್ದ ಉದಾಹರಣೆಗಳು ಇವೆ ಎಂದರು.      

ಕಾರ್ಯಾಗಾರದಲ್ಲಿ ಪ್ರಗತಿಪರ ರೈತರಾದ ಬಚ್ಚಹಳ್ಳಿ ಸತೀಶ್, ಗಂಗಮುತ್ತಯ್ಯ, ಶ್ರವಣೂರು ರೋಹಿತ್, ಲಕ್ಷ್ಮೀದೇವಪುರ ನರಸಿಂಹರಾವ್, ಮಾಗಡಿ ತಾಲ್ಲೂಕಿನ ದೊಡ್ಡರಂಗಯ್ಯನಪಾಳ ಗ್ರಾಮದ ಕೃಷ್ಣಮೂರ್ತಿ, ಗಂಗಾಧರ್, ಯುವ ಸಂಚಲನದ ಸತೀಶ್ಕುಮಾರ್, ದಿವಾಕರ್ನಾಗ್, ಏಟ್ರಿಯ ಸಂಸ್ಥೆಯ ಮಂಜುನಾಥ್ ಇದ್ದರು.

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!