ಬೆಂ.ಗ್ರಾ.ಜಿಲ್ಲೆ: ಖೇಲೋ ಇಂಡಿಯಾ ಕೇಂದ್ರಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ಭಾರತ ಸರ್ಕಾರದ ಖೇಲೋ ಇಂಡಿಯಾ ಯೋಜನೆಯಡಿ ಜಿಲ್ಲೆಯಲ್ಲಿ ಖೇಲೋ ಇಂಡಿಯಾ ಕೇಂದ್ರವನ್ನು ತೆರೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇರುವ ಅರ್ಹ/ನುರಿತ ಮಾಜಿ ರಾಷ್ಟ್ರ/ಅಂತಾರಾಷ್ಟ್ರೀಯ ಮಟ್ಟದ ಚಾಂಪಿಯನ್ ಕ್ರೀಡಾಪಟುಗಳು ಹಾಗೂ ಕ್ರೀಡಾ ಮೂಲಭೂತ ಸೌಕರ್ಯ ಹೊಂದಿರುವ ನೊಂದಾಯಿತ ಕ್ರೀಡಾ ಸಂಸ್ಥೆಗಳು/ಶಿಕ್ಷಣ ಸಂಸ್ಥೆಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. 

ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆ ಅಡಿ ತಳಮಟ್ಟದಲ್ಲಿ ಪರಿಣಾಮಕಾರಿಯಾದ ಕ್ರೀಡಾ ತರಬೇತಿ ವ್ಯವಸ್ಥೆಯನ್ನು ಜಾರಿಗೊಳಿಸಲು ಉದ್ದೇಶಿಸಿದ್ದು, 

ದೇಶಾದ್ಯಂತ 14 ಕ್ರೀಡಾ ವಿಭಾಗ (ಆರ್ಚರಿ, ಅಥ್ಲೆಟಿಕ್ಸ್, ಬಾಕ್ಸಿಂಗ್, ಬ್ಯಾಡ್ಮಿಂಟನ್, ಸೈಕ್ಲಿಂಗ್, ಫೆನ್ಸಿಂಗ್, ಹಾಕಿ, ಜುಡೋ, ರೋಯಿಂಗ್, ಶೂಟಿಂಗ್, ಈಜು, ಟೇಬಲ್ ಟೆನ್ನಿಸ್, ಭಾರ ಎತ್ತುವುದು ಮತ್ತು ಕುಸ್ತಿ) ಗಳಲ್ಲಿ ಖೇಲೋ ಇಂಡಿಯಾ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಈ ಉದ್ದೇಶದಡಿ ಜಿಲ್ಲೆಗೆ 2-3 ರಂತೆ ಖೇಲೋ ಇಂಡಿಯಾ ಕೇಂದ್ರಗಳನ್ನು ತೆರೆಯಲು ಸೂಚಿಸಿರುತ್ತದೆ. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಥ್ಲೆಟಿಕ್ಸ್, ಹಾಕಿ ಮತ್ತು ಕುಸ್ತಿ ಕ್ರೀಡೆಗಳಲ್ಲಿ ಖೇಲೋ ಇಂಡಿಯಾ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಿದ್ದು, ಕ್ರೀಡೆಯಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳ ಪರಿಣಿತಿ ಮತ್ತು ಅನುಭವಗಳನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದೆ.

ಈ ಖೇಲೋ ಇಂಡಿಯಾ ಕೇಂದ್ರಗಳಿಗೆ ಕೇಂದ್ರ ಸರ್ಕಾರದಿಂದ ತರಬೇತುದಾರರ ಗೌರವಧನ, ಸಹಾಯಕ ಸಿಬ್ಬಂದಿ, ಕ್ರೀಡಾ ಉಪಕರಣಗಳು, ಕ್ರೀಡಾ ಕಿಟ್, ಕ್ರೀಡಾಕೂಟಗಳಲ್ಲಿ ಭಾಗವಹಿಸುವಿಕೆಗೆ ತಗಲುವ ವೆಚ್ಚವನ್ನು ಗರಿಷ್ಠ ವಾರ್ಷಿಕ ರೂ 5.00 ಲಕ್ಷ ವೆಚ್ಚವನ್ನು ಭರಿಸುತ್ತದೆ.   ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಸಂಘ ಸಂಸ್ಥೆಗಳ/ಕ್ರೀಡಾ ಸಂಸ್ಥೆಗಳ ಮುಖಾಂತರ ಶೈಕ್ಷಣಿಕ ಸಂಸ್ಥೆಗಳ ಮುಖಾಂತರ ಮೂರು ಕ್ರೀಡೆಗಳಲ್ಲಿ ಪಾಸ್ಟ್ ಚಾಂಪಿಯನ್ ಆಗಿರುವವರು ತರಬೇತುದಾರರನ್ನಾಗಿ 4 ವರ್ಷಗಳ ಅವಧಿಗೆ ನಿಯೋಜಿಸಿಕೊಳ್ಳಲಾಗುವುದು.  ಸದರಿ ತರಬೇತುದಾರರು ಕನಿಷ್ಠ 30 ಮಂದಿಗೆ ತರಬೇತಿಯನ್ನು ನೀಡಬೇಕಾಗಿರುತ್ತದೆ.  ನೇಮಕಗೊಳ್ಳುವ ತರಬೇತುದಾರರಿಗೆ ಪ್ರತೀ ಮಾಹೆ ಗೌರವಧನ ನೀಡಲಾಗುವುದು. ಹಾಗೂ ಕ್ರೀಡಾ ತರಬೇತಿಗೆ ಅವಶ್ಯವಿರುವ ಕ್ರೀಡಾ ಕಿಟ್, ಕ್ರೀಡಾ ಸಲಕರಣೆಗಳನ್ನು ಸಹ ನೀಡಲಾಗುವುದು.ಎನ್‍ಐಎಸ್ ಪ್ರಮಾಣ ಪತ್ರ ಹೊಂದಿರುವ ಪಾಸ್ಟ್ ಚಾಂಪಿಯನ್/ ಕ್ರೀಡಾ ತರಬೇತುದಾರರುಗಳು ಈ ಕೇಂದ್ರ ಸರ್ಕಾರದ ಯೋಜನೆಯ ಅವಕಾಶವನ್ನು ಪಡೆಯಬಹುದಾಗಿದೆ. 

ಕ್ರೀಡಾ ಸಂಸ್ಥೆ/ಶಿಕ್ಷಣ ಸಂಸ್ಥೆಗಳು ಕನಿಷ್ಠ 5 ವರ್ಷಗಳಿಂದ ಕ್ರೀಡೆಯನ್ನು ಉನ್ನತೀಕರಿಸಲು ವಿವಿಧ ಕ್ರೀಡೆಯಲ್ಲಿ ತರಬೇತಿಯನ್ನು ನೀಡಿರುವ ಬಗ್ಗೆ ದಾಖಲೆಗಳೊಂದಿಗೆ  2020ರ ಆಗಸ್ಟ್ 21ರೊಳಗೆ ಅರ್ಜಿ ಸಲ್ಲಿಸುವುದು. 

ಕ್ರೀಡಾ ಸಂಸ್ಥೆ/ ಶಿಕ್ಷಣ ಸಂಸ್ಥೆಗಳು ಕನಿಷ್ಟ 5 ವರ್ಷಗಳಿಂದ ವಿವಿಧ ಕ್ರೀಡೆಗಳನ್ನು ಉನ್ನತೀಕರಿಸಲು ಕ್ರೀಡಾ ತರಬೇತಿಯನ್ನು ನೀಡಿರಬೇಕು, ಕನಿಷ್ಟ ಹಿರಿಯ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಂದ ಕ್ರೀಡಾ ತರಬೇತಿಯನ್ನು ನೀಡಲು ಅರ್ಹರಾಗಿರಬೇಕು,ವಯೋಮಿತಿ 40 ವರ್ಷದೊಳಗಿರಬೇಕು.

ಯೋಜನೆಯ ಮಾರ್ಗಸೂಚಿ ಮತ್ತು ಅರ್ಜಿ ನಮೂನೆಯನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, ಬೆಂಗಳೂರು ಗ್ರಾಮಾಂತರ ಹಾಗೂ ದೂ.ಸಂ.: 9845608598 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]