ಬೆಂ.ಗ್ರಾ.ಜಿಲ್ಲೆ: ಖೇಲೋ ಇಂಡಿಯಾ ಕೇಂದ್ರಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ಭಾರತ ಸರ್ಕಾರದ ಖೇಲೋ ಇಂಡಿಯಾ ಯೋಜನೆಯಡಿ ಜಿಲ್ಲೆಯಲ್ಲಿ ಖೇಲೋ ಇಂಡಿಯಾ ಕೇಂದ್ರವನ್ನು ತೆರೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇರುವ ಅರ್ಹ/ನುರಿತ ಮಾಜಿ ರಾಷ್ಟ್ರ/ಅಂತಾರಾಷ್ಟ್ರೀಯ ಮಟ್ಟದ ಚಾಂಪಿಯನ್ ಕ್ರೀಡಾಪಟುಗಳು ಹಾಗೂ ಕ್ರೀಡಾ ಮೂಲಭೂತ ಸೌಕರ್ಯ ಹೊಂದಿರುವ ನೊಂದಾಯಿತ ಕ್ರೀಡಾ ಸಂಸ್ಥೆಗಳು/ಶಿಕ್ಷಣ ಸಂಸ್ಥೆಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. 

ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆ ಅಡಿ ತಳಮಟ್ಟದಲ್ಲಿ ಪರಿಣಾಮಕಾರಿಯಾದ ಕ್ರೀಡಾ ತರಬೇತಿ ವ್ಯವಸ್ಥೆಯನ್ನು ಜಾರಿಗೊಳಿಸಲು ಉದ್ದೇಶಿಸಿದ್ದು, 

ದೇಶಾದ್ಯಂತ 14 ಕ್ರೀಡಾ ವಿಭಾಗ (ಆರ್ಚರಿ, ಅಥ್ಲೆಟಿಕ್ಸ್, ಬಾಕ್ಸಿಂಗ್, ಬ್ಯಾಡ್ಮಿಂಟನ್, ಸೈಕ್ಲಿಂಗ್, ಫೆನ್ಸಿಂಗ್, ಹಾಕಿ, ಜುಡೋ, ರೋಯಿಂಗ್, ಶೂಟಿಂಗ್, ಈಜು, ಟೇಬಲ್ ಟೆನ್ನಿಸ್, ಭಾರ ಎತ್ತುವುದು ಮತ್ತು ಕುಸ್ತಿ) ಗಳಲ್ಲಿ ಖೇಲೋ ಇಂಡಿಯಾ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಈ ಉದ್ದೇಶದಡಿ ಜಿಲ್ಲೆಗೆ 2-3 ರಂತೆ ಖೇಲೋ ಇಂಡಿಯಾ ಕೇಂದ್ರಗಳನ್ನು ತೆರೆಯಲು ಸೂಚಿಸಿರುತ್ತದೆ. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಥ್ಲೆಟಿಕ್ಸ್, ಹಾಕಿ ಮತ್ತು ಕುಸ್ತಿ ಕ್ರೀಡೆಗಳಲ್ಲಿ ಖೇಲೋ ಇಂಡಿಯಾ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಿದ್ದು, ಕ್ರೀಡೆಯಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳ ಪರಿಣಿತಿ ಮತ್ತು ಅನುಭವಗಳನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದೆ.

ಈ ಖೇಲೋ ಇಂಡಿಯಾ ಕೇಂದ್ರಗಳಿಗೆ ಕೇಂದ್ರ ಸರ್ಕಾರದಿಂದ ತರಬೇತುದಾರರ ಗೌರವಧನ, ಸಹಾಯಕ ಸಿಬ್ಬಂದಿ, ಕ್ರೀಡಾ ಉಪಕರಣಗಳು, ಕ್ರೀಡಾ ಕಿಟ್, ಕ್ರೀಡಾಕೂಟಗಳಲ್ಲಿ ಭಾಗವಹಿಸುವಿಕೆಗೆ ತಗಲುವ ವೆಚ್ಚವನ್ನು ಗರಿಷ್ಠ ವಾರ್ಷಿಕ ರೂ 5.00 ಲಕ್ಷ ವೆಚ್ಚವನ್ನು ಭರಿಸುತ್ತದೆ.   ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಸಂಘ ಸಂಸ್ಥೆಗಳ/ಕ್ರೀಡಾ ಸಂಸ್ಥೆಗಳ ಮುಖಾಂತರ ಶೈಕ್ಷಣಿಕ ಸಂಸ್ಥೆಗಳ ಮುಖಾಂತರ ಮೂರು ಕ್ರೀಡೆಗಳಲ್ಲಿ ಪಾಸ್ಟ್ ಚಾಂಪಿಯನ್ ಆಗಿರುವವರು ತರಬೇತುದಾರರನ್ನಾಗಿ 4 ವರ್ಷಗಳ ಅವಧಿಗೆ ನಿಯೋಜಿಸಿಕೊಳ್ಳಲಾಗುವುದು.  ಸದರಿ ತರಬೇತುದಾರರು ಕನಿಷ್ಠ 30 ಮಂದಿಗೆ ತರಬೇತಿಯನ್ನು ನೀಡಬೇಕಾಗಿರುತ್ತದೆ.  ನೇಮಕಗೊಳ್ಳುವ ತರಬೇತುದಾರರಿಗೆ ಪ್ರತೀ ಮಾಹೆ ಗೌರವಧನ ನೀಡಲಾಗುವುದು. ಹಾಗೂ ಕ್ರೀಡಾ ತರಬೇತಿಗೆ ಅವಶ್ಯವಿರುವ ಕ್ರೀಡಾ ಕಿಟ್, ಕ್ರೀಡಾ ಸಲಕರಣೆಗಳನ್ನು ಸಹ ನೀಡಲಾಗುವುದು.ಎನ್‍ಐಎಸ್ ಪ್ರಮಾಣ ಪತ್ರ ಹೊಂದಿರುವ ಪಾಸ್ಟ್ ಚಾಂಪಿಯನ್/ ಕ್ರೀಡಾ ತರಬೇತುದಾರರುಗಳು ಈ ಕೇಂದ್ರ ಸರ್ಕಾರದ ಯೋಜನೆಯ ಅವಕಾಶವನ್ನು ಪಡೆಯಬಹುದಾಗಿದೆ. 

ಕ್ರೀಡಾ ಸಂಸ್ಥೆ/ಶಿಕ್ಷಣ ಸಂಸ್ಥೆಗಳು ಕನಿಷ್ಠ 5 ವರ್ಷಗಳಿಂದ ಕ್ರೀಡೆಯನ್ನು ಉನ್ನತೀಕರಿಸಲು ವಿವಿಧ ಕ್ರೀಡೆಯಲ್ಲಿ ತರಬೇತಿಯನ್ನು ನೀಡಿರುವ ಬಗ್ಗೆ ದಾಖಲೆಗಳೊಂದಿಗೆ  2020ರ ಆಗಸ್ಟ್ 21ರೊಳಗೆ ಅರ್ಜಿ ಸಲ್ಲಿಸುವುದು. 

ಕ್ರೀಡಾ ಸಂಸ್ಥೆ/ ಶಿಕ್ಷಣ ಸಂಸ್ಥೆಗಳು ಕನಿಷ್ಟ 5 ವರ್ಷಗಳಿಂದ ವಿವಿಧ ಕ್ರೀಡೆಗಳನ್ನು ಉನ್ನತೀಕರಿಸಲು ಕ್ರೀಡಾ ತರಬೇತಿಯನ್ನು ನೀಡಿರಬೇಕು, ಕನಿಷ್ಟ ಹಿರಿಯ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಂದ ಕ್ರೀಡಾ ತರಬೇತಿಯನ್ನು ನೀಡಲು ಅರ್ಹರಾಗಿರಬೇಕು,ವಯೋಮಿತಿ 40 ವರ್ಷದೊಳಗಿರಬೇಕು.

ಯೋಜನೆಯ ಮಾರ್ಗಸೂಚಿ ಮತ್ತು ಅರ್ಜಿ ನಮೂನೆಯನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, ಬೆಂಗಳೂರು ಗ್ರಾಮಾಂತರ ಹಾಗೂ ದೂ.ಸಂ.: 9845608598 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ 1.3-3ಕೋಟಿ: ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ

ರಾಜ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ 46 ಕಸ ಗುಡಿಸುವ ಯಂತ್ರಗಳನ್ನು 7 ವರ್ಷದವರೆಗೂ ಬಾಡಿಗೆ ಆಧಾರದ ಮೇಲೆ ಪಡೆಯಲು ಒಪ್ಪಿಗೆ ನೀಡಿದೆ.ಬಾಡಿಗೆ ನೆಪದಲ್ಲಿ ಕಮೀಷನ್ ಗೋಲ್ ಮಾಲ್ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="116356"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!