ಬೆಂ.ಗ್ರಾ.ಜಿಲ್ಲೆ: ಖೇಲೋ ಇಂಡಿಯಾ ಕೇಂದ್ರಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ಭಾರತ ಸರ್ಕಾರದ ಖೇಲೋ ಇಂಡಿಯಾ ಯೋಜನೆಯಡಿ ಜಿಲ್ಲೆಯಲ್ಲಿ ಖೇಲೋ ಇಂಡಿಯಾ ಕೇಂದ್ರವನ್ನು ತೆರೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇರುವ ಅರ್ಹ/ನುರಿತ ಮಾಜಿ ರಾಷ್ಟ್ರ/ಅಂತಾರಾಷ್ಟ್ರೀಯ ಮಟ್ಟದ ಚಾಂಪಿಯನ್ ಕ್ರೀಡಾಪಟುಗಳು ಹಾಗೂ ಕ್ರೀಡಾ ಮೂಲಭೂತ ಸೌಕರ್ಯ ಹೊಂದಿರುವ ನೊಂದಾಯಿತ ಕ್ರೀಡಾ ಸಂಸ್ಥೆಗಳು/ಶಿಕ್ಷಣ ಸಂಸ್ಥೆಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. 

ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆ ಅಡಿ ತಳಮಟ್ಟದಲ್ಲಿ ಪರಿಣಾಮಕಾರಿಯಾದ ಕ್ರೀಡಾ ತರಬೇತಿ ವ್ಯವಸ್ಥೆಯನ್ನು ಜಾರಿಗೊಳಿಸಲು ಉದ್ದೇಶಿಸಿದ್ದು, 

ದೇಶಾದ್ಯಂತ 14 ಕ್ರೀಡಾ ವಿಭಾಗ (ಆರ್ಚರಿ, ಅಥ್ಲೆಟಿಕ್ಸ್, ಬಾಕ್ಸಿಂಗ್, ಬ್ಯಾಡ್ಮಿಂಟನ್, ಸೈಕ್ಲಿಂಗ್, ಫೆನ್ಸಿಂಗ್, ಹಾಕಿ, ಜುಡೋ, ರೋಯಿಂಗ್, ಶೂಟಿಂಗ್, ಈಜು, ಟೇಬಲ್ ಟೆನ್ನಿಸ್, ಭಾರ ಎತ್ತುವುದು ಮತ್ತು ಕುಸ್ತಿ) ಗಳಲ್ಲಿ ಖೇಲೋ ಇಂಡಿಯಾ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಈ ಉದ್ದೇಶದಡಿ ಜಿಲ್ಲೆಗೆ 2-3 ರಂತೆ ಖೇಲೋ ಇಂಡಿಯಾ ಕೇಂದ್ರಗಳನ್ನು ತೆರೆಯಲು ಸೂಚಿಸಿರುತ್ತದೆ. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಥ್ಲೆಟಿಕ್ಸ್, ಹಾಕಿ ಮತ್ತು ಕುಸ್ತಿ ಕ್ರೀಡೆಗಳಲ್ಲಿ ಖೇಲೋ ಇಂಡಿಯಾ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಿದ್ದು, ಕ್ರೀಡೆಯಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳ ಪರಿಣಿತಿ ಮತ್ತು ಅನುಭವಗಳನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದೆ.

ಈ ಖೇಲೋ ಇಂಡಿಯಾ ಕೇಂದ್ರಗಳಿಗೆ ಕೇಂದ್ರ ಸರ್ಕಾರದಿಂದ ತರಬೇತುದಾರರ ಗೌರವಧನ, ಸಹಾಯಕ ಸಿಬ್ಬಂದಿ, ಕ್ರೀಡಾ ಉಪಕರಣಗಳು, ಕ್ರೀಡಾ ಕಿಟ್, ಕ್ರೀಡಾಕೂಟಗಳಲ್ಲಿ ಭಾಗವಹಿಸುವಿಕೆಗೆ ತಗಲುವ ವೆಚ್ಚವನ್ನು ಗರಿಷ್ಠ ವಾರ್ಷಿಕ ರೂ 5.00 ಲಕ್ಷ ವೆಚ್ಚವನ್ನು ಭರಿಸುತ್ತದೆ.   ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಸಂಘ ಸಂಸ್ಥೆಗಳ/ಕ್ರೀಡಾ ಸಂಸ್ಥೆಗಳ ಮುಖಾಂತರ ಶೈಕ್ಷಣಿಕ ಸಂಸ್ಥೆಗಳ ಮುಖಾಂತರ ಮೂರು ಕ್ರೀಡೆಗಳಲ್ಲಿ ಪಾಸ್ಟ್ ಚಾಂಪಿಯನ್ ಆಗಿರುವವರು ತರಬೇತುದಾರರನ್ನಾಗಿ 4 ವರ್ಷಗಳ ಅವಧಿಗೆ ನಿಯೋಜಿಸಿಕೊಳ್ಳಲಾಗುವುದು.  ಸದರಿ ತರಬೇತುದಾರರು ಕನಿಷ್ಠ 30 ಮಂದಿಗೆ ತರಬೇತಿಯನ್ನು ನೀಡಬೇಕಾಗಿರುತ್ತದೆ.  ನೇಮಕಗೊಳ್ಳುವ ತರಬೇತುದಾರರಿಗೆ ಪ್ರತೀ ಮಾಹೆ ಗೌರವಧನ ನೀಡಲಾಗುವುದು. ಹಾಗೂ ಕ್ರೀಡಾ ತರಬೇತಿಗೆ ಅವಶ್ಯವಿರುವ ಕ್ರೀಡಾ ಕಿಟ್, ಕ್ರೀಡಾ ಸಲಕರಣೆಗಳನ್ನು ಸಹ ನೀಡಲಾಗುವುದು.ಎನ್‍ಐಎಸ್ ಪ್ರಮಾಣ ಪತ್ರ ಹೊಂದಿರುವ ಪಾಸ್ಟ್ ಚಾಂಪಿಯನ್/ ಕ್ರೀಡಾ ತರಬೇತುದಾರರುಗಳು ಈ ಕೇಂದ್ರ ಸರ್ಕಾರದ ಯೋಜನೆಯ ಅವಕಾಶವನ್ನು ಪಡೆಯಬಹುದಾಗಿದೆ. 

ಕ್ರೀಡಾ ಸಂಸ್ಥೆ/ಶಿಕ್ಷಣ ಸಂಸ್ಥೆಗಳು ಕನಿಷ್ಠ 5 ವರ್ಷಗಳಿಂದ ಕ್ರೀಡೆಯನ್ನು ಉನ್ನತೀಕರಿಸಲು ವಿವಿಧ ಕ್ರೀಡೆಯಲ್ಲಿ ತರಬೇತಿಯನ್ನು ನೀಡಿರುವ ಬಗ್ಗೆ ದಾಖಲೆಗಳೊಂದಿಗೆ  2020ರ ಆಗಸ್ಟ್ 21ರೊಳಗೆ ಅರ್ಜಿ ಸಲ್ಲಿಸುವುದು. 

ಕ್ರೀಡಾ ಸಂಸ್ಥೆ/ ಶಿಕ್ಷಣ ಸಂಸ್ಥೆಗಳು ಕನಿಷ್ಟ 5 ವರ್ಷಗಳಿಂದ ವಿವಿಧ ಕ್ರೀಡೆಗಳನ್ನು ಉನ್ನತೀಕರಿಸಲು ಕ್ರೀಡಾ ತರಬೇತಿಯನ್ನು ನೀಡಿರಬೇಕು, ಕನಿಷ್ಟ ಹಿರಿಯ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಂದ ಕ್ರೀಡಾ ತರಬೇತಿಯನ್ನು ನೀಡಲು ಅರ್ಹರಾಗಿರಬೇಕು,ವಯೋಮಿತಿ 40 ವರ್ಷದೊಳಗಿರಬೇಕು.

ಯೋಜನೆಯ ಮಾರ್ಗಸೂಚಿ ಮತ್ತು ಅರ್ಜಿ ನಮೂನೆಯನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, ಬೆಂಗಳೂರು ಗ್ರಾಮಾಂತರ ಹಾಗೂ ದೂ.ಸಂ.: 9845608598 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ

[ccc_my_favorite_select_button post_id="104157"]
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="104099"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

ದೊಡ್ಡಬಳ್ಳಾಪುರ (Doddaballapura): ಹಳ್ಳಕ್ಕೆ ಬಿದ್ದ ಬೆಂಕಿ ಮನೆಗೆ ವ್ಯಾಪಿಸಿ ವಾಸದ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಹೊಸಹಳ್ಳಿಯಲ್ಲಿ ಸಂಭವಿಸಿದೆ. ರಾಮಕ್ಕ ಎನ್ನುವವರ ಮನೆ ಇದಾಗಿದ್ದು, ಇಂದು ಮನೆಯ ಮಾಲೀಕರು ಹೊಲಕ್ಕೆ ತೆರಳಿದ್ದು, ಶನಿವಾರವಾದ ಕಾರಣ ಐದು ಮಂದಿ ಮಕ್ಕಳು ಶಾಲೆ

[ccc_my_favorite_select_button post_id="104154"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!