ಸಾಧನೆಗೆ ಅಂಗ ವೈಪಲ್ಯ ಅಡ್ಡಿಯಲ್ಲ: ರಾಜಘಟ್ಟರವಿ

ದೊಡ್ಡಬಳ್ಳಾಪುರ: ಅಂಧತ್ವನ್ನು ಸವಾಲಾಗಿ ಸ್ವೀಕರಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳ ಶ್ರಮ ಎಲ್ಲರಿಗೂ ಮಾದರಿಯಾಗಿದೆ.ಬಡ ಕುಟುಂಬದ ಅಂಧ ಮಕ್ಕಳಿಗೆ ನಾರಾಯಣ ನೇತ್ರಾಲಯದಲ್ಲಿ ಉಚಿತವಾಗಿ ಕಣ್ಣು ನೀಡುವುದಲ್ಲದೆ,  ಮಕ್ಕಳಿಗೆ ಎಸ್‌ಎಸ್‌ಎಲ್‌ಸಿವರೆಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದು ಅಭಿಷೇಕ್ ನೇತ್ರಧಾಮದ ನೇತ್ರ ಸಂಗ್ರಹಣಾ ಮುಖ್ಯಸ್ಥರಾದ ಎಂ.ಬಿ.ಗುರುದೇವ್ ಭರವಸೆ ನೀಡಿದರು.

ಕರ್ನಾಟಕ ರಕ್ಷಣಾ ವೇದಿಕೆ(ಪ್ರವಿಣ್‌ಕುಮಾರ್ ಶೆಟ್ಟಿ ಬಣ) ನೇತೃತ್ವದಲ್ಲಿ ನಗರದ ರಂಗಪ್ಪ  ವೃತ್ತದಲ್ಲಿರುವ ಅಭಿಷೇಕ್ ನೇತ್ರಧಾಮದ ಆವರಣದಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದು ಸಾಧನೆ ಮಾಡಿದ ವಿಶೇಷ ಚೇತನರಿಗೆ ನಡೆದ ಸಹಾಯ ಧನ ವಿತರಣೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಅತಿ ಕಡಿಮೆ ಅವಯಲ್ಲಿ ನಗರದ ಡಾ.ರಾಜ್‌ಕುಮಾರ್ ನೇತ್ರ ಸಂಗ್ರಹಣಾ ಕೇಂದ್ರ ದೊಡ್ಡಬಳ್ಳಾಪುರದಲ್ಲಿ ಸುಮಾರು 1,464 ನೇತ್ರಗಳನ್ನು ಸಂಗ್ರಹ ಮಾಡಿರುವುದು ದೇಶ ಮಟ್ಟದ ಸಾಧನೆಯಾಗಿದೆ. ದೇಶದ ಅತಿ ದೊಡ್ಡ ಜನಸಂಖ್ಯೆ ಇರುವ ಉತ್ತರ ಪ್ರದೇಶದಲ್ಲಿ ನೇತ್ರ ದಾನ ಮಾಡಿರುವವರ ಸಂಖ್ಯೆ ನೂರರ ಅಂತರದಲ್ಲೆ ಇದೆ. ಆದರೆ 1ಲಕ್ಷ ಜನ ಸಂಖ್ಯೆ ಇರುವ ದೊಡ್ಡಬಳ್ಳಾಪುರದಲ್ಲಿ 1,464 ನೇತ್ರದಾನ ನಡೆದಿರುವುದು ರಾಷ್ಟ್ರ ಮಟ್ಟದ ಸಾಧನೆಯಾಗಿದೆ. ಇಂತಹ ಸಂದರ್ಭದಲ್ಲಿ ಎರಡು ಕೈ ಇಲ್ಲದವರು ಅಂಧ ಮಕ್ಕಳು ಹೆಚ್ಚಿನ ಅಂಕಗಳನ್ನು ಗಳಿಸಿ ಸಾಧನೆ ಮಾಡಿರುವುದು ವಿಶೇಷ ಸಾಧನೆಯೆಂದೆ ಪರಿಗಣಿಸ ಬೇಕಾಗಾಗುತ್ತದೆ ಎಂದರು.

ಕರವೇ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ,ಎಲ್ಲಾ ಅಂಗಾಂಗಗಳು ಸರಿಯಿದ್ದರೂ ಸಾಧನೆಯ ಹಾದಿಯಲ್ಲಿ ಸಾಗುವುದು ಸಾಧ್ಯವಾಗದ ಸ್ಥಿತಿಯಲ್ಲಿ, ಅಂಗ ವೈಪಲ್ಯವನ್ನೂ ಮೀರಿ ಸಾಧನೆ ಮಾಡಿ ನಮಗೂ ಮಾರ್ಗದರ್ಶಕರಾಗಿರುವ ಇಂತಹ ಸಾಧಕರನ್ನು ಗುರುತಿಸಿ ಸನ್ಮಾನಿಸಿ ಅಭಿನಂದಿಸುವ ಅವಕಾಶ ಸಿಕ್ಕಿರುವುದು ನಮ್ಮ ಸೌಭಾಗ್ಯವಾಗಿದ್ದು,ಇವರ ಸಾಧನೆ ಇತರರಿಗೆ ಮಾದರಿಯಾಗಲಿ ಎಂದರು.

ಸನ್ಮಾನಿತ ವಿಶೇಷ ಚೇತನ ಸಾಧಕರು ;

ಎರಡೂ ಕೈಗಳು ಇಲ್ಲದ ವಿಕಲಚೇತನ ವಿದ್ಯಾರ್ಥಿನಿ ಸಮೀನಾ ಕಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದು ಉತ್ತೀರ್ಣಳಾಗಿದ್ದಾಳೆ. ಇವರು ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅದೇ ರೀತಿ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಡಶಾಲೆಯ ಸರ್ಕಾರಿ ಪ್ರೌಡಶಾಲೆಯ ಅಂಧ ವಿದ್ಯಾರ್ಥಿನಿ ಕನಿಶಿಖಾ, ಬ್ರೈಲ್ ಲಿಪಿಯಲ್ಲೇ ವ್ಯಾಸಂಗ ಮಾಡಿ ಪರೀಕ್ಷೆ ಬರೆದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 475 ಅಂಕಗಳನ್ನು ಪಡೆದಿದ್ದಾಳೆ. ಶಿಡ್ಲಘಟ್ಟದ ಅಶಾ ಕಿರಣ ಹೆಣ್ಣು ಮಕ್ಕಳ ವಸತಿ ಶಾಲೆಯಲ್ಲಿ  ವ್ಯಾಸಂಗ ಮಾಡಿದ ದೊಡ್ಡಬಳ್ಳಾಪುರದ ರಾಜೀವ್‌ಗಾಂಧಿ ಆಶ್ರಯ ಕಾಲೋನಿಯ ಅಂಧ ವಿದ್ಯಾರ್ಥಿನಿ ವಿ.ಪುಷ್ಪಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 513 ಅಂಕಗಳನ್ನು ಪಡೆದಿದ್ದಾಳೆ. ಈ ಮೂರು ಮಂದಿ ವಿದ್ಯಾರ್ಥಿನಿಯರಿಗೆ ಸನ್ಮಾನಿಸಿ, ಸಹಾಯ ದನ ನೀಡಲಾಯಿತು.

ಈ ಸಂದರ್ಭದಲ್ಲಿ ಕರವೇ ಪ್ರವೀಣ್‌ಕುಮಾರ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ಹೆಚ್.ಎಸ್.ವೆಂಕಟೇಶ್,ಉಪಾಧ್ಯಕ್ಷ ವಕೀಲ ಮಲ್ಲಾತಹಳ್ಳಿ ಆನಂದ್, ಪ್ರಧಾನ ಕಾರ್ಯದರ್ಶಿ ಎಸ್.ಎಲ್.ಎನ್ ವೇಣು,ಗೌರವಾಧ್ಯಕ್ಷ ಪು.ಮಹೇಶ್,ವೈದ್ಯಕೀಯ ಘಟಕದ ತಾಲೂಕು ಅಧ್ಯಕ್ಷ ಡಾ.ಹರೀಶ್,ಮುಖಂಡರಾದ ಅಮ್ಮ,ಬಷೀರ್, ಸುಬ್ರಮಣಿ,ಸೂರಿ ಸೇರಿದಂತೆ ಇತರರು ಇದ್ದರು.

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!