ಪಶು ಚಿಕಿತ್ಸಾ ವಾಹನಕ್ಕೆ ಸಚಿವ ಪ್ರಭು ಚವ್ಹಾಣ್ ಚಾಲನೆ

ಕಲಬುರಗಿ: ರೋಗಗ್ರಸ್ತ ಜಾನುವಾರುಗಳ ಚಿಕಿತ್ಸೆಗೆ ನೀಡುವ ಸುಸಜ್ಜಿತ ಪಶು ಚಿಕಿತ್ಸಾ ವಾಹನ (ಅಂಬುಲೆನ್ಸ್ ವಾಹನಕ್ಕೆ) ಗುರುವಾರ ಕಲಬುರಗಿಯಲ್ಲಿ ಪಶುಸಂಗೋಪನೆ, ಹಜ್  ಹಾಗೂ ವಕ್ಫ್ ಸಚಿವ ಪ್ರಭು ಚವ್ಹಾಣ್ ಹಳೇ ಐವಾನ –ಎ-ಶಾಹಿ ಅತಿಥಿಗೃಹದಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ರೈತರ ಮನೆ ಬಾಗಿಲಿಗೆ ಹೋಗಿ ಜಾನುವಾರುಗಳಿಗೆ ಪಶು ವೈದ್ಯಕೀಯ ಸೇವೆ ನೀಡಲು 2019-20ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯಾದ್ಯಂತ 2 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 15 “ಸುಸಜ್ಜಿತ ಪಶು ಚಿಕಿತ್ಸಾ ವಾಹನ” ನೀಡಲು ಮಂಜೂರಾತಿ ನೀಡಲಾಗಿದ್ದು, ಅದರಂತೆ ಕಲ್ಯಾಣ ಕರ್ನಾಟಕ ಬೀದರ, ಕಲಬುರಗಿ ಹಾಗೂ ರಾಯಚೂರು ಜಿಲ್ಲೆ ಒಳಗೊಂಡಂತೆ 15 ಜಿಲ್ಲೆಗಳಿಗೆ ಮೊದಲ ಹಂತದಲ್ಲಿ 15 ವಾಹನಗಳನ್ನು ನೀಡಲಾಗಿದೆ. ಮುಂದಿನ ದಿನದಲ್ಲಿ ಇತರೆ ಜಿಲ್ಲೆಗಳಿಗೂ ಅಂಬುಲೆನ್ಸ್ ವಾಹನ ನೀಡಲಾಗುವುದು ಎಂದರು.

ಸುಸಜ್ಜಿತ ಸಂಚಾರಿ ಪಶು ಶಸ್ತ್ರಚಿಕಿತ್ಸಾ ವಾಹನದಿಂದ ದನ, ಎಮ್ಮೆ, ಕುರಿ, ಮೇಕೆ, ಹಂದಿ, ಇನ್ನಿತರ ಜಾನುವಾರುಗಳಿಗೆ ತಜ್ಞ ಪಶುವೈದ್ಯರ ಮೂಲಕ ತುರ್ತು ಸೇವೆಯನ್ನು ನೀಡಲು ಸಹಕಾರಿಯಾಗಿದೆ ಎಂದ ಸಚಿವರು ಗೋ ಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲಿಯ್ಲೂ ಜಾರಿಗೆ ತರಲು ಮುಖ್ಯಮಂತ್ರಿಗಳ ಜೊತೆಗೆ ಮಾತನಾಡುವುದಾಗಿ ಸಚಿವರು ತಿಳಿಸಿದರು.

ವಾಹನದಲ್ಲಿ ಏನೇನಿದೆ: ಆಧುನಿಕ ಪಶುವೈದ್ಯಕೀಯ ಶಸ್ತ್ರ ಚಿಕಿತ್ಸಾ ಘಟಕ, ಪ್ರಯೋಗ ಶಾಲೆ, ಸ್ಕ್ಯಾನಿಂಗ್ ಉಪಕರಣ ಆಳವಡಿಕೆಗಾಗಿ ಅವಕಾಶ, 250 ಲೀಟರ್ ಸಾಮಥ್ರ್ಯದ ನೀರಿನ ಟ್ಯಾಂಕ್, 200 ಕೆ.ಜಿ. ತೂಕ ಸಾಮಥ್ರ್ಯಧ ಶಸ್ತ್ರ ಚಿಕಿತ್ಸಾ ಟೇಬಲ್, ಎಲ್.ಇ.ಡಿ. ಲೈಟ್, ಆಮ್ಲಜನಕ ಸಪೋರ್ಟ್ ಸಿಸ್ಟಮ್ ಅಳವಡಿಕೆ, ಆಕಸ್ಮಿಕ ಬೆಂಕಿ ಅನಾಹುತ ನಿವಾರಣೆ, ಜಾನುವಾರುಗಳ ಚಿಕಿತ್ಸೆಗೆ ಅತ್ಯವಶ್ಯಕವಾಗಿರುವ ಶಸ್ತ್ರ ಚಿಕಿತ್ಸಾ ಉಪಕರಣ ಕಿಟ್, ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್, ಪ್ರಸೂತಿ ಕಿಟ್‍ಗಳ ಪೆಟ್ಟಿಗೆ ಇದೆ.

ಈ ಸಂದರ್ಭದಲ್ಲಿ ಸಂಸದ ಮತ್ತು ಬಿ.ಜೆ.ಪಿ. ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ವಿಧಾನಸಭೆಯ ಶಾಸಕರಾದ ಬಸವರಾಜ ಮತ್ತಿಮೂಡ, ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಶಾಸಕ ಬಿ.ಜಿ. ಪಾಟೀಲ್, ಮಾಜಿ ಶಾಸಕರಾದ ಮಾಲೀಕಯ್ಯಾ ಗುತ್ತೇದಾರ, ಮಾಜಿ ಎಂ.ಎಲ್.ಸಿ. ಅಮರನಾಥ ಪಾಟೀಲ, ಜಿಲ್ಲಾ ಪಂಚಾಯತ್ ಸದಸ್ಯ ಶಿವರಾಜ ಪಾಟೀಲ ರದ್ದೆವಾಡಗಿ, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ವಿ.ಹೆಚ್.ಹನುಮಂತಪ್ಪ ಸೇರಿದಂತೆ ಇನ್ನಿತರರು ಇದ್ದರು.

ರಾಜಕೀಯ

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

“ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="117560"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ (BJP) ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.

[ccc_my_favorite_select_button post_id="117562"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!