ಬೆಂ.ಗ್ರಾ.ಜಿಲ್ಲೆ: ಲಸಿಕೆ ಸಾಪ್ತಾಹ ಕಾರ್ಯಕ್ರಮ ರೂಪಿಸಲು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚನೆ

ದೊಡ್ಡಬಳ್ಳಾಪುರ: ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಲಸಿಕೆ ಸಪ್ತಾಹ ಕೈಗೊಳ್ಳುವ ಮೂಲಕ ಲಸಿಕೆಯಿಂದ ಹೊರತಾದ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ಕೆ ಮುಂದಾಗಬೇಕೆಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು. 

ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬಳಿಯಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಹಾಗೂ ಜಿಲ್ಲೆಯ ಮಕ್ಕಳ  ಆರೋಗ್ಯ ಸ್ಥಿತಿ ಉತ್ತಮವಾಗಿ ಕಾಪಾಡಿಕೊಳ್ಳಲು, ಆರೋಗ್ಯ ಕಾರ್ಯಕರ್ತರು ಹಾಗೂ ತಾಲ್ಲೂಕಿನ ವೈದ್ಯಾಧಿಕಾರಿಗಳನ್ನು ಒಳಗೊಂಡ ಜಿಲ್ಲಾ ಹಾಗೂ ತಾಲ್ಲೂಕು ಲಸಿಕಾ ಕಾರ್ಯ ಪಡೆಯು ಕಾರ್ಯೋನ್ಮುಖವಾಗಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ತಾಯಿಯ ಮರಣ ಪ್ರಮಾಣ ಹಾಗೂ ಶಿಶುವಿನ ಮರಣ ಪ್ರಮಾಣವನ್ನು ನಿಂಯತ್ರಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ  ಕಲ್ಯಾಣ ಅಭಿವೃದ್ದಿ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕು, ಗರ್ಭಿಣಿ ಮಹಿಳೆಯರಿಗೆ ರಕ್ತಹೀನತೆ  ತಡೆಗೆ ಮುಂಜಾಗ್ರತೆ ವಹಿಸಿ  ಕಬ್ಬಿಣಾಂಶದ ಮಾತ್ರೆಗಳನ್ನು‌ ಕೊಡುವುದರಿಂದ ತಾಯಿ ಮರಣ ಪ್ರಮಾಣ ಶಿಶು ಮರಣ ಪ್ರಮಾಣ ತಡೆಯಲು ಸಹಕಾರಿಯಾಗಿದೆ ಎಂದರು.

ಸಾರ್ವಜನಿಕರಲ್ಲಿ ಆರೋಗ್ಯ ಶಿಕ್ಷಣದ ಬಗ್ಗೆ ಮಾಹಿತಿ ನೀಡುವ ಮೂಲಕ ಹೆಚ್ಚು ಜಾಗೃತಿ  ಮೂಡಿಸಿ, ಸಾರ್ವಜನಿಕರ ಆರೋಗ್ಯದ ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು. 

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದೇಶಕ ಗಂಗಮಾರೇಗೌಡ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ರಾಜಕೀಯ

ಬಿಜೆಪಿಯವರ ಮಾತು ನಂಬಿ ಉದ್ಯೋಗಾಂಕ್ಷಿಗಳು FIR ಹಾಕಿಸಿಕೊಳ್ಳಬೇಡಿ: ಶಾಸಕ ಪ್ರದೀಪ್ ಈಶ್ವರ್

ಬಿಜೆಪಿಯವರ ಮಾತು ನಂಬಿ ಉದ್ಯೋಗಾಂಕ್ಷಿಗಳು FIR ಹಾಕಿಸಿಕೊಳ್ಳಬೇಡಿ: ಶಾಸಕ ಪ್ರದೀಪ್ ಈಶ್ವರ್

ಬಿಜೆಪಿಯವರು ಅಧಿಕಾರದಲ್ಲಿ ಇದ್ದಾಗ ಉದ್ಯೋಗ ನೇಮಕಾತಿ ಮಾಡಬೇಕೆಂಬುದು ನೆನಪಿಗೆ ಬರಲಿಲ್ಲ. ಅಶೋಕಣ್ಣ, ಬೆಲ್ಲದ್ ಅವರು ಪ್ರತಿಭಟನೆಗೆ ಹೋಗುತ್ತಾರೆ. ನಿಮ್ಮ ಸರಕಾರ ಇದ್ದಾಗ ಯಾಕೆ ನೇಮಕಾತಿ ಮಾಡಿಕೊಂಡಿಲ್ಲ? ಯಡಿಯೂರಪ್ಪ, ಬೊಮ್ಮಾಯಿ ಇದ್ದಾಗ ಯಾಕೆ ನೇಮಕಾತಿ ಮಾಡಿಲ್ಲ:

[ccc_my_favorite_select_button post_id="119762"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!