ದೊಡ್ಡಬಳ್ಳಾಪುರ: ಲಾಕ್‌ಡೌನ್‌ ವೇಳೆ ಕರ್ನಾಟಕದಿಂದ ಅತಿಹೆಚ್ಚು ಹಣ್ಣು, ತರಕಾರಿ ರಪ್ತು- ಸಿ.ಎಸ್.ಕರೀಗೌಡ

ದೊಡ್ಡಬಳ್ಳಾಪುರ: ಕೃಷಿ ಉತ್ಪಾದನೆಯಲ್ಲಿ ನಮ್ಮದು ರಫ್ತು ಆಧಾರಿತ ರಾಜ್ಯವಾಗಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಕರ್ನಾಟಕದಿಂದ ರಫ್ತು ಮಾಡಿದ್ದಷ್ಟು ಹಣ್ಣು, ತರಕಾರಿ ದೇಶದ ಬೇರೆ ಯಾವ ರಾಜ್ಯದಲ್ಲು ನಡೆದಿಲ್ಲ ಎಂದು ಕೃಷಿ ಮಾರುಕಟ್ಟೆ ನಿರ್ದೇಶಕ ಸಿ.ಎಸ್.ಕರೀಗೌಡ ಹೇಳಿದರು.

ಅವರು ತಾಲ್ಲೂಕಿನ ಅಪ್ಪಕಾರನಹಳ್ಳಿ ಗ್ರಾಮದ ರೈತ ಗಂಗಬೈರಪ್ಪ ಅವರು ನೀಲಗಿರಿ ತೆರವುಗೊಳಿಸಿ ಅರಣ್ಯ ಆಧಾರಿತ ಕೃಷಿ ಆರಂಭದ ಭಾಗವಾಗಿ ಶುಕ್ರವಾರ ಹಲಸಿನ ಸಸಿ ನೆಟ್ಟು ಮಾತನಾಡಿದರು. 

ಬಯಲು ಸೀಮೆ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಅಂತರ್ಜಲ ಗಣನೀಯವಾಗಿ ಕುಸಿತವಾಗಲು ಹಾಗೂ ಮಣ್ಣಿನ ಫಲವತ್ತತೆ ಹಾಳಾಗಲು ನೀಲಗಿರಿ ಮರ ಮುಖ್ಯ ಕಾರಣವಾಗಿದೆ. ಈ ನಿಟ್ಟಿನಲ್ಲಿ ಎರಡು ವರ್ಷಗಳ ಹಿಂದೆ ಆರಂಭಿಸಲಾದ ನೀಲಗಿರಿ ಮರಗಳ ತೆರವು ಆಂದೋಲನದ ಉದ್ದೇಶ ರೈತರಿಗೆ ಮನವರಿಕೆಯಾಗಿದೆ. ನೀಲಗಿರಿ ಬೆಳೆಯಿಂದ ಒಬ್ಬ ರೈತ ಹಣ ಗಳಿಸಬಹುದು. ಆದರೆ ಅಕ್ಕಪಕ್ಕದ ಇತರೆ ರೈತರ ಭೂಮಿಯಲ್ಲಿ ಯಾವುದೇ ರೀತಿಯ ಬೆಳೆ ಬೆಳೆಯಲು ಸಾಧ್ಯವಾಗುವುದಿಲ್ಲ ಎಂದರು. 

ನೀಲಗಿರಿ ಮರಗಳನ್ನು ಬೆಳೆಸಿ ಆದಾಯಗಳಿಸುವುದಕ್ಕಿಂತಲು ಹೆಚ್ಚಿನ ಆದಾಯ ಹಾಗೂ ಪರಿಸರ, ಪ್ರಾಣಿ, ಪಕ್ಷಿಗಳಿಗು ಅನುಕೂಲವಾಗುವಂತೆ ಅರಣ್ಯ ಆಧಾರೀತ ಕೃಷಿಯಿಂದ ಪಡೆಯಲು ಸಾಕಷ್ಟು ಅವಕಾಶಗಳಿವೆ. ಹಣ್ಣಿನ ಗಿಡಗಳನ್ನು ಬೆಳೆಸಲು ಕೊಳವೆಬಾವಿ ನೀರಿನ ಆಶ್ರಯ ಅಗತ್ಯ ಎನ್ನುವ ಕಲ್ಪನೆ ತಪ್ಪು. ಕೊಳವೆಬಾವಿ ಇಲ್ಲದೆಯು ಟ್ಯಾಂಕರ್ಗಳ ಮೂಲಕ ಕಡಿಮೆ ಪ್ರಮಾಣದ ನೀರು ಬಳಸಿಕೊಂಡು ಸಸಿಗಳನ್ನು ನೆಟ್ಟು ಪೋಷಣೆ ಮಾಡಲು ಸಾಕಷ್ಟು ಉಪಾಯಗಳನ್ನು ರೈತರು ಇಂದು ಕಂಡುಕೊಂಡಿದ್ದಾರೆ. ಸಸಿಗಳನ್ನು ನೆಟ್ಟ ಒಂದೆರಡು ವರ್ಷಗಳ ಕಾಲ ಬೇಸಿಗೆಯಲ್ಲಿ ಮಾತ್ರ ನೀರು ಅಗತ್ಯ. ಇತರೆ ದಿನಗಳಲ್ಲಿ ಮಳೆ ನೀರಿನಲ್ಲೇ ಅರಣ್ಯ ಆಧಾರಿತ ಕೃಷಿ ಸಾಧ್ಯವಾಗಲಿದೆ ಎಂದರು. 

ಬಯಲು ಸೀಮೆ ಜಿಲ್ಲೆಗಳಲ್ಲಿ ಅಂತರ್ಜಲದ ಮೇಲಿನ ಅವಲಂಭನೆ ಹೆಚ್ಚಾಗುತ್ತಿದೆ. ಹೀಗಾಗಿ ಕೃಷಿಗೆ ನೀರಿನ ಕೊರತೆ ಮತ್ತಷ್ಟು ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಕೃಷಿಯನ್ನು ನಂಬಿ ಜೀವನ ನಡೆಸಲು ಅರಣ್ಯ ಆಧಾರಿತ ಕೃಷಿ ಅನಿವಾರ್ಯವಾಗಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಮುಖಂಡರಾದ ಮುತ್ತೇಗೌಡ, ಕೆ.ಸುಲೋಚನಮ್ಮ ವೆಂಕಟರೆಡ್ಡಿ, ವಡ್ಡರಹಳ್ಳಿರವಿ, ಆರ್.ಕೆಂಪರಾಜ್, ಶಿವಕುಮಾರ್, ಹಸನ್ ಘಟ್ಟ ಚಂದ್ರಶೇಖರ್, ವೆಂಕಟಾಚಲಪತಿ,ನಾಗಸಂದ್ರ ನಟರಾಜ್,ಗಂಗಾಧರ್,ಡಿ.ಶ್ರೀಕಾಂತ್ ಇದ್ದರು.

ರಾಜಕೀಯ

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಅಂಡರ್ ಪಾಸ್ ಅವೈಜ್ಞಾನಿಕ: ಸಂಸದ ಡಾ. ಕೆ. ಸುಧಾಕರ

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಅಂಡರ್ ಪಾಸ್ ಅವೈಜ್ಞಾನಿಕ: ಸಂಸದ ಡಾ. ಕೆ. ಸುಧಾಕರ

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಸಂಸದ ಡಾ.ಕೆ ಸುಧಾಕರ್ (Dr.K. Sudhakar) ಅವರು ಸೂಚನೆ ನೀಡಿದರು.

[ccc_my_favorite_select_button post_id="120824"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]