ದೊಡ್ಡಬಳ್ಳಾಪುರ: ಲಾಕ್‌ಡೌನ್‌ ವೇಳೆ ಕರ್ನಾಟಕದಿಂದ ಅತಿಹೆಚ್ಚು ಹಣ್ಣು, ತರಕಾರಿ ರಪ್ತು- ಸಿ.ಎಸ್.ಕರೀಗೌಡ

ದೊಡ್ಡಬಳ್ಳಾಪುರ: ಕೃಷಿ ಉತ್ಪಾದನೆಯಲ್ಲಿ ನಮ್ಮದು ರಫ್ತು ಆಧಾರಿತ ರಾಜ್ಯವಾಗಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಕರ್ನಾಟಕದಿಂದ ರಫ್ತು ಮಾಡಿದ್ದಷ್ಟು ಹಣ್ಣು, ತರಕಾರಿ ದೇಶದ ಬೇರೆ ಯಾವ ರಾಜ್ಯದಲ್ಲು ನಡೆದಿಲ್ಲ ಎಂದು ಕೃಷಿ ಮಾರುಕಟ್ಟೆ ನಿರ್ದೇಶಕ ಸಿ.ಎಸ್.ಕರೀಗೌಡ ಹೇಳಿದರು.

ಅವರು ತಾಲ್ಲೂಕಿನ ಅಪ್ಪಕಾರನಹಳ್ಳಿ ಗ್ರಾಮದ ರೈತ ಗಂಗಬೈರಪ್ಪ ಅವರು ನೀಲಗಿರಿ ತೆರವುಗೊಳಿಸಿ ಅರಣ್ಯ ಆಧಾರಿತ ಕೃಷಿ ಆರಂಭದ ಭಾಗವಾಗಿ ಶುಕ್ರವಾರ ಹಲಸಿನ ಸಸಿ ನೆಟ್ಟು ಮಾತನಾಡಿದರು. 

ಬಯಲು ಸೀಮೆ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಅಂತರ್ಜಲ ಗಣನೀಯವಾಗಿ ಕುಸಿತವಾಗಲು ಹಾಗೂ ಮಣ್ಣಿನ ಫಲವತ್ತತೆ ಹಾಳಾಗಲು ನೀಲಗಿರಿ ಮರ ಮುಖ್ಯ ಕಾರಣವಾಗಿದೆ. ಈ ನಿಟ್ಟಿನಲ್ಲಿ ಎರಡು ವರ್ಷಗಳ ಹಿಂದೆ ಆರಂಭಿಸಲಾದ ನೀಲಗಿರಿ ಮರಗಳ ತೆರವು ಆಂದೋಲನದ ಉದ್ದೇಶ ರೈತರಿಗೆ ಮನವರಿಕೆಯಾಗಿದೆ. ನೀಲಗಿರಿ ಬೆಳೆಯಿಂದ ಒಬ್ಬ ರೈತ ಹಣ ಗಳಿಸಬಹುದು. ಆದರೆ ಅಕ್ಕಪಕ್ಕದ ಇತರೆ ರೈತರ ಭೂಮಿಯಲ್ಲಿ ಯಾವುದೇ ರೀತಿಯ ಬೆಳೆ ಬೆಳೆಯಲು ಸಾಧ್ಯವಾಗುವುದಿಲ್ಲ ಎಂದರು. 

ನೀಲಗಿರಿ ಮರಗಳನ್ನು ಬೆಳೆಸಿ ಆದಾಯಗಳಿಸುವುದಕ್ಕಿಂತಲು ಹೆಚ್ಚಿನ ಆದಾಯ ಹಾಗೂ ಪರಿಸರ, ಪ್ರಾಣಿ, ಪಕ್ಷಿಗಳಿಗು ಅನುಕೂಲವಾಗುವಂತೆ ಅರಣ್ಯ ಆಧಾರೀತ ಕೃಷಿಯಿಂದ ಪಡೆಯಲು ಸಾಕಷ್ಟು ಅವಕಾಶಗಳಿವೆ. ಹಣ್ಣಿನ ಗಿಡಗಳನ್ನು ಬೆಳೆಸಲು ಕೊಳವೆಬಾವಿ ನೀರಿನ ಆಶ್ರಯ ಅಗತ್ಯ ಎನ್ನುವ ಕಲ್ಪನೆ ತಪ್ಪು. ಕೊಳವೆಬಾವಿ ಇಲ್ಲದೆಯು ಟ್ಯಾಂಕರ್ಗಳ ಮೂಲಕ ಕಡಿಮೆ ಪ್ರಮಾಣದ ನೀರು ಬಳಸಿಕೊಂಡು ಸಸಿಗಳನ್ನು ನೆಟ್ಟು ಪೋಷಣೆ ಮಾಡಲು ಸಾಕಷ್ಟು ಉಪಾಯಗಳನ್ನು ರೈತರು ಇಂದು ಕಂಡುಕೊಂಡಿದ್ದಾರೆ. ಸಸಿಗಳನ್ನು ನೆಟ್ಟ ಒಂದೆರಡು ವರ್ಷಗಳ ಕಾಲ ಬೇಸಿಗೆಯಲ್ಲಿ ಮಾತ್ರ ನೀರು ಅಗತ್ಯ. ಇತರೆ ದಿನಗಳಲ್ಲಿ ಮಳೆ ನೀರಿನಲ್ಲೇ ಅರಣ್ಯ ಆಧಾರಿತ ಕೃಷಿ ಸಾಧ್ಯವಾಗಲಿದೆ ಎಂದರು. 

ಬಯಲು ಸೀಮೆ ಜಿಲ್ಲೆಗಳಲ್ಲಿ ಅಂತರ್ಜಲದ ಮೇಲಿನ ಅವಲಂಭನೆ ಹೆಚ್ಚಾಗುತ್ತಿದೆ. ಹೀಗಾಗಿ ಕೃಷಿಗೆ ನೀರಿನ ಕೊರತೆ ಮತ್ತಷ್ಟು ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಕೃಷಿಯನ್ನು ನಂಬಿ ಜೀವನ ನಡೆಸಲು ಅರಣ್ಯ ಆಧಾರಿತ ಕೃಷಿ ಅನಿವಾರ್ಯವಾಗಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಮುಖಂಡರಾದ ಮುತ್ತೇಗೌಡ, ಕೆ.ಸುಲೋಚನಮ್ಮ ವೆಂಕಟರೆಡ್ಡಿ, ವಡ್ಡರಹಳ್ಳಿರವಿ, ಆರ್.ಕೆಂಪರಾಜ್, ಶಿವಕುಮಾರ್, ಹಸನ್ ಘಟ್ಟ ಚಂದ್ರಶೇಖರ್, ವೆಂಕಟಾಚಲಪತಿ,ನಾಗಸಂದ್ರ ನಟರಾಜ್,ಗಂಗಾಧರ್,ಡಿ.ಶ್ರೀಕಾಂತ್ ಇದ್ದರು.

ರಾಜಕೀಯ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ನಿನ್ನೆ ಧಾರವಾಡದಲ್ಲಿ ನಡೆದ ಪ್ರತಿಭಟನೆಯ ವಿದ್ಯಾರ್ಥಿಗಳಿಂದ ಗೋ ಬ್ಯಾಕ್ ಕೂಗಿಸಿಕೊಂಡು ಮುಜುಗರಕ್ಕೀಡಾಗಿ ಹಿಂತಿರುಗಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka) ಅವರು, ಇಂದು ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿ ಆರೋಪಗಳ

[ccc_my_favorite_select_button post_id="119746"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!