ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಗೆ ಅಗತ್ಯ ಕ್ರಮ ಕೈಗೊಳ್ಳಲು ಅಪರ ಜಿಲ್ಲಾಧಿಕಾರಿ ಡಾ:ಜಗದೀಶ್.ಕೆ.ನಾಯಕ್ ಸೂಚನೆ

ದೊಡ್ಡಬಳ್ಳಾಪುರ: ಸೆಪ್ಟಂಬರ್ 7 ರಿಂದ 18 ರವರೆಗೆ ನಡೆಯಲಿರುವ ಜಿಲ್ಲೆಯ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಗೆ, ಜಿಲ್ಲೆಯ 2500 ವಿದ್ಯಾರ್ಥಿಗಳು ಹಾಜರಾಗಲಿದ್ದು, ಪರೀಕ್ಷೆಯು ಸುಸೂತ್ರವಾಗಿ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ:ಜಗದೀಶ್.ಕೆ.ನಾಯಕ್ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿಂದು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ, “2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ವ್ಯವ್ಯಸ್ಥಿತವಾಗಿ ನಡೆಸಲು ಪೂರ್ವಸಿದ್ಧತಾ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೊರೋನಾ ವೈರಾಣು ಸೋಂಕು ಭೀತಿ ಹಿನ್ನಲೆ, ಪರೀಕ್ಷೆಗೆ ಹಾಜರಾಗುವ ಮಕ್ಕಳ ಆರೋಗ್ಯ ಸುರಕ್ಷತಾ ದೃಷ್ಟಿಯಿಂದ ಪರೀಕ್ಷೆ ನಡೆಯಲಿರುವ ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳನ್ನು ಹಾಗೂ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಆವರಣವನ್ನು ಸ್ಯಾನಿಟೈಜ್ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ದ್ವೀತಿಯ ಪಿ.ಯು.ಸಿ. ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾಸ್ಕ್‌ಗಳನ್ನು ನೀಡಬೇಕು. ಪ್ರತಿ ವಿದ್ಯಾರ್ಥಿಗಳಿಗೆ ಸ್ಯಾನಿಟೈಜ್ ನೀಡಿ ಥರ್ಮಲ್ ಸ್ಕ್ರೀನಿಂಗ್ ತಪಾಸಣೆ ನಡೆಸಿ ನಂತರ ಪರೀಕ್ಷಾ ಕೊಠಡಿಗೆ ಪ್ರವೇಶಿಸಲು ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು. 

ಜಿಲ್ಲೆಯಲ್ಲಿ ದ್ವೀತಿಯ ಪಿ.ಯು.ಸಿ. ಪೂರಕ ಪರೀಕ್ಷೆ ನಡೆಯಲಿರುವ ಒಟ್ಟು 4 ಪರೀಕ್ಷಾ ಕೇಂದ್ರಗಳ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಹೊರಡಿಸಲಾಗುವುದು. ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯೊಳಗೆ ವಿದ್ಯಾರ್ಥಿಗಳ ಪಾಲಕರೂ ಪ್ರವೇಶಿಸುವಂತಿಲ್ಲ ಎಂದರು.

ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳನ್ನು ಪ್ರವೇಶಿಸುವಾಗ ಹಾಗೂ ಮರಳಿ ಹೋಗುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳವಂತೆ ಶಿಕ್ಷಕರು ನಿಗಾವಹಿಸಬೇಕು, ಅಲ್ಲದೆ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳು ಉತ್ತಮವಾಗಿರುವಂತೆ ಕ್ರಮ ವಹಿಸಲು ತಿಳಿಸಿದರು.

ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ವತಿಯಿಂದ 4 ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್‌ನೊದಿಂಗೆ  ಪರೀಕ್ಷಾ ಕಾರ್ಯಗಳಿಗೆ ವಾಹನ ಸೌಕರ್ಯ ಕಲ್ಪಿಸಲಾಗುವುದು ಎಂದು ಹೇಳಿದರು. 

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಪದವಿ  ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಈ ಮುಂಚೆ ಅಮಾನತು ಆದರೂ ಶಾಸಕರಿಗೆ ಅರಿವು ಬಂದಿಲ್ಲ: ಸ್ಪೀಕರ್ ಯುಟಿ ಖಾದರ್ ಗರಂ

ಈ ಮುಂಚೆ ಅಮಾನತು ಆದರೂ ಶಾಸಕರಿಗೆ ಅರಿವು ಬಂದಿಲ್ಲ: ಸ್ಪೀಕರ್ ಯುಟಿ ಖಾದರ್

ಬೆಂಗಳೂರು: ಈ ಮುಂಚೆಯೇ ಸದನದಿಂದ ಅಮಾನತು ಆದರೂ ಶಾಸಕರಿಗೆ ತಮ್ಮ ತಪ್ಪಿನ ಅರಿವು ಬಂದಿಲ್ಲ. ಇಂತಹ ವರ್ತನೆ ಸರಿಯಾಗಬೇಕು. ಅವರಿಗೆ ಶಿಸ್ತು ಕಲಿಸುವ ಪ್ರಯತ್ನ ಇದಾಗಿದೆ ಎಂದು 18 ಶಾಸಕರ ಅಮಾನತು ಆದೇಶದ ಕುರಿತು

[ccc_my_favorite_select_button post_id="104452"]
2ನೇ ವಿಮಾನ ನಿಲ್ದಾಣ: ಮೂರು ಸ್ಥಳಗಳು ಇವೇ ನೋಡಿ.. ಪರಿಶೀಲನೆಗೆ ಕೇಂದ್ರ ತಂಡದ ಆಗಮನ

2ನೇ ವಿಮಾನ ನಿಲ್ದಾಣ: ಮೂರು ಸ್ಥಳಗಳು ಇವೇ ನೋಡಿ.. ಪರಿಶೀಲನೆಗೆ ಕೇಂದ್ರ ತಂಡದ

ಬೆಂಗಳೂರು: ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ (MB Patila) ಶನಿವಾರ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮ

[ccc_my_favorite_select_button post_id="104458"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಬೆಂಗಳೂರು: IPLಗೆ ಕ್ಷಣಗಣನೆ ಆಭವಾಗಿದ್ದು, ಕ್ರಿಕೆಟ್ ಜ್ವರ ವ್ಯಾಪಿಸುತ್ತಿದೆ. ಈ ನಡುವೆ ಆರ್‌ಸಿಬಿಯ ಮಾಜಿ ಆಟಗಾರ, ದಕ್ಷಿಣಆಫ್ರಿಕಾದ ಮೂಲದ ಎಬಿ.ಡಿ ವಿಲ್ಲಿಯರ್ಸ್ (ABD) ವಿರಾಟ್ ಕೊಹ್ಲಿಗೆ (Virat Kohli) ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ‘ವಿರಾಟ್

[ccc_my_favorite_select_button post_id="104303"]

ಫೆ.28 ರಂದು ಮಹಿಳಾ ಕ್ರೀಡಾಕೂಟ

[ccc_my_favorite_select_button post_id="103061"]

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]
ಕಾಶ್ಮೀರದ ಬಿಜೆಪಿ ನಾಯಕ ಆತ್ಮಹತ್ಯೆ

ಕಾಶ್ಮೀರದ ಬಿಜೆಪಿ ನಾಯಕ ಆತ್ಮಹತ್ಯೆ

ಶ್ರೀನಗರ: ಶಿಫಾರಸು-ಕಾಶ್ಮೀರದ ಮಾಜಿ ಶಾಸಕ, ಬಿಜೆಪಿ ಮುಖಂಡ ಫಕೀರ್ ಮೊಹಮ್ಮದ್ ಖಾನ್ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು. ಅವರು ತುಳಸಿ ಭಾಗ್ ಸರಕಾರಿ ವಸತಿ ಗೃಹದ ಕೊಠಡಿಯಲ್ಲಿ ಗುರುವಾರ ಬೆಳಗ್ಗೆ ತಮ್ಮದೇ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡ ದ್ದಾರೆ ಎಂದು

[ccc_my_favorite_select_button post_id="104372"]
Doddaballapura: ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸಾವು..!

Doddaballapura: ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸಾವು..!

ದೊಡ್ಡಬಳ್ಳಾಪುರ (Doddaballapura): ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಜಿಂಕೆಯೊಂದು ಸ್ಥಳದಲ್ಲೇ ಸಾವನ್ನಪಿರುವ ಘಟನೆ ನೆಲಮಂಗಲ ರಸ್ತೆಯ ಆಕಾಶವಾಣಿ ಪ್ರಸಾರ ಕೇಂದ್ರ ಬಳಿ ಸಂಭವಿಸಿದೆ. ಶುಕ್ರವಾರ ರಾತ್ರಿ ಸುಮಾರು 4 ವರ್ಷ

[ccc_my_favorite_select_button post_id="104439"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!