ದೊಡ್ಡಬಳ್ಳಾಪುರ: ಲಾಕ್‌ಡೌನ್‌ ವೇಳೆ ಕರ್ನಾಟಕದಿಂದ ಅತಿಹೆಚ್ಚು ಹಣ್ಣು, ತರಕಾರಿ ರಪ್ತು- ಸಿ.ಎಸ್.ಕರೀಗೌಡ

ದೊಡ್ಡಬಳ್ಳಾಪುರ: ಕೃಷಿ ಉತ್ಪಾದನೆಯಲ್ಲಿ ನಮ್ಮದು ರಫ್ತು ಆಧಾರಿತ ರಾಜ್ಯವಾಗಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಕರ್ನಾಟಕದಿಂದ ರಫ್ತು ಮಾಡಿದ್ದಷ್ಟು ಹಣ್ಣು, ತರಕಾರಿ ದೇಶದ ಬೇರೆ ಯಾವ ರಾಜ್ಯದಲ್ಲು ನಡೆದಿಲ್ಲ ಎಂದು ಕೃಷಿ ಮಾರುಕಟ್ಟೆ ನಿರ್ದೇಶಕ ಸಿ.ಎಸ್.ಕರೀಗೌಡ ಹೇಳಿದರು.

ಅವರು ತಾಲ್ಲೂಕಿನ ಅಪ್ಪಕಾರನಹಳ್ಳಿ ಗ್ರಾಮದ ರೈತ ಗಂಗಬೈರಪ್ಪ ಅವರು ನೀಲಗಿರಿ ತೆರವುಗೊಳಿಸಿ ಅರಣ್ಯ ಆಧಾರಿತ ಕೃಷಿ ಆರಂಭದ ಭಾಗವಾಗಿ ಶುಕ್ರವಾರ ಹಲಸಿನ ಸಸಿ ನೆಟ್ಟು ಮಾತನಾಡಿದರು. 

ಬಯಲು ಸೀಮೆ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಅಂತರ್ಜಲ ಗಣನೀಯವಾಗಿ ಕುಸಿತವಾಗಲು ಹಾಗೂ ಮಣ್ಣಿನ ಫಲವತ್ತತೆ ಹಾಳಾಗಲು ನೀಲಗಿರಿ ಮರ ಮುಖ್ಯ ಕಾರಣವಾಗಿದೆ. ಈ ನಿಟ್ಟಿನಲ್ಲಿ ಎರಡು ವರ್ಷಗಳ ಹಿಂದೆ ಆರಂಭಿಸಲಾದ ನೀಲಗಿರಿ ಮರಗಳ ತೆರವು ಆಂದೋಲನದ ಉದ್ದೇಶ ರೈತರಿಗೆ ಮನವರಿಕೆಯಾಗಿದೆ. ನೀಲಗಿರಿ ಬೆಳೆಯಿಂದ ಒಬ್ಬ ರೈತ ಹಣ ಗಳಿಸಬಹುದು. ಆದರೆ ಅಕ್ಕಪಕ್ಕದ ಇತರೆ ರೈತರ ಭೂಮಿಯಲ್ಲಿ ಯಾವುದೇ ರೀತಿಯ ಬೆಳೆ ಬೆಳೆಯಲು ಸಾಧ್ಯವಾಗುವುದಿಲ್ಲ ಎಂದರು. 

ನೀಲಗಿರಿ ಮರಗಳನ್ನು ಬೆಳೆಸಿ ಆದಾಯಗಳಿಸುವುದಕ್ಕಿಂತಲು ಹೆಚ್ಚಿನ ಆದಾಯ ಹಾಗೂ ಪರಿಸರ, ಪ್ರಾಣಿ, ಪಕ್ಷಿಗಳಿಗು ಅನುಕೂಲವಾಗುವಂತೆ ಅರಣ್ಯ ಆಧಾರೀತ ಕೃಷಿಯಿಂದ ಪಡೆಯಲು ಸಾಕಷ್ಟು ಅವಕಾಶಗಳಿವೆ. ಹಣ್ಣಿನ ಗಿಡಗಳನ್ನು ಬೆಳೆಸಲು ಕೊಳವೆಬಾವಿ ನೀರಿನ ಆಶ್ರಯ ಅಗತ್ಯ ಎನ್ನುವ ಕಲ್ಪನೆ ತಪ್ಪು. ಕೊಳವೆಬಾವಿ ಇಲ್ಲದೆಯು ಟ್ಯಾಂಕರ್ಗಳ ಮೂಲಕ ಕಡಿಮೆ ಪ್ರಮಾಣದ ನೀರು ಬಳಸಿಕೊಂಡು ಸಸಿಗಳನ್ನು ನೆಟ್ಟು ಪೋಷಣೆ ಮಾಡಲು ಸಾಕಷ್ಟು ಉಪಾಯಗಳನ್ನು ರೈತರು ಇಂದು ಕಂಡುಕೊಂಡಿದ್ದಾರೆ. ಸಸಿಗಳನ್ನು ನೆಟ್ಟ ಒಂದೆರಡು ವರ್ಷಗಳ ಕಾಲ ಬೇಸಿಗೆಯಲ್ಲಿ ಮಾತ್ರ ನೀರು ಅಗತ್ಯ. ಇತರೆ ದಿನಗಳಲ್ಲಿ ಮಳೆ ನೀರಿನಲ್ಲೇ ಅರಣ್ಯ ಆಧಾರಿತ ಕೃಷಿ ಸಾಧ್ಯವಾಗಲಿದೆ ಎಂದರು. 

ಬಯಲು ಸೀಮೆ ಜಿಲ್ಲೆಗಳಲ್ಲಿ ಅಂತರ್ಜಲದ ಮೇಲಿನ ಅವಲಂಭನೆ ಹೆಚ್ಚಾಗುತ್ತಿದೆ. ಹೀಗಾಗಿ ಕೃಷಿಗೆ ನೀರಿನ ಕೊರತೆ ಮತ್ತಷ್ಟು ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಕೃಷಿಯನ್ನು ನಂಬಿ ಜೀವನ ನಡೆಸಲು ಅರಣ್ಯ ಆಧಾರಿತ ಕೃಷಿ ಅನಿವಾರ್ಯವಾಗಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಮುಖಂಡರಾದ ಮುತ್ತೇಗೌಡ, ಕೆ.ಸುಲೋಚನಮ್ಮ ವೆಂಕಟರೆಡ್ಡಿ, ವಡ್ಡರಹಳ್ಳಿರವಿ, ಆರ್.ಕೆಂಪರಾಜ್, ಶಿವಕುಮಾರ್, ಹಸನ್ ಘಟ್ಟ ಚಂದ್ರಶೇಖರ್, ವೆಂಕಟಾಚಲಪತಿ,ನಾಗಸಂದ್ರ ನಟರಾಜ್,ಗಂಗಾಧರ್,ಡಿ.ಶ್ರೀಕಾಂತ್ ಇದ್ದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!