ಇನ್ಸ್ಪೆಕ್ಟರ್ ದೇವಿಕಾದೇವಿ ಕಾರ್ಯಾಚರಣೆ / ದರೊಡೆಗೆ ಯತ್ನಿಸುತ್ತಿದ್ದವರ ಬಂಧನ,ಮಾರಕಾಸ್ತ್ರಗಳ ವಶ

ಬೆಂಗಳೂರು: ನೆಲಮಂಗಲ ಉಪವಿಭಾಗ,ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ದರೊಡೆಗೆ ಯತ್ನಿಸುತ್ತಿದ್ದ ನಾಲ್ಕು ಜನ ಆರೋಪಿತರನ್ನು ಬಂಧಿಸಿ ಅವರ ಬಳಿಯಿದ್ದ ಮಾರಕಾಸ್ತ್ರಗಳನ್ನು  ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಶನಿವಾರ 29 ನಸುಕಿನಲ್ಲಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ದೇವಿಕಾದೇವಿ ನೈಟ್ ರೌಂಡ್ಸ್ ಕರ್ತವ್ಯದಲ್ಲಿರುವಾಗ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ಸರಹದ್ದಿನ ಲಕ್ಷ್ಮೀಪುರ ಗಂಗೊಂಡನಹಳ್ಳಿ ರಸ್ತೆಯಲ್ಲಿ ಎಂಟು ಜನ ಆಸಾಮಿಗಳು ಗುಂಪು ಗೂಡಿಸಿಕೊಂಡು ಕೈಗಳಲ್ಲಿ ಮರಕಾಸ್ತ್ರಗಳನ್ನು ಹಿಡಿದುಕೊಂಡು ದರೋಡೆ ಮಾಡಲು ಹೊಂಚು ಹಾಕಿಕೊಂಡು ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರಿಗಾಗಿ ಕಾಯುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಆಸಾಮಿಗಳು ದರೊಡೆಗೆ ಯತ್ನಿಸುತ್ತಿದ್ದ ಸ್ಥಳಕ್ಕೆ ಧಾವಿಸಿ ಅಲ್ಲಿದ್ದ ಎಂಟು ಜನ ಆರೋಪಿತರ ಪೈಕಿ ನಾಲ್ಕು ಜನರನ್ನು ಹಿಡಿದುಕೊಂಡು ವಶಕ್ಕೆ ಪಡೆದು ಆರೋಪಿಗಳು ದರೊಡೆಗಾಗಿ ತಂದಿದ್ದ  ಒಂದು ರಾಡು, ಎರಡು ಚಾಕು, ಒಂದು ದೊಣ್ಣೆ, ಹಾಗೂ ಖಾರದ ಪುಡಿಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿರುತ್ತದೆ.

ದಸ್ತಗಿರಿ ಮಾಡಿರುವ ಆರೋಪಿಗಳ ವಿವರ: ಪಾಂಡವಪುರ ತಾಲೂಕಿನ ಮಾಚೋಹಳ್ಳಿ ಕಾಲೋನಿ,  ವಿನಯ್ ಕುಮಾರ್ ಅಲಿಯಾಸ್ ವಿನಿ (23) ವರ್ಷ. ದಾಸನಪುರ ಹೋಬಳಿಯ,ದೊಂಬರಹಳ್ಳಿ ಗ್ರಾಮದ ರವಿಕಿರಣ್ ಲಿಯಾಸ್ ಲೂಸ್ ಬಿನ್ ಸುರೇಶ್ ಕುಮಾರ್(24), ಭರತ್ (19),  ಚೇತನ್ ಅಲಿಯಾಸ್ ಚೇತು (25)

ತಲೆಮರೆಸಿಕೊಂಡಿರುವವರ ವಿವರ: ದೊಂಬರಹಳ್ಳಿ ಗ್ರಾಮದ ಅವಿನಾಶ್, ಕೆ. ಪಿ. ಅಗ್ರಹಾರದ ಇರ್ಫಾನ್, ಅಬ್ಬು, ಅರಿಶಿನಕುಂಟೆ ಯೋಗೇಶ್.

ಕಾರ್ಯಾಚರಣೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ ಡಿ.ಚನ್ನಣ್ಣನವರ್,ಐ. ಪಿ. ಎಸ್. ಮತ್ತು ಅಪರ ಪೊಲೀಸ್ ಅಧೀಕ್ಷಕ  ಲಕ್ಷ್ಮಿಗಣೇಶ್, ನೆಲಮಂಗಲ ಉಪವಿಭಾಗದ  ಪೊಲೀಸ್ ಉಪಾಧೀಕ್ಷಕ ಬಿ.ಎಸ್.ಮೋಹನ್ ಅವರ ಮಾರ್ಗದರ್ಶನದಲ್ಲಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ .ಸತ್ಯನಾರಾಯಣ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ದೇವಿಕಾದೇವಿ, ಸಿಬಂದಿಗಳಾದ ನಾರಾಯಣಸ್ವಾಮಿ, ಮಲ್ಲಗೊಂಡಿ, ಗಂಗಾಧರ್,  ಶಿವಕುಮಾರ್, ಲಕ್ಷ್ಮಣ್, ಫರ್ವೀಜ್ ಪಾಷಾ, ಇಮ್ರಾನ್ ಖಾನ್, ಶಿವಪ್ಪ ಎಸ್ ಗೌಡರ, ಸಂಜಯ್ ರವರನ್ನು ಒಳಗೊಂಡ ತಂಡ ಆರೋಪಿಗಳನ್ನು ದಸ್ತಗಿರಿ ಮಾಡಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಸದರಿ ಕಾರ್ಯಾಚರಣೆಯನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.

ರಾಜಕೀಯ

ಜೆಡಿಎಸ್ ಹೊರತಾಗಿ ಇತರ ಪಕ್ಷಗಳ ಸಂಸದರು ಸಭೆಯಲ್ಲಿ ಭಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್

ಜೆಡಿಎಸ್ ಹೊರತಾಗಿ ಇತರ ಪಕ್ಷಗಳ ಸಂಸದರು ಸಭೆಯಲ್ಲಿ ಭಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ನೋಟಿಫಿಕೇಷನ್ ಮಾಡುವುದಕ್ಕೆ ಯಾವುದೇ ಕಾನೂನಿನ ತೊಡಕಿಲ್ಲ, ತಡೆಯಾಜ್ಞೆಯೂ ಇಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಸದ್ಯದಲ್ಲೇ ನಮ್ಮದೇ ಆದ ತೀರ್ಮಾನ ಮಾಡುತ್ತೇವೆ. ರಾಜ್ಯದಲ್ಲಿಯೂ ಸರ್ವಪಕ್ಷಗಳ ಸಭೆ ಕರೆಯಬೇಕಾಗಬಹುದು" ಎಂದು

[ccc_my_favorite_select_button post_id="120333"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!