ಇನ್ಸ್ಪೆಕ್ಟರ್ ದೇವಿಕಾದೇವಿ ಕಾರ್ಯಾಚರಣೆ / ದರೊಡೆಗೆ ಯತ್ನಿಸುತ್ತಿದ್ದವರ ಬಂಧನ,ಮಾರಕಾಸ್ತ್ರಗಳ ವಶ

ಬೆಂಗಳೂರು: ನೆಲಮಂಗಲ ಉಪವಿಭಾಗ,ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ದರೊಡೆಗೆ ಯತ್ನಿಸುತ್ತಿದ್ದ ನಾಲ್ಕು ಜನ ಆರೋಪಿತರನ್ನು ಬಂಧಿಸಿ ಅವರ ಬಳಿಯಿದ್ದ ಮಾರಕಾಸ್ತ್ರಗಳನ್ನು  ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಶನಿವಾರ 29 ನಸುಕಿನಲ್ಲಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ದೇವಿಕಾದೇವಿ ನೈಟ್ ರೌಂಡ್ಸ್ ಕರ್ತವ್ಯದಲ್ಲಿರುವಾಗ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ಸರಹದ್ದಿನ ಲಕ್ಷ್ಮೀಪುರ ಗಂಗೊಂಡನಹಳ್ಳಿ ರಸ್ತೆಯಲ್ಲಿ ಎಂಟು ಜನ ಆಸಾಮಿಗಳು ಗುಂಪು ಗೂಡಿಸಿಕೊಂಡು ಕೈಗಳಲ್ಲಿ ಮರಕಾಸ್ತ್ರಗಳನ್ನು ಹಿಡಿದುಕೊಂಡು ದರೋಡೆ ಮಾಡಲು ಹೊಂಚು ಹಾಕಿಕೊಂಡು ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರಿಗಾಗಿ ಕಾಯುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಆಸಾಮಿಗಳು ದರೊಡೆಗೆ ಯತ್ನಿಸುತ್ತಿದ್ದ ಸ್ಥಳಕ್ಕೆ ಧಾವಿಸಿ ಅಲ್ಲಿದ್ದ ಎಂಟು ಜನ ಆರೋಪಿತರ ಪೈಕಿ ನಾಲ್ಕು ಜನರನ್ನು ಹಿಡಿದುಕೊಂಡು ವಶಕ್ಕೆ ಪಡೆದು ಆರೋಪಿಗಳು ದರೊಡೆಗಾಗಿ ತಂದಿದ್ದ  ಒಂದು ರಾಡು, ಎರಡು ಚಾಕು, ಒಂದು ದೊಣ್ಣೆ, ಹಾಗೂ ಖಾರದ ಪುಡಿಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿರುತ್ತದೆ.

ದಸ್ತಗಿರಿ ಮಾಡಿರುವ ಆರೋಪಿಗಳ ವಿವರ: ಪಾಂಡವಪುರ ತಾಲೂಕಿನ ಮಾಚೋಹಳ್ಳಿ ಕಾಲೋನಿ,  ವಿನಯ್ ಕುಮಾರ್ ಅಲಿಯಾಸ್ ವಿನಿ (23) ವರ್ಷ. ದಾಸನಪುರ ಹೋಬಳಿಯ,ದೊಂಬರಹಳ್ಳಿ ಗ್ರಾಮದ ರವಿಕಿರಣ್ ಲಿಯಾಸ್ ಲೂಸ್ ಬಿನ್ ಸುರೇಶ್ ಕುಮಾರ್(24), ಭರತ್ (19),  ಚೇತನ್ ಅಲಿಯಾಸ್ ಚೇತು (25)

ತಲೆಮರೆಸಿಕೊಂಡಿರುವವರ ವಿವರ: ದೊಂಬರಹಳ್ಳಿ ಗ್ರಾಮದ ಅವಿನಾಶ್, ಕೆ. ಪಿ. ಅಗ್ರಹಾರದ ಇರ್ಫಾನ್, ಅಬ್ಬು, ಅರಿಶಿನಕುಂಟೆ ಯೋಗೇಶ್.

ಕಾರ್ಯಾಚರಣೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ ಡಿ.ಚನ್ನಣ್ಣನವರ್,ಐ. ಪಿ. ಎಸ್. ಮತ್ತು ಅಪರ ಪೊಲೀಸ್ ಅಧೀಕ್ಷಕ  ಲಕ್ಷ್ಮಿಗಣೇಶ್, ನೆಲಮಂಗಲ ಉಪವಿಭಾಗದ  ಪೊಲೀಸ್ ಉಪಾಧೀಕ್ಷಕ ಬಿ.ಎಸ್.ಮೋಹನ್ ಅವರ ಮಾರ್ಗದರ್ಶನದಲ್ಲಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ .ಸತ್ಯನಾರಾಯಣ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ದೇವಿಕಾದೇವಿ, ಸಿಬಂದಿಗಳಾದ ನಾರಾಯಣಸ್ವಾಮಿ, ಮಲ್ಲಗೊಂಡಿ, ಗಂಗಾಧರ್,  ಶಿವಕುಮಾರ್, ಲಕ್ಷ್ಮಣ್, ಫರ್ವೀಜ್ ಪಾಷಾ, ಇಮ್ರಾನ್ ಖಾನ್, ಶಿವಪ್ಪ ಎಸ್ ಗೌಡರ, ಸಂಜಯ್ ರವರನ್ನು ಒಳಗೊಂಡ ತಂಡ ಆರೋಪಿಗಳನ್ನು ದಸ್ತಗಿರಿ ಮಾಡಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಸದರಿ ಕಾರ್ಯಾಚರಣೆಯನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.

ರಾಜಕೀಯ

ಜನರ ಸಮಸ್ಯೆಗೆ ದನಿಯಾಗಿದ್ದ ರಾಘವ್ ಚಡ್ಡಾಗೆ ಆಪ್ ಶಾಕ್..!

ಜನರ ಸಮಸ್ಯೆಗೆ ದನಿಯಾಗಿದ್ದ ರಾಘವ್ ಚಡ್ಡಾಗೆ ಆಪ್ ಶಾಕ್..!

ಜನಪರ ಸಮಸ್ಯೆಗಳನ್ನು ರಾಜ್ಯಸಭೆಯಲ್ಲಿ ಪ್ರಶ್ನಿಸುವ ಮೂಲಕ ಮೋದಿ (Modi) ಸರ್ಕಾರದ ವಿರುದ್ದ ಗುಡುಗುತ್ತಿದ್ದ ಆಮ್ ಆದ್ಮಿ ಪಕ್ಷದ (APP) ಸಂಸದ ರಾಘವ್ ಚಡ್ಡಾ (Raghav Chadha) ಅವರ ರೆಕ್ಕೆ ಕತ್ತರಿಸುವ ಕೆಲಸವನ್ನು ತನ್ನದೇ ಪಕ್ಷ

[ccc_my_favorite_select_button post_id="120655"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ನಿನ್ನೆಯಷ್ಟೆ ಕೆಎಸ್‌ಆರ್‌ಟಿಸಿ ಬಸ್ ಹರಿದು ಬೈಕ್ ಸವಾರ ಸಾವನಪ್ಪಿರುವ ಬೆನ್ನಲ್ಲೇ, ರಸ್ತೆ ಬದಿ ನಿಂತಿದ್ದ ಆಟೋಗೆ ದ್ವಿಚಕ್ರ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ, ಬೈಕ್ ಸವಾರ ಹಾಗೂ ರಸ್ತೆಯ ಬದಿ ನಿಂತಿದ್ದ ಮಹಿಳೆಗೆ

[ccc_my_favorite_select_button post_id="120677"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]