ಎಸ್ಸೆಸ್ಸೆಲ್ಸಿಯಿಂದಲೇ ಸ್ಪರ್ಧಾತ್ಮಕ ಪರೀಕ್ಷಾತಯಾರಿ ಅಗತ್ಯ: ಸಿ.ಎಸ್.ಕರೀಗೌಡ

ದೊಡ್ಡಬಳ್ಳಾಪುರ : ವಿದ್ಯಾರ್ಥಿಗಳು ತಮ್ಮ ಪ್ರೌಢ ಶಿಕ್ಷಣದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯೂಪಿಎಸ್ಸಿ, ಕೆಪಿಎಸ್ಸಿಗೆ ತಯಾರಿ ಅಗತ್ಯವಾಗಿದ್ದು, ದೊಡ್ಡಬಳ್ಳಾಪುರದಲ್ಲಿ ವಿವೇಕ್ ವಿಷನ್ ಕ್ಲಾಸಸ್ ಪ್ರಯತ್ನ ಸ್ವಾಗತಾರ್ಹ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಸಿ.ಎಸ್.ಕರೀಗೌಡ ಹೇಳಿದರು. 

ನಗರದ ಹೇಮಾವತಿಪೇಟೆಯಲ್ಲಿನ ವಿವೇಕ್ ವಿಷನ್ ಕ್ಲಾಸಸ್‍ನಲ್ಲಿ ಭಾನುವಾರ ಸರಕಾರಿ ಶಾಲಾವಿದ್ಯಾರ್ಥಿಗಳ ಪ್ರತಿಭಾಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಗ್ರಾಮೀಣ ಪ್ರದೇಶದಲ್ಲಿನ ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಯಾವುದೇ ಕೀಳರಿಮೆಯಿಲ್ಲದೆ, ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಆ ಮೂಲಕ ಭವಿಷ್ಯದಲ್ಲಿ ಅತ್ಯುನ್ನತ ಹುದ್ದೆಗಳನ್ನಲಂಕರಿಸುವ ಬೃಹತ್ ಕನಸುಗಳನ್ನು ಕಾಣಬೇಕು. ವಿದ್ಯಾರ್ಥಿ ವಯಸ್ಸಿನಲ್ಲಿ ಯಾವುದೇ ವ್ಯಾಮೋಹಗಳಿಗೆ ಒಳಗಾಗದೆ, ಸದೃಢವಾದ ಭವಿಷ್ಯ ನಿರ್ಮಿಸಿಕೊಳ್ಳಲು ಪ್ರಯತ್ನಿಸಬೇಕು. ಕನಸುಗಳ ಸಾಕಾರಕ್ಕೆ ಅಗತ್ಯ ಬೀಳುವ ಪರಿಶ್ರಮವನ್ನು ನಂಬಿ ಮುನ್ನಡೆದರೆ ಯಶಸ್ಸು ಸಿಗುವುದು ಖಚಿತ. ಅತಿಮುಖ್ಯವಾಗಿ ವಿದ್ಯಾರ್ಥಿಗಳು ಸರಳತೆಯನ್ನು ಮೈಗೂಡಿಸಿಕೊಳ್ಳಬೇಕು. ಜೀವನದ ಸಾಧನೆಗಳಿಗೆ ಸುತ್ತಲಿನ ಪರಿಸರ ಹೆಚ್ಚಿನ ಪರಿಣಾಮ ಬೀರುತ್ತದೆ ಎಂದರು. 

ವಿವೇಕ್ ವಿಷನ್ ಕ್ಲಾಸಸ್‍ನ ವ್ಯವಸ್ಥಾಪಕ ನಿರ್ದೇಶಕ ಎ.ನಾಗರಾಜ್ ಮಾತನಾಡಿ, ಕಳೆದ ವರ್ಷ ದೊಡ್ಡಬಳ್ಳಾಪುರ ನಗರದ ಅರಳುಮಲ್ಲಿಗೆ ಬಾಗಿಲು ಸರಕಾರಿ ಶಾಲೆ, ಬಾಶೆಟ್ಟಿಹಳ್ಳಿ ಸರಕಾರಿ ಶಾಲೆ, ಸರಕಾರಿ ಜ್ಯೂನಿಯರ್ ಪ್ರೌಢ ಶಾಲೆ ಹಾಗೂ ಶ್ರೀಕೊಂಗಾಡಿಯಪ್ಪ ಪ್ರೌಢ ಶಾಲೆಯಲ್ಲಿ 50ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಟಾರ್ಗೆಟ್-625 ಹೆಸರಿನಡಿ ಪರೀಕ್ಷೆಗಳನ್ನು ನೀಡಲಾಗಿತ್ತು. ಅನಂತರ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಮತ್ತು ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾದ ಸಾಕಷ್ಟು ಮಾಹಿತಿಗಳನ್ನು ನೀಡಲಾಗಿತ್ತು. ಈ ವಿದ್ಯಾರ್ಥಿಗಳಲ್ಲಿ 25ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 2020-21ನೇ ಶೈಕ್ಷಣಿಕ ವರ್ಷದಲ್ಲು ಸರಕಾರಿ ಶಾಲೆಯ 30ವಿದ್ಯಾರ್ಥಿಗಳಿಗೆ  ಸೂಪರ್-30 ಯೋಜನೆಯಡಿ ಉಚಿತ ಶಿಕ್ಷಣ ನೀಡಲಾಗುತ್ತದೆ ಎಂದರು. 

ಕಾರ್ಯಕ್ರಮದಲ್ಲಿ ಪರಿಸರ ಸಿರಿ ತಂಡದ ರಾಜಶೇಖರ್, ಮಾಜಿ ಕಸಾಪ ಅಧ್ಯಕ್ಷ ಶ್ರೀಕಾಂತ್, ವಿವೇಕ್ ವಿಷನ್ ಕ್ಲಾಸಸ್ ಸಂಸ್ಥೆಯ ಶಿಕ್ಷಕರಾದ ಅನಿಲ್, ಆದರ್ಶ್, ಲಕ್ಷ್ಮಿಶ್ರೀನಿವಾಸ್, ಲತಾ, ರಘುವರ್ಧನ್‍ರಾವ್, ಯಶ್ವಂತ್ ಸೇರಿದಂತೆ ಇತರರು ಹಾಜರಿದ್ದರು. 

ರಾಜಕೀಯ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ*** ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110847"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಟ್ರಾಕ್ಟರ್ಗೆ ಸ್ಕೂಟರ್ ಡಿಕ್ಕಿ.. ಸವಾರನಿಗೆ ಪೆಟ್ಟು

ದೊಡ್ಡಬಳ್ಳಾಪುರ: ಟ್ರಾಕ್ಟರ್ಗೆ ಸ್ಕೂಟರ್ ಡಿಕ್ಕಿ.. ಸವಾರನಿಗೆ ಪೆಟ್ಟು

ದೊಡ್ಡಬಳ್ಳಾಪುರ: ಟ್ರಾಕ್ಟರ್ಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಾಯಗೊಂಡಿರುವ ಘಟನೆ (Accident) ನಗರದ ಟಿಬಿ ಸರ್ಕಲ್ ಮತ್ತು ಪಾಲನಜೋಗಿಹಳ್ಳಿ ನಡುವಿನ ಅಂಬರೀಶ್ ಚಿಕನ್ ಸೆಂಟರ್ ಸಮೀಪ ಇದೀಗ ಸಂಭವಿಸಿದೆ. ಮುಂದೆ

[ccc_my_favorite_select_button post_id="110875"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!