ಅನಿಲ್ ಇಂಗಳಗಿ ಕೊಲೆ ಮನುಕುಲವೇ ತಲೆತಗ್ಗಿಸುವ ಘಟನೆ

ದೊಡ್ಡಬಳ್ಳಾಪುರ: ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಬೂದಿಹಾಳ ಗ್ರಾಮದ ಅನಿಲ್ ಇಂಗಳಗಿ ಎಂಬ ದಲಿತ ಯುವಕನ ಕೊಲೆ ಘಟನೆ ಖಂಡಿಸಿ ಪ್ರಜಾ ವಿಮೋಚನ ಚಳವಳಿ ಹಾಗೂ ತಾಲ್ಲೂಕಿನ ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ಪಿವಿಸಿ ರಾಜ್ಯ ಅಧ್ಯಕ್ಷ ಮುನಿ ಆಂಜಿನಪ್ಪ, ಪ್ರಗತಿಪರ ಒಕ್ಕೂಟದ ಮುಖಂಡರಾದ ಆರ್.ಚಂದ್ರತೇಜಸ್ವಿ,ಡಿ.ಪಿ.ಆಂಜನೇಯ, ರಾಜುಸಣ್ಣಕ್ಕಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರು ಸಮಾನರು ಎನ್ನುವ ಹಕ್ಕನ್ನು ಸಂವಿಧಾನ ನೀಡಿದೆ. ಆದರೆ ಕೆಲ ಪಾಳೇಗಾರಿಕೆ ಮನಸ್ಸಿನ ಜನ ಇಂದಿಗೂ ಸಾರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದಾರೆ. ಕಾನೂನಿನ ಮುಂದೆ ಎಲ್ಲರು ಸಮಾನರು.ಪುಂಡಾಟಿಕೆ ವರ್ತನೆಯನ್ನು ತೋರಿ ಅನಿಲ್ ಕೊಲೆಗೆ ಕಾರಣರಾಗಿರ ಆರೋಪಿಗಳ ವಿರುದ್ದ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 

ದೇಶಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕಗಳು ಕಳೆದಿರುವ ಈ ಸಂದರ್ಭದಲ್ಲೂ ಸಹ ಸಮಾನಾಂತರವಾಗಿ ಕುಳಿತುಕೊಳ್ಳುವ ಹಕ್ಕು ಇಲ್ಲದಂತೆ ದಲಿತ ಸಮುದಾಯ ಬದುಕುವ ಸ್ಥಿತಿ ಶೋಚನೀಯ. ಈ ಪ್ರಕರಣ ಇಡೀ ಮನುಕುಲವೇ ತಲೆತಗ್ಗಿಸುವಂತಹದ್ದಾಗಿದೆ. ಅನಿಲ್ ಕೊಲೆಯಿಂದಾಗಿ ನಾವು 21ನೇ ಶತಮಾನದಲ್ಲಿ ಬದುಕುತ್ತಿದ್ದೇವ ಎನ್ನುವ ಪ್ರಶ್ನೆ ಕೇಳಿಕೊಳ್ಳುವಂತಾಗಿದೆ. ಅನಿಲ್ ಪ್ರಕರಣದಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳದಿದ್ದರೆ ಜಾತಿ ವ್ಯವಸ್ಥೆಯನ್ನು ಪೋಷಿಸಿದಂತೆ ಆಗಲಿದೆ. ದಲಿತರ ಮೇಲಿನ ದೌರ್ಜನ್ಯಗಳು ಮತ್ತಷ್ಟು ಹೆಚ್ಚಾಗುವ ಅಪಾಯಗಳಿವೆ. ಅನಿಲ್ ಕೊಲೆ ಪ್ರಕರಣದಲ್ಲಿ ನೇರವಾಗಿ ಹಾಗೂ ಪರೋಕ್ಷವಾಗಿ ಶಾಮೀಲಾಗಿರುವ ಎಲ್ಲರ ವಿರುದ್ದವು  ದೌರ್ಜನ್ಯ ಕಾಯ್ದೆಯಡಿಯಲ್ಲಿ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ರಾಜ್ಯದಲ್ಲಿ ಮರುಕಳಿಸಂದಂತೆ ಎಚ್ಚರವಹಿಸಬೇಕಿದೆ. ಅನಿಲ್ ಇಂಗಳಗಿ ಕೊಲೆ ಪ್ರಕರಣದ ವಿಚಾರಣೆಯನ್ನು ತ್ವರಿತಗತಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಪೊಲೀಸ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತುರ್ತಾಗಿ ತನಿಖೆಯನ್ನು ನಡೆಸಿ ನ್ಯಾಯಾಲಯಕ್ಕೆ ವರದಿ ನೀಡುವ ಮೂಲಕ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲು ಸಹಕಾರಿಯಾಗಬೇಕು ಎಂದು ಮನವಿ ಮಾಡಿದರು. 

ಪ್ರತಿಭಟನೆಯಲ್ಲಿ ಪಿವಿಸಿ ತಾಲ್ಲೂಕು ಘಟಕದ ಅಧ್ಯಕ್ಷ ತಳಗವಾರ ಪುನೀತ್, ಜಿಲ್ಲಾ ಅಧ್ಯಕ್ಷ ಗೂಳ್ಯ ಹನುಮಣ್ಣ,ಉಪಾಧ್ಯಕ್ಷ ಕೊನಘಟ್ಟ ಬೈರಪ್ಪ,ಸಂಘಟನ ಕಾರ್ಯದರ್ಶಿ ಕಾಕೋಳು ಚನ್ನಮರಿಯಪ್ಪ, ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ತಾಲ್ಲೂಕು ಸಂಘಟನ ಕಾರ್ಯದರ್ಶಿ ನೆಲ್ಲುಕುಂಟೆ ಮೂರ್ತಿ,ಉಪಾಧ್ಯಕ್ಷ ರಾಜಶೇಖರ ವಡ್ಡನಹಳ್ಳಿ, ಮುಖಂಡರಾದ ಮಂಜುನಾಥ್, ಮುನಿಕೃಷ್ಣ ಇದ್ದರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!